Tag: Chamarajanagar

ಹಲ್ಲೆಗೈದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಚಾಮರಾಜನಗರ

ಹಲ್ಲೆಗೈದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

July 13, 2018

ಚಾಮರಾಜನಗರ:  ಏಕಾಏಕಿ ಜಗಳ ತೆಗೆದು ವ್ಯಕ್ತಿಯೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಸಾವಿಗೆ ಕಾರಣರಾಗಿದ್ದ ಉಮ್ಮತ್ತೂರು ಗ್ರಾಮದ ನಟರಾಜು ಎಂಬ ಆರೋಪಿಗೆ ಅಧಿಕ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ. ಸಿದ್ದರಾಜು ಹಲ್ಲೆಗೆ ಒಳಗಾಗಿ ಸಾವಿಗೀಡಾದ ವ್ಯಕ್ತಿ. ಕಳೆದ 2013ರ ಜೂನ್ 20ರಂದು ಉಮ್ಮತ್ತೂರು ಗ್ರಾಮದಲ್ಲಿ ನಟರಾಜು ಸಿದ್ದರಾಜುವಿನೊಂದಿಗೆ ಜಗಳ ತೆಗೆದು ಎದೆಗೆ ಮತ್ತು ಹೊಟ್ಟೆಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ್ದ. ತೀವ್ರ ಗಾಯಗೊಂಡಿದ್ದ ಸಿದ್ದರಾಜುವನ್ನು ಆಸ್ಪತ್ರೆಗೆ…

ಕೊಳವೆ ಬಾವಿ ಕೊರೆಸುವ ಅನುಷ್ಠಾನ ವಿಳಂಬ ಕೆಡಿಪಿ ಸಭೆಯಲ್ಲಿ ಸಿಇಓ ಅಸಮಾಧಾನ
ಚಾಮರಾಜನಗರ

ಕೊಳವೆ ಬಾವಿ ಕೊರೆಸುವ ಅನುಷ್ಠಾನ ವಿಳಂಬ ಕೆಡಿಪಿ ಸಭೆಯಲ್ಲಿ ಸಿಇಓ ಅಸಮಾಧಾನ

July 12, 2018

ಚಾಮರಾಜನಗರ: ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ವೈಯಕ್ತಿಕ ಕೊಳವೆ ಬಾವಿ ಕೊರೆಸುವ ಅನುಷ್ಠಾನ ವಿಳಂಬ ಆಗುತ್ತಿದೆ ಎಂದು ಜಿಪಂ ಉಪಾಧ್ಯಕ್ಷ ಜೆ.ಯೋಗೇಶ್ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅಸ ಮಾಧಾನ ವ್ಯಕ್ತಪಡಿಸಿದರು. ನಗರದ ಜಿಲ್ಲಾಡಳಿತ ಭವನದ ಆವ ಣದಲ್ಲಿ ಇರುವ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಜಿಲ್ಲಾ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರಿ ಬ್ಬರು ಅಸಮಾಧಾನ ತೋರ್ಪಡಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮ,…

ಸಹಕಾರಿ ಬ್ಯಾಂಕ್‍ನ 11 ಕೋಟಿ ರೂ. ಸಾಲ ಮನ್ನಾ
ಚಾಮರಾಜನಗರ

ಸಹಕಾರಿ ಬ್ಯಾಂಕ್‍ನ 11 ಕೋಟಿ ರೂ. ಸಾಲ ಮನ್ನಾ

July 12, 2018

ಚಾಮರಾಜನಗರ: ರಾಜ್ಯ ಸರ್ಕಾರದ ರೈತರ ಸುಸ್ತಿ ಮನ್ನಾ ಘೋಷಣೆಯಿಂದ ಜಿಲ್ಲೆಯ ಸಹಕಾರಿ ಬ್ಯಾಂಕ್ (ಎಂಡಿಸಿಸಿ)ನ ಒಟ್ಟು ಸಾಲದ ಪೈಕಿ 11 ಕೋಟಿ ರೂ. ಮನ್ನಾ ಆಗಲಿದೆ. ಇಂದಿಲ್ಲಿ ನಡೆದ ಜೆಪಂ ಕೆಡಿಪಿ ಸಭೆಯಲ್ಲಿ ಬ್ಯಾಂಕ್ ಅಧಿಕಾರಿ ಯೊಬ್ಬರು ಸಭೆಗೆ ಈ ಮಾಹಿತಿ ನೀಡಿದರು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಜೆಟ್ ಮಂಡಿಸುವಾಗ ರೈತರ ಸುಸ್ತಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಇದರ ಅನ್ವಯ ಜಿಲ್ಲೆಯ ಎಂಡಿಸಿಸಿ ಬ್ಯಾಂಕ್‍ನಿಂದ ರೈತರು ಪಡೆದಿದ್ದ 11 ಕೋಟಿ ರೂ. ಮನ್ನಾ ಆಗಲಿದೆ ಎಂದರು. ಚಾಮರಾಜನಗರ ವಲಯದಿಂದ…

ಜಿಲ್ಲಾ ಕ್ರೀಡಾಂಗಣಕ್ಕೆ ಸಂಸದ ಧ್ರುವನಾರಾಯಣ್ ದಿಢೀರ್ ಭೇಟಿ
ಚಾಮರಾಜನಗರ

ಜಿಲ್ಲಾ ಕ್ರೀಡಾಂಗಣಕ್ಕೆ ಸಂಸದ ಧ್ರುವನಾರಾಯಣ್ ದಿಢೀರ್ ಭೇಟಿ

July 12, 2018

ಚಾಮರಾಜನಗರ: ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಮಂಗಳವಾರ ಸಂಜೆ ಸಂಸದ ಆರ್.ಧ್ರುವನಾರಾಯಣ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಕ್ರೀಡಾಂಗಣದಲ್ಲಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ ಸಿಂಥೆಟಿಕ್ ಟ್ರ್ಯಾಕ್ ಶೀಘ್ರದಲ್ಲಿಯೇ ಉದ್ಘಾಟಿಸುವ ಬಗ್ಗೆ ಕ್ರಮಕೈಗೊಳ್ಳುವಂತೆ ಸ್ಥಳದಲ್ಲಿಯೇ ಇದ್ದ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಚೆಲುವಯ್ಯ ಅವರಿಗೆ ಸೂಚಿಸಿದರು. ಕ್ರೀಡಾಂಗಣದ ಸುತ್ತಲೂ ಆಡಿಟರ್ ಆಗಿರುವ ಸಿ.ಎಂ.ವೆಂಕಟೇಶ್ ಹಾಕಿರುವ ಗಿಡಗಳನ್ನು ಸಂರಕ್ಷಿಸುವಂತೆ ಹಾಗೂ ಸೂಕ್ತ ಭದ್ರತೆ ಕೈಗೊಳ್ಳುವಂತೆ ಸಂಸದರು ಇದೇ ವೇಳೆ ಸೂಚಿಸಿದರು. ಇದಲ್ಲದೇ ನಗರದ ಬಹುತೇಕ ಕಡೆ ಗಿಡಗಳನ್ನು…

ಗ್ರಾಮೀಣ ಮಹಿಳೆಯರು ಸಬಲರಾಗಲು ಕರೆ
ಚಾಮರಾಜನಗರ

ಗ್ರಾಮೀಣ ಮಹಿಳೆಯರು ಸಬಲರಾಗಲು ಕರೆ

July 12, 2018

ಚಾಮರಾಜನಗರ: ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸಬಲರಾಗಬೇಕು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಹೇಮಲತಾ ಕರೆ ನೀಡಿದರು. ಗುರುವಾರ ಐಡಿಎಫ್‍ಸಿ ಭಾರತ್ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಮಹಿಳಾ ಒಕ್ಕೂ ಟದ ಸಭೆ ಉದ್ಘಾಟಿಸಿ ಅವರು ಮಾತನಾ ಡಿದರು. ಗ್ರಾಮೀಣ ಪ್ರದೇಶದ ಮಹಿಳೆಯ ರಿಗೆ ಶಿಕ್ಷಣದ ಕೊರತೆಯಿಂದ ಉದ್ಯೋ ಗದ ಅಭದ್ರತೆ ಕಾಡುತ್ತಿದೆ. ಇದರಿಂದ ಅವರ ಸ್ವಾವಲಂಭಿಗಳಾಗದೆ ಪುರುಷ ರನ್ನು ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಿಳೆ ಎಂದರೆ ಹಿಂದಿನಿಂದಲೂ ಗಂಡನ ಸೇವೆ ಮತ್ತು…

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ಅಂಗನವಾಡಿ ನೌಕರರ ಭಾರೀ ಪ್ರತಿಭಟನೆ
ಚಾಮರಾಜನಗರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ಅಂಗನವಾಡಿ ನೌಕರರ ಭಾರೀ ಪ್ರತಿಭಟನೆ

July 11, 2018

ಚಾಮರಾಜನಗರ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವ ಹಿಸುತ್ತಿರುವ ಅಂಗನವಾಡಿ ನೌಕರರು ಹಾಗೂ ಸಹಾಯಕಿಯರು ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಇಲ್ಲಿನ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾವಿರಾರು ಅಂಗನವಾಡಿ ನೌಕರರು ಹಾಗೂ ಸಹಾಯಕಿಯರು ಜಮಾಯಿಸಿದರು. ನಂತರ ಘೋಷಣೆಗಳನ್ನು ಕೂಗುತ್ತಾ, ಸಾಲಾಗಿ ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವ…

ಆಲೂರಿನಲ್ಲಿ ವಚನ ಮಾಂಗಲ್ಯ ಮದುವೆ
ಚಾಮರಾಜನಗರ

ಆಲೂರಿನಲ್ಲಿ ವಚನ ಮಾಂಗಲ್ಯ ಮದುವೆ

July 11, 2018

ಆಲೂರು: ಯಾವುದೇ ಆಡಂಬರ, ಮದುವೆ ಮಂಟಪ ಹಾಗು ವಾದ್ಯಗೋಷ್ಠಿ ಇಲ್ಲದೇ ಸರಳವಾಗಿ ವಚನ ಮಾಂಗಲ್ಯದ ಮೂಲಕ ಜೋಡಿಯೊಂದು ಸತಿಪತಿಗಳಾದರು. ತಾಲೂಕಿನ ಆಲೂರು ಗ್ರಾಮದ ದಿ. ಎ.ಎಂ. ಚನ್ನಂಜಪ್ಪ ಮತ್ತು ಪುಟ್ಟತಾಯಮ್ಮ ಅವರ ಪುತ್ರಿ ಎ.ಸಿ. ಮಹೇಶ್‍ಕುಮಾರಿ ಹಾಗೂ ನಂಜನ ಗೂಡು ತಾಲೂಕು ಹೆಜ್ಜಿಗೆ ಗ್ರಾಮದ ದಿ.ಸುಬ್ರಹ್ಮಣ್ಯ ಮತ್ತು ಪ್ರೇಮ ದಂಪತಿ ಪುತ್ರ ಎಚ್.ಎಸ್.ಮಹದೇವಕುಮಾರ್ ಅವರು ಆಲೂರಿನ ಬಸವ ಭವನದಲ್ಲಿ ವಚನ ಮಾಂಗಲ್ಯ ಮೂಲಕ ದಾಂಪತ್ಯಕ್ಕೆ ಕಾಲಿಟ್ಟರು. ನವದೆಹಲಿ ತೋಂಟದಾರ್ಯ ಶಾಖಾ ಮಠದ ಶ್ರೀ ಮಹಾಂತದೇವರು ಬಸವಣ್ಣನವರ ವಚನ…

ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್‍ಮನ್ ಮೇಲೆ ಹಲ್ಲೆ
ಚಾಮರಾಜನಗರ

ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್‍ಮನ್ ಮೇಲೆ ಹಲ್ಲೆ

July 11, 2018

ಚಾಮರಾಜನಗರ: ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರಿಂದ ಅದನ್ನು ಕಡಿತಗೊಳಿಸಿದ ಲೈನ್‍ಮನ್ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲೈನ್‍ಮನ್ ಆನಂದ ರಾಜು ಮೇಲೆ ಹಲ್ಲೆ ನಡೆಸಿದ್ದು, ಗಾಯಗೊಂಡಿರುವ ಅವರು ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಲ್ಲೂರು ಗ್ರಾಮದ ಪರಶಿವ ಮೂರ್ತಿ ಮತ್ತು ಶಿವಣ್ಣ ಎಂಬು ವರು ತಮ್ಮ ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದರು ಎನ್ನಲಾಗಿದೆ. ಇದನ್ನು ತಿಳಿದ ಗ್ರಾಮದ ಲೈನ್‍ಮನ್ ಆಗಿರುವ ಆನಂದರಾಜು ಅವರ ಮನೆಗಳಿಗೆ…

ವಿವಿಧ ಪ್ರಶಸ್ತಿಗೆ ಪತ್ರಕರ್ತರ ಆಯ್ಕೆ
ಚಾಮರಾಜನಗರ

ವಿವಿಧ ಪ್ರಶಸ್ತಿಗೆ ಪತ್ರಕರ್ತರ ಆಯ್ಕೆ

July 11, 2018

ಚಾಮರಾಜನಗರ: ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಸ್ಥಾಪಿಸಿರುವ ವಿವಿಧ ಪ್ರಶಸ್ತಿಗಳಿಗೆ ಪತ್ರಕರ್ತರನ್ನು ಆಯ್ಕೆ ಮಾಡ ಲಾಗಿದೆ. ಪತ್ರಿಕಾ ರಂಗದಲ್ಲಿ ಸಲ್ಲಿಸಿರುವ ಗಣನೀಯ ಸೇವೆಗಾಗಿ ನೀಡಲಾಗುವ ಪತ್ರಕರ್ತರಾಗಿದ್ದ ದಿ.ಹೆಚ್.ವಿ. ಸತ್ಯನಾರಾಯಣ ಪ್ರಶಸ್ತಿಗೆ ಕೊಳ್ಳೇಗಾಲದ ಹಿರಿಯ ಪತ್ರಕರ್ತ ಎಸ್.ರಾಜು ಭಾಜನರಾಗಿದ್ದಾರೆ. ಛಾಯಾಗ್ರಾಹಕ ಕ್ಷೇತ್ರದಲ್ಲಿ ಸಲ್ಲಿಸಿ ರುವ ಗಣನೀಯ ಸೇವೆಗಾಗಿ ನೀಡಲಾ ಗುವ ಸಿದ್ಧಲಿಂಗ ದೇವರು ಛಾಯಾಗ್ರಹಣ ಪ್ರಶಸ್ತಿಗೆ ಚಾಮರಾಜನಗರದ ಸುವರ್ಣ ನ್ಯೂಸ್ ವಿಡಿಯೋ ಜರ್ನಲಿಸ್ಟ್ ಆರ್.ಸಿ.ಪುಟ್ಟರಾಜು ಆಯ್ಕೆ ಆಗಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪಿ. ರೇವಣ್ಣ ಅವರ…

ಕೃಷಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್
ಚಾಮರಾಜನಗರ

ಕೃಷಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್

July 10, 2018

ಜಿಲ್ಲೆಯಲ್ಲಿ ಜನರ ಬಹುದಿನಗಳ ಬೇಡಿಕೆ ಈಡೇರಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಾಲೇಜು ಆರಂಭ ಚಾಮರಾಜನಗರ: ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕೃಷಿ ವಿಜ್ಞಾನ ಕಾಲೇಜು ಪ್ರಾರಂಭಿಸಲು ಸರ್ಕಾರದ ಮಟ್ಟದಲ್ಲಿ ಎಲ್ಲಾ ಪ್ರಯತ್ನಗಳು ಸದ್ದಿಲ್ಲದೇ ಸಾಗಿದೆ. ಈ ಮೂಲಕ ಗಡಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಕೊನೆಗೂ ಈಡೇರುವ ಕಾಲ ಸನಿಹವಾಗಿದೆ. ಜಿಲ್ಲೆಯಲ್ಲಿ ಕೃಷಿ ಕಾಲೇಜು ಪ್ರಾರಂಭಿ ಸುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈಗಾಗಲೇ ಗ್ರೀನ್‍ಸಿಗ್ನಲ್ ನೀಡಿದ್ದಾರೆ. ಇದಕ್ಕೆ ಸಹಿಯನ್ನು ಸಹ ಹಾಕಿದ್ದಾರೆ. ಸರ್ಕಾರ ಆರ್ಥಿಕ…

1 57 58 59 60 61 74
Translate »