ಚಾಮರಾಜನಗರ ಜ.12- ಚಾಮರಾಜನಗರ ಉಪ್ಪಾರಬೀದಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಎಂಟನೇ ತರಗತಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದು ಹಿಂದುಳಿದ ವರ್ಗದ ಮಕ್ಕಳಾಗಿರುತ್ತಾರೆ. 2017ರಲ್ಲಿ ರಾಷ್ಟ್ರೀಯ ಹೆದ್ದಾರಿ 209ರ ಅಗಲೀಕರಣ ಮಾಡುವಾಗ ಶಾಲೆಯ ಕಾಂಪೌಂಡ್ ಕೆಡವಿ ಹಾಕಿರುತ್ತಾರೆ. ಇದುವರೆವಿಗೂ ಸುತ್ತುಗೋಡೆ ನಿರ್ಮಾಣವಾಗಿರುವುದಿಲ್ಲ. ಇದರ ಬಗ್ಗೆ ಜಿಲ್ಲಾಧಿ ಕಾರಿಗಳಿಗೆ, ಶಾಸಕರಿಗೆ, ಸಂಸದರಿಗೆ ಹಲವಾರು ಬಾರಿ ಮನವಿ ಮಾಡಲಾಗಿದ್ದರೂ ಇದುವರೆವಿಗೂ ನಿರ್ಮಾಣವಾಗಿಲ್ಲ. ಇದರಿಂದ ರಾತ್ರಿ ವೇಳೆಯಲ್ಲಿ ಕುಡುಕರು, ದನಕರುಗಳು ಒಳ ಪ್ರವೇಶಿಸುತ್ತಿದ್ದು, ಶಾಲಾ ಪರಿಸರ ಹಾಳಾಗುತ್ತಿದೆ. ಇದರಿಂದ ಮಕ್ಕಳ…
ಜಿಪಂ ಅಧ್ಯಕ್ಷೆ ಶಿವಮ್ಮ ರಾಜೀನಾಮೆ ವಾಪಸ್?
January 11, 2020ಚಾಮರಾಜನಗರ, ಜ.10(ಎಸ್ಎಸ್)- ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಿವಮ್ಮ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀ ನಾಮೆಯನ್ನು ಶುಕ್ರವಾರ ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯ ದರ್ಶಿಗೆ ಡಿಸೆಂಬರ್ 30 ರಂದು ಶಿವಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಅಂಗೀ ಕಾರಕ್ಕೆ 15 ದಿನಗಳ ಕಾಲಾವಕಾಶವಿತ್ತು. ಈ ಅವಧಿಯೊಳಗೆ ರಾಜೀನಾಮೆಯನ್ನು ವಾಪಸ್ ಪಡೆಯಲು ಅವಕಾಶವಿತ್ತು. ಹೀಗಾಗಿ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ ಎಂದು ಉನ್ನತ ಮೂಲಗಳು ‘ಮೈಸೂರು ಮಿತ್ರ’ನಿಗೆ ಖಚಿತ ಪಡಿಸಿವೆ. ಜಿಪಂನಲ್ಲಿ…
ಹಳ್ಳಿ-ಹಳ್ಳಿಗಳಲ್ಲಿ ಯುವ ಬ್ರಿಗೇಡ್ನಿಂದ ಸ್ವಾಮಿ ವಿವೇಕಾನಂದರ ವಿಚಾರಧಾರೆ ಜಾಗೃತಿ
January 11, 2020ಚಾಮರಾಜನಗರ, ಜ.10(ಎಸ್ಎಸ್)- ಯುವ ಬ್ರಿಗೇಡ್ ಸಂಘಟನೆಯು ಗ್ರಾಮ ಗ್ರಾಮಗಳಲ್ಲಿ ಪಾದಯಾತ್ರೆ ಮಾಡಿ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಹಂಚುತ್ತಾ ಹಳ್ಳಿಗಳೊಂದಿಗೆ ಬಾಂಧವ್ಯ ಬೆಸೆಯುವ ಪ್ರಯತ್ನಕ್ಕಾಗಿ ಜಿಲ್ಲೆಯಲ್ಲಿ ಕೈಗೊಂಡಿರುವ 3 ದಿನಗಳ ಪಾದಯಾತ್ರೆ ಶುಕ್ರವಾರ ಆರಂಭವಾಯಿತು. ಚಾಮರಾಜನಗರ ತಾಲೂಕಿನ ಅಮಚ ವಾಡಿ ಗ್ರಾಮದಲ್ಲಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಯನ್ನು ಆರಂಭಿಸಲಾ ಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆ ಸಾಗಿತು. ನಂತರ ಚನ್ನಪ್ಪನ ಪುರ ಗ್ರಾಮಕ್ಕೆ ತೆರಳಿತು. ಈ ವೇಳೆ ಗ್ರಾಮದ ಯುವಕ ಮಲ್ಲಿಕಾರ್ಜುನ ಎಂಬಾತ…
ಇಂದು ಹೆಚ್.ಎಸ್. ಮಹದೇವಪ್ರಸಾದ್ ಒಂದು ನೆನಪು
January 11, 2020ಚಾಮರಾಜನಗರ, ಜ.10(ಎಸ್ಎಸ್)- ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಜನವರಿ 11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನ ದಲ್ಲಿ ಮಾಜಿ ಸಚಿವರಾದ ಹೆಚ್.ಎಸ್. ಮಹದೇವಪ್ರಸಾದ್ ಒಂದು ನೆನಪು ಕಾರ್ಯಕ್ರಮ ಆಯೋಜಿಸಲಾಗಿದೆ. ಮಾಜಿ ಸಚಿವ ಕೃಷ್ಣಭೈರೇಗೌಡ ಕಾರ್ಯ ಕ್ರಮವನ್ನು ಉದ್ಘಾಟಿಸುವರು. ಆರ್. ಧ್ರುವ ನಾರಾಯಣ್ ನೇತೃತ್ವ ವಹಿಸುವರು. ಸಿ. ಪುಟ್ಟರಂಗಶೆಟ್ಟಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ಗೀತಾಮಹದೇವಪ್ರಸಾದ್ ಅವರಿಗೆ ಆರ್. ನರೇಂದ್ರ ಗೌರವ ಸಮರ್ಪಿ ಸುವರು. ಪಿ. ಮರಿಸ್ವಾಮಿ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ…
13 ಮೆಟ್ರಿಕ್ ಟನ್ ಅಕ್ರಮ ಮರಳು ವಶ
January 11, 2020ಚಾಮರಾಜನಗರ, ಜ.10- ಕೊಳ್ಳೇಗಾಲ ತಾಲೂಕಿನ ಕಾವೇರಿ ನದಿ ಪಾತ್ರಕ್ಕೆ ಹೊಂದಿಕೊಂಡಿರುವ ಧನಗೆರೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 13 ಮೆಟ್ರಿಕ್ ಟನ್ ಮರಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಗೆ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗಣಿ ಇಲಾಖೆ ಉಪನಿರ್ದೇಶಕಿ ಡಾ.ಲಕ್ಷಮ್ಮ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದಾಗ ಒಂದು ಕಡೆ 5 ಮೆಟ್ರಿಕ್ ಟನ್ ಮರಳು ಮತ್ತೊಂದು ಕಡೆ 8 ಮೆಟ್ರಿಕ್ ಟನ್…
ಸಿಎಎಯಿಂದ ಭಾರತದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ ಶಾಸಕ ಕೆ.ಜಿ.ಬೋಪಯ್ಯ ಮನವರಿಕೆ
January 10, 2020ವಿರಾಜಪೇಟೆ, ಜ.9- ಪೌರತ್ವ ತಿದ್ದು ಪಡಿ ಕಾಯ್ದೆಯಲ್ಲಿ ಭಾರತದ ಮುಸ್ಲಿಮ ರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗುವುದಿಲ್ಲ. ಬಹುತೇಕ ಅಲ್ಪಸಂಖ್ಯಾತರಿಗೆ ಪೌರತ್ವ ಕಾಯ್ದೆಯ ಬಗ್ಗೆ ಮಾಹಿತಿಯ ಕೊರತೆ ಕಂಡುಬಂದಿರುವುದಾಗಿ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ವಿರಾಜಪೇಟೆ ಪಟ್ಟಣದ ಗಡಿಯಾರ ಕಂಬದ ಬಳಿಯಿಂದ ಖಾಸಗಿ ಬಸ್ಸು ನಿಲ್ದಾಣ ದವರೆಗೆ ಅಲ್ಪಸಂಖ್ಯಾತರ ಅಂಗಡಿ ಮಳಿಗೆ ಗಳಿಗೆ ಭೇಟಿ ನೀಡಿ ಪೌರತ್ವ ಕಾಯ್ದೆಯ ಬಗ್ಗೆ ಮನದಟ್ಟು ಮಾಡಿಕೊಡುವ ನಿಟ್ಟಿನಲ್ಲಿ ಶಾಸಕ ಬೋಪಯ್ಯ ಅವರ ತಂಡ ಜನ ಜಾಗೃತಿ ಅಭಿಯಾನ ನಡೆಸಿತು. ಬಳಿಕ ಮಾತನಾಡಿದ…
ಪೌರತ್ವ ಕಾಯ್ದೆಯನ್ನು ‘ಒನಕೆ ಓಬವ್ವ’ ಹೆಸರಿನಲ್ಲಿ ಕರೆಯುವುದು ಸೂಕ್ತ
January 10, 2020ಗುಂಡ್ಲುಪೇಟೆಯಲ್ಲಿ ಕಾಯ್ದೆ ಬಗ್ಗೆ ಜಾಗೃತಿ ಅಭಿಯಾನದಲ್ಲಿ ಆರ್.ರಘು (ಕೌಟಿಲ್ಯ) ಅಭಿಮತ ಗುಂಡ್ಲುಪೇಟೆ, ಜ.9(ಸೋಮ್ಜಿ)- ದೇಶದ ಸುಭದ್ರತೆಗಾಗಿ ಅಸ್ಥಿತ್ವಕ್ಕೆ ಬಂದಿ ರುವ ಪೌರತ್ವ ತಿದ್ದುಪಡಿ ಕಾಯ್ದೆ ಈಗ ದೇಶಾದ್ಯಂತ ಅಪಪ್ರಚಾರಕ್ಕೆ ಗ್ರಾಸವಾಗಿದ್ದು, ಚಿತ್ರದುರ್ಗದ ಕೋಟೆಯ ಒಳಗೆ ಕಿಂಡಿ ಮೂಲಕ ನುಸುಳಿ ಬರುತ್ತಿದ್ದ ಶತ್ರುಗಳನ್ನು ಒನಕೆ ಓಬವ್ವ ಸೆದೆ ಬಡಿದ ರೀತಿ, ಭಾರತ್ವಕ್ಕೆ ಬರುವ ನುಸುಳುಕೋರರನ್ನು ತಡೆಯುವುದು ಈ ಕಾಯ್ದೆಯ ಉದ್ದೇಶವಾಗಿದೆ. ಹೀಗಾಗಿ ಈ ಕಾಯ್ದೆಯನ್ನು ‘ ಒನಕೆ ಓಬವ್ವ’ನ ಹೆಸರಿನಲ್ಲಿ ಕರೆಯುವುದು ಸೂಕ್ತ ಎಂದು ಬಿಜೆಪಿ ರಾಜ್ಯ ಸಹ…
ಪ್ರಧಾನಿಯೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
January 10, 2020ಚಾಮರಾಜನಗರ, ಜ.9- ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಲು ಹಾಗೂ ಪರೀಕ್ಷಾ ಸಮಯದಲ್ಲಿ ಹೇಗೆಲ್ಲಾ ತಯಾರಿ ನಡೆಸ ಬೇಕು. ಯಾವ ರೀತಿ ಪರೀಕ್ಷೆಗೆ ಸಿದ್ಧರಾಗಬೇಕು ಎಂಬುದರ ಬಗ್ಗೆ ಸ್ಪತಃ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಆಯ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸ ಲಿದ್ದು, ಜಿಲ್ಲೆಯ ಇಬ್ಬರು ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಜನವರಿ 20 ರಂದು ನವದೆಹಲಿ ಯಲ್ಲಿ ನಡೆಯುಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿ ಸಲು ಚಾಮರಾಜನಗರ ಜಿಲ್ಲೆ ಗುಂಡ್ಲು ಪೇಟೆಯಲ್ಲಿರುವ ಆದರ್ಶ ವಿದ್ಯಾಲಯದ ಹತ್ತನೆ ತರಗತಿ…
ಇಂದಿನಿಂದ 3 ದಿನ ವೀರ್ಭಾರತ್ ಪಾದಯಾತ್ರೆ
January 10, 2020ಚಾಮರಾಜನಗರ, ಜ.9(ಎಸ್ಎಸ್)- ಯುವ ಬ್ರಿಗೇಡ್ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ವೀರ್ ಭಾರತ್ ಗುರಿಯತ್ತ ನಡೆ ಎಂಬ ಪಾದ ಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಅದರಂತೆ ಜಿಲ್ಲೆಯಲ್ಲಿ ಜನವರಿ 10 ರಿಂದ 12 ರವರೆಗೆ ಪಾದಯಾತ್ರೆ ನಡೆಯಲಿದೆ. ಗ್ರಾಮ ಗ್ರಾಮಗಳಲ್ಲಿ ಪಾದಯಾತ್ರೆ ಮಾಡುತ್ತಾ ವಿವೇಕಾನಂದರ ವಿಚಾರಧಾರೆಗಳನ್ನು ಹಂಚುತ್ತಾ ಹಳ್ಳಿಗಳೊಂ ದಿಗೆ ಬಾಂಧವ್ಯ ಬೆಸೆಯುವ ಪ್ರಯತ್ನ ಮಾಡಲಾಗುತ್ತಿದೆ. ಆಯಾ ಜಿಲ್ಲೆಯ ಮರೆತುಹೋದ ಮಹಾಪುರುಷರನ್ನು ಎಲ್ಲರಿಗೂ ಮತ್ತೊಮ್ಮೆ ನೆನಪಿಸಿಕೊಡುವ ವಿಶೇಷ ಪ್ರಯತ್ನ ಇದಾಗಿದೆ ಎಂದು ಯುವ ಬ್ರಿಗೇಡ್ ತಿಳಿಸಿದೆ. ಜಿಲ್ಲೆಯಲ್ಲಿ…
ಕೇಂದ್ರದ ವಿರುದ್ಧ ಕಾರ್ಮಿಕ ಸಂಘಟನೆಗಳ ಮುಷ್ಕರ
January 9, 2020ಚಾಮರಾಜನಗರ, ಜ.8(ಎಸ್ಎಸ್)- ಕೇಂದ್ರ ಸರ್ಕಾರ ಆರ್ಥಿಕ, ಕಾರ್ಮಿಕ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಮುಷ್ಕರ ಜಿಲ್ಲೆಯಲ್ಲೂ ನಡೆಯಿತು. ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಅಂಗನವಾಡಿ ನೌಕರರ ಸಂಘ, ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಎಅಖಿU), ಸೆಂಟರ್ ಆಫ್ ಟ್ರೇಡ್ ಯೂನಿ ಯನ್ಸ್ (ಅIಖಿU), ಮಧ್ಯಾಹ್ನದ ಬಿಸಿಯೂಟ ಯೋಜನೆಯ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ ಹಾಗೂ ಗ್ರಾಮ ಪಂಚಾಯಿತಿ ನೌಕರರ ಸಂಘಟನೆ ಗಳು ಪ್ರತಿಭಟನೆ ನಡೆಸುವ…