ಗುಂಡ್ಲುಪೇಟೆ: ಹಚ್ಚ ಹಸಿರಿನ ಮೈಸಿರಿ, ಬೆಟ್ಟಗುಡ್ಡ, ಕಣಿವೆಗಳ ಮೂಲಕ ಹಾದು ಹೋಗುವ ರಸ್ತೆ ಮಾರ್ಗ. ವನ್ಯಜೀವಿ ತಾಣಕ್ಕೆ ಪ್ರಯಾಣಿಸುತ್ತಿರುವ ಪ್ರವಾಸಿಗರ ವಾಹನಗಳು. ದಟ್ಟ ಕಾನನದ ನಡುವೇ ಸ್ವಚ್ಛಂದವಾಗಿ ನಲಿದಾಡುತ್ತಿರುವ ವನ್ಯಜೀವಿ ಸಂಕುಲ. ಇದು ತಾಲೂಕಿನ ಬಂಡಿಪುರ ರಾಷ್ಟ್ರೀಯ ಉದ್ಯಾನವನ ದಲ್ಲಿ ಕಂಡು ಬಂದ ದೃಶ್ಯ-ಹೌದು ತಾಲೂಕಿನಿಂದ 15 ಕಿ.ಮೀ ದೂರದಲ್ಲಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಕ್ರಿಸ್ಮಸ್ ರಜೆ ಹಾಗೂ ವರ್ಷಾಂತ್ಯದ ಹಿನ್ನೆಲೆಯಲ್ಲಿ ಪ್ರವಾಸಿ ಗರ ದಂಡೇ ಹರಿದು ಬರುತ್ತಿದೆ. ಪ್ರತಿದಿನ ಬೆಳಿಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಬಂಡೀಪುರಕ್ಕೆ ಆಗಮಿಸುತ್ತಿರುವ…
ಮಾರ್ಟಳ್ಳಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಬಿದರಹಳ್ಳಿ ಭಾಗದಲ್ಲಿ ಮುಂದಿನ ವರ್ಷದಿಂದಲೇ ಹೈಸ್ಕೂಲ್
December 26, 2018ಚಾಮರಾಜನಗರ: ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಆರೋಗ್ಯ ಕೇಂದ್ರ ವನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳು ವುದರ ಜೊತೆಗೆ ಈ ಭಾಗದಲ್ಲಿ (ಬಿದರ ಹಳ್ಳಿ) ಮುಂದಿನ ವರ್ಷದಿಂದಲೇ ಹೈಸ್ಕೂಲ್ ಆರಂಭಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಬಿದರಹಳ್ಳಿಯಲ್ಲಿ ಮಾತನಾಡಿದ ಅವರು, ಮಾರ್ಟಳ್ಳಿ ಗ್ರಾಮದಲ್ಲಿ ಇರುವ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಈಗಾ ಗಲೇ ಕ್ರಮ ಕೈಗೊಳ್ಳಲಾಗಿದೆ. ಬಿದರ ಹಳ್ಳಿಯ ಭಾಗದಲ್ಲಿ ಮುಂದಿನ ವರ್ಷ ದಿಂದಲೇ ಹೈಸ್ಕೂಲ್ ತೆರೆಯಲು ಇಂದೇ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ಸುಳವಾಡಿ ದುರಂತದಿಂದ ಮನ ನೊಂದಿ…
ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ
December 26, 2018ಚಾಮರಾಜನಗರ: ಮಾನವನಿಗೆ ಅಸಾಧ್ಯವಾದದ್ದು ಯಾವುದು ಇಲ್ಲ ಮದ್ಯ ವರ್ಜನ ಶಿಬಿರಾರ್ಥಿಗಳು ದೃಢಸಂಕಲ್ಪ ಮಾಡಿ ಕುಡಿತದಿಂದ ದೂರವಿದ್ದು ಇಂದಿನಿಂದ ಹೊಸ ಜೀವನ ಪ್ರಾರಂಭಿಸಿ ನೆಮ್ಮದಿಯಿಂದ ಬಾಳ ಬೇಕು ಎಂದು ಹರವೆ ವಿರಕ್ತಮಠದ ಶ್ರೀ ಸರ್ಪಭೂಷಣ ಸ್ವಾಮೀಜಿ ಹೇಳಿದರು. ನಗರದ ಶ್ರೀಶಿವಕುಮಾರಸ್ವಾಮಿ ಭವನ ದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ, ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಮದ್ಯ ವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ನಗರಸಭೆ, ರೋಟರಿ ಸಿಲ್ಕ್ಸಿಟಿ, ಲಯನ್ಸ್ ಸಂಸ್ಥೆ, ಇನ್ನರ್ವೀಲ್…
ಸುಳವಾಡಿಗೆ ಸಚಿವ ಸಾ.ರಾ.ಮಹೇಶ್ ಭೇಟಿ: ಮೃತರ ಕುಟುಂಬಕ್ಕೆ ಸಾಂತ್ವನ
December 25, 2018ಹನೂರು: ಮುಖ್ಯಮಂತ್ರಿಗಳು ಸುಳವಾಡಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಂತೆ ಸೂಚಿಸಿದ ಹಿನ್ನಲೆ ಇನ್ನಷ್ಟು ಸಾವು ನೋವುಗಳು ಸಂಭವಿಸುವುದು ತಪ್ಪಿದೆ ಎಂದು ಪ್ರವಾಸೋದ್ಯಮ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ತಿಳಿಸಿದರು. ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್ಗುತ್ತಿ ಮಾರಮ್ಮನ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಮೃತಪಟ್ಟ ಕುಟುಂಬ ಗಳಿಗೆ ವಿಶೇಷ ಪರಿಹಾರ ನೀಡಿದ್ದಾರೆ. ನೊಂದ ಕುಟುಂಬಗಳಿಗೆ ನೇರವಾಗಿ ಬೇಟಿ ಮಾಡಿ ಅವರಿಗೆ ಸಾಂತ್ವನ…
ರಾಯಚೂರಿನಲ್ಲಿ ಮರಳು ದಂಧೆಕೋರರಿಂದ ಗ್ರಾಮ ಲೆಕ್ಕಾಧಿಕಾರಿ ಹತ್ಯೆ
December 25, 2018ಚಾಮರಾಜನಗರದಲ್ಲಿ ಸರ್ಕಾರಿ ನೌಕರರ ಪ್ರತಿಭಟನೆ ಚಾಮರಾಜನಗರ: ರಾಯ ಚೂರು ಜಿಲ್ಲೆ ಮಾನ್ವಿ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟವನ್ನು ತಡೆಯಲು ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ ಮೇಲೆ ಟಿಪ್ಪರ್ ಹರಿಸಿ ಹತ್ಯೆ ಮಾಡಿದ ಘಟನೆ ಯನ್ನು ಖಂಡಿಸಿ ಚಾಮರಾಜನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಅಧ್ಯಕ್ಷ ಆರ್.ರಾಚಪ್ಪ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಡಳಿತ ಭವನದ ಮುಂದೆ ನಡೆದ ಪ್ರತಿಭಟನೆಯಲ್ಲಿ ಹತ್ಯೆಗೀಡಾದ ಗ್ರಾಮ ಲೆಕ್ಕಿಗ ಸಾಹೇಬ್ ಪಟೇಲ್ ಕುಟುಂಬಕ್ಕೆ ತಕ್ಷಣವೇ ಮುಖ್ಯಮಂತ್ರಿಗಳ ವಿಶೇಷ ಪರಿ ಹಾರ ನಿಧಿಯಿಂದ ರೂ…
ವಿಜೃಂಭಣೆಯ ಸಿದ್ದಪ್ಪಾಜಿ ಚಂದ್ರ ಮಂಡಲೋತ್ಸವ
December 25, 2018ಕಾಮಗೆರೆ: ಗ್ರಾಮ ದಲ್ಲಿ ಶ್ರೀ ಸಿದ್ದಪ್ಪಾಜಿ ಚಂದ್ರಮಂಡಲೋ ತ್ಸವ ಹಾಗೂ ಕಂಡಾಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಗ್ರಾಮದಲ್ಲಿ ಎರಡು ದಿನಗಳು ಆಚರಣೆ ಮಾಡುವ ಹಬ್ಬಕ್ಕೆ ವಿಶೇಷವಾಗಿ ಕುರು ಬನ ಕಟ್ಟೆ ಕಂಡಾಯಗಳನ್ನು ತರಿಸಲಾ ಗುತ್ತದೆ ಶನಿವಾರ ರಾತ್ರಿ ಗ್ರಾಮದ ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಕಂಡಾಯ ಗಳನ್ನು ಇರಿಸಿ ವೀಳ್ಯದೆಲೆ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ವಿಶೇಷವಾಗಿ ತಂಬಡಿಗಳು ಪೂಜೆ ಸಲ್ಲಿಸಿದರು. ನಂತರ ಮಹದೇಶ್ವರ ದೇವಸ್ಥಾನದಿಂದ ಪ್ರಮುಖ ರಸ್ತೆಯಲ್ಲಿ ವಾದ್ಯಮೇಳ ದೊಂದಿಗೆ ಕಂಡಾಯ ಮೆರವಣಿಗೆ ಸಾಗಿ ದೊಡ್ಡಬೀದಿ ಸಿದ್ದಪ್ಪಾಜಿ…
ದೇವಾಲಯದ ಬಾಗಿಲು ಮುರಿದು ನಗನಾಣ್ಯ ಕಳವು
December 22, 2018ಗುಂಡ್ಲುಪೇಟೆ: ದೇವಸ್ಥಾನದ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ನಗ ನಾಣ್ಯ ಕಳುವು ಮಾಡಿರುವ ಘಟನೆ ತಾಲೂಕಿನ ತ್ರಿಯಂಭಕಪುರ ಗ್ರಾಮದ ತ್ರಿಯಂಭಕೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಗುರುವಾರ ತಡ ರಾತ್ರಿಯಲ್ಲಿ ಶ್ರೀ ತ್ರಿಯಂಭಕೇಶ್ವರ, ಅಮ್ಮನವರ ದೇವಸ್ಥಾನದ ಬೀಗ ಹಾಗೂ ಸಪ್ತಮಾತೃಕೆಯರ ದೇವಸ್ಥಾನದ ಬಾಗಿಲು ಮುರಿದು ಕಳ್ಳರು ಪ್ರವೇಶಿಸಿ ಮೂರು ಗೋಲಕಗಳನ್ನು ಒಡೆದು ಲಕ್ಷಾಂತರ ರೂಪಾಯಿ ಕಳವು ಮಾಡಿದ್ದಾರೆ. ಎಂದಿನಂತೆ ಶುಕ್ರವಾರ ಬೆಳಿಗ್ಗೆ ದೇವಸ್ಥಾನಕ್ಕೆ ಅರ್ಚಕ ನಾಗೇಂದ್ರ ಬಂದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕೂಡಲೇ ಅವರು ಕಂದಾಯ ಅಧಿಕಾರಿಗಳು…
ವಿದ್ಯುತ್ ಸ್ವರ್ಶಿಸಿ ವ್ಯಕ್ತಿ ಸಾವು
December 22, 2018ಚಾಮರಾಜನಗರ: ವಿದ್ಯುತ್ ಸ್ಪರ್ಶಿಸಿ ವ್ಯಕ್ಯಯೊಬ್ಬ ಮೃತಪಟ್ಟಿ ರುವ ಘಟನೆ ನಗರದ ರಾಮಸಮುದ್ರದಲ್ಲಿ ಶುಕ್ರವಾರ ಸಂಜೆ ನಡೆದಿದೆ.ರಾಮಸಮುದ್ರ ಅಂಬೇಡ್ಕರ್ ಬಡಾವಣೆ ನಿವಾಸಿ ಮಹದೇವಯ್ಯ(65) ಮೃತಪಟ್ಟವರು. ನಲ್ಲಿ ನೀರು ಪಡೆಯಲು ಮೋಟಾರ್ ಅಳವಡಿಸಿ ಅದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರು. ನೀರು ಪಡೆದ ನಂತರ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸದೇ ವೈರ್ ಸುತ್ತಿಕೊಳ್ಳುತ್ತಿ ದಾಗ ವಿದ್ಯುತ್ ಸ್ಪರ್ಶಿಸಿ ತೀವ್ರ ಅಸ್ವಸ್ಥರಾ ದರು, ಕೂಡಲೇ ಅವರನ್ನು ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಅವರ ಸಾವನ್ನಪ್ಪಿ ದ್ದಾರೆ ಎಂದು ಪೊಲೀಸರು…
ಸಾಹಿತಿ ಎಸ್.ಎಲ್.ಭೈರಪ್ಪರಿಗೆ ಮಾನಸ ಪ್ರಶಸ್ತಿ ಪ್ರಕಟ
December 21, 2018ಕೊಳ್ಳೇಗಾಲ: ನಗರದಲ್ಲಿ ಡಿ. 21ರಿಂದ 3ದಿನ ಮಾನ ಸೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಎಸ್. ಎಲ್.ಭೈರಪ್ಪ ಅವರಿಗೆ ಮಾನಸ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ದತೇಶ್ ಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೈರಪ್ಪ ಅವರಿಗೆ ಪ್ರಶಸ್ತಿ ಪ್ರಧಾನವನ್ನು ಹಿರಿಯ ಸಾಹಿತಿ ಡಾ.ಮಲ್ಲೇಶ್ವರಂ ವೆಂಕಟೇಶ್ ಪ್ರಧಾನ ಮಾಡಲಿದ್ದಾರೆ ಎಂದರು. ಡಿ.22ರಂದು ಬೆಳಿಗ್ಗೆ 10 ಗಂಟೆಗೆ ಗುರುವಂದನಾ ಕಾರ್ಯಕ್ರಮ, ಮಧ್ಯಾಹ್ನ 3ಗಂಟೆಗೆ ಕವಿಗೋಷ್ಠಿ ಆಯೋಜಿಸಲಾಗಿದೆ. ಗೋಷ್ಠಿ ಅಧ್ಯಕ್ಷತೆಯನ್ನು ಚಲನ…
ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ
December 21, 2018ಚಾಮರಾಜನಗರ: ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರ್ಮಿಕರಿಗಾಗಿ ಮೀಸಲಿಟ್ಟಿ ರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕಾರ್ಮಿಕರಿಗೆ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಗುರುವಾರ ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಯಿತು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಪ್ರತಿ ಭಟನಾ ಮೆರವಣಿಗೆ ಆರಂಭಿಸಿದ ಕಾರ್ಮಿ ಕರು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿ ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿ ದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಕಾರ್ಮಿಕ ಇಲಾಖೆಗೆ ಅಧಿ…