ಯಳಂದೂರು: ಪಟ್ಟಣ ಪಂಚಾಯಿತಿ ಕಚೇರಿ ಯಲ್ಲಿ ಖಾಸಗಿ ಖಾಲಿ ನಿವೇಶನ ಸೇರಿ ದಂತೆ ಸರ್ಕಾರಿ ಸೈಟುಗಳನ್ನು ಪಟ್ಟಭದ್ರ ವ್ಯಕ್ತಿಗಳಿಗೆ ಅಕ್ರಮ ಖಾತೆ ಮಾಡುತ್ತಿರುವ ಬಗ್ಗೆ ಚಾಮರಾಜನಗರ ಲೋಕಾಯುಕ್ತ ಪ್ರಭಾರ ಡಿವೈಎಸ್ಪಿ ಬಿ.ಜಿ.ಕುಮಾರ್ ಅವರಿಗೆ ದೂರು ಬಂದ ಹಿನ್ನೆಲೆಯಲ್ಲಿ ತಪ್ಪಿಸ್ಥರ ವಿರುದ್ದ ಕಾನೂನು ಕ್ರಮ ಜರು ಗಿಸಲು ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಶನಿವಾರ ಸಾರ್ವ ಜನಿಕರ ದೂರು ಸ್ವೀಕಾರ ಕಾರ್ಯಕ್ರಮ ದಲ್ಲಿ ಪಟ್ಟಣದ ನಾಗರಿಕರು ಪಟ್ಟಣ ಪಂಚಾ ಯಿತಿ ಕಚೇರಿಯಲ್ಲಿ…
ನಾಲ್ಕು ದಶಕದ ನಂತರ ಇತಿಹಾಸ ಪ್ರಸಿದ್ಧಿ ರಾಜರ ಕಾಲದ ಚಾ.ನಗರದ ದೊಡ್ಡ ಅರಸನಕೊಳ ಬಹುತೇಕ ಭರ್ತಿ ಅಂತರ್ಜಲ ವೃದ್ಧಿ, ನಾಗರಿಕರಲ್ಲಿ ಹರ್ಷ
May 26, 2018ಚಾಮರಾಜನಗರ: ಚಾಮ ರಾಜನಗರದ ಇತಿಹಾಸ ಪ್ರಸಿದ್ಧ ದೊಡ್ಡ ಅರಸನಕೊಳ ಅರ್ಧದಷ್ಟು ಭರ್ತಿ ಆಗಿದೆ. ಇದು ನಗರದ ನಾಗರಿಕರಲ್ಲಿ ಹರ್ಷ ತರಿಸಿದೆ. ನಗರದಲ್ಲಿ ಗುರುವಾರ ರಾತ್ರಿ ಸುಮಾರು ಒಂದು ಗಂಟೆಗಳ ಕಾಲ ಮಿಂಚು-ಗುಡುಗು ಸಹಿತ ಭರ್ಜರಿ ಮಳೆ ಸುರಿಯಿತು. ಹೀಗಾಗಿ ಪೈಪ್ಲೈನ್ ಮೂಲಕ ದೊಡ್ಡ ಅರಸನ ಕೊಳಕ್ಕೆ ಮಳೆ ನೀರು ಹರಿದು ಬಂದಿದೆ. ಮೂಡ್ಲುಪುರ ಬಡಾವಣೆ ಬಳಿಯ ಬಂಜಾರ್ ಸ್ಕೂಲ್ ಬಳಿ ಇರುವ ಅಡ್ಡಹಳ್ಳದಿಂದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಕೊಳದ ಬೀದಿಯ ದೊಡ್ಡ ಅರಸನ ಕೊಳಕ್ಕೆ…
ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
May 26, 2018ಚಾಮರಾಜನಗರ: ತಾಲೂಕಿನ ಮರಿಯಾಲ ಗ್ರಾಮದಲ್ಲಿ ಶ್ರೀ ಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆ ನಡೆಸುತ್ತಿರುವ ಶ್ರೀ ಮುರುಘರಾಜೇಂದ್ರಸ್ವಾಮಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 5ನೇ ತರಗತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರ 1, 2ಎ, 2ಬಿ, 3ಎ, 3ಬಿ ಮತ್ತು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನ್ 5ರೊಳಗೆ ಅರ್ಜಿಯನ್ನು ನಿಲಯ ಪಾಲಕರಿಗೆ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪುಸ್ತಕ, ಬಿಎ, ಬಿ.ಎಡ್ ತರಬೇತಿ ಪಡೆದ ಶಿಕ್ಷಕರಿಂದ ಭೋದನೆ ಕೊಡಿಸಲಾಗುವುದು….
ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಸಿಎಂ ಸಿದ್ದರಾಮಯ್ಯ ಮಿಂಚಿನ ಸಂಚಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಬಿಎಸ್ವೈ ವಿರುದ್ಧ ವಾಗ್ದಾಳಿ
May 8, 2018ಚಾಮರಾಜನಗರ: ಜಿಲ್ಲೆಯ ಎಲ್ಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭೇಟಿ ನೀಡಿ ಚುನಾವಣಾ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಿದರು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಮೊದಲಿಗೆ ಹನೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅಲ್ಲಿನ ಮಲೈಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ನಂತರ ಹೆಲಿಕಾಪ್ಟರ್ನಲ್ಲಿ ಕೊಳ್ಳೇಗಾಲಕ್ಕೆ ಆಗಮಿಸಿದರು. ಅಲ್ಲಿನ ನ್ಯಾಷನಲ್ ಮಿಡಲ್ ಸ್ಕೂಲ್…
ಎಸ್ಎಸ್ಎಲ್ಸಿ: ಜಿಲ್ಲೆಗೆ 24ನೇ ಸ್ಥಾನ
May 8, 2018ಚಾಮರಾಜನಗರ: ಮಾರ್ಚ್ನಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆ ಶೇ.74.47 ಫಲಿತಾಂಶ ಪಡೆದು ರಾಜ್ಯದಲ್ಲಿ 24ನೇ ಸ್ಥಾನ ಪಡೆದಿದೆ. ಕಳೆದ ವರ್ಷ(2017) ಶೇ.75.66 ಫಲಿತಾಂಶ ಪಡೆದು ರಾಜ್ಯದಲ್ಲಿ 12ನೇ ಸ್ಥಾನ ಪಡೆದಿತ್ತು. ಈ ಬಾರಿ 24ನೇ ಸ್ಥಾನ ಪಡೆಯುವ ಮೂಲಕ 12 ಸ್ಥಾನಗಳ ಕುಸಿತ ಕಂಡಿದೆ. ಇದು ಜಿಲ್ಲೆಯ ಶೈಕ್ಷಣ ಕ ಪ್ರಗತಿಗೆ ತೀವ್ರ ಹಿನ್ನಡೆ ಆದಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 9898 ವಿದ್ಯಾರ್ಥಿಗಳು ಪರೀಕ್ಷೆ ಬರೆದಿ ದ್ದರು. ಇದರಲ್ಲಿ 7370 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆ…
ಸಿದ್ದರಾಮಯ್ಯ ದುರಹಂಕಾರಿ, ಸಂಸ್ಕೃತಿ ಇಲ್ಲದ ಅನಾಗರಿಕ ಬಿಜೆಪಿ ಮುಖಂಡ ವಿ.ಶ್ರೀನಿವಾಸಪ್ರಸಾದ್ ಕಿಡಿ
May 7, 2018ಚಾಮರಾಜನಗರ: ಸಿದ್ದರಾಮಯ್ಯ ಓರ್ವ ದುರಹಂಕಾರಿ, ಸಂಸ್ಕೃತಿ ಇಲ್ಲದ ಅನಾಗರಿಕ. ಹೀಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜರಿದವರು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ವಿ.ಶ್ರೀನಿವಾಸಪ್ರಸಾದ್. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಗೆ ಬರುವ 15 ವಿಧಾನಸಭಾ ಕ್ಷೇತ್ರಗಳ ಪೈಕಿ 10ರಿಂದ 11ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ವಿಧಾನಸಭಾ ಚುನಾವಣೆಗೆ(2013)ಯಲ್ಲಿ ಬಿಜೆಪಿ ಪಕ್ಷ 3 ಬಣಗಳಾಗಿ ಮಾರ್ಪಟ್ಟಿತ್ತು….
ಹಲವಾರು ಮಂದಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ
May 7, 2018ಚಾಮರಾಜನಗರ: ತಾಲೂಕಿನ ಬ್ಯಾಡಮೂಡ್ಲು ಹಾಗೂ ದೊಳ್ಳೀಪುರ ಗೌತಮ್ ಕಾಲೋನಿಯಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಕಾರ್ಯಕಾರಿಣ ಸದಸ್ಯ ಮಂಗಲಶಿವಕುಮಾರ್, ಮುಖಂಡ ಹನುಮಂತಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ತಾಲೂಕಿನ ದೊಡ್ಡಮೋಳೆಯಲ್ಲಿ ಕಾಂಗ್ರೆಸ್ನ ಅಂಕಶೆಟ್ಟಿ, ಮಾದಶೆಟ್ಟಿ, ಚಿಕ್ಕಅಂಕಶೆಟ್ಟಿ, ನಾರಾಯಣಸ್ವಾಮಿ, ನಟರಾಜು, ಶ್ರೀನಿವಾಸ, ಶಿವಕುಮಾರ್, ರಂಗಸ್ವಾಮಿ, ನಿಂಗಶೆಟ್ಟಿ, ಸಿದ್ದಪ್ಪ, ನಿಂಗಶೆಟ್ಟಿ ಬಂಗಾರು ಹಾಗೂ ದೊಳ್ಳೀಪುರ ಗೌತಮ್ ಕಾಲೋನಿಯಲ್ಲಿ ಕಾಂಗ್ರೆಸ್ ಶಿವಸ್ವಾಮಿ, ಶಂಕರ್, ಮಹೇಶ್, ಕೃಷ್ಣ, ಮಹೇಶ್, ಮಹದೇವಶೆಟ್ಟಿ, ನಂಜಶೆಟ್ಟಿ, ಬಸವಣ್ಣ, ಕುಮಾರ್, ಶಿವರುದ್ದ, ಆರ್.ಮಹೇಶ್, ಸುಬ್ಬಣ್ಣಪುಟ್ಟರಾಚಶೆಟ್ಟಿ ಸೇರಿದಂತೆ…
ಇಂದು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ
May 7, 2018ಚಾಮರಾಜನಗರ: ಮುಖ್ಯ ಮಂತ್ರಿ ಸಿದ್ದರಾಮಯ್ಯ ನಾಳೆ (ಮೇ 7) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಹನೂರಿನ ಮಲೈ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿ ರುವ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಕೊಳ್ಳೇಗಾಲ ಪಟ್ಟಣದ ನ್ಯಾಷನಲ್ ಮಿಡಲ್ ಸ್ಕೂಲ್ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ಚಾಮ ರಾಜನಗರ ಹಳೇ ಖಾಸಗಿ ಬಸ್ ನಿಲ್ದಾಣ ದಲ್ಲಿ, ಸಂಜೆ 5 ಗಂಟೆಗೆ ಗುಂಡ್ಲುಪೇಟೆ ಪಟ್ಟಣದ…
ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಬಿಜೆಪಿ ಸೋಲಿಸಿ
May 7, 2018ಚಾಮರಾಜನಗರ: ದೇಶದ ಸಂವಿಧಾನ, ಪ್ರಜಾಪ್ರಭುತ್ವ ಉಳಿಯುವ ಸಲುವಾಗಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಬೇಕು. ಈ ಮೂಲಕ ಸಂವಿಧಾನ ಉಳಿಸಿ, ದೇಶವನ್ನು ರಕ್ಷಿಸಬೇಕಾಗಿದೆ ಎಂದು ಸೈನಿಕ ದಳದ ಜಿಲ್ಲಾ ಅಧ್ಯಕ್ಷ ಪಿ.ಸಂಘಸೇನಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸಂವಿಧಾನವನ್ನು ಬದಲಾಯಿಸುವ ಹುನ್ನಾರ ನಡೆಸಿದೆ. ಹೀಗಾಗಿ ದಲಿತರು ಬಿಜೆಪಿಗೆ ಮತ ನೀಡಬಾರದು ಎಂದು ಮನವಿ ಮಾಡಿದರು. ಬಿಜೆಪಿ ಸಂವಿಧಾನವನ್ನು ಬದಲಾಯಿಸಿ ಮನು ಶಾಸ್ತ್ರವನ್ನು ಜಾರಿಗೆ ತರುವ ಪ್ರಯತ್ನದಲ್ಲಿ ಇದೆ. ಪ್ರಜಾಪ್ರಭುತ್ವವನ್ನು ನಾಶ ಮಾಡಿ…
ಮೊಪೆಡ್ಗೆ ಕಾರು ಡಿಕ್ಕಿ; ಓರ್ವ ಸಾವು
May 7, 2018ಚಾಮರಾಜನಗರ: ದ್ವಿಚಕ್ರ ವಾಹನ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ತಾಲೂಕಿನ ಮರಿಯಾಲದ ಗೇಟ್ ಬಳಿ ಭಾನುವಾರ ನಡೆದಿದೆ. ತಾಲೂಕಿನ ಹೆಗ್ಗೊಠಾರ ಗ್ರಾಮದ ಸಿದ್ದರಾಮಪ್ಪ(52) ಬಿನ್ ಲೇ.ಕೋಣ ನೂರು ನಾಗಪ್ಪ ಮೃತಪಟ್ಟವರು. ತಮ್ಮ ಗ್ರಾಮದಿಂದ ಸೂಪರ್ ಎಕ್ಸೆಲ್ ವಾಹನ ದಲ್ಲಿ ಚಾ.ನಗರಕ್ಕೆ ಬರುತ್ತಿದ್ದರು. ಮರಿ ಯಾಲ ಗೇಟ್ ಬಳಿ ಮೈಸೂರಿನಿಂದ ಬರುತ್ತಿದ್ದ ಮಾರುತಿಕಾರು ಡಿಕ್ಕಿ ಹೊಡೆದು ತಲೆಗೆ ತೀವ್ರಪೆಟ್ಟಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.