ಚಾಮರಾಜನಗರ: ಶಿಕ್ಷಣ ಕ್ಷೇತ್ರದಲ್ಲಿ ತೆರೆದ ಪುಸ್ತಕ ಪರೀಕ್ಷೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿ ರುವುದು ಕ್ರಾಂತಿಕಾರಿ ಹೆಜ್ಜೆ ಎಂದು ಭಾಷಾ ತಜ್ಞ ಹಾಗೂ ಚಲನಚಿತ್ರ ನಿರ್ದೇಶಕ ಅಬ್ದುಲ್ ರೆಹಮಾನ್ ಪಾಷ ಬಣ್ಣಿಸಿದರು. ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್) ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಸಂವಾದ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಸಣ್ಣ ಮಕ್ಕಳಲ್ಲಿ ಇರುವ ಪರೀಕ್ಷಾ ಒತ್ತಡವನ್ನು ನಿವಾರಿಸಲು…
ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ
July 16, 2018ಚಾಮರಾಜನಗರ: ಶಾಸಕಾಂಗ ಮತ್ತು ಕಾರ್ಯಾಂಗವನ್ನು ಎಚ್ಚರಿಸುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಬಣ್ಣಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನಗರದ ವರ್ತಕರ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ 4ನೇ ಅಂಗವಾದ ಮಾಧ್ಯಮ ಕ್ಷೇತ್ರ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗಿಂತ ಹೆಚ್ಚು ಜಾಗೃತವಾಗಿ ಕೆಲಸ ಮಾಡುತ್ತಿದೆ. ನಕಾರಾತ್ಮಕ ಸುದ್ದಿ…
ಜೆಎಸ್ಎಸ್ ರುಡ್ಸೆಟ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
July 16, 2018ಚಾಮರಾಜನಗರ: ಜೆಎಸ್ಎಸ್ ರುಡ್ಸೆಟ್ ಸಂಸ್ಥೆ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ನಗರದ ಹೊರ ವಲಯದಲ್ಲಿರುವ ಮರಿಯಾಲದ ಜೆಎಸ್ಎಸ್ ರುಡ್ಸೆಟ್ ಸಂಸ್ಥೆಯಲ್ಲಿ ಇತ್ತೀಚೆಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಗಿಡಕ್ಕೆ ನೀರು ಎರೆಯುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಆರ್ ರಮೇಶ್, ಇತ್ತೀಚೆಗೆ ಆಧುನಿಕ ತಂತ್ರಜ್ಞಾನಗಳು ಹೆಚ್ಚಾದಂತೆ ಪ್ರಕೃತಿ ಸಹಜವಾಗಿ ನಿಸರ್ಗದ ಮೇಲಿನ ಒತ್ತಡ ಹೆಚ್ಚುತ್ತಿದೆ. ನೆಲ, ಜಲ, ಗಾಳಿ ಸೇರಿದಂತೆ ಎಲ್ಲವು ಇಂದು ಮಲಿನಗೊಳ್ಳುತ್ತಿವೆ. ಇದನ್ನು ಸರಿ ದೂಗಿಸಲು ಪರಿಸರದಲ್ಲಿ ಸಮತೋಲನ ಕಾಪಾಡಿಕೊಳ್ಳುವುದು…
ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
July 15, 2018ಚಾಮರಾಜನಗರ: ನಗರದ ಕರಿನಂಜ ನಪುರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲುದ್ದೇಸಿರುವ ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬುಧವಾರ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 3.25ಕೋಟಿ ವೆಚ್ಚದಡಿ 3 ಅಂತಸ್ತಿನ ಕಟ್ಟಡ ವನ್ನು ನಿರ್ಮಾಣ ಮಾಡಲು ಚಾಲನೆ ನೀಡಲಾಗಿದೆ. ಕಟ್ಟಡದಲ್ಲಿ 15 ಕೊಠಡಿ, 18 ಶೌಚಾಲಯ, 15 ಸ್ನಾನದ ಗೃಹ, ಪ್ರಥಮ…
ಗ್ರಾಪಂ ಅಧಿಕಾರಿಗಳಿಗೆ ರಾಷ್ಟ್ರಧ್ವಜದ ಮಾಹಿತಿ, ಅರಿವು ಶಿಬಿರ ರಾಷ್ಟ್ರಧ್ವಜ ಭಾರತೀಯರ ಸಂಕೇತ
July 14, 2018ಚಾಮರಾಜನಗರ: ‘ರಾಷ್ಟ್ರಧ್ವಜ ಗೌರವಿಸುವುದು, ರಕ್ಷಣೆ ಮಾಡುವುದು ಭಾರತೀಯರ ಕರ್ತವ್ಯವಾಗಿದೆ’ ಎಂದು ಭಾರತ ಸೇವಾ ದಳದ ಸಂಪನ್ಮೂಲ ವ್ಯಕ್ತಿ ಶೇಷಾಚಲ ಹೇಳಿದರು. ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಭಾರತ ಸೇವಾದಳ ತಾಲೂಕು ಘಟಕ ವತಿಯಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗೆ ಹಮ್ಮಿಕೊಂಡಿದ್ದ ರಾಷ್ಟ್ರಧ್ವಜ ಮಾಹಿತಿ ಕುರಿತ ಅರಿವು ಕಾರ್ಯ ಕ್ರಮದಲ್ಲಿ ಅವರು ರಾಷ್ಟ್ರಧ್ವಜ ಕುರಿತು ಮಾತನಾಡಿದರು. ಭಾರತ ಸೇವಾದಳ ನಾ.ಸು.ಹರ್ಡೀಕರ್ರವರ ಕನಸಿನ ಕೂಸು. ಗಾಂಧೀಜಿ ಅವರ ತತ್ವ, ಆದರ್ಶದಂತೆ ಸೇವೆಗಾಗಿ ಬಾಳು ಎಂಬ ವಾಕ್ಯದಡಿ ಕಾರ್ಯನಿರ್ವಹಿಸುತ್ತಿದೆ….
ನೋಡ ಬನ್ನಿರೋ… ಜಿಲ್ಲೆಯ ನಯಾಗರ ಸೊಬಗು ಭರಚುಕ್ಕಿಯಲ್ಲಿ ಧುಮ್ಮಿಕ್ಕುತ್ತಿದೆ ಜಲರಾಶಿ…
July 14, 2018ಕಣ್ಣಿಗೆ ಕಂಪು, ಕಿವಿಗೆ ಇಂಪು ಜಲ ಝೇಂಕಾರ ಚಾಮರಾಜನಗರ: ಜಿಲ್ಲೆಯ ನಯಾಗರ ಎಂದೇ ಪ್ರಸಿದ್ಧವಾಗಿರುವ ಭರಚುಕ್ಕಿ, ಮಂಡ್ಯ ಜಿಲ್ಲೆಯ ಗಗನಚುಕ್ಕಿ ಜಲಪಾತ ಭೋರ್ಗರೆಯುತ್ತಿದ್ದು, ಈ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳು ವುದೇ ಒಂದು ಸೊಬಗು. ಸುಮಾರು 100 ಅಡಿ ಎತ್ತರದಿಂದ ಧುಮ್ಮಿಕ್ಕುವ ನೀರಿನ ಭೋರ್ಗರೆತ, ಅದರಿಂದ ತೇಲಿ ಬರುತ್ತಿರುವ ತಂಗಾಳಿಯ ಸ್ವಾದವನ್ನು ವರ್ಣಿಸಲು ಪದಗಳೇ ಸಾಲದು. ಕಬಿನಿಯಿಂದ ಸುಮಾರು 50 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವಳಿ ಜಲಪಾತಗಳೆಂದೇ ವಿಶ್ವ ಪ್ರಸಿದ್ಧವಾಗಿರುವ ಭರಚುಕ್ಕಿ, ಗಗನಚುಕ್ಕಿ ಜಲಪಾತಗಳು…
ಮೇಲ್ಸೇತುವೆ ತಡೆಗೋಡೆಗೆ ಬೈಕ್ ಡಿಕ್ಕಿ ಸೇತುವೆಯಿಂದ ಕೆಳಭಾಗಕ್ಕೆ ಬಿದ್ದು ಯುವಕ ಸಾವು
July 14, 2018ಚಾಮರಾಜನಗರ: ಮೇಲ್ಸೇತುವೆಯ ತಡೆಗೋಡೆಗೆ ಬೈಕ್ ಸವಾರನೋರ್ವ ಡಿಕ್ಕಿ ಹೊಡೆಸಿ ಸುಮಾರು 60 ಅಡಿಯಿಂದ ಕೆಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರಿಯಾಲ ಗ್ರಾಮದ ಮೇಲ್ಸೇತುವೆಯಲ್ಲಿ ಶುಕ್ರವಾರ ನಡೆದಿದೆ. ನಂಜನಗೂಡು ತಾಲೂಕಿನ ಕೋಣನೂರು ಪಾಳ್ಯದ ರಮೇಶ್ (24) ಮೃತಪಟ್ಟ ಬೈಕ್ ಸವಾರ. ರಮೇಶ್ ಬೈಕ್ನಲ್ಲಿ ಚಾಮರಾಜನಗರದಿಂದ ಕೋಣನೂರು ಪಾಳ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಮರಿಯಾಲ ಗ್ರಾಮದ ಬಳಿ ಇರುವ ರೈಲು ಮೇಲ್ಸೇತುವೆ ಮಧ್ಯಭಾಗ ದಲ್ಲಿ ಸೇತುವೆಯ ತಡೆಗೋಡೆಗೆ ಬೈಕನ್ನು ಡಿಕ್ಕಿ ಹೊಡೆಸಿದ್ದಾರೆ. ಇದರ ರಭಸಕ್ಕೆ ಸೇತು ವೆಯ…
ನಾಳೆ ಉಚಿತ ಶಸ್ತ್ರ ಚಿಕಿತ್ಸೆ, ಪರೀಕ್ಷಾ ಶಿಬಿರ
July 14, 2018ಚಾಮರಾಜನಗರ: ನಗರದ ರೋಟರಿ ಭವನದಲ್ಲಿ ಜುಲೈ 15ರಂದು ಬೆಳಿಗ್ಗೆ 10 ಗಂಟೆಯಿಂದಜ ಮಧ್ಯಾಹ್ನ 1ರವರೆಗೆ ಸಿಳು ತುಟಿ, ಬೀಳು ಅಂಗಳ, ಸೀಳು ಮುಖ, ಮುಖಾಂಗ ಫೇಕಲ್ಸ್ ಮತ್ತು ಮುಖದ ಮೂಳೆಗಳಿಗೆ ಸಂಬಂಧಿಸಿದಂತೆ ನ್ಯೂನತೆಗಳಿರುವವರಿಗೆ ಉಚಿತ ಶಸ್ತ್ರ ಚಿಕಿತ್ಸೆ ಹಾಗೂ ಪರೀಕ್ಷಾ ಶಿಬಿರ ಆಯೋಜಿಸಲಾಗಿದೆ. ನಗರದ ರೋಟರಿ ಸಂಸ್ಥೆ, ಮೈಸೂರಿನ ಸ್ವಾಸ್ತ್ಯ ಫೌಂಡೇಷನ್, ಸಂತ ಜೋಸೆಫರ ಆಸ್ಪತ್ರೆಯ ಸಹಯೋಗದಲ್ಲಿ ಶಿಬಿರವನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ರೋಟರಿ ಅಧ್ಯಕ್ಷ ಡಿ.ನಾಗರಾಜ, ಮಾಜಿ ಅಧ್ಯಕ್ಷ ಸಿ.ಎ.ನಾರಾಯಣ ಕೋರಿದ್ದಾರೆ.
ಆರೋಗ್ಯ ಕಾಳಜಿಗೆ ಜಿಲ್ಲಾ ನ್ಯಾಯಾಧೀಶರ ಸಲಹೆ
July 13, 2018ಚಾಮರಾಜನಗರ: ಜೀವನದಲ್ಲಿ ಆರೋಗ್ಯವೇ ಸಂಪತ್ತಾಗಿದ್ದು, ಇದನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಕಾಳಜಿ ವಹಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಬಸವ ರಾಜ ಸಲಹೆ ಮಾಡಿದರು. ನಗರದ ಜಿಲ್ಲಾ ಕಾರಾಗೃಹದಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಆರೋಗ್ಯಕ್ಕೆ ಮಿಗಿಲಾದ ಭಾಗ್ಯವಿಲ್ಲ. ಉತ್ತಮ ಆರೋಗ್ಯ ಹೊಂದಿ ದ್ದರೆ ನೆಮ್ಮದಿ ಜೀವನ…
ಸಂಚಾರಿ ನಿಯಮ ಪಾಲಿಸಲು ಕರೆ
July 13, 2018ಚಾಮರಾಜನಗರ: – ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿ ಸುವ ಮೂಲಕ ಅಪಘಾತವನ್ನು ತಡೆಗಟ್ಟಿ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ಸಂಚಾರ ಠಾಣೆ ಸಬ್ ಇನ್ಸ್ ಪೆಕ್ಟರ್ ದೀಪಕ್ ಕರೆ ನೀಡಿದರು. ಅವರು ತಾಲೂಕಿನ ವೆಂಕಟಯ್ಯನ ಛತ್ರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಸಂಚಾರಿ ಠಾಣೆಯಿಂದ ಏರ್ಪಡಿಸಿದ್ದ ಸಂಚಾರಿ ನಿರ್ವಹಣೆ ಮತ್ತು ರಸ್ತೆ ಸುರ್ಷತಾ ಸಪ್ತಾಹ ಅರಿವು ಕಾರ್ಯಕ್ರಮ ದಲ್ಲಿ ಮಾತನಾಡಿದರು. ಪ್ರತಿಯೊಬ್ಬ ಬೈಕ್ ಸವಾರರು ಚಾಲನಾ ಪರವಾನಗಿ, ಬೈಕ್ ದಾಖಲಾತಿಗಳು, ವಾಹನ ವಿಮೆಗಳನ್ನು ಕಡ್ಡಾಯವಾಗಿ ಹೊಂದಬೇಕು ಮತ್ತು…