ಚಾಮರಾಜನಗರ: ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳ ನಿರ್ವಹಣೆಯ ಹಾಸ್ಟೆಲ್ಗಳಿಗೆ ಅಧಿಕಾರಿಗಳು ವ್ಯಾಪಕವಾಗಿ ಭೇಟಿ ನೀಡಿ ಮೂಲ ಸೌಕರ್ಯವನ್ನು ಅಭಿವೃದ್ಧಿಗೊಳಿಸುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ (ಎಂಎಸ್ಎಂಇ ಮತ್ತು ಗಣಿ) ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾದ ರಾಜೇಂದ್ರಕುಮಾರ್ ಕಠಾರಿಯಾ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹಾಸ್ಟೆಲ್ಗಳ ನಿರ್ವಹಣೆಗಾಗಿ ಸರ್ಕಾರ ಹೆಚ್ಚು ಅನುದಾನ ನೀಡುತ್ತಿದೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡುವ ದಿಸೆಯಲ್ಲಿ…
ಕಂದಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಪ್ರಕರಣ
September 18, 2018ಜನಪ್ರತಿನಿಧಿಗಳು, ಪೊಲೀಸರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಯಳಂದೂರು: ತಾಲೂಕಿನ ಕಂದಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರÀ ನಾಮಫಲಕಕ್ಕೆ ಸಗಣಿ ಬಳಿದು ಅಪಮಾನ ಮಾಡಿರುವ ಆರೋಪಿಗಳನ್ನು ಬಂಧಿಸು ವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಪಟ್ಟಣದಲ್ಲಿ ಸೋಮ ವಾರ ಕಂದಹಳ್ಳಿ ಗ್ರಾಮಸ್ಥರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು. ಗ್ರಾಮದ ಅಂಬೇಡ್ಕರ್ ಭಾವಚಿತ್ರ ಇರುವ ಸ್ಥಳದಲ್ಲಿ ಸಮಾವೇಶಗೊಂಡ ಗ್ರಾಮಸ್ಥರು ಹಾಗೂ ಪ್ರಗತಿಪರ ಸಂಘಟನೆ ಗಳ ಮುಖಂಡರು ಯಳಂದೂರಿನ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಿ ಪೊಲೀಸ್ ಇಲಾಖೆ, ಸ್ಥಳೀಯ ಜನಪ್ರತಿ…
ರಾಮಸಮುದ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
September 18, 2018ಚಾಮರಾಜನಗರ: ರಾಜಕೀಯ ದ್ವೇಷದಿಂದ ಕಾಂಗ್ರೆಸ್ ಹಾಗೂ ಬಿಎಸ್ಪಿ ಕಾರ್ಯಕರ್ತರ ನಡುವೆ ನಡೆದಿದ್ದ ಘರ್ಷಣೆಯ ಹಿನ್ನೆಲೆಯಲ್ಲಿ ಸೋಮವಾರ ರಾಮಸಮುದ್ರದ ಬಡಾವಣೆಯಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬಡಾವಣೆಯ ಮುಖ್ಯ ದ್ವಾರದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಕೆಎಸ್ಆರ್ಪಿ)ಯನ್ನು ನಿಯೋಜಿಸಲಾಗಿದೆ. ಬಡಾವಣೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಇದೆ. ಹಾಗಾಗಿ, ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕಲ್ಲು ತೂರಾಟ ಹಾಗೂ ಘರ್ಷಣೆಯಿಂದ ಗಾಯಗೊಂಡಿರುವ ಕಾಂಗ್ರೆಸ್ನ ಐವರು ಹಾಘೂ ಬಿಎಸ್ಪಿಯ ಮೂವರು ಕಾರ್ಯಕರ್ತರಿಗೆ ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಮೊಬೈಲ್ ಪ್ರಪಂಚದಲ್ಲಿ ಮುಳುಗಿದ ದೇಶಿ ಕ್ರೀಡೆ
September 17, 2018ಚಾಮರಾಜನಗರ: ಶ್ರೀಕೃಷ್ಣ ಪ್ರತಿಷ್ಠಾನದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಾಮಿ ಹಾಗೂ ರಾಧಾಷ್ಠಮಿಯ ಅಂಗವಾಗಿ ಕೆಸರುಗದ್ದೆ ಓಟ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ನಗರದ ತೆರೆದ ವಿಶ್ವವಿದ್ಯಾಲಯದ ಹಿಂಭಾಗದಲ್ಲಿರುವ ಚಿಕ್ಕಶೆಟ್ಟಿ ಎಂಬುವ ವರ ಜಮೀನಿನಲ್ಲಿ ಆಯೋಜಿಸಲಾಗಿದ್ದ ಕೆಸರುಗದ್ದೆ ಓಟದ ಸ್ಪರ್ಧೆಯ ಉದ್ಘಾಟನೆ ಯನ್ನು ಶ್ರೀಕೃಷ್ಣ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಸೋಮ ಶೇಖರ್ ಬಿಸಲ್ವಾಡಿ ಚಾಲನೆ ನೀಡಿದರು. ಕೆಸರು ಗದ್ದೆ ಓಟದಲ್ಲಿ ಸುಮಾರು 30ಕ್ಕೂ ಹೆಚ್ಚು ಬಾಲಕರು ಕೆಸರು ಗದ್ದೆ ಓಟ, ಕಬಡ್ಡಿ ಹಾಗೂ…
ಸೆ. 22, ವಿಶ್ವಕರ್ಮ ಜಯಂತಿ ಆಚರಣೆಗೆ ತೀರ್ಮಾನ
September 17, 2018ಚಾಮರಾಜನಗರ: ಜಿಲ್ಲಾಡ ಳಿತದ ವತಿಯಿಂದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಸೆ. 22ರಂದು ಜಿಲ್ಲಾ ಕೇಂದ್ರದಲ್ಲಿ ಹಮ್ಮಿ ಕೊಳ್ಳಲು ತೀರ್ಮಾನಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಚರಣೆ ಸಂಬಂಧ ಪೂರ್ವ ಭಾವಿ ಸಭೆಯಲ್ಲಿ ವಿಶ್ವಕರ್ಮ ಜಯಂತಿ ಕಾರ್ಯ ಕ್ರಮವನ್ನು ಅರ್ಥಪೂರ್ಣವಾಗಿ ಆಯೋ ಜಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಮಾತನಾಡಿ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಕಾರ್ಯಕ್ರಮಕ್ಕೆ ಅಗತ್ಯವಿರುವ…
ಮಾತೃಪೂರ್ಣ, ಮಾತೃವಂದನಾ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಸಲಹೆ
September 16, 2018ಚಾಮರಾಜನಗರ: ಸರ್ಕಾರದ ಮಾತೃಪೂರ್ಣ ಮತ್ತು ಮಾತೃವಂದನಾ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಮೇಲಿದೆ ಎಂದು ತಾಪಂ ಸದಸ್ಯ ಎಚ್.ವಿ. ಚಂದ್ರು ಹೇಳಿದರು. ತಾಲೂಕಿನ ಗೂಳೀಪುರ ಗ್ರಾಮ ಪಂಚಾ ಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಮಗ್ರ ಶಿಶು ಅಭಿವೃದ್ದಿ ಯೋಜನೆ ಸಂತೇಮರ ಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಪೌಷ್ಟಿಕ ಕರ್ನಾಟಕ, ಮಾತೃಪೂರ್ಣ ಹಾಗೂ ಮಾತೃ ವಂದನಾ ಮಾಸಾಚರಣೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು….
ಸೌಹಾದರ್, ಸಹಕಾರ ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಲು ಸಲಹೆ
September 16, 2018ಚಾಮರಾಜನಗರ: ‘ಕ್ರೆಡಿಟ್ ಕೋ ಆಪರೇಟಿವ್ ಸಂಸ್ಥೆ ಅಭಿವೃದ್ಧಿ ಹೊಂದಲು ಸಂಘದ ಸದಸ್ಯರ ಪಾತ್ರ ಬಹಳ ಮುಖ್ಯ ವಾಗಿದೆ. ಸೌಹಾದರ್, ಸಹಕಾರ ನಿಯಮಿತ ಸಂಸ್ಥೆಗಳು ಬೆಳೆಯಲು ಸಾರ್ವಜನಿಕರು ಸಹಕರಿಸಬೇಕು’ ಎಂದು ಶ್ರೀಅಕ್ಷಯಶ್ರೀ ಸೌಹಾದರ್À ಕ್ರೆಡಿಟ್ ಕೋ ಆಪರೇಟಿವ್ನ ಅಧ್ಯಕ್ಷ ಕೆ.ವೀರಭದ್ರಸ್ವಾಮಿ ಹೇಳಿದರು. ನಗರದ ರೋಟರಿ ಭವನದಲ್ಲಿ ಶ್ರೀ ಅಕ್ಷಯಶ್ರೀ ಸೌಹಾರ್ದ ಕ್ರೆಡಿಟ್ ಕೋ ಆಪ ರೇಟಿವ್ 2017-18ನೇ ಸಾಲಿನ ಸರ್ವ ಸದ ಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸದಸ್ಯರಲ್ಲದೆ ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್ ಕಂಪನಿಗಳು…
ಜನಸಂಪರ್ಕ ಸಭೆಯ ಅಹವಾಲುಗಳಿಗೆ ತ್ವರಿತ ಪರಿಹಾರ ನೀಡಲು ಸೂಚನೆ
September 15, 2018ಚಾಮರಾಜನಗರ: ಜನ ಸಂಪರ್ಕ ಸಭೆಯಲ್ಲಿ ಸಲ್ಲಿಸಲಾಗುವ ಅಹವಾಲು, ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನರ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹರಿಸುವ ಸಲು ವಾಗಿ ತಾಲೂಕು ಹಾಗೂ ಹೋಬಳಿ ಮಟ್ಟ ದಲ್ಲಿ ಜನಸಂಪರ್ಕ ಸಭೆ ನಡೆಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿ…
ಗ್ಯಾಸ್ ಏಜೆನ್ಸಿ ಬಾಗಿಲು ಮುರಿದು ಹಣ ಕಳವು
September 15, 2018ಚಾಮರಾಜನಗರ: ನಗರದ ಮಹೇಶ್ ಗ್ಯಾಸ್ ಏಜೆನ್ಸಿ ಕಚೇರಿಯ ಬಾಗಿಲು ಒಡೆದು ಹಣ ಕಳವು ಮಾಡಲಾಗಿದೆ. ನಗರದ ಡಿವಿಯೇಷನ್ ರಸ್ತೆಯಲ್ಲಿರುವ ಹಾಗೂ ನಗರಸಭಾ ಮಾಜಿ ಸದಸ್ಯ ಎಸ್. ನಂಜುಂಡಸ್ವಾಮಿ ಅವರಿಗೆ ಸೇರಿದ ಗ್ಯಾಸ್ ಏಜೆನ್ಸಿಯಲ್ಲಿ ಕಳ್ಳತನ ನಡೆದಿದೆ. ಗುರುವಾರ ರಾತ್ರಿ ಏಜೆನ್ಸಿಯ ಬಾಗಿಲನ್ನು ಕಬ್ಬಿಣದ ಸಲಾಕೆಯಿಂದ ಮೀಟಿ ಒಳನುಗ್ಗಿರುವ ಕಳ್ಳರು ಟೇಬಲ್ ಡ್ರಾಯರ್ ಒಡೆದು 20 ಸಾವಿರ ರೂ. ಕಳವು ಮಾಡಿದ್ದಾರೆ.ಬಳಿಕ ಅದೇ ಬಿಲ್ಡಿಂಗ್ನಲ್ಲಿರುವ ಲೆಕ್ಕ ಪರಿಶೋಧಕ ಕಮಲ್ನಾಥ್ ಎಂಬುವರ ಕಚೇರಿಯ ಬಾಗಿಲು ಮೀಟಿ ಒಳನುಗ್ಗಿ ಟೇಬಲ್ ಮತ್ತು…
ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಸೂಚನೆ
September 13, 2018ಚಾಮರಾಜನಗರ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ ಒಟ್ಟು 213 ಶುದ್ಧ ಕುಡಿಯುವ ನೀರಿನ ಘಟಕ ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತು ವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸೂಚಿಸಿದರು. ನಗರದ ಜಿಲ್ಲಾಡಳಿತ ಭವನದ ಆವರಣ ದಲ್ಲಿ ಇರುವ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಮಾಹಿತಿ ನೀಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾ ಖೆಯ ಪ್ರಭಾರ ಇಂಜಿನಿಯರ್…