ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಸ್ಥಾಪಿಸ ಲಾಗುವ ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಚೇತನರಿಗೆ ಮತದಾನ ಮಾಡಲು ಅನುಕೂಲ ವಾಗುವಂತೆ ಸಮರ್ಪಕ ಮೂಲಸೌಕರ್ಯ ಒದಗಿಸುವಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಆಕ್ಸೆಸಿಬಿಲಿಟಿ ವೀಕ್ಷಕ ಟಿ.ಕೆ.ಅನಿಲ್ ಕುಮಾರ್ ಸೂಚಿಸಿದರು. ನಗರದ ಜಿಪಂ ಮುಖ್ಯ ಕಾರ್ಯ ನಿರ್ವಾ ಹಕ ಅಧಿಕಾರಿಗಳ ಸಭಾಂಗಣದಲ್ಲಿಂದು ವಿಶೇಷಚೇತನರಿಗೆ ಮತಗಟ್ಟೆಗಳಲ್ಲಿ ಕಲ್ಪಿಸ ಲಾಗುತ್ತಿರುವ ಸೌಕರ್ಯಗಳು ಹಾಗೂ ಮತದಾನ ಸಿದ್ಧತೆ ಸಂಬಂಧ ಸಭೆ ನಡೆಸಿ ಅವರು ಮಾತನಾಡಿದರು. ಮತಗಟ್ಟೆಗಳಲ್ಲಿ ರ್ಯಾಂಪ್, ವಿದ್ಯುತ್ ಸಂಪರ್ಕ, ನೀರು, ಶೌಚಾಲಯ…
ಸಿದ್ಧಗಂಗಾ ಶ್ರೀಗಳ ಜಯಂತಿ: 54 ಮಂದಿ ಸ್ವಯಂ ಪ್ರೇರಿತ ರಕ್ತದಾನ
April 2, 2019ಕೊಳ್ಳೇಗಾಲ: ಸಿದ್ಧಗಂಗಾ ಶ್ರೀಗಳ ಜಯಂತಿ ಅಂಗವಾಗಿ ಜೆಎಸ್ಬಿ ಪ್ರತಿಷ್ಠಾನ, ರೆಡ್ಕ್ರಾಸ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 54ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು. ಕಾರ್ಯಕ್ರಮಕ್ಕೆ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎಸ್.ಜೆ.ಕೃಷ್ಣ ಚಾಲನೆ ನೀಡಿ ಮಾತನಾಡಿ, ಸಿದ್ಧಗಂಗಾ ಶ್ರೀಗಳು ಬದುಕಿನುದ್ದಕ್ಕೂ ಸಮಾಜದ ಉದ್ಧಾರಕ್ಕೆ ಶ್ರಮಿಸಿದವರು. ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆ ತಂದವರು ಎಂದು ಗುಣಗಾನ ಮಾಡಿದರು. ಸಿದ್ದಲಿಂಗೇಶ್ವರ ಮೆಡಿಕಲ್ ಮಾಲೀಕ ಮಹದೇವಸ್ವಾಮಿ ಮತ್ತು ಪತ್ನಿ ಶಿಲ್ಪ ರಕ್ತದಾನ ಮಾಡಿದರು. ಅಚ್ಚಗಾಳ ವಸತಿ…
ಕೊನೆ ಉಸಿರಿರುವ ತನಕ ತತ್ವ, ಸಿದ್ಧಾಂತದ ರಾಜಕೀಯ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ಚಿತ್ರನಟ ಉಪೇಂದ್ರ
April 2, 2019ಚಾಮರಾಜನಗರ: ನನ್ನ ಕೊನೆ ಉಸಿರಿರುವ ತನಕ ನಾನು ನಂಬಿದ ತತ್ವ-ಸಿದ್ಧಾಂತದಡಿಯಲ್ಲಿ ರಾಜಕೀಯ ಮಾಡುತ್ತೇನೆ ಎಂದು ಉತ್ತಮ ಪ್ರಜಾ ಕೀಯ ಪಕ್ಷದ ಸಂಸ್ಥಾಪಕ ಹಾಗೂ ಚಿತ್ರನಟ ಉಪೇಂದ್ರ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಮಾಜ ದಲ್ಲಿ ಬದಲಾವಣೆ ತರುವ ಉದ್ದೇಶದಿಂದ ಉತ್ತಮ ಪ್ರಜಾಕೀಯ ಪಕ್ಷ ಸ್ಥಾಪಿಸಿದ್ದೇನೆÉ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಹೃದಯವಂತರಿಗೆ ಟಿಕೆಟ್ ನೀಡಿದ್ದೇವೆ. ನಾಗರಿಕರಿಂದ ಉತ್ತಮ ಪ್ರತಿ ಕ್ರಿಯೆ ವ್ಯಕ್ತವಾಗಿದ್ದು, ಯುವಕರ ಬೆಂಬಲ ಚೆನ್ನಾಗಿದೆ ಎಂದರು….
ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
April 2, 2019ಹನೂರು: ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್ಗಳಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯ ಗೊಂಡಿರುವ ಘಟನೆ ಮಲೈಮಹ ದೇಶ್ವರ ಬೆಟ್ಟದ ಹಾಲಹಳ್ಳದ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ 9 ಗಂಟೆ ಸಮಯ ದಲ್ಲಿ ಹನೂರಿನಿಂದ ಮಲೈಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮುತ್ತುಕುಮಾರ್ ಖಾಸಗಿ ಬಸ್ ಹಾಗೂ ಮಲೈ ಮಹದೇಶ್ವರ ಬೆಟ್ಟದಿಂದ ಹನೂರು ಕಡೆಗೆ ಬರುತ್ತಿದ್ದ ಉದಯರಂಗ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ವೇಳೆ ಬಸ್ನಲ್ಲಿ ಗಾಯಗೊಂಡ 30ಕ್ಕೂ ಹೆಚ್ಚು ಪ್ರಯಾಣಿಕರನ್ನು…
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಉಮೇದುವಾರಿಕೆ ಸಲ್ಲಿಕೆ
March 25, 2019ಮನೆ ದೇವರು ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಿಗೆ ಭೇಟಿ ಬೃಹತ್ ಮೆರವಣಿಗೆ ಜೊತೆ ಜೊತೆಯಲ್ಲಿ ಹಾರಾಡಿದ ಕಾಂಗ್ರೆಸ್-ಜೆಡಿಎಸ್ ಬಾವುಟ ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಸಂಸದ ಆರ್.ಧ್ರುವನಾರಾಯಣ್ ಸೋಮವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಶಾಸಕ ರಾದ ಆರ್.ನರೇಂದ್ರ, ಯತೀಂದ್ರ ಸಿದ್ದರಾಮಯ್ಯ ಹಾಗೂ ಅನಿಲ್ ಚಿಕ್ಕಮಾದು ಅವರೊಂದಿಗೆ ಆಗಮಿಸಿದ ಧ್ರುವನಾರಾಯಣ್ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಬಿ.ಬಿ….
ಇಂದು ವಿ.ಶ್ರೀನಿವಾಸ್ ಪ್ರಸಾದ್ ಉಮೇದುವಾರಿಕೆ ಸಲ್ಲಿಕೆ
March 25, 2019ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ನಾಳೆ(ಮಾ.26) ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ತಿಳಿಸಿದರು. ನಗರದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಾಹ್ನ 12.15ರಿಂದ 1 ಗಂಟೆಯೊಳಗೆ ಪ್ರಸಾದ್ ಅವರು ನಗರದ ಜಿಲ್ಲಾಡಳಿತ ಭವನದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು. ನಾಮಪತ್ರ ಸಲ್ಲಿಸುವ ಮುನ್ನ ಬೆಳಿಗ್ಗೆ 11 ಗಂಟೆಗೆ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು. ನಂತರ ಪಕ್ಷದ ಮುಖಂಡರು, ಕಾರ್ಯ ಕರ್ತರು, ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾ…
ಜಿಂಕೆ ಮಾಂಸ ಪಾಲು ಹಾಕುತ್ತಿದ್ದವನ ಬಂಧನ
March 25, 2019ಹನೂರು: ಜಿಂಕೆ ಮಾಂಸ ಪಾಲು ಹಾಕುತ್ತಿದ್ದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಬಂಧಿ ಸಿದ್ದಾರೆ. ಮಲೈ ಮಹದೇ ಶ್ವರ ವನ್ಯಜೀವಿ ವಲಯದ ಬಫರ್ ರೇಂಜ್ನ ಎಲ್ಲೇ ಮಾಳ ಗ್ರಾಮದ ಮುಕುಂದ ಬಂಧಿತ ಆರೋಪಿ. ಆತ ನಿಂದ ಜಿಂಕೆ ಮಾಂಸ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ಬಸಿಲಿನ ಬೇಗೆ ತಾಳ ಲಾರದೇ ಅರಣ್ಯದಿಂದ ಜಿಂಕೆಯೊಂದು ನೀರನ್ನು ಅರಸಿ ಜಮೀನೊಂದರ ಬಳಿ ಬಂದಿದೆ. ಈ ವೇಳೆ ಬೀದಿ ನಾಯಿಗಳ ಹಿಂಡು ಜಿಂಕೆ ಮೇಲೆ ದಾಳಿ ಮಾಡಿ ಕೊಂದಿವೆ. ಇದನ್ನು…
ಚಿನ್ನ ಹರಾಜು ಹಾಕದಂತೆ ರೈತರ ಮನವಿ
March 25, 2019ಚಾಮರಾಜನಗರ: ತಾಲೂಕಿನ ಕಾಗಲವಾಡಿ ಇಂಡಿಯನ್ ಓವರ್ಸೀಸ್ ಬ್ಯಾಂಕ್ನಲ್ಲಿ ರೈತರು ಗಿರಿವಿ ಇಟ್ಟಿರುವ ಚಿನ್ನವನ್ನು ಹರಾಜು ಹಾಕ ಬಾರದು ಹಾಗೂ ಸುಸ್ತಿ ಬಡ್ಡಿ ಮನ್ನಾ ಮಾಡಿ, ಅಸಲನ್ನು ನೀಡಿ ಚಿನ್ನ ಬಿಡಿಸಿ ಕೊಳ್ಳಲು ಕಾಲಾವಕಾಶ ನೀಡುವಂತೆ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ಆಶ್ರಯದಲ್ಲಿ ರೈತರು ಬ್ಯಾಂಕ್ನ ಮೈಸೂರು ಶಾಖೆ ಮುಖ್ಯ ವ್ಯವಸ್ಥಾಪಕÀ ಉಮಾ ಮಹೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಕಳೆದ ಐದಾರು ವರ್ಷಗಳ ಹಿಂದೆ ರೈತರು ಬ್ಯಾಂಕ್ನಲ್ಲಿ ಚಿನ್ನ ಗಿರಿವಿ ಇಟ್ಟಿದ್ದು, ಅದು ಸುಸ್ತಿಯಾಗಿದೆ. ಸಕಾಲದಲ್ಲಿ ಮಳೆಯಾ…
ಕ್ಷಯರೋಗ ನಿರ್ಮೂಲನೆಗೆ ಸರ್ಕಾರ ಕ್ರಮ
March 25, 2019ಕಾಮಗೆರೆ: ದೇಶದಲ್ಲಿ ಕ್ಷಯರೋಗ ನಿರ್ಮೂಲನೆಗೆ ಸರ್ಕಾರ ಕ್ರಮ ತೆಗೆದುಕೊಂಡಿದ್ದು, ಈ ರೋಗ ನಿರ್ಮೂಲನೆಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕೈ ಜೋಡಿಸುವುದು ಅವಶ್ಯಕ ಎಂದು ತಾಲೂಕು ವೈದ್ಯಾಧಿ ಕಾರಿ ಗೋಪಾಲ್ ತಿಳಿಸಿದರು. ಕಾಮಗೆರೆ ಹೋಲಿ ಕ್ರಾಸ್ ಸ್ಕೂಲ್ ಆಫ್ ನರ್ಸಿಂಗ್ ಶಾಲೆ ಶಿಕ್ಷಕರು, ವಿದ್ಯಾರ್ಥಿನಿ ಯರು ಹೋಲಿ ಕ್ರಾಸ್ ಆಸ್ಪತ್ರೆ ಒಳಾಂ ಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಕ್ಷಯ ರೋಗ ದಿನಾಚರಣೆಯಲ್ಲಿ ಅವರು ಮಾತ ನಾಡಿದರು. ಕ್ಷಯರೋಗ ಸಾಂಕ್ರಾಮಿಕ ರೋಗವಾಗಿದ್ದು, ಇದು ಕಲುಷಿತ ಗಾಳಿಯಿಂದ ಬರುತ್ತದೆ. ಕಾಯಿಲೆ ಬಂದ…
ರಾಜ್ಯವನ್ನು ಕಾಂಗ್ರೆಸ್ ಮುಕ್ತ ಮಾಡಲು ದೇವೇಗೌಡರೇ ಸಾಕು
March 23, 2019ಗುಂಡ್ಲುಪೇಟೆ: ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವ ರಾಗಲೀ ಅಥವಾ ಭಾರತೀಯ ಜನತಾ ಪಾರ್ಟಿಯಾಗಲಿಬೇಕಾಗಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಒಬ್ಬರೇ ಸಾಕು ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು. ಪಟ್ಟಣದ ಸಿ.ಎಂ.ಎಸ್. ಕಲಾಮಂದಿರ ದಲ್ಲಿ ಬಿಜೆಪಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಇಂದು ಸ್ವತಂತ್ರವಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸುವ ಶಕ್ತಿ ಕಳೆದು ಕೊಂಡು ಅತ್ಯಂತ ದುರ್ಬಲ…