ಮೈಸೂರು: ಆಯ್ಕೆ ಆಧಾರಿತ ಗುಣಾಂಕ ಪದ್ಧತಿ (ಸಿಬಿಎಸ್ಸಿ) ಪದವಿ ಪಠ್ಯದಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಎದುರು ಪದವಿ ಕನ್ನಡ ಅಧ್ಯಾಪಕರ ಸಂಘ ಜು.2ರಂದು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಸಂಘದ ಸಂಚಾಲಕ ಡಾ.ಮ.ರಾಮಕೃಷ್ಣ ಇಂದಿಲ್ಲಿ ತಿಳಿಸಿದರು. ಯುಜಿಸಿ ಕೊಟ್ಟಿರುವ ಪದವಿ ಪಠ್ಯದಲ್ಲಿ ತಮಿಳು, ತೆಲುಗು ಇನ್ನಿತರ ಭಾರತೀಯ ಭಾಷೆಗಳಿಗೆ ನೀಡಿರುವ ಸ್ಥಾನಮಾನ ಕನ್ನಡಕ್ಕೆ ನೀಡಿಲ್ಲ. ಸರ್ಕಾರ ಹಾಗೂ ವಿಶ್ವವಿದ್ಯಾನಿಲಯದ ನಿರ್ಲಕ್ಷ್ಯ ಧೋರಣೆಯೇ ಇದಕ್ಕೆ ಕಾರಣ ಎಂದು ಅವರು ಮೈಸೂರು ಜಿಲ್ಲಾ…