ಮೈಸೂರು: ನಾಡ ಹಬ್ಬ ದಸರಾ ಮಹೋತ್ಸದಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಹಾಗೂ ಅಶ್ವಪಡೆಗೆ ಭಾನುವಾರ ಅರಮನೆಯ ವರಾಹ ಗೇಟ್ ಬಳಿಯಿರುವ ವಾಹನ ನಿಲುಗಡೆಯ ಸ್ಥಳದಲ್ಲಿ ಎರಡನೆ ಹಂತದ ಸಿಡಿಮದ್ದು ಸಿಡಿಸುವ ತಾಲೀಮು ಯಶಸ್ವಿಯಾಗಿ ನಡೆಯಿತು. ಜಂಬೂ ಸವಾರಿ ಹಾಗೂ ಬನ್ನಿಮಂಟ ಪದ ಪಂಜಿನ ಕವಾಯತ್ ವೇಳೆ ವಿಜಯದ ಸಂಕೇತವಾಗಿ 21 ಸುತ್ತು ಕುಶಾಲತೋಪು ಸಿಡಿಸುವ ವಾಡಿಕೆಯಿರುವ ಹಿನ್ನೆಲೆಯಲ್ಲಿ ಜಂಬೂಸವಾರಿ ಮೆರವಣಿಗೆಯಲ್ಲಿ ಜನ ಸಂದಣಿಯ ನಡುವೆ ಸಾಗಲಿರುವ ಆನೆ ಹಾಗೂ ಕುದುರೆಗಳು ಕುಶಾಲ ತೋಪಿನ ಶಬ್ದಕ್ಕೆ ಹೆದರದಂತೆ ಸಿದ್ಧಗೊಳಿಸುವುದಕ್ಕಾಗಿ ಸಿಡಿ…