ಚುಂಚನಕಟ್ಟೆ: ಸರ್ಕಾರದ ಅನುದಾನದಿಂದ ನಡೆಯುವ ಕಾಮಗಾರಿ ಗಳು ಸಾರ್ವಜನಿಕರ ತೆರಿಗೆ ಹಣದಿಂದ ನಡೆಯುವ ಅಭಿವೃದ್ದಿ ಕೆಲಸ ಎಂದು ಅರಿತು ಸರಿಯಾದ ರೀತಿ ಸದ್ಬಳಕೆ ಮಾಡಿದಾಗ ಸರ್ಕಾರದ ಯೋಜನೆಗಳು ಸಮರ್ಪವಾಗಿ ಅನುಷ್ಠಾನಗೊಳ್ಳಲು ಸಾಧ್ಯ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೇಳಿದರು. ತಾಲೂಕಿನ ಲಾಳಂದೇವನಹಳ್ಳಿ ಗ್ರಾಮದ ಬಳಿ ಮೈಸೂರು ತಾಲೂಕು ಇಲವಾಲದ ಸಾಗರಕಟ್ಟೆಯಿಂದ ಕೆ.ಆರ್.ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ದಿಗೆ ಚಾಲನೆ ನೀಡಿ ಮಾತನಾಡಿದ ಅವರು 5 ಕೋಟಿ ರೂ. ಗಳಲ್ಲಿ ಕೆಆರ್ಡಿಸಿಎಲ್ ವತಿಯಿಂದ ಈ ರಸ್ತೆ ಡಾಂಬರೀಕರಣ…