ತೊಂಡವಾಡಿ: ತರಕಾರಿ ಮಾರುತ್ತಾ ಕಡು ಬಡತನದಲ್ಲೂ ಗ್ರಾಮೀಣ ಪ್ರತಿಭೆಯೊಂದು ಕಳೆದ ದ್ವಿತೀಯ ಪಿಯುಸಿಯಲ್ಲಿ ಅದ್ವಿತೀಯ ಸಾಧನೆ ಮಾಡಿದೆ. ಗ್ರಾಮದ ತರಕಾರಿ ವ್ಯಾಪಾರಿ ಬಸವರಾಜ್ ಎಂಬುವರ ಮಗ ಕೆಂಪರಾಜು ಬಿ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ದಲ್ಲಿ 542 ಅಂಕ ಗಳಿಸಿದ್ದಾನೆ. ಕೆಂಪ ರಾಜು ಸಾಧನೆಗೆ ಶಿಕ್ಷಕರು, ಗ್ರಾಮಸ್ಥರು, ಕುಟುಂಬಸ್ಥರು ಅಭಿನಂದಿಸಿದ್ದಾರೆ.
ಇಂದು ಸಂತೇಮರಹಳ್ಳಿಗೆ ಪ್ರಧಾನಿ ನರೇಂದ್ರಮೋದಿ ಬಿಜೆಪಿ ಬೃಹತ್ ಸಮಾವೇಶ
May 1, 2018ಚಾಮರಾಜನಗರ: ಚಾಮ ರಾಜನಗರ ಪ್ರದೇಶಕ್ಕೆ ಐದು ದಶಕದ ಬಳಿಕ ಪ್ರಧಾನಮಂತ್ರಿಯೊಬ್ಬರು ನಾಳೆ (ಮೇ 1) ಭೇಟಿ ನೀಡುವ ಮೂಲಕ ಇತಿಹಾಸ ನಿರ್ಮಿಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಗೆ ಮಂಗಳ ವಾರ ಬೆಳಗ್ಗೆ 11ಕ್ಕೆ ಭೇಟಿ ನೀಡಿ ವಿಧಾನ ಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿ ಯಾಗಲಿದ್ದಾರೆ. ಇದಕ್ಕಾಗಿ ಸಿದ್ಧತೆ ಪೂರ್ಣ ಗೊಂಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮೇ 12ರಂದು ನಡೆಯಲಿದೆ. ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಯನ್ನು…
ಕಾಂಗ್ರೆಸ್ಗೆ ಗುಡ್ಬೈ ಹೇಳಿದ ಸಿಎಂ ಆಪ್ತ
May 1, 2018ಚಾಮರಾಜನಗರ: ದೇವರಾಜ ಅರಸು ಟ್ರಕ್ ಟರ್ಮಿನಲ್ ಮಾಜಿ ಅಧ್ಯಕ್ಷ ಹಾಗೂ ಉಪ್ಪಾರ ಸಮಾ ಜದ ಮುಖಂಡ ಕೂಡ್ಲೂರು ಹನುಮಂತ ಶೆಟ್ಟಿ ಕಾಂಗ್ರೆಸ್ ತೊರೆದು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖ ದಲ್ಲಿ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಸ್ವತಃ ಹನುಮಂತಶೆಟ್ಟಿ ಈ ವಿಷಯ ತಿಳಿಸಿದರು. ನಾನು ಕಳೆದ 28 ವರ್ಷಗಳಿಂದ ಸಿದ್ದರಾಮಯ್ಯ ಅವರ ಜೊತೆ ರಾಜಕೀಯದಲ್ಲಿ ಇದ್ದವನು. 2013ರಲ್ಲಿ ನಡೆದ ಉಪ್ಪಾರ ಸಮಾವೇಶದ…
ದ್ವಿತೀಯ ಪಿಯುಸಿ: ಜಿಲ್ಲೆಗೆ 6ನೇ ಸ್ಥಾನ
May 1, 2018ಚಾಮರಾಜನಗರ: ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಸೋಮ ವಾರ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ ಶೇ.75.3ರಷ್ಟು ಫಲಿತಾಂಶ ಗಳಿಸುವ ಮೂಲಕ ರಾಜ್ಯದಲ್ಲಿ 6ನೇ ಸ್ಥಾನ ಗಳಿಸಿದೆ. ಜಿಲ್ಲೆಯ ಕಳೆದ ಬಾರಿ ಫಲಿತಾಂಶಕ್ಕಿಂತ ಈ ಬಾರಿ ಸಾಕಷ್ಟು ಸುಧಾರಿಸಿದೆ. ಕಳೆದ ವರ್ಷ ಶೇ.65.34 ರಷ್ಟು ಫಲಿತಾಂಶ ಗಳಿಸಿ 9ನೇ ಸ್ಥಾನದಲ್ಲಿ ಇದ್ದ ಜಿಲ್ಲೆ ಈ ಬಾರಿ ಶೇ.75.3 ರಷ್ಟು ಫಲಿತಾಂಶ ಪಡೆದು 6ನೇ ಸ್ಥಾನ ಗಳಿಸಿದೆ. ಈ ಮೂಲಕ 3 ಸ್ಥಾನ ಜಿಗಿತಗೊಂಡಿದೆ. ಜಿಲ್ಲೆಯಲ್ಲಿ ಹೊಸದಾಗಿ ಒಟ್ಟು…
ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಿ: ವಿಜಯೇಂದ್ರ
April 30, 2018ಸರಗೂರು: ಕಾಂಗ್ರೆಸ್ ನವರ ದುರಾಡಳಿತದಿಂದ ಬೇಸತ್ತಿರುವ ಜನರೇ ಈ ಬಾರಿ ಚುನಾವಣೆಯಲ್ಲಿ ತಕ್ಕ ಪಠ ಕಲಿಸಲಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಹೇಳಿದರು. ಪಟ್ಟಣದ ಅಖಿಲ ನಾಮಧಾರಿ ಗೌಡರ ಸಮುದಾಯ ಭವನದಲ್ಲಿ ಹಮ್ಮಿಕೊಂ ಡಿದ್ದ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದ ರಾಜು ಪರ ಮತ ಯಾಚಿಸಿ ಮಾತನಾ ಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ನಂಬರ್ ಒನ್ ಸರ್ಕಾರ ಎನ್ನು ತ್ತಾರೆ. ಆದರೆ ಮೈಸೂರು ಜಿಲ್ಲೆಯಲ್ಲೇ ರೈತರ ಸಾವು ನಂಬರ್…
ನೀರು ತುಂಬಿಸುವ ಯೋಜನೆ ವಿಸ್ತಾರಗೊಳ್ಳಲು ಬಿಎಸ್ವೈ ಸಿಎಂ ಮಾಡಿ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಮನವಿ
April 30, 2018ಚಾಮರಾಜನಗರ/ಗುಂಡ್ಲಪೇಟೆ: ಈ ಭಾಗದ 20 ಕೆರೆಗಳಿಗೆ ನೀರು ತುಂಬಿಸಿದ ರೂವಾರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ತುಂಬಿಸಿ ರೈತರು ಸಮೃದ್ಧಿಯಾಗಿ ನೆಮ್ಮದಿ ಜೀವನ ನಡೆಸಲು ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಮನವಿ ಮಾಡಿದರು. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹರವೆ, ಅರಳಿಕಟ್ಟೆ, ಮಲೆಯೂರು, ತೆರಕಣಾಂಬಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರೋಡ್ ಶೋ ಹಾಗೂ ಪಾದಯಾತ್ರೆ ಮೂಲಕ ಭಾನುವಾರ ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನ್…
ಪುಟ್ಟರಂಗಶೆಟ್ಟಿ ಪರ ಸಂಸದ ಧ್ರುವನಾರಾಯಣ್ ಮತ ಯಾಚನೆ
April 30, 2018ಚಾಮರಾಜನಗರ: ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಾಶಕ ಸಿ.ಪುಟ್ಟರಂಗಶೆಟ್ಟಿ ಪರವಾಗಿ ಸಂಸದ ಆರ್.ಧ್ರುವನಾರಾಯಣ್ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಭಾನುವಾರ ಮತ ಯಾಚಿಸಿದರು. ತಾಲೂಕಿನ ಮಂಗಲದಲ್ಲಿ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ಜತೆಗೂಡಿ ಧ್ರುವನಾರಾಯಣ್ ಮನೆ ಮನೆಗೆ ತೆರಳಿ ಕರಪತ್ರ ನೀಡಿ ಮತ ಯಾಚಿಸಿದರು. ನಂತರ ಹರದನಹಳ್ಳಿ, ವೆಂಕಟಯ್ಯನಛತ್ರ, ಕೋಡಿಉಗನೆ, ಬಿಸಿಲವಾಡಿ, ಕೋಳಿಪಾಳ್ಯ, ಚಿಕ್ಕಹೊಳೆ ಚೆಕ್ಪೋಸ್ಟ್, ಸಿದ್ದಯ್ಯನಪುರ, ದೊಡ್ಡಮೋಳೆ, ಚಂದಕವಾಡಿ, ಹೆಬ್ಬಸೂರು, ನಾಗವಳ್ಳಿ, ಜ್ಯೋತಿಗೌಡನಪುರ, ಕಾಗಲವಾಡಿ, ಆಲೂರು ಮತ್ತು ದೊಡ್ಡರಾಯಪೇಟೆ ಗ್ರಾಮಗಳಲ್ಲಿ ಧ್ರುವನಾರಾಯಣ್ ಮನೆ ಮನೆಗೆ ತೆರಳಿ ಕಾಂಗ್ರೆಸ್…
ಮತಬೇಟೆಗೆ ಸಾಮಾಜಿಕ ಜಾಲತಾಣಗಳ ಮೊರೆ ಹೋದ ಅಭ್ಯರ್ಥಿಗಳ ಬೆಂಬಲಿಗರು
April 27, 2018ಚಾಮರಾಜನಗರ: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಇನ್ನು ಕೇವಲ 15 ದಿನ ಬಾಕಿ ಇದೆ. ಜಿಲ್ಲೆಯ ಎಲ್ಲಾ 4 ವಿಧಾನಸಭಾ ಕ್ಷೇತ್ರಗಳ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿ ಗಳು ಹಾಗೂ ರಾಜಕೀಯ ಮುಖಂಡರು ಉರಿ ಬಿಸಿಲನ್ನು ಲೆಕ್ಕಿಸದೇ ಮನೆ ಮನೆಗೆ ಭೇಟಿ ನೀಡಿ ಪ್ರಚಾರದಲ್ಲಿ ನಿರತರಾಗಿ ದ್ದಾರೆ. ಇದಲ್ಲದೇ ಮತಬೇಟೆಗೆ ಅಭ್ಯರ್ಥಿ ಗಳ ಬೆಂಬಲಿಗರು ಹಾಗೂ ರಾಜಕೀಯ ಮುಖಂಡರು ಸಾಮಾಜಿಕ ಜಾಲ ತಾಣಗಳ ಮೊರೆ ಹೋಗಿದ್ದಾರೆ. ಕೆಲವು ಅಭ್ಯರ್ಥಿಗಳ ಬೆಂಬಲಿಗರು ತಮಗೆ ಮತ ನೀಡುವಂತೆ ಫೇಸ್ಬುಕ್, ವಾಟ್ಸ್ಆಪ್…
ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018: ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೀಕ್ಷಕರ ಭೇಟಿಗೆ ಅವಕಾಶ
April 27, 2018ಚಾಮರಾಜನಗರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನೇಮಕವಾಗಿರುವ ಚುನಾವಣಾ ಸಾಮಾನ್ಯ ವೀಕ್ಷಕರನ್ನು ಸಾರ್ವಜನಿಕರು ಭೇಟಿ ಮಾಡಲು ಅವಕಾಶವಿದ್ದು ಭೇಟಿಯ ಸ್ಥಳ ಹಾಗೂ ಸಮಯವನ್ನು ನಿಗದಿ ಮಾಡಲಾಗಿದೆ. ಹನೂರು ವಿಧಾನಸಭಾ ಕ್ಷೇತ್ರದ ವೀಕ್ಷಕ ವಜೀರ್ ಸಿಂಗ್ ಗೋಯಟ್ ಅವರನ್ನು ಕೊಳ್ಳೇಗಾಲ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಬಹುದು. ಇವರ ಮೊಬೈಲ್ ಸಂಖ್ಯೆ 9480580400 ಆಗಿರುತ್ತದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ…
ನಾಳೆ ಜಿಲ್ಲೆಯಲ್ಲಿ ವಿಜಯೇಂದ್ರ ಪ್ರಚಾರ
April 27, 2018ಮೈಸೂರು: ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜೇಂದ್ರ ಯಡಿಯೂರಪ್ಪ ಅವರು ಶನಿವಾರ ಚಾಮರಾಜನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಅವರು ಹನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ, 11.30ಕ್ಕೆ ಕೊಳ್ಳೇಗಾಲ ಕ್ಷೇತ್ರದ ಅಭ್ಯರ್ಥಿ ಮಾಜಿ ಶಾಸಕ ಜೆಡಿಎಸ್ ನಂಜುಂ ಡಪ್ರಸಾದ್ ಮತ್ತು ಮಧ್ಯಾಹ್ನ 3 ಗಂಟೆಗೆ ವಿಧಾನಪರಿಷತ್ ಮಾಜಿ ಸದಸ್ಯ ಚಾಮ ರಾಜನಗರ ಕ್ಷೇತ್ರದ ಅಭ್ಯರ್ಥಿ ಪ್ರೊ.ಮಲ್ಲಿಕಾರ್ಜುನಪ್ಪ ಪರ ಪ್ರಚಾರ ನಡೆಸಲಿದ್ದಾರೆ.