ಹನೂರು: ಪಟ್ಟಣ ಪಂಚಾಯಿತಿಯಲ್ಲಿ ಹೊರಗುತ್ತಿಗೆ ಆಧಾರ ದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಟರ್ ಮ್ಯಾನ್ಗಳಿಗೆ 15 ತಿಂಗಳಿಂದ ವೇತನವನ್ನು ಪಾವತಿ ಸದಿರುವುದು ಖಂಡಿಸಿ ಪಟ್ಟಣದಲ್ಲಿ ಗುರುವಾರ ಹೊರಗುತ್ತಿಗೆ ನೌಕರರ ಸಂಘ, ಕರ್ನಾಟಕ ರಾಜ್ಯ ಹೊರಗುತ್ತಿಗೆ ಕಾರ್ಮಿಕರ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು. ಹನೂರು ಪಟ್ಟಣ ಪಂಚಾಯಿತಿ ಕಚೆÉೀರಿ ಮುಂಭಾಗ ಸಮಾವೇಶಗೊಂಡ ನೌಕರರು ಹಾಗೂ ಸಂಘಟನೆಯ ಸದಸ್ಯರು ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ, ಅನಿರ್ಧಿಷ್ಟಾವಧಿ ಧರಣಿ ನಡೆಸಿದರು. ಹೊರಗುತ್ತಿಗೆ ನೌಕರರಿಗೆ 15 ತಿಂಗಳಿಂದ ವೇತನವನ್ನು ಪಾವತಿಸದೆ…
ಸಂತ್ರಸ್ತ ಕುಟುಂಬಗಳಿಗೆ ಪುಷ್ಪ ಅಮರ್ನಾಥ್ ಸಾಂತ್ವನ
January 4, 2019ಹನೂರು: ಸಮೀಪದ ಬಿದರಹಳ್ಳಿ ಮತ್ತು ಸುಳವಾಡಿ ಗ್ರಾಮ ಸೇರಿದಂತೆ ಇತರೆ ಗ್ರಾಮಗಳಿಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರ್ನಾಥ್ ಭೇಟಿ ನೀಡಿ ಸುಳವಾಡಿ ವಿಷ ಪ್ರಸಾದ ದುರಂತದಲ್ಲಿ ಸಾವನ್ನಪ್ಪಿದ್ದವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ, 40ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆದು ಗ್ರಾಮಕ್ಕೆ ಹಿಂದಿರುಗಿದ್ದು, ಅವರ ಮನೆಗಳಿಗೂ ತೆರಳಿ ಆರೋಗ್ಯ ವಿಚಾರಿಸಿದರು. ಈ ವೇಳೆ ಸಂತ್ರಸ್ತ ಕುಟುಂಗಳಿಗೆ ಆಹಾರ ಸಾಮಗ್ರಿ ಹಾಗೂ ಧನ ಸಹಾಯ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ…
ಚಾಮರಾಜನಗರ ಜಿಲ್ಲೆಯಲ್ಲಿ ಜಾನುವಾರು ಮೇವಿನ ಕೊರತೆಯಿಲ್ಲ!
January 3, 2019ಚಾಮರಾಜನಗರ: ಜಿಲ್ಲೆಯಲ್ಲಿ ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಿಲ್ಲ, ಮುಂದಿನ 5 ತಿಂಗಳವ ರೆಗೂ ಸಾಕಾಗುವಷ್ಟು ಮೇವು ಲಭ್ಯತೆವಿದೆ. ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಡಿಸೆಂಬರ್ ಅಂತ್ಯದವರೆಗೆ ಸುಮಾರು 2.53ಲಕ್ಷ ಟನ್ ಮೇವು ರೈತರ ಜಮೀನು ಹಾಗೂ ಮನೆಗಳಲ್ಲಿ ಸಂಗ್ರಹ ವಿದೆ. ಈ ಮೇವು ಮುಂದಿನ ಮೇ ತಿಂಗ ಳಿನವರೆಗೂ ಸಾಕಾಗಲಿದೆ. ಹೀಗಾಗಿ, ಈ ಬಾರಿ ಮೇವಿನ ಕೊರತೆ ಎದುರಾಗುವು ದಿಲ್ಲ. ಇದರಿಂದ ಜಿಲ್ಲೆಯಲ್ಲಿ ಗೋ ಶಾಲೆ ಯನ್ನು ತೆರೆಯುವ ಅಗತ್ಯತೆ ಇಲ್ಲ…
ಉತ್ತಮ ಸಮಾಜಕ್ಕೆ ಧರ್ಮಸ್ಥಳ ಸಂಘ ನಾಂದಿ
January 3, 2019ಗುಂಡ್ಲುಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ತಾಲೂಕಿನಾದ್ಯಂತ ಹತ್ತು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡ ಗಿಸಿಕೊಂಡು ಉತ್ತಮವಾದ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದೆ ಎಂದು ಎಸ್ಕೆಡಿಆರ್ಡಿಪಿಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು. ಪಟ್ಟಣದ ಶಿವಶಕ್ತಿ ಕಾಂಪ್ಲೆಕ್ಸ್ನಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಯೋಜನಾ ಕಚೇರಿಯಲ್ಲಿ ನೂತನ ವರ್ಷದ ಡೈರಿ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನ ವ್ಯಾಪ್ತಿಯಲ್ಲಿ 2,874 ಪ್ರಗತಿ ಬಂಧು ಸಂಘಗಳನ್ನು ರಚಿಸಿಕೊಂಡು ಸುಮಾರು 27,801 ಸದಸ್ಯರನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ. ಈ…
ಹೆಜ್ಜೇನು ದಾಳಿ- ರೈತ ಸಾವು
January 3, 2019ಚಾಮರಾಜನಗರ: ಹೆಜ್ಜೇನು ಕಚ್ಚಿದ ಪರಿಣಾಮ ರೈತನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಜಿ.ಕೆ.ಹೊಸೂರು ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಗ್ರಾಮದ ಬಸವಣ್ಣ(60) ಮೃತಪಟ್ಟ ರೈತ. ಬಸವಣ್ಣ ಅವರು ತಮ್ಮ ತೋಟದ ಮನೆಯಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ಬುಧವಾರ ಬೆಳಿಗ್ಗೆ 9.30ರ ಸಮಯ ದಲ್ಲಿ ಮನೆಯಿಂದ ತೋಟಕ್ಕೆ ತೆರಳುವಾಗ ಏಕಾಏಕಿ ಹೆಜ್ಜೇನು ದಾಳಿ ನಡಿಸಿದೆ. ಪರಿಣಾಮ ತೀವ್ರ ಅಸ್ವಸ್ಥಗೊಂಡ ಬಸವಣ್ಣ ಅವರನ್ನು ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ ಹಾಗೂ…
ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ!
January 3, 2019ಗುಂಡ್ಲುಪೇಟೆ: ಕುಡಿದ ಮತ್ತಿನಲ್ಲಿ ಸ್ನೇಹಿತರೇ ಯುವಕನನ್ನು ಕೊಲೆ ಮಾಡಿರುವ ಘಟನೆ ಪಟ್ಟಣದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪುಟ್ಟಗೋಪಮ್ಮ ಮತ್ತು ಬಸವಣ್ಣ ಎಂಬುವವರ ಪುತ್ರ ಗಿರೀಶ್ಬಾಬು(27) ಎಂಬಾತನೇ ಸ್ನೇಹಿತರಿಂದ ಕೊಲೆ ಯಾದ ಯುವಕ. ಗಿರೀಶ್ಬಾಬು ಪಟ್ಟಣದ ಕೆ.ಎಸ್.ನಾಗ ರತ್ನಮ್ಮ ಬಡಾವಣೆಯ ನಿವಾಸಿಯಾಗಿದ್ದು, ಪಟ್ಟಣದ ನಿವಾಸಿಗಳಾದ ಗಿರೀಶ್, ಪ್ರಸಾದ್, ಪ್ರಶಾಂತ್ ಹಾಗೂ ಅಮೀದ್ ಸ್ನೇಹಿತರೊಂದಿಗೆ ಪಟ್ಟಣದ ಅನುಪಮ ಬಾರ್ನಲ್ಲಿ ಕುಡಿದು ತಡರಾತ್ರಿವರೆಗೂ ರಸ್ತೆಯಲ್ಲಿ ಮಾತಾಡುತ್ತಿದ್ದಾಗ ಹೊಸ ವರ್ಷಾಚರಣೆಗೆ ಗಿರೀಶ್ಬಾಬು ಗೈರು…
ಸುಳವಾಡಿ ಕಿಚ್ಗುತ್ ಮಾರಮ್ಮ ವಿಷ ಪ್ರಸಾದ ದುರಂತ ಡಿಆರ್ಎಂ ಆಸ್ಪತ್ರೆಯಿಂದ ನಾಲ್ವರು ರೋಗಿಗಳು ಡಿಸ್ಚಾರ್ಜ್
January 3, 2019ಮೈಸೂರು: ಹನೂರು ತಾಲೂ ಕಿನ ಸುಳವಾಡಿ ಗ್ರಾಮದ ಕಿಚ್ಗುತ್ ಮಾರಮ್ಮ ದೇವಸ್ಥಾನದಲ್ಲಿ ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥರಾದ ಹಲವು ರೋಗಿ ಗಳು ನಗರದ ವಿವಿಧ ಪ್ರತಿಷ್ಠಿತ ಆಸ್ಪತ್ರೆಗ ಳಿಗೆ ದಾಖಲಾಗಿದ್ದರು. ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ರೋಗಿಗಳ ಆರೋಗ್ಯದ ಕುರಿತು ತೀವ್ರ ನಿಗಾ ವಹಿಸಿತ್ತು. ನಗರದ ಹೃದಯಭಾಗದಲ್ಲಿರುವ ಡಿಆರ್ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಲ್ವರು ರೋಗಿಗಳು ದಾಖಲಾಗಿದ್ದು, ಅವರೆಲ್ಲರೂ ಸಂಪೂರ್ಣವಾಗಿ ಗುಣಮುಖರಾಗಿದ್ದು, ಜ.1 ರಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ದ್ದಾರೆ. ಡಿ.15ರಂದು ಜಯಲಕ್ಷ್ಮಿ(19), ಕೆಂಪರಾಜಮ್ಮ(38), ಮಹಾದೇವಿ(33) ಹಾಗೂ…
ಸಂತೇಮರಹಳ್ಳಿ-ಮೂಗೂರು ಹದಗೆಟ್ಟ ರಸ್ತೆ: ಸಂಚಾರ ದುಸ್ತರ ಪ್ರಯಾಣಿಕರಿಗೆ ಕಿರಿಕಿರಿ, ವಾಹನ ಚಾಲನೆಗೆ ಚಾಲಕರ ಹರಸಾಹಸ
December 29, 2018ಚಾಮರಾಜನಗರ: ರಸ್ತೆ ತುಂಬೆಲ್ಲಾ ಗುಂಡಿಗಳ ದರ್ಬಾರ್, ಅಲ್ಲಲ್ಲಿ ಚದುರಿ ಬಿದ್ದಿರುವ ಕಲ್ಲುಗಳು, ಧೂಳಿನಿಂದ ಆವೃತ್ತವಾಗಿರುವ ರಸ್ತೆ ಇಕ್ಕೆಲ್ಲೆಗಳು, ವಾಹನ ಚಾಲನೆ ಮಾಡಲು ಪರದಾಡುತ್ತಿರುವ ಬಸ್, ಕಾರು, ಲಾರಿ ಚಾಲಕರು… ಧೂಳು- ಹಳ್ಳಗಳ ನಡುವೆ ನಿಧಾನವಾಗಿ ಸಾಗುತ್ತಿರುವ ಬೈಕ್ ಸವಾರರು… ದೇವರೇ ಯಾವಾಗ ಈ ರಸ್ತೆ ಅಭಿವೃದ್ಧಿಯಾಗುತ್ತದೆ ಎಂದು ಮನ ದಲ್ಲಿಯೇ ಶಪಿಸುತ್ತಿರುವ ಪ್ರಯಾಣಿಕರು… ಇದು ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಹೋಬಳಿಯಿಂದ ಮೂಗೂರಿಗೆ ಸಂಪರ್ಕ ಕಲ್ಪಿಸುವ ಜಿಲ್ಲಾ ಮುಖ್ಯರಸ್ತೆಯಲ್ಲಿ ಪ್ರತಿನಿತ್ಯ ಕಂಡು ಬರುತ್ತಿರುವ ದೃಶ್ಯ. ಹೋಬಳಿ ಕೇಂದ್ರವಾದ ಸಂತೇಮರಹಳ್ಳಿ…
ಚಾಮರಾಜನಗರದಲ್ಲಿ ಶೀಘ್ರವೇ ಜವಳಿ ಉದ್ಯಮ ಆರಂಭ
December 29, 2018ನವದೆಹಲಿ: ಚಾಮರಾಜನಗರ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಜವಳಿ ಕೈಗಾರಿಕೆಯನ್ನು ಸ್ಥಾಪಿಸಲು ಸಟ್ಲೆಜ್ ಟೆಕ್ಸ್ಟೈಲ್ಸ್ ಮತ್ತು ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಮುಂದೆ ಬಂದಿದೆ ಎಂದು ಸಂಸದ ಆರ್.ಧ್ರುವ ನಾರಾಯಣ ತಿಳಿಸಿದ್ದಾರೆ. ನವದೆಹಲಿಯಲ್ಲಿ ಗುರುವಾರ ಈ ಸಂಸ್ಥೆಯ ಮುಖ್ಯಸ್ಥರೊಂದಿಗೆ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ. ಸರ್ಕಾರದ ಸಹಕಾರ ನೀಡಿ ದರೆ ಶೀಘ್ರವೇ ಕಂಪೆನಿ ಆರಂಭಿಸುವ ಭರವಸೆ ನೀಡಿದ್ದಾರೆ ಎಂದರು. ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಸುಪರ್ದಿಯಲ್ಲಿ ಜಿಲ್ಲೆಯ 1,600 ಎಕರೆ ಕೈಗಾರಿಕಾ ಪ್ರದೇಶಾಭಿವೃದ್ಧಿಗೊಂಡಿದೆ. ಈ ಪ್ರದೇಶದಲ್ಲಿ ಕೈಗಾರಿಕೆಯನ್ನು ಸ್ಥಾಪಿ…
ವಿದ್ಯಾರ್ಥಿಗಳಿಗೆ ವಿಜ್ಞಾನದ ಆಸಕ್ತಿ ಬೆಳೆಸಿಕೊಳ್ಳಲು ಸಲಹೆ
December 29, 2018ಚಾಮರಾಜನಗರ: ವಿದ್ಯಾರ್ಥಿ ಗಳು ಮೂಲ ವಿಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ಬೆಳಸಿಕೊಳ್ಳಬೇಕು ಎಂದು ಮೈಸೂರಿನ ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಅಂಗ ರಚನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಎನ್.ಎಂ.ಶ್ಯಾಮ್ಸುಂದರ್ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಗ್ರ್ಯಾವಿಟಿ ಸೈನ್ಸ್ ಫೌಂಡೇಶ್ನಿಂದ ವಿದ್ಯಾರ್ಥಿಗಳಿಗಾಗಿ ಏರ್ಪ ಡಿಸಿದ್ದ ಒಂದು ದಿನದ ಆರೋಗ್ಯ ವಿಜ್ಞಾನ ವಿಶೇಷ ಉಪನ್ಯಾಸಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇಂದು ಪ್ರತಿಯೊಂದು ಕ್ಷೇತ್ರದಲ್ಲೂ ವಿಜ್ಞಾನ ಬಹಳ ಮುಖ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ವಿಜ್ಞಾನವನ್ನು ಕಲಿತಾಗ ದೇಶಕ್ಕೆ ತಂತ್ರಜ್ಞಾನ…