ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಡೆಸಿದ ಯತ್ನ ವಿಫಲಗೊಂಡಿದ್ದು, ಪಕ್ಷದ ಶಾಸಕರು ಹರಿಯಾಣದ ಗುರುಗ್ರಾಮದಿಂದ ನಗರಕ್ಕೆ ಹಿಂತಿರುಗುತ್ತಿದ್ದಾರೆ. ಮತ್ತೊಂದೆಡೆ ತಮ್ಮ ಸದಸ್ಯತ್ವ ತೊರೆದು ಬಿಜೆಪಿ ಬೆಂಬಲಿಸಲು ಮುಂಬೈ ಸೇರಿದಂತೆ ರಾಷ್ಟ್ರದ ವಿವಿಧೆಡೆ ಪ್ರತ್ಯೇಕವಾಗಿ ವಾಸ್ತವ್ಯ ಹೂಡಿದ್ದ ಐವರು ಕಾಂಗ್ರೆಸ್ ಸದಸ್ಯರು ರಾಜಧಾನಿಗೆ ಬರಿಗೈಲಿ ವಾಪಸಾಗುತ್ತಿದ್ದಾರೆ. ಯಾವ ಶಾಸಕರನ್ನು ನೆಚ್ಚಿಕೊಂಡು ದೋಸ್ತಿ ಸರ್ಕಾರ ಕೆಡವಲು ಬಿಜೆಪಿ ಸಂಚು ರೂಪಿಸಿತ್ತೋ ಅದೇ ಶಾಸಕರು ತಮ್ಮ ತಮ್ಮ ಪಕ್ಷಗಳತ್ತ…
ಕೊಡಗು
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಿಂದ ಕೊಡಗು ನಿರ್ಲಕ್ಷ್ಯ
December 19, 2018ಮಡಿಕೇರಿ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ರಾಜ್ಯ ಸರಕಾರ ಅಧಿಕಾರದ ಚುಕ್ಕಾಣಿ ಹಿಡಿದು 6 ತಿಂಗಳು ಕಳೆದರೂ ಕೂಡ ಕೊಡಗು ಜಿಲ್ಲೆಗೆ ಯಾವುದೇ ಯೋಜನೆಗಳು ಜಾರಿಯಾಗಿಲ್ಲ. ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಪರಿಹಾರ ಕಾರ್ಯಕ್ಕಾಗಿ ಮಾತ್ರ ವಿವಿಧ ಇಲಾಖೆಗಳ ಮೂಲಕ 85 ಕೋಟಿ ರೂ. ಜಿಲ್ಲೆಗೆ ಬಿಡುಗಡೆಯಾಗಿದೆ. ಈ ನೆರವನ್ನು ಹೊರತುಪಡಿಸಿದರೆ ವಿಶೇಷ ಅನುದಾನ ಜಿಲ್ಲೆಗೆ ಬಂದಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರು, ಬೆಳೆಗಾರರ ಅಲ್ಪಾವಧಿಯ ಸಾಲಮನ್ನಾ ಘೋಷಣೆ ರಾಜ್ಯಕ್ಕೆ ಸಂಬಂಧಿಸಿದಾಗಿದ್ದು, ಕೊಡಗು ಜಿಲ್ಲೆಯ 17,780 ಫಲಾನುಭವಿಗಳನ್ನು ವಿವಿಧ…