ಚಾಮರಾಜನಗರ: ಚಾಮ ರಾಜನಗರ ತಾಲೂಕಿನ ಕಸಬಾ ಹೋಬಳಿ ಮಟ್ಟದ ಜನ ಸಂಪರ್ಕ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 24 ರಂದು ಬೆಳಿಗ್ಗೆ 10ಗಂಟೆಗೆ ನಗರದ ತಾಲೂಕು ಪಂಚಾ ಯತಿ ಸಭಾಂಗಣದಲ್ಲಿ ನಡೆಯಲಿದೆ. ಅಂದಿನ ಸಭೆಯಲ್ಲಿ ಕಸಬಾ ಹೋಬಳಿ ವ್ಯಾಪ್ತಿಯ ಸಾರ್ವಜನಿಕರಿಂದ ಅಹವಾಲು ಗಳನ್ನು ಸ್ವೀಕರಿಸಲಾಗುವುದು. ಕಸಬಾ ವ್ಯಾಪ್ತಿಯ ಜನತೆ ಜನ ಸಂಪರ್ಕ ಸಭೆ ಯನ್ನು ಸದುಪಯೋಗ ಮಾಡಿಕೊಳ್ಳು ವಂತೆ ತಾಪಂ ಕಾರ್ಯ ನಿರ್ವಾಹಕ ಅಧಿ ಕಾರಿ ಎಂ.ಎಸ್…
ನಾಳೆ ಉಪ್ಪಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
September 21, 2018ಚಾಮರಾಜನಗರ: ನಗ ರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಇರುವ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಸೆ.22 ರಂದು ಬೆಳಿಗ್ಗೆ 10 ಗಂಟೆಗೆ 2017- 18ನೇ ಸಾಲಿನ ಜಿಲ್ಲಾ ವ್ಯಾಪ್ತಿಯ ಉಪ್ಪಾರ ಜನಾಂಗದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಪ್ಪಾರ ಸಂಘ ಕಾರ್ಯಕ್ರಮ ಏರ್ಪಡಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜನಾಂಗದ ಹಿರಿಯ ಮುಖಂಡರು, ಸಂಘದ ಪದಾಧಿಕಾರಿಗಳು, ಗಡಿಮನೆ, ಕಟ್ಟೆಮನೆ, ಯಜಮಾನರುಗಳು, ಸಮಾಜದವರು ಆಗಮಿ ಸುವಂತೆ ಸಂಘದ ಪ್ರಧಾನ ಕಾರ್ಯ…
ನಾಳೆ ಅರಿಶಿಣ ಬೆಳೆಗಾರರಿಗೆ ಕಾರ್ಯಾಗಾರ
September 21, 2018ಚಾಮರಾಜನಗರ: ತಾಲೂಕಿನ ಅಂಕನಶೆಟ್ಟಿಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಸೌಹಾರ್ದ ರೈತರ ಉತ್ಪಾದ ಕರ ಕಚೇರಿ ಸಮೀಪ ಸೆ.22 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಅರಿಶಿಣ ಬೆಳೆಗಾರ ರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಮೈಸೂರಿನ ಕೃಷಿ ಮಾರಾಟ ಅಧ್ಯ ಯನ ಸಂಸ್ಥೆ, ಎಪಿಎಂಸಿ ಹಾಗೂ ಅಂಕನ ಶೆಟ್ಟಿಪುರದ ಸೌಹಾರ್ದ ರೈತರ ಉತ್ಪಾದ ಕರ ಕಂಪನಿಯ ಅಶ್ರಯದಲ್ಲಿ ಕಾರ್ಯಾ ಗಾರ ಏರ್ಪಡಿಸಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ಬಿ.ಕೆ.ರವಿಕುಮಾರ್ ತಿಳಿಸಿದ್ದಾರೆ.
ನಾಳೆ ಉದ್ಯೋಗ ಮೇಳ
September 21, 2018ಚಾಮರಾಜನಗರ: ಸಚಿವ ಎನ್.ಮಹೇಶ್ ಅಭಿಮಾನಿ ಬಳಗ ಹಾಗೂ ಬಹುಜನ ವಿದ್ಯಾರ್ಥಿ ಸಂಘ ಜಿಲ್ಲಾ ಘಟಕದ ವತಿಯಿಂದ ಸೆ.22 ಶನಿವಾರ ಬೆಳಿಗ್ಗೆ 9ಕ್ಕೆ ಎಂಜಿಎಸ್ವಿ ಕಾಲೇಜು ಆವರಣ ಕೊಳ್ಳೇಗಾಲ ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿ ಕೊಂಡಿದ್ದು, ಸುಮಾರು 150ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು ಭಾಗವಹಿಸ ಲಿವೆ. ಹಾಗೂ 1000ಕ್ಕೂ ಅಧಿಕ ಉದ್ಯೋಗ ನೇಮಕ ನಡೆಯಲಿದೆ. ಮಹೇಶವರು ಕೊಳ್ಳೇ ಗಾಲ ಕ್ಷೇತ್ರಾದ್ಯಂತ ಜನರ ಮತ್ತು ಕ್ಷೇತ್ರದ ಸಮಸ್ಯೆಗಳನ್ನು ಅರಿತುಕೊಳ್ಳಲು ‘ವಾಕ್ ಟು ವಾರ್ಡ್’ ಮತ್ತು ‘ವಾಕ್ ಟು ವಿಲೇಜ್’…
ಚಾಮರಾಜನಗರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹತೋಟಿ
September 19, 2018ಚಾಮರಾಜನಗರ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಾಗಿ ಹತೋಟಿಯಲ್ಲಿ ಇದೆ ಎಂದು ದಕ್ಷಿಣ ವಲಯ ಐಜಿಪಿ ಶರತ್ಚಂದ್ರ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ತುರ್ತು ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಉತ್ತಮ ವಾಗಿ ಕಾರ್ಯನಿರ್ವಹಿಸುತ್ತಿದೆ. ಕಾನೂನು ಸುವ್ಯವಸ್ಥೆ, ಸಂಚಾರದ ವ್ಯವಸ್ಥೆ ಸೇರಿದಂತೆ ಎಲ್ಲವೂ ಹತೋಟಿಯಲ್ಲಿ ಇದೆ. ಅಪರಾಧ ಪ್ರಕರಣಗಳು ಹೆಚ್ಚಾಗಿಲ್ಲ ಎಂದರು. ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಶೇ.3 ರಿಂದ 4 ರಷ್ಟು ಸಿಬ್ಬಂದಿಗಳ ಕೊರತೆ ಇದೆ. 75 ಹೊಸ…
ವಿದ್ಯಾರ್ಥಿಗಳು ಮಾತೃಭಾಷೆಯ ಜೊತೆಗೆ ಇಂಗ್ಲಿಷ್ ಕಲಿಕೆಗೂ ಗಮನ ಹರಿಸಿ
September 19, 2018ಚಾಮರಾಜನಗರ: ವಿದ್ಯಾರ್ಥಿಗಳು ಮಾತೃ ಭಾಷೆಯ ಜೊತೆಗೆ ಇಂಗ್ಲಿಷ್ ಕಲಿಕೆಗೂ ಗಮನ ಹರಿಸಬೇಕು ಎಂದು ಸಂಸದ ಆರ್.ಧ್ರುವನಾರಾಯಣ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದ ಕರಿನಂಜನಪುರ ರಸ್ತೆಯಲ್ಲಿ ಇರುವ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜು ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಸಾಂಸ್ಕø ತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಹಿರಿಯರಿಂದ ಕಿರಿಯರಿಗೆ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದು ಸ್ಪರ್ಧಾತ್ಮಕ ಯುಗ. ಈ ಯುಗ ದಲ್ಲಿ ಇಂಗ್ಲಿಷ್ ಬಹಳ ಮುಖ್ಯವಾಗಿದೆ. ವಿದ್ಯಾ ರ್ಥಿಗಳು ಉದ್ಯೋಗ…
ಮಾತೃಪೂರ್ಣ ಯೋಜನೆ ಸದ್ಬಳಕೆಗೆ ಸಲಹೆ
September 19, 2018ಚಾಮರಾಜನಗರ: ಗರ್ಭಿಣಿ ಯರು, ಬಾಣಂತಿಯರು ಸರ್ಕಾರದ ಮಾತೃ ಪೂರ್ಣ ಯೋಜನೆಯನ್ನು ಸದ್ಬ ಳಕೆ ಮಾಡಿ ಕೊಂಡು ಪೌಷ್ಠಿಕ ಆಹಾರ ವನ್ನು ಸೇವಿಸಿ ಸದೃಢರಾಗಿ ಆರೋಗ್ಯ ವಂತ ಸಮಾಜ ನಿರ್ಮಾಣ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಿ.ಜೆ. ವಿಶಾಲಾಕ್ಷಿ ಸಲಹೆ ನೀಡಿದರು. ನಗರದ ಚೆನ್ನಿಪುರದಮೋಳೆ 1 ಮತ್ತು 2ನೇ ಅಂಗನವಾಡಿ ಕೇಂದ್ರದ ಆವರಣ ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ…
ಸೆ. 25ರೊಳಗೆ ವಾರ್ಷಿಕ ಮಹಾಸಭೆ ನಡೆಸಲು ಸಹಕಾರ ಸಂಘಗಳಿಗೆ ಸೂಚನೆ
September 19, 2018ಚಾಮರಾಜನಗರ: ಚಾಮರಾಜನಗರ ಉಪವಿಭಾಗದಲ್ಲಿ ಕಾರ್ಯನಿರ್ವಹಿ ಸುತ್ತಿರುವ ಎಲ್ಲ ಸಹಕಾರ ಸಂಘಗಳು, ಬ್ಯಾಂಕುಗಳು 2017-18ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸೆಪ್ಟೆಂಬರ್ 25ರೊಳಗೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಹಕಾರ ಇಲಾಖೆ ಸೂಚಿಸಿದೆ. ಸಹಕಾರ ಸಂಘಗಳ ಕಾಯಿದೆಗೆ ತಿದ್ದುಪಡಿ ತಂದಿದ್ದು, ಸಹಕಾರ ಸಂಘಗಳ ಸದಸ್ಯರು ಸಂಘದ ಐದು ವಾರ್ಷಿಕ ಮಹಾಸಭೆಗಳ ಪೈಕಿ 3 ವಾರ್ಷಿಕ ಮಹಾಸಭೆಗೆ ಗೈರುಹಾಜರಾ ದರೆ ಹಾಗೂ ಸತತವಾಗಿ 3 ವರ್ಷಗಳ ಅವಧಿಗೆ ಸಂಘದಿಂದ ನೀಡುವ ಕನಿಷ್ಟ ಸೌಲಭ್ಯ ಗಳನ್ನು ಪಡೆಯದ ಸದಸ್ಯರಿಗೆ ಸಂಘದ…
ಟಿಕೆಟ್ ಪಡೆಯದ ಪ್ರಯಾಣಿಕರಿಂದ ದಂಡ ವಸೂಲಿ
September 19, 2018ಚಾಮರಾಜನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಮರಾಜನಗರ ವಿಭಾಗವು ಆಗಸ್ಟ್ ತಿಂಗಳಲ್ಲಿ ಟಿಕೆಟ್ ಪಡೆಯದೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸು ತ್ತಿದ್ದ 283 ಪ್ರಯಾಣಿಕರಿಂದ 37640 ರೂ. ದಂಡವನ್ನು ವಸೂಲಿ ಮಾಡಿದೆ. ಆಗಸ್ಟ್ ತಿಂಗಳಲ್ಲಿ 2096 ಬಸ್ಸುಗಳನ್ನು ಮಾರ್ಗ ತನಿಖೆಗೆ ಒಳಪಡಿಸಿ 202 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ತಿಳಿಸಿದ್ದಾರೆ.
ಸೆ.24, ಮಹಂತಾಳಪುರದಲ್ಲಿ ಅಂಚೆ ಸಂತೆ
September 19, 2018ಚಾಮರಾಜನಗರ: ಅಂಚೆ ಇಲಾಖೆಯು ಜಿಲ್ಲೆಯ ಸಂತೆಮರಹಳ್ಳಿ ಹೋಬಳಿಯ ಮಹಂತಾಳಪುರ ಗ್ರಾಮದಲ್ಲಿ ಸೆಪ್ಟೆಂಬರ್ 24ರಂದು ಅಂಚೆ ಸಂತೆ ನಡೆಸಲಿದೆ.ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಮುಂತಾದ ಅಂಚೆ ಯೋಜನೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಸ್ವೀಕರಿಸಲಾಗುವುದು. ಮಹಂತಾಳಪುರ ಹಾಗೂ…