ಬೆಂಗಳೂರು: ಸರ್ಕಾರದ ಸ್ಥಿರತೆ ಬಗೆಗಿನ ಮಾಧ್ಯಮ ವರದಿಗಳನ್ನೇ ಬಂಡವಾಳ ಮಾಡಿ ಕೊಂಡು ಕೆಲಸ ಮಾಡದೇ ನಿದ್ರೆಗೆ ಜಾರಿರುವ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ, ಕಾಂಗ್ರೆಸ್-ಜೆಡಿಎಸ್ ಸರ್ಕಾರ ಭದ್ರಗೊಳಿಸಲು ಉಭಯ ಪಕ್ಷದ ನಾಯಕರು ಭಾರೀ ತಂತ್ರ ರೂಪಿಸಿದ್ದಾರೆ. ಆಪರೇಷನ್ ಕಮಲ ಹತ್ತಿಕ್ಕಲು ನಗರ ದಲ್ಲೇ ಬಿಡಾರ ಹೂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಾಲ್, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷದ ಮುಖಂಡರ ಜೊತೆ ಸಮಾಲೋಚನೆ ನಂತರ ಬಿಜೆಪಿ ಶಾಸಕರನ್ನು ಸೆಳೆಯಲು ಮುಂದಾಗಿದ್ದಾರೆ….
ಸರ್ಕಾರ ಬಿದ್ದರೂ ಜೆಡಿಎಸ್ ಬಲಿ ಕೊಡಲ್ಲ
January 12, 2019ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ವರ್ತನೆಯಿಂದ ತೀವ್ರ ಬೇಸರಗೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮೈತ್ರಿ ಸರ್ಕಾರ ಬಿದ್ದರೂ ಜೆಡಿಎಸ್ ಬಲಿ ಕೊಡಲು ಸಿದ್ಧ ವಿಲ್ಲ ಎಂದು ಖಡಕ್ಕಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳ ನೇಮಕಾತಿ ನಂತರ ಕಾಂಗ್ರೆಸ್ ಶಾಸಕರು ನಡೆದುಕೊಳ್ಳುತ್ತಿರುವ ರೀತಿ, ಬಹಿರಂಗ ಹೇಳಿಕೆಗಳು ಮುಖ್ಯಮಂತ್ರಿ ಅವರ ಮನಸ್ಸನ್ನು ಘಾಸಿಗೊಳಿಸಿವೆ. ಜೊತೆಗೆ ಆಡಳಿತದ ಎಲ್ಲಾ ವಿಚಾರಗಳಲ್ಲೂ ಪರೋಕ್ಷ ವಾಗಿ ಸಿದ್ದರಾಮಯ್ಯ ಮೂಗು ತೂರಿಸುತ್ತಿರು ವುದು ಅಸಹನೀಯ…
ಬಿಜೆಪಿ ವರಿಷ್ಠರಿಂದಲೇ ದೋಸ್ತಿ ಸರ್ಕಾರ ಪತನಕ್ಕೆ ಮುಹೂರ್ತ
January 10, 2019ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ರಾಜ್ಯ ಮುಂಗಡ ಪತ್ರ ಮಂಡಿಸುವ ಮುನ್ನವೇ ಪತನ ಗೊಳಿಸಲು ಬಿಜೆಪಿ ವರಿಷ್ಠರೇ ಮುಂದಾಗಿದ್ದಾರೆ. ಕುಮಾರಸ್ವಾಮಿ 2019-20ನೇ ಸಾಲಿನ ಮುಂಗಡ ಪತ್ರವನ್ನು 2019ರ ಫೆ.8ರಂದು ಮಂಡಿಸಲಿದ್ದಾರೆ. ಅದಕ್ಕೂ ಮುನ್ನವೇ ಮೈತ್ರಿ ಸರ್ಕಾರವನ್ನು ಪತನಗೊಳಿಸಿ, ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ ನಡೆಸಿದೆ. ಬಿಜೆಪಿಯ ರಾಜ್ಯ ನಾಯಕರು ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆಗೆ ನಡೆಸಿದ ಯತ್ನ ವಿಫಲ ಗೊಂಡಿರುವುದರಿಂದ ರಾಷ್ಟ್ರೀಯ ನಾಯಕರೇ ಕೈ ಹಾಕಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ…
ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
January 10, 2019ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರು ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ ಎಂದು ನೀಡುತ್ತಿರುವ ಗಡುವುಗಳು ಮುಂದುವರೆಯುತ್ತವೆ ಎಂದು ಹೇಳಿದರು. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ದಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಗೊಂದಲಗಳು ಸುಸೂತ್ರವಾಗಿ ಬಗೆಹರಿಯುತ್ತವೆ. ಸರ್ಕಾರದಲ್ಲಿ ಯಾವುದೇ ರೀತಿಯ ಸಮಸ್ಯೆಗಳಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಲವು ನಿಗಮ ಮಂಡಳಿಗಳ ನೇಮಕ ತಡೆಹಿಡಿದಿರುವ ಹಿಂದೆ ಅಗೌರವ ಸಲ್ಲಿಸುವ ಉದ್ದೇಶವಿಲ್ಲ. ತಾಂತ್ರಿಕ ಕಾರಣ ಗಳಿಂದಾಗಿ ತಡೆ ಹಿಡಿಯಲಾಗಿದೆ ಎಂದರು. ಸಂಕ್ರಾಂತಿ…
ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಕೊರತೆ
August 2, 2018ಕೊಳ್ಳೇಗಾಲ: ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಮುಂಬ ರುವ ಚುನಾವಣೆಯಲ್ಲಿ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಮುಖಂಡರೂ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷರೂ ಆದ ಕೆ.ಶಿವರಾಮು ಹೇಳಿದರು. ಅವರು ಪಟ್ಟಣದ ಪ್ರವಾಸಿ ಮಂದಿರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತೀಯ ಜನತಾ ಪಾರ್ಟಿ ವರಿಷ್ಠರಿಗೆ ಚಾ.ನಗರ ಕ್ಷೇತ್ರದಿಂದ ಲೋಕಸಭೆ ಸ್ಪರ್ಧೆಗೆ ಅವಕಾಶ ಮಾಡಿಕೊಡುವಂತೆ ಕೇಳಿದ್ದೇನೆ. ಪಕ್ಷವು ನನಗೆ ಅವಕಾಶ ನೀಡಿ ಟಿಕೆಟ್ ನೀಡಿದಲ್ಲಿ ನಾನು ಸ್ಪರ್ಧೆಗೆ ಸಿದ್ಧನಿದ್ದೇನೆ ಎಂದು ಹೇಳಿದರು. ರಾಜ್ಯದ ಸಮ್ಮಿಶ್ರ ಸರ್ಕಾರದ ಆಹಾರ ಮಂತ್ರಿ…