ಚಾಮರಾಜನಗರ: ತಾಲೂಕಿನ ಕಾಗಲವಾಡಿ ಗ್ರಾಮದಲ್ಲಿ ಶ್ರೀಮಲೈ ಮಹ ದೇಶ್ವರಸ್ವಾಮಿಯ 10ನೇ ವಾರ್ಷಿ ಕೋತ್ಸವ, 101 ಹಾಲರವೆ ಪೂಜಾ ಮಹೋತ್ಸವ ಹಾಗೂ ಕಡೆಕಾರ್ತಿಕ ಸೋಮವಾರದ ವಿಶೇಷಪೂಜಾ ಮಹೋ ತ್ಸವ ವಿಜೃಂಭಣೆಯಿಂದ ನಡೆಯಿತು. ಗ್ರಾಮದ ಸರ್ಕಾರಿ ಶಾಲಾ ಆವರಣ ದಲ್ಲಿ ಶ್ರೀಮಹದೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ, ಅಲ್ಲಿಂದ ಸತ್ತಿಗೆ, ಸೂರಿಪಾನಿ, ಪೂಜಾ ಕುಣಿತ, ಗೊರವರಕುಣಿತ, ಡೊಳ್ಳುಕುಣಿತ, ಕಂಸಾಳೆಕುಣಿತ ತಂಡ, ವಾದ್ಯ ಗೋಷ್ಠಿಯೊಂದಿಗೆ ಹಾಲರವೆ ಉತ್ಸವ ಪ್ರಾರಂಭವಾಗಿ ಶ್ರೀಮಹದೇಶ್ವರರ ದೇವಾ ಲಯಕ್ಕೆ ತೆರಳಿ ಮುಕ್ತಾಯಗೊಂಡಿತು. ಮೆರವÀಣಿಗೆಯಲ್ಲಿ ಭಾಗವಹಿಸಿದ ಕಲಾ ತಂಡಗಳು ಉತ್ತಮ ಪ್ರದರ್ಶನ…
ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲ ವೃತ್ತಿ ಶ್ರೇಷ್ಠವಾದದ್ದು ನ್ಯಾಯಾಧೀಶ ಡಿ.ವಿನಯ್ ಅಭಿಮತ
December 4, 2018ಚಾಮರಾಜನಗರ: ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲ ವೃತ್ತಿ ಶ್ರೇಷ್ಠವಾ ದದ್ದು, ಎಲ್ಲಾ ಹುದ್ದೆಗಳಿಗಿಂತ ವಕೀಲ ವೃತ್ತಿ ಉತ್ತಮವಾದುದಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶ ಡಿ.ವಿನಯ್ ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ವಕೀಲರ ಸಂಪs ಏರ್ಪಡಿಸಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮÁತನಾಡಿದ ಅವರು ಭಾರತದ ಪ್ರಥಮ ರಾಷ್ಟ್ರದs್ಯಕ್ಷರಾಗಿದ್ದ ಡಾ. ರಾಜೇಂದ್ರ ಪ್ರಸಾದ್ರವರ ಹುಟ್ಟುಹಬ್ಬವನ್ನು ವಕೀಲರ ದಿನಾಚರಣೆಯಾಗಿ ಆಚರಿಸು ತ್ತಿದ್ಧು ವಕೀಲ ವೃತ್ತಿಗೆ ತನ್ನದೇ ಆದ ಘನತೆ ಇದೆ. ಇದನ್ನು ಉಳಿಸಿಕೊಳ್ಳುವ ಮತ್ತು…
ಬೆಂಕಿ ಹಚ್ಚಿ ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
December 4, 2018ಚಾಮರಾಜನಗರ: ಬೆಂಕಿ ಹಚ್ಚಿ ಪತ್ನಿಯನ್ನು ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಚಾಮ ರಾಜನಗರ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ. ವಿನಯ್ ಅವರು ತೀರ್ಪು ನೀಡಿದ್ದಾರೆ. ಚಾಮರಾಜನಗರ ತಾಲೂಕು ಕೆರೆಹಳ್ಳಿ ಗ್ರಾಮದ ಮಂಜು ಶಿಕ್ಷೆಗೊಳಗಾದವನಾಗಿದ್ದು, ಈತನಿಗೆ ಹಾಸನ ಜಿಲ್ಲೆ ದೇವಿನಗರದ ನಂಜೇಗೌಡ ಎಂಬುವರ ಪುತ್ರಿಯನ್ನು 2007ರ ಏ.29 ರಂದು ಮದುವೆ ಮಾಡಿಕೊಡಲಾಗಿತ್ತು. ಮದುವೆ ನಂತರ ತವರಿನಿಂದ ಹಣ ತರುವಂತೆ ಮಂಜು ತನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದ. 2014ರ ಸೆಪ್ಟೆಂಬರ್ನಲ್ಲಿ ಪತ್ನಿ ಮೇಲೆ ಸೀಮೆಎಣ್ಣೆ ಸುರಿದು…
ಇಂದು ಮಾದಪ್ಪನ ಸನ್ನಿಧಿಗೆ ಸಿಎಂ ಕುಮಾರಸ್ವಾಮಿ ಭೇಟಿ
November 30, 2018ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ, ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಜಿಲ್ಲಾ ಪ್ರವಾಸ ಬಡಗಲಮೋಳೆ, ಕೊಂಬುಡಿಕ್ಕಿ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಗಮನ ಸೆಳೆದಿದ್ದ ಹೆಚ್ಡಿಕೆ ಚಾಮರಾಜನಗರ: ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇದೇ ಮೊದಲ ಬಾರಿಗೆ ನಾಳೆ(ನ.30) ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸಲಿದ್ದು, ಮೊದಲು ಮಾದ ಪ್ಪನ ದರ್ಶನ ಪಡೆಯಲಿದ್ದಾರೆ. ನಂತರ ಬೆಟ್ಟ ದಲ್ಲಿ ಶ್ರೀ ಮಲೆಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ನಿರ್ಮಿಸಿರುವ ಜೇನುಮಲೆ ವಸತಿಗೃಹ…
ಗಂಗಾ ಕಲ್ಯಾಣ ಯೋಜನೆ ಸಕಾಲಕ್ಕೆ ಸೌಲಭ್ಯ ತಲುಪಿಸಿ
November 29, 2018ಚಾಮರಾಜನಗರ: ಜಿಲ್ಲೆಯಲ್ಲಿ ಗಂಗಾಕಲ್ಯಾಣ ಯೋಜನೆಯಡಿ ವಿವಿಧ ನಿಗಮಗಳಿಂದ ಫಲಾನುಭವಿಗಳಿಗೆ ಅತಿ ಶೀಘ್ರವಾಗಿ ಬೋರ್ವೆಲ್ ಕೊರೆದು ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸವನ್ನು ವಿಳಂಬ ಮಾಡದಂತೆ ನಿರ್ವಹಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂ ಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ,…
ನಾಳೆ ಮಹದೇಶ್ವರ ಬೆಟ್ಟಕ್ಕೆ ಸಿಎಂ ಹೆಚ್ಡಿಕೆ ಭೇಟಿ ಸುತ್ತೂರು ಮಠದ ಅತಿಥಿ ಗೃಹ ಉದ್ಘಾಟನೆ, ಸುತ್ತೂರು ಶ್ರೀ, ಆದಿಚುಂಚನಗಿರಿ ಶ್ರೀ, ಹಲವು ಸಚಿವರು ಭಾಗಿ
November 29, 2018ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಒಂದಾದ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನ. 30ರಂದು ಸುತ್ತೂರು ಮಠದ ಅತಿಥಿ ಗೃಹ ಉದ್ಘಾ ಟನಾ ಸಮಾರಂಭ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸುತ್ತೂರು ಮಠದ ಅತಿಥಿ ಗೃಹವನ್ನು ಉದ್ಘಾಟಿಸಲಿದ್ದಾರೆ. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮಹದೇಶ್ವರ ಬೆಟ್ಟ ಸಾಲೂರು ಮಠದ ಶ್ರೀ ಗುರು ಸ್ವಾಮೀಜಿ,…
ಎರಡು ತಿಂಗಳು ಕರ್ತವ್ಯದಲ್ಲಿ ಮುಂದುವರಿಕೆಗೆ ಅವಕಾಶ ಅನಿರ್ದಿಷ್ಟಾವಧಿ ಧರಣಿ ಕೈಬಿಟ್ಟ ಶುಶ್ರೂಷಕರು
November 29, 2018ಚಾಮರಾಜನಗರ :ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಟೈಫಂಡರಿ ಆಧಾರದಡಿ ನೇಮಕಗೊಂ ಡಿದ್ದ ಶುಶ್ರೂಷಕರನ್ನು ಮತ್ತೆ ಎರಡು ತಿಂಗಳು ಕರ್ತವ್ಯದಲ್ಲಿ ಮುಂದುವರಿಯಲು ಅವ ಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಜಿಲ್ಲಾಡ ಳಿತ ಭವನದ ಮುಂಭಾಗ ಹಮ್ಮಿ ಕೊಂಡಿದ್ದ ಅಹೋರಾತ್ರಿ ಧರಣಿಯನ್ನು ಶುಶ್ರೂಷಕರು ಬುಧವಾರ ಹಿಂಪಡೆದಿದ್ದಾರೆ. ಮೂರು ವರ್ಷಗಳಿಂದ ಯಾವುದೇ ಲೋಪ ಎಸಗದೆ ಕರ್ತವ್ಯ ನಿರ್ವಹಿಸು ತ್ತಿರುವ ತಮ್ಮನ್ನೇ ಕರ್ತವ್ಯದಲ್ಲಿ ಮುಂದು ವರೆಸುವಂತೆ ಆಗ್ರಹಿಸಿ ಸ್ಟೈಫಂಡರಿ ಆಧಾರ ದಡಿ ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 60 ಶುಶ್ರೂಷಕರು ಕರ್ತವ್ಯಕ್ಕೆ ಗೈರಾಗಿ 5…
ನಾಗಮಣಿ ಮಾರಾಟ ಯತ್ನ: ವ್ಯಕ್ತಿ ಬಂಧನ
November 29, 2018ಹನೂರು: ತಾಲೂಕಿನಲ್ಲಿ ಅಮಾಯಕರನ್ನು ವಂಚಿಸಿ ನಾಗಮಣಿ ಮಾರಾ ಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಜಿಲ್ಲಾ ಸಿಇಎನ್ ಪೊಲೀಸರು ಮಂಗಳವಾರ ಬಂಧಿಸಿ ದ್ದಾರೆ. ತಾಲೂಕಿನ ಎಂ.ಜಿ.ದೊಡ್ಡಿ ಗ್ರಾಮದ ಮುತ್ತು ಬಂಧಿತ ಆರೋಪಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಅವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಜಿಲ್ಲಾ ಸಿ.ಇ.ಎನ್ ಇನ್ಸ್ಪ್ಪೆಕ್ಟರ್ ರವೀಂದ್ರ ಹಾಗೂ ಎಎಸ್ಐಗಳಾದ ಜಯಶಂಕರ್, ಮಹದೇವಪ್ಪ, ಪೇದೆಗಳಾದ ಹೆಚ್.ಡಿ.ಸ್ವಾಮಿ, ಸಿದ್ದ ಮಲ್ಲಶೆಟ್ಟಿ, ವ್ಯಾಪಾರಿಗಳ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿ ಮುತ್ತು ಎಂಬುವನನ್ನು ಬಂಧಿಸಿ ಆತನಿಂದ ಒಂದು ನಾಗಮಣಿಯನ್ನು ವಶಪಡಿಸಿಕೊಂಡಿದ್ದಾರೆ….
ಚಾಮರಾಜನಗರದಲ್ಲಿ ಸಂವಿಧಾನ ದಿನಾಚರಣೆ
November 27, 2018ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದಾಗ ಮಾತ್ರ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದ್ದಂತೆ ಆಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ ಅಭಿಪ್ರಾಯಪಟ್ಟರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ಆಶ್ರಯದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ಇರುವ ವ್ಯಾಜ್ಯ ಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಸೋಮವಾರ ಆಯೋ ಜಿಸಿದ್ದ ‘ಸಂವಿಧಾನ ದಿನಾಚರಣೆ’…
ಜಿಲ್ಲಾಸ್ಪತ್ರೆಯ ಶುಶ್ರೂಷಕರ ಪ್ರತಿಭಟನೆ
November 27, 2018ಚಾಮರಾಜನಗರ: ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಸ್ಟೈಫಂಡರಿ ಆಧಾರದಲ್ಲಿ ಶುಶ್ರೂಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತಮ್ಮನ್ನೇ ಸೇವೆಯಲ್ಲಿ ಮುಂದುವರೆಸುವಂತೆ ಆಗ್ರಹಿಸಿ ಶುಶ್ರೂಷಕರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಶುಶ್ರೂಷಕರಿಗೆ ಬಹುಜನ ವಿದ್ಯಾರ್ಥಿ ಸಂಘ ಹಾಗೂ ಜಿಲ್ಲಾ ರೈತ ಸಂಘ ಬೆಂಬಲ ಸೂಚಿಸಿದ್ದರು. ಇಲ್ಲಿನ ಪ್ರವಾಸಿ ಮಂದಿರದಿಂದ ಪ್ರತಿಭಟನೆ ಆರಂಭಿಸಿದ ಶುಶ್ರೂಷಕರು (ನರ್ಸ್ಗಳು), ಬಹುಜನ ವಿದ್ಯಾರ್ಥಿ ಸಂಘ ಹಾಗೂ ರೈತ ಸಂಘದ ಕಾರ್ಯಕರ್ತರು, ಮೆಡಿಕಲ್ ಕಾಲೇಜಿನ ಡೀನ್ ಹಾಗೂ ನಿರ್ದೇಶಕ ಡಾ. ರಾಜೇಂದ್ರ, ವೈದ್ಯಕೀಯ ಶಿಕ್ಷಣ…