ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಪ್ರಸಕ್ತ ಸಾಲಿನಿಂದ ಜಾರಿಗೆ ತರಲು ಉದ್ದೇಶಿಸಿರುವ `ಆಯ್ಕೆ ಆಧಾರಿತ ಗುಣಾಂಕ ಪದ್ಧತಿಯಲ್ಲಿ (ಚಾಯ್ಸ್ಬೇಸ್ಡ್ ಕ್ರೆಡಿಟ್ ಸಿಸ್ಟಂ-ಸಿಬಿಸಿಎಸ್)’ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕನ್ನಡ ಸಾಹಿತಿಗಳು, ಅಧ್ಯಾಪಕರು, ಕನ್ನಡ ಪರ ಹೋರಾಟಗಾರರು ಹಾಗೂ ವಿದ್ಯಾರ್ಥಿಗಳು ಸೋಮವಾರ ಭಾರೀ ಪ್ರತಿಭಟನೆ ನಡೆಸಿದರು. ಮೈಸೂರು ವಿವಿಯ ಕ್ರಾಫರ್ಡ್ ಭವನದ ಎದುರು ಮೈಸೂರು ವಿವಿ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಸಂಘದ ಆಶ್ರಯದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಿಬಿಸಿಎಸ್ ಪದ್ಧತಿಯಲ್ಲಿ ಕನ್ನಡಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ…