ನವದೆಹಲಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಬಗ್ಗೆ ಸಂಸತ್ನಲ್ಲಿ ವಿಷಯ ಪ್ರಸ್ತಾಪಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ರಾಜ್ಯ ಸಂಸದರ ಸಭೆಯಲ್ಲಿ ಮೇಲ್ಮನವಿ ಸಲ್ಲಿಸದಿರಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಬುಧವಾರ ಸಂಜೆ ಎಚ್.ಡಿ.ಕುಮಾರ ಸ್ವಾಮಿ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಜೊತೆ ಸಭೆ ನಡೆಸಿದರು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ಸ್ಕೀಮ್ ಬಗ್ಗೆ ಸಂಸತ್ನಲ್ಲಿ ಪ್ರಸ್ತಾಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ…
ಕೇಳಿದ್ದಕ್ಕಿಂತ ಅಧಿಕ ನೀರು ತಮಿಳ್ನಾಡಿಗೆ ಹರಿಯಿತು
July 14, 2018ಕಾವೇರಿ ನೀರು ನಿರ್ವಹಣಾ ಸಮಿತಿಗೆ ಕೆಲಸವೇ ಇಲ್ಲ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜು. 20ರಂದು ಕೆಆರ್ಎಸ್, ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಣೆ ಬೆಂಗಳೂರು: ಅವಧಿಗೂ ಮುನ್ನವೇ ಆರಂಭಗೊಂಡ ಮುಂಗಾರಿ ನಿಂದ ರಾಜ್ಯ ಕಾವೇರಿ ಜಲಾನಯನ ಪಾತ್ರದಿಂದ ತಮಿಳುನಾಡಿಗೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ನೀರು ಹರಿದು ಹೋಗಿದೆ. ಕೇರಳದ ವೈನಾಡು, ಕೊಡಗು ಹಾಗೂ ಪಶ್ಚಿಮ ಘಟ್ಟಗಳಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಕೃಷ್ಣರಾಜ ಸಾಗರ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುವ ಸಮಯಕ್ಕೆ…
ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಪ್ರತಿಭಟನೆ
July 4, 2018ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಮಂಡಳಿಯು ತಮಿಳು ನಾಡಿಗೆ ನೀರು ಹರಿಸುವಂತೆ ಆದೇಶ ಮಾಡಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ನಗರದಲ್ಲಿ ಕಣ್ಣಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ನಗರದ ಶ್ರೀಚಾಮರಾಜೇಶ್ವರ ಉದ್ಯಾನ ವನದ ಆವರಣದಲ್ಲಿ ಜಮಾಯಿಸಿದ ಕರ್ನಾ ಟಕ ಸೇನಾಪಡೆ ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇ ಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿ, ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ತಮಿಳುನಾಡು ಸರ್ಕಾರ, ಕರ್ನಾಟಕದ ಸಂಸದರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ…
ಜುಲೈ ತಿಂಗಳು ತಮಿಳುನಾಡಿಗೆ 31 ಟಿಎಂಸಿ ನೀರು ಹರಿಸಬೇಕು
July 3, 2018ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವ ಹಣಾ ಪ್ರಾಧಿಕಾರ ಸೋಮವಾರ ಕರ್ನಾ ಟಕಕ್ಕೆ ಸೂಚನೆ ನೀಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚೆ ನಡೆಸಿ, ಸುಪ್ರೀಂ ಆದೇಶದಂತೆ ಕರ್ನಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ….
ಕಾವೇರಿ ಪ್ರಾಧಿಕಾರ, ನೀರು ನಿರ್ವಹಣಾ ಸಮಿತಿ ರಚನೆ: ಸುಪ್ರೀಂಕೋರ್ಟ್ನಲ್ಲಿ ಮೂಲ ದಾವೆ ಹೂಡಲು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ
July 1, 2018ಬೆಂಗಳೂರು: ಕಾವೇರಿ ನಿರ್ವಹಣಾ ಪ್ರಾಧಿಕಾರ ಹಾಗೂ ನದಿ ನೀರು ನಿರ್ವಹಣಾ ಸಮಿತಿ ರಚನೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೂಲ ದಾವೆ ಹೂಡಲು ಇಂದಿಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಸರ್ವ ಸಮ್ಮತ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೇಂದ್ರ ಸರ್ಕಾರದ ಏಕಪಕ್ಷೀಯ ತೀರ್ಮಾನದ ವಿರುದ್ಧ ಪ್ರತಿಭಟನೆ ಹಾಗೂ ಕಾನೂನು ಹೋರಾಟ ಮಾಡುವ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಪ್ರಾಧಿಕಾರ ಜುಲೈ 2 ರಂದು ಕರೆದಿರುವ…
ಕಾವೇರಿ ಸಂಬಂಧ ಸರ್ವಪಕ್ಷ ಸಭೆಗೆ ಸಿದ್ದರಾಮಯ್ಯ ಗೈರು
July 1, 2018ಬೆಂಗಳೂರು: ಕಾವೇರಿ ನದಿ ನೀರು ಸಮಸ್ಯೆ ಕುರಿತು ಇಂದು ಕರೆದಿದ್ದ ಸರ್ವಪಕ್ಷ ಸಭೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರ ಉಳಿದಿದ್ದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ಸರ್ಕಾರ ಅಧಿಕೃತವಾಗಿ ಆಹ್ವಾನ ನೀಡಿತ್ತು. ಅಷ್ಟೇ ಅಲ್ಲ ಕಾವೇರಿ ಜಲಾನಯನ ಭಾಗದ ಪ್ರಮುಖ ಮುಖಂಡರು ಕೂಡ. ಸಭೆಯಲ್ಲಿ ಕಾವೇರಿ ಕೊಳ್ಳದ ಶಾಸಕರು, ಸಂಸದರು ಭಾಗವಹಿಸಿದ್ದರು. ಆದರೆ, ಸಭೆಗೆ ಹಾಜರಾಗದ ಸಿದ್ದರಾಮಯ್ಯನವರು ಮನೆಯಲ್ಲೇ ಉಳಿದಿದ್ದರು. ಸಿದ್ದರಾಮಯ್ಯ ಈಗ ಬಾದಾಮಿ ಕ್ಷೇತ್ರದ ಶಾಸಕ. ಒಂದೊಮ್ಮೆ ಚಾಮುಂಡೇಶ್ವರಿ ಕ್ಷೇತ್ರದಿಂದ ಆಯ್ಕೆಯಾಗಿದ್ದರೆ ಆಗ…
ಕಾವೇರಿ ನಿರ್ವಹಣಾ ಮಂಡಳಿ ರಚನೆ ಖಂಡಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ
June 27, 2018ಮೈಸೂರು: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಯನ್ನು ವಿರೋಧಿಸಿ ಹಾಗೂ ಮಂಡಳಿಗೆ ನೇಮಕವಾಗಿರುವ ಸದಸ್ಯರನ್ನು ಈ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧೀ ಪುತ್ಥಳಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮೊದಲಿನಿಂದಲೂ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇದೀಗ ಮಂಡಳಿ ರಚನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಂಡಳಿ ರಚನೆಯಿಂದ ರಾಜ್ಯ…
ಕಾವೇರಿ ನೀರು ಹಂಚಿಕೆ ವಿಚಾರ: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ
June 26, 2018ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಕೇಶ್ ಸಿಂಗ್, ಹೆಚ್.ಎನ್. ಪ್ರಸನ್ನ ಹೆಸರು ಶಿಫಾರಸ್ಸು ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ಇಬ್ಬರು ಪ್ರತಿನಿಧಿ ಗಳ ಹೆಸರನ್ನು ಶಿಫಾರಸ್ಸು ಮಾಡಿದೆ. ರಾಜ್ಯ ಸರ್ಕಾರವನ್ನು ಕಡೆಗಾಣಿಸಿ, ನಿರ್ವ ಹಣಾ ಪ್ರಾಧಿಕಾರ ಜುಲೈ 2 ರಂದು ಮೊದಲ ಸಭೆ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ ತರಾತುರಿಯಾಗಿ ಈ ನೇಮಕಾತಿಯಾಗಿದೆ. ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ಸಿಂಗ್ ಹಾಗೂ ಕಾವೇರಿ ಜಲ ನಿಗಮದ ವ್ಯವಸ್ಥಾಪಕ…
ವಕೀಲರಿಂದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ
June 26, 2018ಮದ್ದೂರು: ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿ ಕರ್ನಾಟಕದವರು ಬೆಳೆ ಪದ್ಧತಿ ಬದಲಾಯಿಸಬೇಕೆಂದು ಕಾವೇರಿ ಜಲಾನಯನ ಪ್ರದೇಶಕ್ಕೆ ಸೂಚಿಸಿರುವುದು ಸರಿಯಲ್ಲ ಎಂದು ಆರೋಪಿಸಿ ವಕೀಲರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಬೆಳೆ ಪದ್ಧತಿ ಬಗ್ಗೆ ನಿರ್ಧಾರ ಮಾಡುವ ವರು ಆ ಭಾಗದ ರೈತರು. ಈ ಹಿನ್ನೆಲೆ ಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಕಾವೇರಿ ನಿರ್ವಹಣಾ ಮಂಡಳಿ ಪ್ರಸ್ತಾಪ ಹಿಂತೆಗೆದು ಕೊಳ್ಳಬೇಕು ಎಂದರು. ಕೃಷಿ, ವಿಜ್ಞಾನ ಕೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಕೇಂದ್ರ ಮತ್ತು ರಾಜ್ಯ…
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿರುದ್ಧ ಕಾನೂನು ಸಮರ: ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿರ್ಧಾರ
June 24, 2018ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸುವ ಮೂಲಕ ರಾಜ್ಯದ ಹಿತಕ್ಕೆ ಧಕ್ಕೆ ಆಗಿದ್ದು, ನಮ್ಮ ಹಕ್ಕನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಇಂದಿಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡಳಿಯ ರಚನಾ ಮಾರ್ಗ ಸೂಚಿಯಲ್ಲೇ ಲೋಪ-ದೋಷ ಇವೆ. ಇದನ್ನು ಸರಿಪಡಿಸುವಂತೆ ನಾನೇ ಖುದ್ದಾಗಿ ಪ್ರಧಾನಿ ನರೇಂದ್ರ ಮೋದಿ, ನೀರಾವರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿರುವುದಲ್ಲದೆ, ಪತ್ರವನ್ನೂ ನೀಡಲಾಗಿದೆ. ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿ ಸಲು ನೀರಾವರಿ…










