ಮೈಸೂರು: ಮೈಸೂರಿನ ಚಾಮುಂಡಿಪುರಂ ಜಾನ್ಸಿಲಕ್ಷ್ಮೀಬಾಯಿ ರಸ್ತೆಯ ಮೈಸೂರು ಅರಮನೆ ಪದ್ಮರಾಜ ಪಂಡಿತರ ಜೈನ ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಶತಮಾನೋತ್ಸವ ಸಮಾರಂಭ ಜು.8ರಿಂದ 10ರವರೆಗೆ ನಡೆಯಲಿದೆ ಎಂದು ವಿದ್ವಾನ್ ಪ್ರತಿಷ್ಠಾಚಾರ್ಯ ಡಿ.ಶ್ರೀಪತಿ ಜೋಯಿಸ್ ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜು.8ರಂದು ಮಧ್ಯಾಹ್ನ 2 ಗಂಟೆಗೆ ಶತಮಾನೋತ್ಸವ ಸಮಾರಂಭಕ್ಕೆ ಮೂಡಬಿದಿರೆ ಶ್ರೀಮದಭಿನವ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಚಾಲನೆ ನೀಡುವರು. ಮಲೆಯೂರು ಕನಕಗಿರಿ ಶ್ರೀಕ್ಷೇತ್ರ ಜೈನಮಠದ ಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಎಸ್.ಎ.ರಾಮದಾಸ್, ಪಾಲಿಕೆ ಸದಸ್ಯ…