ಪಶ್ಚಿಮ ಬಂಗಾಳ,ಫೆ.11-ದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ(ಸಿಎಎ) ಜಾರಿಗೊಳಿಸುವ ಮೂಲಕ ನಿಮ್ಮೆ ಲ್ಲರಿಗೂ ಪೌರತ್ವ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಠಾಕೂರ್ ನಗರದ ಮಾಟುವಾ ಕೋಟೆಯಲ್ಲಿ ಸಾರ್ವ ಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಸಿಎಎಗೆ ಮುಸ್ಲಿಮರ ಪೌರತ್ವ ಕಸಿದು ಕೊಳ್ಳುವ ಯಾವುದೇ ನಿಬಂಧನೆ ಇಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಕಳೆದ 70 ವರ್ಷ ಗಳಿಂದ ಭಾರತದಲ್ಲಿ…
ಪೌರತ್ವ ತಿದ್ದುಪಡಿ ಕಾಯಿದೆ ಮಹಾತ್ಮ ಗಾಂಧೀಜಿ ಕನಸಾಗಿತ್ತು
January 28, 2020ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಮಹಾತ್ಮ ಗಾಂಧೀಜಿ ಅವರ ಕನಸಾಗಿತ್ತು. ಗಾಂಧಿ ಕನಸನ್ನು ಬಿಜೆಪಿ ನನಸು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. ಸೋಮವಾರ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆದ ಸಿಎಎ ಪರವಾದ ಬಿಜೆಪಿ ಜನಜಾಗೃತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯಿದೆ-ಸಿಎಎ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ-ಎನ್ಆರ್ಸಿ ವಿಷಯದಲ್ಲಿ ವಿರೋಧ ಪಕ್ಷಗಳು ದೇಶ ವಿಭಜಿಸುವ ಕೆಲಸ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು. ಧರ್ಮದ ಆಧಾರದಲ್ಲಿ…
ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಮಮತಾ ಬ್ಯಾನರ್ಜಿ ಸರ್ಕಾರ!
January 28, 2020ನವದೆಹಲಿ: ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಸಾಲಿಗೆ ಇದೀಗ ಪಶ್ಚಿಮ ಬಂಗಾಳ ರಾಜ್ಯ ಸಹ ಸೇರಿಕೊಂಡಿದೆ. ಕೇರಳ, ಪಂಜಾಬ್ ಮತ್ತು ರಾಜಸ್ಥಾನ ಗಳ ನಂತರ ಇದೀಗ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದೆ. ಪೌರತ್ವ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸ ಲಾಯಿತು. ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ನಾವು ಸಿಎಎ, ಎನ್ಪಿಆರ್…
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮೈಸೂರಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
January 25, 2020ಮೈಸೂರು: ಸಿಎಎ, ಎನ್ಆರ್ಸಿ, ಎನ್ಪಿಆರ್ ಕಾಯ್ದೆ ಜಾರಿ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಧರಣಿ ನಡೆಸಿದ ಪ್ರತಿಭಟ ನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಿಎಎ ಕಾಯ್ದೆ ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುತ್ತದೆ. ಈ ಕಾಯ್ದೆ ಸಂವಿಧಾನದ ಅನುಚ್ಛೇದ 14ರ ನೀತಿಸಂಹಿತೆ ಉಲ್ಲಂ ಘಿಸುತ್ತದೆ. ಅನುಚ್ಛೇದ 14ರ ಅನುಸಾರ ಕಾನೂನಿನ ಮುಂದೆ ಎಲ್ಲರೂ ಸಮಾನರು. ಆದರೆ ಸಿಎಎ ಧರ್ಮದ ಆಧಾರದಲ್ಲಿ…
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಿಷೇಧ: ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಆದೇಶ
December 16, 2019ಮೈಸೂರು,ಡಿ.15(ಎಸ್ಪಿಎನ್)- ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ವಿರೋ ಧಿಸಿ ಡಿ.16ರಂದು ಬೆಳಿಗ್ಗೆ 6ರಿಂದ ರಾತ್ರಿ 12 ಗಂಟೆವರೆಗೆ ಮೈಸೂರಲ್ಲಿ ಯಾವುದೇ ಪ್ರತಿಭಟನೆ, ಸಭೆ-ಸಮಾರಂಭ, ಮೆರವಣಿಗೆ ಮತ್ತು ಬೈಕ್ರ್ಯಾಲಿ ನಡೆಸುವುದನ್ನು ನಿಷೇಧಿ ಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಭಾನುವಾರ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ವಿವಿಧ ಸಂಘ-ಸಂಸ್ಥೆ ಗಳು ಡಿ.16ರಂದು ಮಧ್ಯಾಹ್ನ 2…