ಗುಂಡ್ಲುಪೇಟೆ, ಜ.8(ಸೋಮ್.ಜಿ)- ಪಟ್ಟಣದಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ತಾಲೂಕಿನ ಗ್ರಾಮ ಪಂಚಾಯಿತಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಅಕ್ಷರ ದಾಸೋಹದ ಬಿಸಿಯೂಟ ನೌಕರರು ಭಾಗವಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಿ.ಐ.ಟಿ.ಯು. ಬಾವುಟವನ್ನು ಹಿಡಿದು ಸಾಗಿದ ಪ್ರತಿಭಟನಾಕಾರರು, ನೌಕರರಿಗೆ ಕನಿಷ್ಟ ವೇತನ ನೀಡಲು ಅನುದಾನ ಮೀಸಲು, ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಮಾಸಿಕ ಪಿಂಚಣಿ, ಡಾ.ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ನಂತರ ತಾಲೂಕು ಕಚೇರಿ ಮುಂಭಾಗದಲ್ಲಿ ಸಮಾವೇಶಗೊಂಡು ಬೇಡಿಕೆಗಳ…
ಬರುವ ಶೈಕ್ಷಣಿಕ ವರ್ಷದಿಂದ ಬೇಸಿಗೆ ಸಂಭ್ರಮ ಜಾರಿ
January 9, 2020ವಾರಕ್ಕೊಮ್ಮೆ ಬ್ಯಾಗ್ ರಹಿತ ದಿನ ಜಾರಿಗೆ ಚಿಂತನೆ ಚಾಮರಾಜನಗರ, ಜ.8- ಬರಲಿರುವ ಶೈಕ್ಷಣಿಕ ವರ್ಷದಿಂದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ಸಂಭ್ರಮ ಎಂಬ ಕಾರ್ಯ ಕ್ರಮವನ್ನು ಜಾರಿಗೊಳಿಸಲಿದ್ದು, ಇದರಿಂದ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಹೊರತರಲು ಸಾಧ್ಯವಾಗಲಿದೆ ಎಂದು ಪ್ರಾಥಮಿಕ, ಪ್ರೌಢಶಿಕ್ಷಣ, ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದರು. ನಗರದ ರಾಮಸಮುದ್ರದ ಸಿ.ಆರ್. ಬಾಲರಪಟ್ಟಣ ಶಾಲಾ ಆವರಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ…
ಹನೂರು ಬಳಿ ಗಾಂಜಾ ವಶ: ಪತ್ನಿ ಬಂಧನ, ಪತಿ ಪರಾರಿ
January 9, 2020ಹನೂರು, ಜ.8- ಬದನೆ ಬೆಳೆ ನಡುವೆ ದಂಪತಿ ಗಾಂಜಾ ಬೆಳೆದಿದ್ದು, ಪೊಲೀಸರು ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಹನೂರು ತಾಲೂಕಿನ ದೊಮ್ಮನಗದ್ದೆಯಲ್ಲಿ ನಡೆದಿದ್ದು, ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಹನೂರು ತಾಲೂಕಿನ ಸಮೀಪದ ದೊಮ್ಮನಗದ್ದೆ ಗ್ರಾಮದ ರಂಗುನಾಯ್ಕ ಹಾಗೂ ಸರಸಿಬಾಯಿ ದಂಪತಿಯು ಜಮೀನಿನ ಬದನೆ ಬೆಳೆಯೊಂದಿಗೆ ಮಿಶ್ರಬೆಳೆಯಂತೆ ಗಾಂಜಾ ಬೆಳೆದಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಮಾಪುರ ಪಿಐ ಮನೋಜ್ ಕುಮಾರ್ ಸಿಬ್ಬಂದಿಗಳ ಜೊತೆ ದಾಳಿ ನಡೆಸಿ 89 ಕೆಜಿ ಹಸಿ ಗಾಂಜಾ, 12 ಕೆಜಿ ಮಾರಾಟಕ್ಕೆ ಸಿದ್ದಪಡಿಸಿದ್ದ…
ಕಸ್ತೂರಿನಲ್ಲಿ ವಿಜೃಂಭಣೆಯ ಬಂಡಿಜಾತ್ರೆ
January 6, 2020ಚಾಮರಾಜನಗರ, ಜ.5- ತಾಲೂಕಿನ ಕಸ್ತೂರು ಗ್ರಾಮದಲ್ಲಿ ಭಾನುವಾರ ಪ್ರಸಿದ್ಧ 16 ಹಳ್ಳಿಗಳ ದೊಡ್ಡಮ್ಮತಾಯಿ ಬಂಡಿ ಜಾತ್ರೆ ಹಾಗೂ ಚಾಮರಾಜನಗರ, ನಂಜನ ಗೂಡು ತಾಲೂಕಿನ 23 ಗ್ರಾಮಗಳಲ್ಲಿ ಹಬ್ಬ ಸಂಭ್ರಮದಿಂದ ಜರುಗಿತು. ಜಾತ್ರೆ ಆಚರಿಸುವ ತಾಲೂಕಿನ ಮರಿ ಯಾಲ, ಕೆಲ್ಲಂಬಳ್ಳಿ, ಭೋಗಾಪುರ, ಬಸ ವನಪುರ, ಹೊನ್ನೇಗೌಡನಹುಂಡಿ, ಆನಹಳ್ಳಿ, ಮೂಕನಹಳ್ಳಿ, ಸಪ್ಪಯ್ಯನಪುರ, ಚಿಕ್ಕಹೊಮ್ಮ, ದೊಡ್ಡ ಹೊಮ್ಮ, ತೊರವಳ್ಳಿ, ಕಲ್ಲಹಳ್ಳಿ, ಮರಿಯಾಲದ ಹುಂಡಿ, ಹೆಗ್ಗವಾಡಿ, ಕರಡಿಮೋಳೆ, ಕಿರಗಸೂರು, ಹೆಗ್ಗವಾಡಿ ಪುರ, ಐತಾಳಪುರ, ಅಂಕಶಾಯನಪುರ, ದಾಸನೂರು ಸೇರಿದಂತೆ ಇತರೆ ಗ್ರಾಮಗಳ ಜನರು ಕಸ್ತೂರಿನ…
ಹಂಡ್ರಕಳ್ಳಿಮೋಳೆಯಲ್ಲಿ ರಸ್ತೆ, ಚರಂಡಿ ಕಾಮಗಾರಿ ಕಳಪೆ: ಗ್ರಾಮಸ್ಥರ ಪ್ರತಿಭಟನೆ
January 6, 2020ಚಾಮರಾಜನಗರ, ಜ.5- ತಾಲೂಕಿನ ಹಂಡ್ರಕಳ್ಳಿಮೋಳೆಯಲ್ಲಿ ನಿರ್ಮಿಸಿರುವ ಸಿಮೆಂಟ್ ರಸ್ತೆ, ಚರಂಡಿ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಿಂಗರಾಜು ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಗುತ್ತಿಗೆದಾರ, ಇಂಜಿನಿಯರ್ ವಿರುದ್ಧ ಧಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನಿಂಗರಾಜು ಮಾತನಾಡಿ, ಶಾಸಕ ಸಿ.ಪುಟ್ಟ ರಂಗಶೆಟ್ಟಿ ಅವರು ತಮ್ಮ ಅನುದಾನದಲ್ಲಿ ಹಂಡ್ರಕಳ್ಳಿಮೋಳೆ ಗ್ರಾಮದಲ್ಲಿ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣಕ್ಕಾಗಿ 70 ಲಕ್ಷ ರೂ. ನೀಡಿದ್ದರು. ಆದರೆ ಗುತ್ತಿಗೆದಾರ, ಪಿಡಬ್ಲೂಡಿ…
ವಡ್ಡಗೆರೆ ಕೆರೆಗೆ ಶಾಸಕ ನಿರಂಜನ್ ಬಾಗಿನ
January 6, 2020ಗುಂಡ್ಲುಪೇಟೆ, ಜ.5(ಸೋಮ್.ಜಿ)- ಕಬಿನಿ ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಸಂಪೂರ್ಣ ವಾಗಿ ಅನುಷ್ಠಾನ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಹೇಳಿದರು. ತಾಲೂಕಿನ ವಡ್ಡಗೆರೆ ಕೆರೆ ಭರ್ತಿಯಾಗಿ ರುವ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಹಳ ವರ್ಷಗಳಿಂದ ವಿಳಂಬವಾಗಿದ್ದ ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿ ಸುವ ಯೋಜನೆಯ ಜಾರಿ ಬಗ್ಗೆ ಹಲವ ರಿಗೆ ಅನುಮಾನವಿದ್ದುದು ಈ ಭಾಗದ ರೈತರ ಆತಂಕಕ್ಕೆ ಕಾರಣವಾಗಿತ್ತು. ಆದರೆ ಹುತ್ತೂರಿನಿಂದ ವಡ್ಡಗೆರೆ ಕೆರೆಗೆ ನೀರು ತುಂಬಿಸುವ…
ಜ.11, ಹೆಚ್ಚೆಸ್ಸೆಂ ‘ಒಂದು ನೆನಪು’
January 6, 2020ಚಾಮರಾಜನಗರ, ಜ.5- ಮಾಜಿ ಸಚಿವ ದಿವಂಗತ ಎಚ್. ಎಸ್. ಮಹದೇವ ಪ್ರಸಾದ್ ಅವರ “ಒಂದು ನೆನಪು” ಕಾರ್ಯ ಕ್ರಮವನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಜ.11 ರಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಮಾಜಿ ಸಂಸದ ಆರ್. ಧ್ರುವನಾರಾಯಣ್ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಎಚ್.ಎಚ್.ಮಹದೇವಪ್ರಸಾದ್ ಅವರ ನೆನಪು ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮಹದೇವಪ್ರಸಾದ್ ಅವರು ಜಿಲ್ಲೆಯ ಅಭಿವೃದ್ಧಿ ಹಾಗೂ ಗುಂಡ್ಲುಪೇಟೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಜಿಲ್ಲೆಯಲ್ಲಿ…
ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ದೀಪ ಧ್ಯಾನ ದಾನ ಕಾರ್ಯಕ್ರಮ
January 6, 2020ಚಾಮರಾಜನಗರ, ಜ.5- ಸ್ಥಳೀಯ ಪ್ರಜಾಪಿತ ಬ್ರಹ್ಮಾ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ದಿವ್ಯ ಅಲೌಕಿಕ ದಿನದರ್ಶಿಕೆ ಬಿಡುಗಡೆ ಹಾಗೂ ದೀಪ ಧ್ಯಾನ ದಾನ ಕಾರ್ಯ ಕ್ರಮವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿ ಸಿದ್ದ ರಾಜಯೋಗ ವಿದ್ಯಾರ್ಥಿ ಗಳು ದೀಪ ಹಚ್ಚಿಕೊಂಡು ರಾಜ ಯೋಗಿನಿ ಬ್ರಹ್ಮಾಕುಮಾರಿ ದಾನೇ ಶ್ವರೀಜಿಯವರ ನೇತೃತ್ವದಲ್ಲಿ ತ್ರಾಟಕ ಯೋಗ ಧ್ಯಾನ ಮಾಡಿದರು. ಪರಸ್ಪರ ದಲ್ಲಿ ಒಬ್ಬರಿಗೊ ಬ್ಬರು ದೀಪವನ್ನು ಕೊಡುವ ಮತ್ತು ತೆಗೆದುಕೊಳ್ಳುವ ಮೂಲಕ ಅವರಲ್ಲಿರುವ ಪ್ರತಿಭೆ ಹಾಗೂ ವಿಶೇಷತೆ ಗುಣಗಳನ್ನು ನೋಡುವ ಅಭ್ಯಾಸ…
ಜಿಲ್ಲೆಯಲ್ಲಿ ‘2020’ಗೆ ಸಂಭ್ರಮದ ಸ್ವಾಗತ
January 2, 2020ಚಾಮರಾಜನಗರ, ಜ.1- ಜಿಲ್ಲಾದ್ಯಂತ ಜನರು 2020ನೇ ಹೊಸ ವರ್ಷವನ್ನು ಸಂಭ್ರಮ, ಸಡಗರ, ಭಕ್ತಿಯಿಂದ ಬರಮಾಡಿಕೊಂಡರು.ಮಂಗಳವಾರ ಮಧ್ಯರಾತ್ರಿ 12 ಗಂಟೆಯಾ ಗುತ್ತಿಂತೆ ಜಿಲ್ಲೆಯ ಜನರು ಪರಸ್ಪರ ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ವಿದ್ಯಾರ್ಥಿಗಳು ಮತ್ತು ಯುವ ಜನರು ತಮ್ಮ ಸ್ನೇಹಿತರಿಗೆ ಮತ್ತು ಆಪ್ತರಿಗೆ ಗ್ರಿಟಿಂಗ್ ಮೆಸೇಜï, ವೀಡಿಯೋ ಮೂಲಕ ಶುಭಾಶಯ ಕೋರಿದರು. ಇನ್ನು ಕೆಲವರು ಸಿಹಿ ಹಂಚಿ ಮತ್ತು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಮಹಿಳೆಯರು ಮತ್ತು ಯುವತಿಯರು ಮನೆಗಳ ಎದುರು ಬಣ್ಣದ ರಂಗೋಲಿ ಚಿತ್ತಾರ ಬಿಡಿಸಿ…
ಕರ್ತವ್ಯ ಮುಗಿಸಿ ತೆರಳುತ್ತಿದ್ದ ಪೇದೆ ಬೈಕ್ನಿಂದ ಬಿದ್ದು ಸಾವು
January 2, 2020ಕೊಳ್ಳೇಗಾಲ, ಜ.1(ನಾಗೇಂದ್ರ)- ಕರ್ತವ್ಯ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಬೈಕ್ನಲ್ಲಿ ಅಯತಪ್ಪಿ ಬಿದ್ದು ಪೆÇಲೀಸ್ ಪೇದೆಯೊ ಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಜರುಗಿದೆ. ಗ್ರಾಮಾಂತರ ಪೆÇಲೀಸ್ ಠಾಣೆಯ ಪೇದೆ ಹಾಗೂ ಹನೂರು ಆರ್.ಎಸ್.ದೊಡ್ಡಿ ಬಡಾವಣೆಯ ಸಿದ್ದರಾಜು ಮೃತಪಟ್ಟ ಪೇದೆ. ಇವರು ಅಪರಾಧ ವಿಭಾಗದಲ್ಲಿ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಡಿಸೆಂಬರ್ 31ರ ಹೊಸ ವರ್ಷದ ಗಸ್ತಿನ ಕರ್ತವ್ಯ ನಿರ್ವಹಿಸಿದ್ದರು. ಬುಧವಾರ ಬೆಳಗಿನ ಜಾವ ಮನೆಗೆ ಹಿಂತಿರುಗುವ ವೇಳೆ ಅಣಗಳ್ಳಿ ಸಮೀಪದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ…