Tag: Chamarajanagar

ಸುಳವಾಡಿ ವಿಷ ಪ್ರಸಾದ ದುರಂತ ಪ್ರಕರಣ ನ್ಯಾಯಾಲಯಕ್ಕೆ 6,163 ಪುಟಗಳ ಆರೋಪ ಪಟ್ಟಿ ಸಲ್ಲಿಕೆ
ಚಾಮರಾಜನಗರ

ಸುಳವಾಡಿ ವಿಷ ಪ್ರಸಾದ ದುರಂತ ಪ್ರಕರಣ ನ್ಯಾಯಾಲಯಕ್ಕೆ 6,163 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

March 19, 2019

ಚಾಮರಾಜನಗರ: ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಾಲಯದಲ್ಲಿ ಸಂಭವಿಸಿದ ವಿಷ ಪ್ರಸಾದ ಪ್ರಕರಣದ ತನಿಖಾಧಿಕಾರಿ ಡಿವೈಎಸ್ಪಿ ಪುಟ್ಟಮಾದಯ್ಯ 6,163 ಪುಟಗಳ ಆರೋಪ ಪಟ್ಟಿಯನ್ನು ನಗರದ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಕಿಚ್‍ಗುತ್ ಮಾರಮ್ಮ ದೇವಸ್ಥಾನದ ಹಿಡಿತ ಸಂಪೂರ್ಣವಾಗಿ ತಮ್ಮ ಕೈಯಲ್ಲೇ ಇರಬೇಕೆಂಬ ದುರುದ್ದೇಶದಿಂದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ ಹಾಗೂ ದೊಡ್ಡಯ್ಯ ಅವರು ಪ್ರಸಾದದಲ್ಲಿ ವಿಷ ಬೆರೆಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ. ದೇವಾಲಯದ ಆದಾಯ, ಚಿನ್ನ, ಆಡಳಿತ ಎಲ್ಲವೂ ಇಮ್ಮಡಿ ಮಹದೇವಸ್ವಾಮಿ ನಿಯಂತ್ರಣಕ್ಕೆ ಬರಬೇಕು….

ಶಾಸಕರ ಕಾರ್ಯಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳುತ್ತಿರುವ ಸಂಸದರು
ಚಾಮರಾಜನಗರ

ಶಾಸಕರ ಕಾರ್ಯಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳುತ್ತಿರುವ ಸಂಸದರು

March 19, 2019

ಧ್ರುವನಾರಾಯಣ್ ನಾಜೂಕಯ್ಯನ ಪಾತ್ರ ನಿಲ್ಲಿಸಲಿ: ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಕಿಡಿ ಕೊಳ್ಳೇಗಾಲ: ಶಾಸಕರು ತಮ್ಮ ಅಧಿಕಾರಾವಧಿ ಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳುತ್ತಿರುವ ಸಂಸದ ಆರ್.ಧ್ರುವನಾರಾಯಣ್ ಗಿಲಿಟ್ ರಾಜಕಾರಣ ಬಿಟ್ಟು ನಾಜೂಕಯ್ಯನ ಪಾತ್ರಕ್ಕೆ ಇತಿಶ್ರೀ ಹಾಡಬೇಕಿದೆ ಎಂದು ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಕಿಡಿಕಾರಿದರು. ಪಟ್ಟಣದ ತಮ್ಮ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದರಾಗಿ 10ವರ್ಷ ಎಂಬ ಸಾಧನೆ ಪುಸ್ತಕದಲ್ಲಿ ಧ್ರುವನಾರಾಯಣರ ನಾಜೂಕಯ್ಯನ ಪಾತ್ರ ಬಯಲಾ ಗಿದೆ. ಕೆಲವು ಶಾಸಕರು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಸಂಸದ…

ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ಆನೆ ಹೊಟ್ಟೆಗೆ ಅರೆಕಾಸಿನ `ವೆಚ್ಚ’
ಚಾಮರಾಜನಗರ

ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ಆನೆ ಹೊಟ್ಟೆಗೆ ಅರೆಕಾಸಿನ `ವೆಚ್ಚ’

March 14, 2019

ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯ ರ್ಥಿಗಳಿಗೆ ಚುನಾವಣಾ ಆಯೋಗ ವೆಚ್ಚದ ಮಿತಿ ಯನ್ನು ಕೇವಲ 70 ಲಕ್ಷ ರೂ.ಗೆ ಸೀಮಿತಗೊಳಿಸಿದ್ದು, ವಾಸ್ತವವಾಗಿ ಈ ಮೊತ್ತ ಅಭ್ಯರ್ಥಿಗಳ ಪಾಲಿಗೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರತಿದಿನ ತಮ್ಮ ಚುನಾವಣಾ ಖರ್ಚು ವೆಚ್ಚವನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕಾ ಗಿದ್ದು, ಪ್ರತಿಯೊಬ್ಬ ಅಭ್ಯರ್ಥಿಯೂ ಚುನಾವಣಾ ಫಲಿತಾಂಶ ಘೋಷಣೆಯಾದ 30 ದಿನದೊಳಗೆ ತನ್ನ ಚುನಾವಣಾ ವೆಚ್ಚಗಳ ಲೆಕ್ಕದ ಸಂಪೂರ್ಣ ಪ್ರತಿಯೊಂದನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿ ಸುವುದು…

ಸ್ಪರ್ಧೆಗೆ ಶ್ರೀನಿವಾಸ್ ಪ್ರಸಾದ್ ಮೇಲೆ ಹೆಚ್ಚಿದ ಒತ್ತಡ
ಚಾಮರಾಜನಗರ

ಸ್ಪರ್ಧೆಗೆ ಶ್ರೀನಿವಾಸ್ ಪ್ರಸಾದ್ ಮೇಲೆ ಹೆಚ್ಚಿದ ಒತ್ತಡ

March 14, 2019

ಚಾಮರಾಜನಗರ: ಚಾ.ನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಕಾಂಗ್ರೆಸ್‍ನ ಆರ್. ಧ್ರುವನಾರಾಯಣ ಅವರನ್ನು ಮಣಿಸಲು ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರೇ ಸ್ಪರ್ಧಿಸ ಬೇಕು ಎಂದು ಕ್ಷೇತ್ರದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಸತತ ಎರಡು ಬಾರಿ ಗೆಲುವು ಸಾಧಿಸಿ, ಬೀಗುತ್ತಿರುವ ಧ್ರುವನಾರಾಯಣ ಅವ ರಿಗೆ ಜೆಡಿಎಸ್ ಜೊತೆಗಿನ ಮೈತ್ರಿಯು ಮತ್ತಷ್ಟು ಬಲ ತುಂಬಿದ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ 5 ಬಾರಿ ಗೆಲುವು ಸಾಧಿಸಿ ಜನಪ್ರಿಯತೆ ಹೊಂದಿರುವ ವಿ.ಶ್ರೀನಿ ವಾಸಪ್ರಸಾದ್ ಅವರೇ ಸ್ಪರ್ಧಿಸಬೇಕು ಎಂಬುದು ಬಿಜೆಪಿ…

ಮದ್ಯಪಾನಕ್ಕೆ ಹಣ ನೀಡದ ಪತ್ನಿಯನ್ನೇ ಹತ್ಯೆಗೈದ ಪತಿ
ಚಾಮರಾಜನಗರ

ಮದ್ಯಪಾನಕ್ಕೆ ಹಣ ನೀಡದ ಪತ್ನಿಯನ್ನೇ ಹತ್ಯೆಗೈದ ಪತಿ

March 14, 2019

ಹನೂರು: ಮದ್ಯಪಾನಕ್ಕಾಗಿ ಹಣ ನೀಡದ ಹಿನ್ನೆಲೆ ವ್ಯಸನಿಯೋರ್ವ ಪತ್ನಿಯನ್ನೇ ಹತ್ಯೆಗೈದಿರುವ ಘಟನೆ ಇಂದು ತಾಲೂಕಿನ ಹುತ್ತೂರು ಗ್ರಾಮದಲ್ಲಿ ಇಂದು ಬೆಳಕಿಗೆ ಬಂದಿದೆ. ಗ್ರಾಮದ ಅರಸಮ್ಮ ಹತ್ಯೆಗೀಡಾದ ಮಹಿಳೆಯಾಗಿದ್ದು, ಹತ್ಯೆ ಆರೋಪಿ ನಾಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂದಿನಂತೆ ಮಂಗಳವಾರ ಆರೋಪಿ ನಾಗ ಮದ್ಯಪಾನಕ್ಕಾಗಿ ಪತ್ನಿ ಅರಸಮ್ಮನ ಬಳಿ ದುಡ್ಡು ಕೇಳಿದ್ದಾನೆ ಎನ್ನಲಾಗಿದೆ. ಹಣ ಕೊಡಲು ನಿರಾಕರಿಸಿದ್ದರಿಂದ ಕುಪಿತನಾದ ನಾಗ ಪತ್ನಿ ಕಪಾಳಕ್ಕೆ ಹೊಡೆದಿದ್ದಾನೆ. ಪರಿಣಾಮ ಸ್ಥಳದಲ್ಲೇ ಅರಸಮ್ಮ ಮೃತಪಟ್ಟಿದ್ದಾರೆ. ಇದರಿಂದ ಗಾಬರಿಯಾದ ನಾಗ ಮೃತದೇಹವನ್ನು ಗ್ರಾಮದ ಹೊರವಲಯದ…

ಆಮೆ ಮಾರಾಟಗಾರನ ಬಂಧನ
ಚಾಮರಾಜನಗರ

ಆಮೆ ಮಾರಾಟಗಾರನ ಬಂಧನ

March 14, 2019

ಚಾಮರಾಜನಗರ: ಜೀವಂತ ಆಮೆಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಇಟ್ಟುಕೊಂಡಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿಯ ಸಿದ್ದಮಲ್ಲಪ್ಪ ಉರುಫ್ ಕೂಸಪ್ಪ (33) ಬಂಧಿತ. ಖಚಿತ ಮಾಹಿತಿ ಮೇರೆಗೆ ತಮ್ಮಡಹಳ್ಳಿ-ಲಕ್ಕೂರು ಮಾರ್ಗ ಮಧ್ಯ ಇರುವ ಸಿದ್ದಮಲ್ಲಪ್ಪ ಅವರ ಮನೆಗೆ ತೆರಳಿದ ಅರಣ್ಯ ಸಂಚಾರಿ ದಳ ಸಿಬ್ಬಂದಿ ಪರಿಶೀಲಿಸಿದರು. ಈ ವೇಳೆ ಮನೆಯ ಒಂದು ಚಿಕ್ಕತೊಟ್ಟಿಯಲ್ಲಿ ಎರಡು ಜೀವಂತ ಆಮೆಗಳು ಕಂಡು ಬಂದಿವೆ. ಈ ಬಗ್ಗೆ ವಿಚಾರಿಸಿದಾಗ ಹಣ ಸಂಪಾದಿಸುವ ಉದ್ದೇಶದಿಂದ ಮಾರಾಟ…

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿರುವ 7054 ವಿದ್ಯಾರ್ಥಿಗಳು
ಚಾಮರಾಜನಗರ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿರುವ 7054 ವಿದ್ಯಾರ್ಥಿಗಳು

February 28, 2019

ಚಾಮರಾಜನಗರ: ನಾಳೆಯಿಂದ (ಶುಕ್ರವಾರ) ಆರಂಭ ವಾಗಲಿರುವ ದ್ವಿತೀಯ ಪಿಯುಸಿ ಪರೀ ಕ್ಷೆಯನ್ನು ಜಿಲ್ಲೆಯಲ್ಲಿ 7054 ವಿದ್ಯಾ ರ್ಥಿಗಳು ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಚಾಮರಾಜನಗರ ತಾಲೂಕಿನಲ್ಲಿ 4, ಯಳಂದೂರು ತಾಲೂ ಕಿನಲ್ಲಿ 2, ಕೊಳ್ಳೇಗಾಲ ತಾಲೂಕಿನಲ್ಲಿ 5, ಹನೂರು ತಾಲೂಕಿನಲ್ಲಿ 2, ಗುಂಡ್ಲು ಪೇಟೆ ತಾಲೂಕಿನಲ್ಲಿ 3 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 3,379 ಬಾಲಕರು, 3,675 ಬಾಲಕಿಯರು ಸೇರಿ ಒಟ್ಟು 7054 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಇದರಲ್ಲಿ 6003 ವಿದ್ಯಾರ್ಥಿಗಳು ಹೊಸ ಬರು, 815…

ಅಪ್ರಾಪ್ತ ಬಾಲಕಿ ಹತ್ಯೆ: ಆರೋಪಿಗೆ ಶಿಕ್ಷೆ
ಚಾಮರಾಜನಗರ

ಅಪ್ರಾಪ್ತ ಬಾಲಕಿ ಹತ್ಯೆ: ಆರೋಪಿಗೆ ಶಿಕ್ಷೆ

February 28, 2019

ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿದ ಆರೋಪಿಗೆ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಕಾರಾಗೃಹ ಮತ್ತು 25 ಸಾವಿರ ರೂ. ದಂಡ ವಿಧಿಸಿ ಗುರುವಾರ ತೀರ್ಪು ನೀಡಿದೆ. ಕೇರಳ ರಾಜ್ಯದ ವೈನಾಡು ಜಿಲ್ಲೆಯ ಅಬ್ದುಲ್ ರೆಹಮಾನ್ ಶಿಕ್ಷೆಗೆ ಒಳಗಾದವನು. ಅಬ್ದುಲ್ ರೆಹಮಾನ್ ವೈನಾಡಿನ ಅಪ್ರಾಪ್ತ ಬಾಲಕಿಯನ್ನು ಕಾಲೇಜಿನಲ್ಲಿ ಪರಿಚಯ ಮಾಡಿಕೊಂಡು ಪ್ರೀತಿಸು ತ್ತಿದ್ದನು. 2014 ಫೆಬ್ರವರಿ 14ರಂದು ಯುವ ತಿಯ ಹುಟ್ಟುಹಬ್ಬ ಇತ್ತು. ಅದೇ ದಿನ ಪ್ರೇಮಿಗಳ…

ಬೊಲೆರೊ-ಬೈಕ್ ಡಿಕ್ಕಿ: ಇಬ್ಬರು ವಿದ್ಯುತ್ ಗುತ್ತಿಗೆದಾರು ಸಾವು
ಚಾಮರಾಜನಗರ

ಬೊಲೆರೊ-ಬೈಕ್ ಡಿಕ್ಕಿ: ಇಬ್ಬರು ವಿದ್ಯುತ್ ಗುತ್ತಿಗೆದಾರು ಸಾವು

February 28, 2019

ಚಾಮರಾಜನಗರ: ತಾಲೂಕಿನ ಬೆಂಡರ ವಾಡಿ ಗ್ರಾಮದ ಕೆರೆ ಬಳಿ ಬೈಕ್‍ಗೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಇಬ್ಬರು ಗುತ್ತಿಗೆದಾರರು ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ. ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ, ಮೈಸೂರು ಜಿಲ್ಲಾ ವಿದ್ಯುತ್ ಗುತ್ತಿಗೆದಾರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಎಸ್.ಗಿರೀಶ್‍ಬಾಬು ಹಾಗೂ ಕುವೆಂಪುನಗರದ ಕುಮಾರ್ ಮೃತಪಟ್ಟವರು. ಎಂ.ಎಸ್.ಗಿರೀಶ್‍ಬಾಬು ಮತ್ತು ಕುಮಾರ್ ಬೈಕ್‍ನಲ್ಲಿ ಮೈಸೂರಿನಿಂದ ಚಾಮರಾಜನಗರಕ್ಕೆ ಬರುತ್ತಿದ್ದರು. ಬೊಲೆರೊ ವಾಹನ ಚಾಮರಾಜನಗದಿಂದ ಮೈಸೂರಿಗೆ ತೆರಳುತ್ತಿತ್ತು. ಈ ವೇಳೆ ಬೆಂಡರವಾಡಿ ಕೆರೆ ಬಳಿ ಈ ಎರಡು ವಾಹನಗಳಿಗೆ…

ಬೆಂದ ಬಂಡೀಪುರದಲ್ಲಿ  ಸಿಎಂ ವೈಮಾನಿಕ ಸಮೀಕ್ಷೆ
ಚಾಮರಾಜನಗರ

ಬೆಂದ ಬಂಡೀಪುರದಲ್ಲಿ  ಸಿಎಂ ವೈಮಾನಿಕ ಸಮೀಕ್ಷೆ

February 28, 2019

ಗುಂಡ್ಲುಪೇಟೆ: ಕಳೆದ ಆರು ದಿನಗಳಿಂದ ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾದ ಬಂಡೀಪುರ ರಾಷ್ಟ್ರೀಯ ಉದ್ಯಾನದ ಪ್ರದೇಶಗಳಿಗೆ ಬುಧವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರವಾಸೋ ದ್ಯಮ ಸಚಿವ ಸಾ.ರಾ. ಮಹೇಶ್ ವೈಮಾ ನಿಕ ಸಮೀಕ್ಷೆ ನಡೆಸಿದರು. ಮಧ್ಯಾಹ್ನ 12.30ರ ವೇಳೆಗೆ ಬೆಂಗ ಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿಗಳು ಹುಲಿ ಯೋಜನೆಯ ವ್ಯಾಪ್ತಿಯಲ್ಲಿನ ಕಾಡ್ಗಿಚ್ಚಿ ನಿಂದ ಹೆಚ್ಚು ಹಾನಿಗೊಳಗಾಗಿರುವ ಹಿಮ ವದ್ ಗೋಪಾಲಸ್ವಾಮಿಬೆಟ್ಟ, ಮದ್ದೂರು ಅರಣ್ಯ ವಲಯ, ಮೂಲೆಹೊಳೆ ಅರಣ್ಯ ಹಾಗೂ ಕರಡಿಬೆಟ್ಟ ಅರಣ್ಯ ವಲಯ, ಕುಂದಕೆರೆ…

1 9 10 11 12 13 74
Translate »