ನವದೆಹಲಿ,ಡಿ.12- ಎನ್ಡಿಎ ಸರ್ಕಾರದ ಮಹತ್ವದ ಕ್ರಮಗಳಲ್ಲೊಂ ದಾದ `ಪೌರತ್ವ (ತಿದ್ದುಪಡಿ) ಮಸೂದೆ’ಗೆ ಗುರುವಾರ ರಾತ್ರಿ ರಾಷ್ಟ್ರಪತಿಗಳ ಅಂಕಿ ತವೂ ಬಿದ್ದಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಎನ್ಸಿಎಫ್, ಎಡಪಕ್ಷಗಳು ಹಾಗೂ ಈಶಾನ್ಯ ರಾಜ್ಯಗಳಲ್ಲಿನ ಜನರ ತೀವ್ರ ವಿರೋಧದ ನಡುವೆಯೇ ಹೊಸ ಮಸೂದೆಯು ಕಾಯ್ದೆಯಾಗಿ ಜಾರಿಗೆ ಬಂದಿದೆ. ಗೃಹ ಸಚಿವ ಅಮಿತ್ ಷಾ, ಮಹತ್ವದ ಈ ಪೌರತ್ವ ತಿದ್ದುಪಡಿ ವಿಧೇಯಕವನ್ನು ಕಳೆದ ಸೋಮವಾರ ಲೋಕಸಭೆಯಲ್ಲಿ, ಬುಧವಾರ ರಾಜ್ಯ ಸಭೆಯಲ್ಲಿ ಮಂಡಿಸಿ ಎರಡೂ ಸದನಗಳ ಒಪ್ಪಿಗೆ ಪಡೆದಿದ್ದರು. ಇದೀಗ ಗುರುವಾರ ರಾತ್ರಿ…