Tag: Chamarajanagar

ಗ್ರಾಮಗಳಲ್ಲಿ ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಮತ ಬೇಟೆ
ಚಾಮರಾಜನಗರ

ಗ್ರಾಮಗಳಲ್ಲಿ ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಮತ ಬೇಟೆ

April 26, 2018

ಚಾಮರಾಜನಗರ: ವಿಧಾನಸಭಾ ಕ್ಷೇತ್ರದ ಚಂದಕವಾಡಿ ಹಾಗೂ ಹೆಬ್ಬಸೂರು ಗ್ರಾಪಂ ವ್ಯಾಪ್ತಿಗಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ಬಿರುಸಿನ ಮತಯಾಚಿಸಿದರು. ಮನೆ ಮನೆಗೆ ತೆರಳಿ ಮತ ಯಾಚನೆ ಮಾಡಲು ಹೋದ ಸಂದರ್ಭದಲ್ಲಿ ಹಾರ ತುರಾಯಿಗಳು, ಬೆಲ್ಲದಾರತಿ ಮಾಡಿ ಅದ್ದೂರಿ ಸ್ವಾಗತ ಕೋರಿ ನಾವು ಈ ಬಾರಿಯೂ ನಿಮ್ಮ ಜಯಗಳಿಸಲು ಶ್ರಮಿಸುತ್ತೇವೆಂದು ಭರವಸೆ ನೀಡುವ ದೃಶ್ಯಗಳು ಸರ್ವೇ ಸಾಮಾನ್ಯ ವಾಗಿ ಕಾಣಬರುತ್ತಿದ್ದವು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ಮೂರನೇ ಬಾರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು, ಕಳೆದ ಎರಡು…

ಚಾಮರಾಜನಗರದಲ್ಲಿ ಬಿಜೆಪಿಯ ಪ್ರೊ.ಕೆಆರ್‍ಎಂ ಮತಯಾಚನೆ
ಚಾಮರಾಜನಗರ

ಚಾಮರಾಜನಗರದಲ್ಲಿ ಬಿಜೆಪಿಯ ಪ್ರೊ.ಕೆಆರ್‍ಎಂ ಮತಯಾಚನೆ

April 26, 2018

ಚಾಮರಾಜನಗರ: ಬಿಜೆಪಿ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರು ತಮ್ಮ ನೂರಾರು ಬೆಂಗಲಿಗರೊಂದಿಗೆ ಬುಧವಾರ ಚಾಮರಾಜನಗರ ಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು. ಬೆಳಿಗ್ಗೆ 8 ಘಂಟೆಗೆ ನಗರದ ಚಾಮರಾಜೇ ಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಪ್ರಚಾರ ಅರಂಭಿಸಿದರು. ನಗರದ ಚಿಕ್ಕಂಗಡಿ ಬೀದಿ, ಬಣಜಿಗರ ಬೀದಿ, ಸಂತೇ ಮರಹಳ್ಳಿ ವೃತ್ತ, ಕೆಳಗಡೆ ನಾಯಕರ ಬೀದಿ, ಉಪ್ಪಾರರ ಬೀದಿ, ಬೆಸ್ತರ ಬೀದಿ, ಆದಿಶಕ್ತಿ ದೇವಸ್ಥಾನದ ಬೀದಿ, ಪೋಸ್ಟ್ ಆಫೀಸ್ ರಸ್ತೆ, ರೈಲ್ವೆ ಬಡಾವಣೆಯ ನಾಯಕರ ಬೀದಿ ಸೇರಿದಂತೆ ನಗರದ ವಿವಿಧೆಡೆ…

ಜಿಲ್ಲೆಯಲ್ಲಿ 4 ಅಭ್ಯರ್ಥಿಗಳ ನಾಮಪತ್ರ ತಿರಸ್ಕøತ
ಚಾಮರಾಜನಗರ

ಜಿಲ್ಲೆಯಲ್ಲಿ 4 ಅಭ್ಯರ್ಥಿಗಳ ನಾಮಪತ್ರ ತಿರಸ್ಕøತ

April 26, 2018

ಚಾಮರಾಜನಗರ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಿದ್ದ 53 ಅಭ್ಯರ್ಥಿಗಳ ಪೈಕಿ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತ ಗೊಂಡಿದ್ದು, ಉಳಿದ 49 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕೃತಗೊಂಡಿವೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಪಕ್ಷೇತರ ಅಭ್ಯರ್ಥಿಯಾಗಿ ಹೆಚ್.ಎಂ.ಮಾದೇಶ್ ಎಂಬುವರು ಸಲ್ಲಿಸಿದ್ದ ನಾಮಪತ್ರ ತಿರಸ್ಕøತಗೊಂಡಿದೆ. ಉಳಿದಂತೆ 15 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಪಕ್ಷೇತರ ಅಭ್ಯರ್ಥಿಯಾಗಿ ಬಿ.ನಿಂಗರಾಜು ಎಂಬುವರು…

ಮೊಪೆಡ್‍ಗೆ ಗೂಡ್ಸ್ ಆಟೋ ಡಿಕ್ಕಿ: ಸವಾರ ಸಾವು
ಚಾಮರಾಜನಗರ

ಮೊಪೆಡ್‍ಗೆ ಗೂಡ್ಸ್ ಆಟೋ ಡಿಕ್ಕಿ: ಸವಾರ ಸಾವು

April 26, 2018

ಚಾಮರಾಜನಗರ, ಏ.26(ಎಸ್‍ಎಸ್)- ಮೊಪೆಡ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೊಪೆಡ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಮಚವಾಡಿ ಗ್ರಾಮದ ಬಳಿ ಸಂಭವಿಸಿದೆ. ಗ್ರಾಮದ ಅಂಗಡಿ ವ್ಯಾಪಾರಿ ಮಹದೇವನಾಯ್ಕ(60) ಸಾವನ್ನಪ್ಪಿದ ಸವಾರ. ಮಹದೇವನಾಯ್ಕ ಚಾಮರಾಜನಗರದಿಂದ ಅಂಗಡಿಗೆ ಬೇಕಾದ ಸಾಮಾನುಗಳನ್ನು ಖರೀದಿಸಿ ತನ್ನ ಮೊಪೆಡ್‍ನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದನ್ನೆನ್ನಲಾಗಿದೆ. ಈ ವೇಳೆ ಎದುರಿನಿಂದ ಬಂದ ಟಾಟಾ ಏಸ್ ಗೂಡ್ಸ್ ಆಟೋ ಅಮಚವಾಡಿ ಗ್ರಾಮದ ಬಳಿ ಡಿಕ್ಕಿ ಹೊಡೆಯಿತು. ಇದರಿಂದ ತೀವ್ರವಾಗಿ ರಕ್ತಸ್ರಾವಗೊಂಡು ಗಾಯಗೊಂಡಿದ್ದ ಮಹದೇವನಾಯ್ಕನನ್ನು ಚಾ.ನಗರದ ಜಿಲ್ಲಾ…

ಲಾರಿ-ಬೈಕ್ ನಡುವೆ ಡಿಕ್ಕಿ; ಯುವಕರ ಸಾವು
ಚಾಮರಾಜನಗರ

ಲಾರಿ-ಬೈಕ್ ನಡುವೆ ಡಿಕ್ಕಿ; ಯುವಕರ ಸಾವು

April 26, 2018

ಚಾಮರಾಜನಗರ: ಜಲ್ಲಿಕಲ್ಲು ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‍ನಲ್ಲಿದ್ದ ಇಬ್ಬರು ಯುವಕರು ಸಾವ ನಪ್ಪಿರುವ ಘಟನೆ ತಾಲೂಕಿನ ವೆಂಕ ಟಯ್ಯಛತ್ರ ಗ್ರಾಮದ ಗ್ರಾಪಂ ಮುಂಭಾಗ ಬುಧವಾರ ನಡೆದಿದೆ. ವೆಂಕಟಯ್ಯನಛತ್ರ ಗ್ರಾಮದ ವೆಂಕಟ ರಾಜು ಅವರ ಮಗ ಶಿವಮೂರ್ತಿ(19) ಅದೇ ಗ್ರಾಮದ ಚಿಕ್ಕೂಸಶೆಟ್ಟಿ ಎಂಬುವರು ಮಾಗ ಶಿವು (20) ಸಾವನ್ನಪ್ಪಿದ ಯುವಕರು. ಘಟನೆಯ ವಿವರ: ವೆಂಕಟಯ್ಯನಛತ್ರ ಗ್ರಾಮದ ಶಿವಮೂರ್ತಿ ಮತ್ತು ಶಿವು ಒಂದೇ ಬೈಕ್‍ನಲ್ಲಿ ವೆಂಕಟಯ್ಯನಛತ್ರ ಗ್ರಾಮದ ಗೇಟ್‍ನಿಂದ ವೆಂಕಟಯ್ಯನಛತ್ರಕ್ಕೆ ತೆರಳುತ್ತಿದ್ದರು. ಈ…

ಕೊಳ್ಳೇಗಾಲ ಕಾಂಗ್ರೆಸ್, ಚಾ.ನಗರ ಬಿಜೆಪಿ ಭಿನ್ನಮತ ಶಮನ
ಚಾಮರಾಜನಗರ

ಕೊಳ್ಳೇಗಾಲ ಕಾಂಗ್ರೆಸ್, ಚಾ.ನಗರ ಬಿಜೆಪಿ ಭಿನ್ನಮತ ಶಮನ

April 25, 2018

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ಚಾಮರಾಜನಗರ ಕ್ಷೇತ್ರದ ಬಿಜೆಪಿಯಲ್ಲಿ ಕಾಣ ಸಿಕೊಂಡಿದ್ದ ಭಿನ್ನಮತ ಕೊನೆಗೂ ಶಮನಗೊಂಡಿದೆ. ಕೊಳ್ಳೇಗಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಪಕ್ಷದ ಹೈಕಮಾಂಡ್ ಕಣಕ್ಕೆ ಇಳಿಸುತ್ತಿದ್ದಂತೆಯೇ ಟಿಕೆಟ್ ಪ್ರಬಲ ಆಕಾಂಕ್ಷಿಗಳಾಗಿದ್ದ ಮಾಜಿ ಶಾಸಕ ಎಸ್.ಬಾಲರಾಜು, ಮುಖಂಡರಾದ ಕಿನಕಹಳ್ಳಿ ರಾಚಯ್ಯ ಹಾಗೂ ಡಿ.ಎನ್.ನಟರಾಜು ಮುನಿಸಿಕೊಂಡಿದ್ದರು. ಈಗ ಇವರೆಲ್ಲರ ಮುನಿಸನ್ನು ಹೊಗಲಾಡಿಸಲಾಗಿದೆ. ಈ ಮೂಲಕ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕಾಂಗ್ರೆಸ್ ಬಹಿರಂಗವಾಗಿ ತೋರ್ಪಡಿಸಿದೆ. ಅದೇ ರೀತಿ ಚಾಮರಾಜನಗರ ಕ್ಷೇತ್ರದ…

ಬಿಎಸ್‍ಪಿ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಸೇರ್ಪಡೆ
ಚಾಮರಾಜನಗರ

ಬಿಎಸ್‍ಪಿ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಸೇರ್ಪಡೆ

April 25, 2018

ಚಾಮರಾಜನಗರ: ಬಹುಜನ ಸಮಾಜ ಪಾರ್ಟಿ(ಬಿಎಸ್‍ಪಿ) ರಾಜ್ಯ ಕಾರ್ಯದರ್ಶಿ ಹಾಗೂ ಚಾಮರಾಜನಗರ ನಗರ ಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಬಿಎಸ್‍ಪಿ ತೊರೆದು ಕಾಂಗ್ರೆಸ್ ಸೇರಿದರು. ಸಂಸದ ಆರ್.ಧ್ರುವನಾರಾಯಣ್ ಅವರು ನಂಜುಂಡಸ್ವಾಮಿಗೆ ಪಕ್ಷದ ಶಲ್ಯ ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧ್ರುವನಾರಾಯಣ್, ಬಿಎಸ್‍ಪಿ ಪಕ್ಷದಲ್ಲಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಆರ್.ಪಿ.ನಂಜುಂಡಸ್ವಾಮಿ ಇಂದು ಆ ಪಕ್ಷ ತೊರೆದು ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದಾರೆ ಎಂದರು. ಆರ್.ಪಿ.ನಂಜುಂಡಸ್ವಾಮಿ ಮಾತನಾಡಿ, ಕಳೆದ 18 ವರ್ಷಗಳಿಂದ ನಾನು ಬಿಎಸ್‍ಪಿ ಪಕ್ಷದ…

ಬಿರುಗಾಳಿ ಮಳೆಗೆ ತೋಟದ ಬೆಳೆ ಮಣ್ಣು ಪಾಲು
ಚಾಮರಾಜನಗರ

ಬಿರುಗಾಳಿ ಮಳೆಗೆ ತೋಟದ ಬೆಳೆ ಮಣ್ಣು ಪಾಲು

April 25, 2018

ಚಾಮರಾಜನಗರ: ಕಳೆದ ರಾತ್ರಿ ಬೀಸಿದ ಭಾರೀ ಬಿರುಗಾಳಿ-ಮಳೆಗೆ ತಾಲೂಕಿನ ಆಲೂರು ಗ್ರಾಮದ ತೋಟದ ಬೆಳೆಗಳು ಮಣ್ಣು ಪಾಲಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಗ್ರಾಮದಲ್ಲಿ ತೆಂಗು, ಅಡಕೆ, ಮಾವಿನ ಮರಗಳು, ಹಲಸಿನ ಮರಗಳು ಹಾಗೂ ನೂರಾರು ಬಾಳೆ ಗಿಡಗಳು ನೆಲ ಕಚ್ಚಿವೆ. ಇನ್ನೂರಕ್ಕೂ ಹೆಚ್ಚು ತೆಂಗಿನ ಮರ. ಐದನೂರಕ್ಕೂ ಹೆಚ್ಚಿನ ಅಡಕೆ ಮರಗಳು, ನೂರಕ್ಕೂ ಹೆಚ್ಚು ಹಲಸು ಮತ್ತು ಮಾವಿನ ಮರಗಳು ಭಾರೀ ಬಿರುಗಾಳಿಗೆ ಸಿಲುಕಿ ಮುರಿದು ಬಿದ್ದಿವೆ. ಲಕ್ಷಾಂತರ ಬೆಲೆ ಬಾಳುವ ಮಾವಿನ…

ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಬಿರುಸಿನ ಮಾತಯಾಚನೆ
ಚಾಮರಾಜನಗರ

ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಬಿರುಸಿನ ಮಾತಯಾಚನೆ

April 24, 2018

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟ ಇಂದು ವೆಂಕಟಯ್ಯನ ಛತ್ರ ಹಾಗೂ ಯರಗನಹಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾರ್ಯಕರ್ತರು ಹಾಗೂ ಮುಖಂಡರೂಂದಿಗೆ ಮನೆ ಮನೆಗೆ ತೆರಳಿ ಬಿರುಸಿನ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಕೃಗೊಂಡ ಅಭಿವೃದ್ಧಿ ಕೆಲಸಗಳು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಇಂದು ಮತಯಾಚಿಸುತ್ತಿದ್ದೇನೆ. ಜಿಲ್ಲೆಯ ಅಭಿವೃಧ್ದಿಗೆ ಸಾಕಷ್ಟು ಅನುದಾನ ತಂದು ಕ್ಷೇತ್ರದ ಸರ್ವತೋಮುಖ…

1 72 73 74
Translate »