ಮೈಸೂರು: ಗುರುವಾರ ಮೈಸೂರಿನಲ್ಲಿ ನಡೆದ ಶೂಟೌಟ್ನಲ್ಲಿ ಓರ್ವ ಬಲಿಯಾದ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಇಂದು ಬೆಳಿಗ್ಗೆಯೇ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದ ಸಿಐಡಿ ತಂಡದ ಅಧಿಕಾರಿಗಳು ಮೈಸೂರಿಗೆ ಆಗಮಿಸಿದ್ದು, ಪ್ರಕರಣ ದಾಖಲಾಗಿರುವ ವಿಜಯನಗರ ಠಾಣೆಯಲ್ಲಿ ಸಂಬಂಧಿಸಿದ ದಾಖಲೆಗಳನ್ನು ಪಡೆದಿರುವ ಅವರು, ಠಾಣಾಧಿಕಾರಿಗಳಿಂದ ಘಟನೆ ಕುರಿತಂತೆ ಮಾಹಿತಿ ಸಂಗ್ರಹಿಸಿದರು. ಪ್ರಕರಣದ ಸಂಬಂಧ ದೂರು ನೀಡಿರುವ ವಿಜಯನಗರ ಠಾಣೆ ಇನ್ಸ್ಪೆಕ್ಟರ್ ಬಿ.ಜಿ.ಕುಮಾರ್, ಬಾತ್ಮೀದಾರನೆನ್ನಲಾದ ವಿಜಯಕುಮಾರ್, ಘಟನೆ ನಡೆದಾಗ ಜೊತೆಯಲ್ಲಿದ್ದ ಎಎಸ್ಐ, ಇನ್ನಿತರೆ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿ, ಪ್ರಾಥಮಿಕ ಹಂತದ ಮಾಹಿತಿಯನ್ನು ಕಲೆ…