ಮೈಸೂರು: ಆಷಾಡ ಮಾಸದ ಕೊನೆ ಶುಕ್ರವಾರವಾದ ಇಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದಲ್ಲಿ ನಡೆದ ವಿಶೇಷ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡು ನಾಡದೇವಿ ದರ್ಶನ ಪಡೆದು ಸಂಭ್ರಮಿಸಿದರು. ಮೋಡ ಮುಸುಕಿದ ವಾತಾವರಣ, ಕೊರೆಯುವ ಚಳಿ ಹಾಗೂ ತುಂತುರು ಮಳೆಯ ನಡುವೆ ಮುಂಜಾನೆ 3 ಗಂಟೆಯಿಂದಲೇ ಭಕ್ತರು ದೇವಾಲಯದ ಮುಂದೆ ಸರದಿ ಸಾಲಿನಲ್ಲಿ ನಿಂತು ಆಷಾಡ ಮಾಸದ ಕೊನೆ ಶುಕ್ರವಾರ ಪೂಜಾ ಸಂಭ್ರಮವನ್ನು ಕಣ್ತುಂಬಿಕೊಂಡು ಹರ್ಷ ವ್ಯಕ್ತಪಡಿಸಿದರು. ಸರದಿ ಸಾಲಿನಲ್ಲಿದ್ದ ನೂರಾರು ಭಕ್ತರು ನಾಡದೇವಿಗೆ ಜೈಕಾರ ಹಾಕಿ,…
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಪ್ರಾರ್ಥಿಸಿ, ಚಾ.ಬೆಟ್ಟದಲ್ಲಿ ಬಿಜೆಪಿ ಯುವ ಮೋರ್ಚಾ ವಿಶೇಷ ಪೂಜೆ
August 11, 2018ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲೆಂದು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲೆಂದು ಪ್ರಾರ್ಥಿಸಿ ಇಂದು ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರು ತಮ್ಮ ಬೆಂಬಲಿಗರೊಂದಿಗೆ ಮೆಟ್ಟಿಲುಗಳ ಮೂಲಕ ಚಾಮುಂಡಿಬೆಟ್ಟ ಹತ್ತಿ ವಿಶೇಷ ಪೂಜೆ ಸಲ್ಲಿಸಿದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಯುವ ಮೋರ್ಚಾದ ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಇಂದು ಬೆಳಿಗ್ಗೆ ಪೂಜೆ ಸಲ್ಲಿಸಿ ವಿಜಯೇಂದ್ರ ಬೆಟ್ಟ ಹತ್ತಿದರು. ನಂತರ ದೇವಾಲಯಕ್ಕೆ ತೆರಳಿ…
ಆಷಾಢ ಶುಕ್ರವಾರಗಳಲ್ಲಿ ಚಾಮುಂಡಿಬೆಟ್ಟದಲ್ಲಿ ವಿವಿಐಪಿಗಳ ಹಾವಳಿ: ಭಕ್ತರ ಫಜೀತಿ
August 9, 2018ಮೈಸೂರು: ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಶುಕ್ರವಾರ ನಡೆಯುವ ಪೂಜಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಣ್ಯರು ಹಾಗೂ ಅಧಿಕಾರಿಗಳ ತಂಡ ಲಗ್ಗೆ ಇಡುವುದರಿಂದ ಲಕ್ಷಾಂತರ ಭಕ್ತರು ನೆಮ್ಮದಿಯಾಗಿ ದೇವರ ದರ್ಶನ ಪಡೆಯಲಾಗದೇ ಹೆಣಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ರಾಜ್ಯದ ವಿವಿಧೆಡೆ ಯಿಂದ ಲಕ್ಷಾಂತರ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಾರೆ. ಹಲವು ಭಕ್ತರು ಮುಂಜಾನೆಯೇ ಮೆಟ್ಟಿಲುಗಳ ಮೂಲಕ ಬೆಟ್ಟವೇರಿದರೆ, ಮತ್ತೆ ಹಲವರು ಗುರುವಾರ…
ಚಾಮುಂಡೇಶ್ವರಿ ದೇವಾಲಯದಲ್ಲಿ ಅಭಿಷೇಕ ಸೇವೆ ಶುಲ್ಕ 550 ರೂ.ಗೆ ಏರಿಕೆ
August 9, 2018ಮೈಸೂರು: ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಿಗೆ ಅಭಿಷೇಕ ಸೇವೆ ಶುಲ್ಕ 300 ರೂ.ನಿಂದ 550ರೂ.ಗೆ ಹೆಚ್ಚಳ ಮಾಡಿದ್ದು, ಇಬ್ಬರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ದೇವಾಲಯ ಆಡಳಿತ ಮಂಡಳಿ ನಿರ್ಧರಿಸಿದೆ. ಚಾಮುಂಡಿ ಬೆಟ್ಟ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿತಾಣವೂ ಆಗಿದೆ. ಹಾಗಾಗಿ ಪ್ರತಿ ನಿತ್ಯ ಸಾವಿರಾರು ಮಂದಿ ಇಲ್ಲಿಗೆ ಆಗಮಿಸುತ್ತಾರೆ. ದೇವಿಗೆ ಅಭಿಷೇಕಕ್ಕೆ ಈ ಹಿಂದೆ ಇದ್ದ 300 ರೂ ಶುಲ್ಕ ವನ್ನು 550 ರೂ.ಗೆ ಕಳೆದ ಒಂದೂವರೆ ತಿಂಗಳ ಹಿಂದೆಯೇ ಹೆಚ್ಚಿಸಲಾಗಿದೆ. ಒಬ್ಬರಿಗೆ ಇದ್ದ ಪ್ರವೇಶವನ್ನು ಇಬ್ಬರಿಗೆ…
ತುಂತುರು ಮಳೆ ನಡುವೆ ಬೆಟ್ಟದ ತಾಯಿಯ ವೈಭವದ ವರ್ಧಂತಿ ಉತ್ಸವ
August 4, 2018ಮೈಸೂರು: ಮೋಡ ಕವಿದ ವಾತಾವರಣ, ಕೆಲ ಕ್ಷಣ ತುಂತುರು ಮಳೆ, ನಾನಾ ರೀತಿಯ ಪುಷ್ಪಗಳ ಸುವಾಸನೆ ಭಕ್ತಿ ಪರಾಕಾಷ್ಠತೆಗೆ ಸಾಕ್ಷಿಯಾಗಿದ್ದವು. ನೆರೆದವರು ಯಾವಾಗ ತಾಯಿ ಕಣ್ತುಂಬಿಕೊಳ್ಳುತ್ತೇವೋ ಎಂಬ ತವಕ, ನೂಕು ನುಗ್ಗಲು, ದೇವಿ ಸ್ಮರಣೆ ಇವೆಲ್ಲ ಕಂಡು ಬಂದಿದ್ದು ನಾಡದೇವಿಯ ನೆಲೆಯಾದ ಚಾಮುಂಡಿಬೆಟ್ಟದಲ್ಲಿ. ಪೂರ್ವ ನಿಗದಿಯಂತೆ ನಾಡದೇವಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ವಿರಾಜಮಾನಳಾಗಿದ್ದ ಬೆಟ್ಟದ ತಾಯಿಯನ್ನು ಅಪಾರ ಸಂಖ್ಯೆ ಭಕ್ತರು ಕಣ್ತುಂಬಿಕೊಂಡು, ಜೈಕಾರ ಕೂಗಿ ಸಂಭ್ರಮಿಸಿದರು. ಆಷಾಢ ಮಾಸದ…
ಚಾಮುಂಡಿಬೆಟ್ಟದ ಸರ್ಕಾರಿ ಶಾಲೆಯಲ್ಲಿ ಕಿಡಿಗೇಡಿಗಳಿಂದ ದಾಂಧಲೆ ಪೀಠೋಪಕರಣ ಧ್ವಂಸ, ಪುಸ್ತಕಗಳು ಚೆಲ್ಲಾಪಿಲ್ಲಿ
August 3, 2018ಮೈಸೂರು: ಚಾಮುಂಡಿ ಬೆಟ್ಟದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಂಚು ತೆಗೆದು ಒಳ ನುಸುಳಿರುವ ಕಿಡಿಗೇಡಿಗಳು, ಹೆಂಚು, ಟೇಬಲ್ ಹಾಗೂ ಪುಸ್ತಕಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಇಂದು ಬೆಳಿಗ್ಗೆ ಶಾಲೆಗೆ ಹೋದಾಗ ಕಿಡಿಗೇಡಿಗಳ ಕೃತ್ಯ ಶಿಕ್ಷಕರು ಹಾಗೂ ಮಕ್ಕಳಿಗೆ ತಿಳಿಯಿತು. ಶಾಲೆಯ ಛಾವಣೆ ಮಂಗಳೂರು ಹೆಂಚುಗಳನ್ನು ತೆಗೆದು, ಕೊಠಡಿಗಿಳಿದಿರುವ ಕಿಡಿಗೇಡಿಗಳು ಪುಸ್ತಕಗಳನೆಲ್ಲಾ ಚೆಲ್ಲಾಪಿಲ್ಲಿ ಮಾಡಿ ದಾಂಧಲೆ ನಡೆಸಿದ್ದಾರೆ. ಬೆಂಚು, ಟೇಬಲ್ಗಳನ್ನು ಜಖಂಗೊಳಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದಾವಿಸಿದ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ಮತ್ತು…
ಇಂದು ಸಂಜೆ 6 ಗಂಟೆ ನಂತರ ಚಾಮುಂಡಿಬೆಟ್ಟಕ್ಕೆ ಬಸ್ ಸಂಚಾರವಿಲ್ಲ
July 27, 2018ಮೈಸೂರು: ಚಂದ್ರಗ್ರಹಣದ ಹಿನ್ನೆಲೆ ಯಲ್ಲಿ 2ನೇ ಆಷಾಢ ಶುಕ್ರವಾರವಾದ ನಾಳೆ(ಜು.27) ಸಂಜೆ 6 ಗಂಟೆಯಿಂದ ಚಾಮುಂಡಿಬೆಟ್ಟಕ್ಕೆ ಮೈಸೂರಿನ ಲಲಿತ ಮಹಲ್ ಹೆಲಿಪ್ಯಾಡ್ನಿಂದ ಸಿಟಿ ಬಸ್ಗಳು ಸಂಚರಿಸುವುದಿಲ್ಲ ಎಂದು ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಪ್ರಸಾದ್ ಅವರು ತಿಳಿಸಿದ್ದಾರೆ. ಶುಕ್ರವಾರ ಮುಂಜಾನೆ 4ರಿಂದ ಸಂಜೆ 4 ಗಂಟೆವರೆಗೆ ಮಾತ್ರ ಕೆಎಸ್ಆರ್ಟಿಸಿ ಬಸ್ಸುಗಳು ಲಲಿತಮಹಲ್ ಹೆಲಿಪ್ಯಾಡ್ನಿಂದ ಭಕ್ತಾದಿಗಳನ್ನು ಚಾಮುಂಡಿಬೆಟ್ಟಕ್ಕೆ ಕರೆದೊಯ್ಯಲಿವೆ. ಆದ್ದರಿಂದ ಮುಂಜಾನೆ 4 ಗಂಟೆಗೆ ಮೊದಲು ಹಾಗೂ ಸಂಜೆ 6ರ ನಂತರ ಯಾರೂ ಚಾಮುಂಡಿಬೆಟ್ಟಕ್ಕೆ ಹೋಗುವ ಪ್ರಯತ್ನ ಮಾಡಬಾರ…
ಚಾಮುಂಡೇಶ್ವರಿ ದರ್ಶನ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಸಚಿವ ಸಹೋದ್ಯೋಗಿಗಳು
July 21, 2018ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ. ಹಾಗಾಗಿ ಅಪಾರ ಸಂಖ್ಯೆಯ ಭಕ್ತರು ನಾಡ ದೇವಿಯ ದರ್ಶನ ಪಡೆದು, ಪುನೀತರಾದರು. ಮುಂಜಾನೆ 3 ಗಂಟೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ಗಳು ಆರಂಭವಾದವು. ಪ್ರಧಾನ ಆಗಮಿಕ ಡಾ.ಎನ್.ಶಶಿಶೇಖರ್ ದೀಕ್ಷಿತ್ ಹಾಗೂ ದೇವಿ ಪ್ರಸಾದ್ ನೇತೃತ್ವದಲ್ಲಿ ನಾಡದೇವಿಗೆ ಮಹನ್ಯಾಸಪೂರ್ವ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ತ್ರಿಪದಿ, ಸಹಸ್ರ ನಾಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ಜರುಗಿದವು. ಮಹಾಮಂಗಳಾ ರತಿ ನಂತರ 5.30ಕ್ಕೆ ಭಕ್ತರಿಗೆ ದೇವಿ ದರ್ಶನಕ್ಕೆ…
ಮೈಸೂರು ಭೇಟಿ ಮೊದಲ ದಿನ ಸಚಿವ ಜಿ.ಟಿ.ದೇವೇಗೌಡರಿಂದ ದೇವಾಲಯಗಳಲ್ಲಿ ವಿಶೇಷ ಪೂಜೆ
July 14, 2018ಮೈಸೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವರಾಗಿದ್ದು, ಜಿ.ಟಿ.ದೇವೇಗೌಡರು ಇಂದು ಚಾಮುಂಡೇಶ್ವರಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವರಾದ ನಂತರ ಇದೇ ಪ್ರಪ್ರಥಮ ಬಾರಿಗೆ ಮೈಸೂರಿಗೆ ಆಗಮಿಸಿದ ಅವರು, ತಮ್ಮ ಕುಟುಂಬದ ಸದಸ್ಯರೊಂದಿಗೆ ಮೊದಲು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ಬಳಿಕ ಉತ್ತನಹಳ್ಳಿಯಲ್ಲಿರುವ ಶ್ರೀ ಜ್ವಾಲಾಮುಖಿ ತ್ರಿಪುರ ಸುಂದರಿದೇವಿ, ತಮ್ಮ ಸ್ವಗ್ರಾಮ ಗುಂಗ್ರಾಲ್ ಛತ್ರದಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ್ದಲ್ಲದೇ ನಂಜನಗೂಡು ನಂಜುಂಡೇಶ್ವರನಿಗೆ ವಿಶೇಷ ಪೂಜೆ…
ವಿದ್ಯಾರ್ಥಿಗಳಿಬ್ಬರ ಬಲಿ ಪಡೆದ ಹುಂಡೈ ಕ್ರೆಟಾ ಕಾರಿಗಾಗಿ ತೀವ್ರ ಶೋಧ
July 11, 2018ಘಟನೆಯ ಮರುದಿನ ಬೆಂಗಳೂರಿನತ್ತ ತೆರಳಿದ ಮಾಹಿತಿ ಲಭ್ಯ ಸಿಸಿ ಕ್ಯಾಮರಾ ಫುಟೇಜ್ ಸಂಗ್ರಹಕ್ಕೆ ಮುಂದಾದ ಪೊಲೀಸರು ಮೈಸೂರು: ಚಾಮುಂಡಿಬೆಟ್ಟದ ಐ-ವಾಚ್ ಟವರ್ ಬಳಿ ಬುಲೆಟ್ಗೆ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳ ಬಲಿ ಪಡೆದ ಕ್ರೆಟಾ ಕಾರು ಪತ್ತೆಗೆ ಸಿದ್ದಾರ್ಥನಗರ ಸಂಚಾರ ಠಾಣೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ನಡುವೆ ಸಾರ್ವಜನಿಕರೊಬ್ಬರು ನೀಡಿದ ಸುಳಿವಿನ ಮೇರೆಗೆ ಮೈಸೂರು-ಬೆಂಗಳೂರು ರಸ್ತೆಯ ಪೊಲೀಸ್ ಚೆಕ್ಪೋಸ್ಟ್ ಸೇರಿ ದಂತೆ ವಿವಿಧೆಡೆ ಇರುವ ಸಿಸಿ ಕ್ಯಾಮರಾ ಗಳ ಫುಟೇಜ್ ಸಂಗ್ರಹಕ್ಕೆ ಮುಂದಾಗಿದ್ದಾರೆ. ಗುರುವಾರ…