ಚಾಮರಾಜನಗರ: ನಮ್ಮ ಸಂವಿಧಾನದಲ್ಲಿ ಯಾವುದೇ ಆರೋಪಿ ಯನ್ನು ಆತನ ಆರೋಪ ಸಾಬೀತಾಗು ವವರೆಗೆ ನ್ಯಾಯಾಲಯ ಆತನನ್ನು ಆರೋಪಿ ಎಂದೇ ಪರಿಗಣಿಸಬೇಕೆ ಹೊರತು, ಆತನನ್ನು ಅಪರಾಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಬಸವರಾಜ ತಿಳಿಸಿದರು. ನಗರದ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾರಾಗೃಹ ಸಂಯುಕ್ತ ಆಶ್ರಯದಲ್ಲಿ “ವಿಚಾರಣಾ ಧೀನ ಖೈದಿಗಳಿಗೆ ಕಾನೂನು ಸೇವೆಗಳ…
ವನವಾಸಿ ಮಂದಿಗೆ ಬಿಲ್ಲುಗಾರಿಕೆ, ಅಥ್ಲೆಟಿಕ್ ಸ್ಪರ್ಧೆ
October 30, 2018ಗುಂಡ್ಲುಪೇಟೆ: ವನವಾಸಿ ಕಲ್ಯಾಣಾಶ್ರಮವು ವನವಾಸಿ ಜನರ ಸಮಗ್ರ ಅಭಿವೃದ್ಧಿ ಮೂಲಕ ರಾಷ್ಟ್ರೀಯ ಭಾವೈಕ್ಯತೆಗೆ ಶ್ರಮಿಸುತ್ತಿದ್ದು, ವನವಾಸಿಗಳು ಇದರ ಸದ್ಬಳಕೆ ಮಾಡಿ ಕೊಳ್ಳಬೇಕು ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂ ಗಣದಲ್ಲಿ ವನವಾಸಿ ಕಲ್ಯಾಣಾಶ್ರಮದ ವತಿಯಿಂದ ಆಯೋಜಿಸಿದ್ದ ವನವಾಸಿ ಜನರ ಬಿಲ್ಲುಗಾರಿಕೆ ಹಾಗೂ ಅಥ್ಲೆಟಿಕ್ ಸ್ಪರ್ಧೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿದ್ದರೂ ಅರಣ್ಯ ಪ್ರದೇಶ ಗಳಲ್ಲಿ ನೆಲೆಸಿರುವ ವನವಾಸಿಗಳನ್ನು ನಗರ ಹಾಗೂ ಗ್ರಾಮವಾಸಿಗಳು ಪ್ರೀತಿ…
ಚಾಮರಾಜನಗರ ಜೋಡಿರಸ್ತೆ ಅಭಿವೃದ್ಧಿ ಕಾಮಗಾರಿ ಸ್ಥಗಿತ
October 29, 2018ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆ ಅಭಿವೃದ್ಧಿ ಕಾಮಗಾರಿ ಸ್ಥಗಿತವಾಗಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವುವರು ಇನ್ನೂ ಧೂಳಿನಿಂದ ಮುಕ್ತರಾಗಿಲ್ಲ. ನಗರದ ಭುವನೇಶ್ವರಿ ವೃತ್ತದಿಂದ ರಾಮ ಸಮುದ್ರದ ನೀರು ಶುದ್ಧೀಕರಣ ಘಟಕ ದವರೆಗಿನ 3.1 ಕಿ.ಮೀ ಉದ್ದದ ಏಕೈಕ ಜೋಡಿರಸ್ತೆಯನ್ನು 36 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯನ್ನಾಗಿ ಅಭಿ ವೃದ್ಧಿಗೊಳಿಸಲಾಗುತ್ತಿದೆ. ಕಾಮಗಾರಿ ಆರಂಭವಾಗಿ ಒಂದು ವರ್ಷ ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಭುವನೇಶ್ವರಿ ವೃತ್ತದಿಂದ ರಾಮಸಮು ದ್ರದವರೆಗೆ ಎಡ ಬದಿಯನ್ನು (ನ್ಯಾಯಾಲಯದಲ್ಲಿ ಪ್ರಕರಣ ಇರು ವುದನ್ನು ಹೊರತುಪಡಿಸಿ) ಅಭಿವೃದ್ಧಿ…
ಅಕ್ರಮ ಸಂಬಂಧ ಶಂಕೆ: ಪತ್ನಿ ಕೊಂದ ಪತಿ
October 29, 2018ಯಳಂದೂರು: ಅಕ್ರಮ ಸಂಬಂಧ ಶಂಕೆ ಯಿಂದ ತನ್ನ ಪತ್ನಿಯನ್ನು ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಅವಲ್ ಕಂದಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಭಾಗ್ಯ (25) ಗಂಡನಿಂದ ಕೊಲೆಯಾ ದವರು. ಗ್ರಾಮದ ಉಪ್ಪಾರ ಬಡವಾಣೆ ನಿವಾಸಿ ಕುಂಡಬಲ್ಲಶೆಟ್ಟಿ ಮಗ ಶೇಖರ್ ತನ್ನ ಪತ್ನಿ ಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆಯ ವಿವರ: ಶೇಖರ್ ಹಾಗೂ ಭಾಗ್ಯ ಒಂದೇ ಗ್ರಾಮದವರಾಗಿದ್ದು, 7 ವರ್ಷಗಳ ಹಿಂದೆ ಪ್ರೀತಿಸಿ ಮದು ವೆಯಾಗಿದ್ದರು. ಆರಂಭದಲ್ಲಿ ಅನೋನ್ಯ ವಾಗಿ ಸಂಸಾರ ನಡೆಸುತ್ತಿದ್ದರು. ಆದರೆ,…
ಬಾಲಕಿ ಮೇಲೆ ಅತ್ಯಾಚಾರ: ವಿದ್ಯಾರ್ಥಿ ಬಂಧನ
October 29, 2018ಚಾಮರಾಜನಗರ: ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವಿದ್ಯಾರ್ಥಿಯೋರ್ವ ನನ್ನು ನಗರದ ಪಟ್ಟಣ ಠಾಣೆ ಪೊಲೀ ಸರು ಬಂಧಿಸಿದ್ದಾರೆ. ಚಾಮರಾಜನಗರ ತಾಲೂಕಿನ ವಡ್ಗಲಪುರ ಗ್ರಾಮದ ರಘು(22) ಬಂಧಿತ ವಿದ್ಯಾರ್ಥಿ. ಚಾಮರಾಜನಗರ ತಾಲೂಕಿನ ಹೊಸಹಳ್ಳಿ ಗ್ರಾಮದ ಬಾಲಕಿಯೊಬ್ಬಳು ರಘು ಮೇಲೆ ಅತ್ಯಾಚಾರದ ಪ್ರಕರಣ ದಾಖಲಿಸಿದ ಹಿನ್ನೆ ಲೆಯಲ್ಲಿ ಪೊಲೀಸರು ರಘುನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಕಾಲೇಜಿ ನಲ್ಲಿ ವ್ಯಾಸಂಗ ಮಾಡುತ್ತಿರುವ ರಘು ನನ್ನನ್ನು ಪ್ರೀತಿಸುತ್ತಿದ್ದನು. ನಗರದಲ್ಲಿ ನನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ ಹಿನ್ನೆಲೆಯಲ್ಲಿ ನಾನು 2…
ಅಪರಿಚಿತ ವಾಹನ ಡಿಕ್ಕಿ: ಜಿಂಕೆ ಸಾವು
October 29, 2018ಹನೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹನೂರು ಬಫರ್ ವಲಯದಲ್ಲಿ ಜರುಗಿದೆ.ಹನೂರಿನಿಂದ ಅಜ್ಜೀಪುರ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಗುರುವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ರಾತ್ರಿ ಗಸ್ತಿಗೆ ತೆರಳಿದ್ದ ಸಿಬ್ಬಂದಿಗಳು ಜಿಂಕೆ ಮೃತಪಟ್ಟಿದ್ದನ್ನು ಗಮನಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡ ಅರಣ್ಯಾ ಧಿಕಾರಿಗಳು ಮೃತಪಟ್ಟಿದ್ದ ಜಿಂಕೆಯ ಮರಣೋತ್ತರ ಪರೀಕ್ಷೆ ನಡೆಸಿದರು.
ಮದ್ಯ ಮಾರಾಟ ನಿಷೇಧ
October 28, 2018ಚಾಮರಾಜನಗರ: ಕೊಳ್ಳೇಗಾಲ ನಗರಸಭೆ ವಾರ್ಡ್ ನಂ.9 ಹಾಗೂ ಗುಂಡ್ಲುಪೇಟೆ ತಾಪಂ ತೆರಕಣಾಂಬಿ ಕ್ಷೇತ್ರಕ್ಕೆ ಅ.28ರಂದು ನಡೆಯುವ ಚುನಾವಣೆ ಹಾಗೂ ಅ.31ರಂದು ನಡೆಯುವ ಮತ ಎಣಿಕೆ ಹಿನ್ನೆಲೆಯಲ್ಲಿ ಸೂಚಿತ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಆದೇಶ ಹೊರಡಿಸಿದ್ದಾರೆ. ಕೊಳ್ಳೇಗಾಲ ನಗರಸಭೆ ವಾರ್ಡ್ ನಂ.9ರ ವ್ಯಾಪ್ತಿ ಹಾಗೂ ಇದರ ಗಡಿಯಿಂದ 3 ಕಿ.ಮೀ. ಅಂತರದಲ್ಲಿ ಹಾಗೂ ಗುಂಡ್ಲುಪೇಟೆ ತಾಲೂಕು ತೆರಕಣಾಂಬಿ ತಾಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ಇದರ ಗಡಿ ಯಿಂದ 3 ಕಿ.ಮೀ. ಅಂತರದಲ್ಲಿ ಬರುವ ಮದ್ಯದಂಗಡಿಗಳನ್ನು…
ಕುಡಿಯಲು ಹಣ ನೀಡದ ತಂದೆ ಹತ್ಯೆಗೈದ ಮಗ
October 28, 2018ಚಾಮರಾಜನಗರ: ಕುಡಿಯಲು ಹಣ ನೀಡದಿದ್ದಕ್ಕೆ ಕುಪಿತಗೊಂಡ ಮಗ ತನ್ನ ತಂದೆಯನ್ನೇ ಹತ್ಯೆ ಗೈದಿರುವ ಘಟನೆ ತಾಲೂಕಿನ ತಮ್ಮಡಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಗ್ರಾಮದ ನಿವಾಸಿ ಮಹದೇವನಾಯ್ಕ(60) ಹತ್ಯೆಗೊಳಗಾದವರು. ಅವರ ಮಗ ಸ್ವಾಮಿ ಹತ್ಯೆ ಆರೋಪಿ. ಘಟನೆ ವಿವರ: ಸ್ವಾಮಿ ಕುಡಿಯಲು ಹಣ ನೀಡುವಂತೆ ತಂದೆಯನ್ನು ಕೇಳಿದ್ದಾನೆ. ಈ ವೇಳೆ ಮಹದೇವನಾಯ್ಕ ಹಣ ನೀಡಲು ನಿರಾ ಕರಿಸಿದರು ಎನ್ನಲಾಗಿದೆ. ಇದರಿಂದ ಕುಪಿತ ಗೊಂಡ ಸ್ವಾಮಿ ದೊಣ್ಣೆಯಿಂದ ತನ್ನ ತಂದೆ ಮಹದೇವನಾಯ್ಕ ಅವರ ತಲೆಗೆ ಹೊಡೆದಿದ್ದಾನೆ. ಪರಿಣಾಮ ತೀವ್ರ…
ಕೆಎಸ್ಆರ್ಟಿಸಿ ನಿರ್ವಾಹಕನ ಮೇಲೆ ಹಲ್ಲೆ
October 28, 2018ಚಾಮರಾಜನಗರ: ಇಳಿಯಬೇಕಾಗಿದ್ದ ಸ್ಥಳದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಪ್ರಯಾಣಿಕನೊಬ್ಬ ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ದೊಡ್ಡರಾಯಪೇಟೆ ಕ್ರಾಸ್ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದ ನಿವಾಸಿ ಮಹದೇವಸ್ವಾಮಿ ಹಲ್ಲೆ ಮಾಡಿದವರು. ನಿರ್ವಾಹಕ ನಾಗ ಮಲ್ಲೇಶ್ ಹಲ್ಲೆಗೆ ಒಳಗಾಗಿ ಗಾಯಗೊಂಡವರು. ಹಲ್ಲೆ ನಡೆಸಿದ ಮಹದೇವಸ್ವಾಮಿಯನ್ನು ಸಹ ಪ್ರಯಾಣಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಗೋಮಾಳ, ಪಟ್ಟಾ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ
October 27, 2018ಚಾಮರಾಜನಗರ: ಜಿಲ್ಲೆಯ ಸರ್ಕಾರಿ ಗೋಮಾಳ ಮತ್ತು ಪಟ್ಟಾ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿದ್ದು, 2004ರಿಂದ 2007ರವರೆಗೆ ಲೋಕಲ್ ಆಡಿಟ್ ಮೇರೆ ಭಾರತದ ಆಡಿಟ್ ಮತ್ತು ಅಕೌಂಟೆಂಟ್ ಜನರಲ್ ರವರ ಆದೇಶದಂತೆ 1687 ಕೋಟಿ ರೂ. ನಷ್ಟವನ್ನು ಗಣಿಗಾರಿಕೆ ನಡೆಸಿರುವವರಿಂದ ವಸೂಲಿ ಮಾಡುವಂತೆ ಆದೇಶ ಆಗಿದ್ದರೂ ಸಹ ಜಿಲ್ಲಾಡಳಿತ ಹಣ ವಸೂಲಿ ಮಾಡಿಲ್ಲ ಎಂದು ಪರಿಸರವಾದಿ ಡಿ.ಎಸ್.ದೊರೆಸ್ವಾಮಿ ದೂರಿದರು. ಇಂದಿಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ನಡೆಸಿ, ಪರಿಸರ ನಾಶ ಮಾಡಿರುವವರಿಂದ 1687 ಕೋಟಿ ರೂ.ಗಳನ್ನು ವಸೂಲಿ…