ಬೆಂಗಳೂರು, ಮಾ.24-ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಶೀಘ್ರವೇ ಚಿರತೆ ಸಫಾರಿ ಯನ್ನು ಆರಂಭಿಸಲಾಗುವುದು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ತಿಳಿಸಿದರು. ಬುಧವಾರ ಬೆಳಗ್ಗೆ ಉದ್ಯಾನಕ್ಕೆ ಭೇಟಿ ನೀಡಿದ ಅವರು, ಚಿರತೆ ಸಫಾರಿ ಆರಂಭ ಸಂಬಂಧ ಕೈಗೊಂಡಿರುವ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು. ಉದ್ಯಾನದ ಆವರಣದಲ್ಲಿ ಈಗಾಗಲೇ ಟೈಗರ್, ಲಯನ್ ಮತ್ತು ಕರಡಿ ಸಫಾರಿ ವ್ಯವಸ್ಥೆ ಇದೆ. ಪ್ರವಾಸಿಗರನ್ನು ಮತ್ತಷ್ಟು ಸೆಳೆಯುವ ಉದ್ದೇಶದಿಂದ ಈಗ ಚಿರತೆ ಸಫಾರಿ ಯನ್ನು ಸಹ ಆರಂಭಿಸಲು ವ್ಯವಸ್ಥೆ ಮಾಡಲಾಗಿದೆ. ಅದ…
ಚಾಮರಾಜನಗರ ಬಳಿ ಗಾಯಗೊಂಡಿದ್ದ ಚಿರತೆ ಸೆರೆ
May 21, 2019ಚಾ.ನಗರ: ಗಾಯಗೊಂಡಿದ್ದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿರುವ ಘಟನೆ ತಾಲೂಕಿನ ಹೊನ್ನಹಳ್ಳಿ ಗ್ರಾಮದ ಜಮೀನಿನಲ್ಲಿ ಸೋಮವಾರ ನಡೆದಿದೆ. ಹೊನ್ನಹಳ್ಳಿ ಗ್ರಾಮದ ಮಹದೇವಶೆಟ್ಟಿ ಎಂಬುವರ ಪಂಪ್ಸೆಟ್ ಜಮೀನಿನ ಮನೆ ಮುಂದೆ ಚಿರತೆ ಮಲಗಿರುವುದನ್ನು ಮಹದೇವಶೆಟ್ಟಿ ಪುತ್ರ ನಾಗರಾಜು ಗಮನಿ ಸಿದ್ದಾರೆ. ಇದರಿಂದ ಗಾಬರಿಗೊಂಡ ನಾಗ ರಾಜು ಈ ವಿಷಯವನ್ನು ಗ್ರಾಮಸ್ಥರು ಹಾಗೂ ಅರಣ್ಯಾಧಿಕಾರಿಗಳ ಗಮನಕ್ಕೆ ತಂದರು. ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವುದಕ್ಕಿಂತ ಮುನ್ನವೇ ಚಿರತೆ ಮನೆ ಮುಂದಿನ ಜಾಗ ದಿಂದ ಜಮೀನಿನ ಪಕ್ಕದಲ್ಲಿದ್ದ ಕಾಲುವೆಗೆ…
ಕೊಟ್ಟಿಗೆಗೆ ನುಗ್ಗಿ ಸಾಕುಪ್ರಾಣಿಗಳ ಕೊಂದ ಚಿರತೆ
July 4, 2018ಮೈಸೂರು: ಮೈಸೂರು ತಾಲೂಕಿನ ದೊಡ್ಡಕಾನ್ಯ ಗ್ರಾಮ ದಲ್ಲಿ ಚಿರತೆ ಕೊಟ್ಟಿಗೆಗೆ ನುಗ್ಗಿ ಕೋಳಿ, ಕುರಿ ಹಾಗೂ ಮೇಕೆ ಮರಿಯನ್ನು ಕೊಂದಿದೆ. ಗ್ರಾಮದ ಅನಿತಾ ಅವರಿಗೆ ಸೇರಿದ ಕೊಟ್ಟಿಗೆಗೆ ಸೋಮವಾರ ರಾತ್ರಿ ನುಗ್ಗಿ ರುವ ಚಿರತೆ, ಕೋಳಿ, ಕುರಿ, ಮೇಕೆ ಗಳನ್ನು ಕೊಂದು ಪರಾರಿಯಾಗಿದೆ. ಈ ಹಿಂದೆಯೂ ಗ್ರಾಮಕ್ಕೆ ನುಗ್ಗಿದ್ದ ಚಿರತೆ, ನಾಯಿಯನ್ನು ಕೊಂದಿತ್ತು. ಹೀಗೆ ನಿರಂತರ ಚಿರತೆ ದಾಳಿಯಿಂದ ಆತಂಕಗೊಂಡಿರುವ ಗ್ರಾಮಸ್ಥರು, ಬೋನ್ ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ಬೀರಿಹುಂಡಿಯಲ್ಲಿ…