Tag: congress-jds alliance

ರೆಸಾರ್ಟ್‍ನಲ್ಲಿ ಕೈ ಶಾಸಕರ ಹೊಡೆದಾಟಕ್ಕೆ ಬಿಜೆಪಿ ಕಾರಣ
ಮೈಸೂರು

ರೆಸಾರ್ಟ್‍ನಲ್ಲಿ ಕೈ ಶಾಸಕರ ಹೊಡೆದಾಟಕ್ಕೆ ಬಿಜೆಪಿ ಕಾರಣ

January 26, 2019

ಚಾಮರಾಜನಗರ: ರೆಸಾರ್ಟ್‍ನಲ್ಲಿ ಕಾಂಗ್ರೆಸ್ ಶಾಸಕರು ಬಡಿದಾಡಿ ಕೊಂಡಿರುವುದಕ್ಕೆ ಬಿಜೆಪಿ ಕಾರಣವೆಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ದೂರಿದರು. ಜಿಲ್ಲೆಯಲ್ಲಿ ಶುಕ್ರವಾರ ಸಚಿವ ಸಂಪುಟ ಉಪಸಮಿತಿಯು ಕೈಗೊಂಡಿರುವ ಬರ ಅಧ್ಯಯನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಹೋಗಿದ್ದು ಯಾರು? ಏಕೆ ಕರೆದುಕೊಂಡು ಹೋದರು? ಯಾವ ವಿಷಯಕ್ಕೆ ಹೊಡೆದಾಟ ನಡೆದಿದೆ? ಎಂದು ಪ್ರಶ್ನಿಸಿದ ಅವರು, ಇದೆಲ್ಲ ನಡೆಯಲು ಬಿಜೆಪಿಯೇ ಕಾರಣ ಎಂದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮೀತ್ ಶಾ ಹಾಗೂ ರಾಜ್ಯದ ನಾಯಕರು ಆಪರೇಷನ್…

ಇಂದು ದೋಸ್ತಿ ಸರ್ಕಾರದ ಮಹತ್ವದ ಸಮನ್ವಯ ಸಮಿತಿ ಸಭೆ
ಮೈಸೂರು

ಇಂದು ದೋಸ್ತಿ ಸರ್ಕಾರದ ಮಹತ್ವದ ಸಮನ್ವಯ ಸಮಿತಿ ಸಭೆ

January 24, 2019

ಬೆಂಗಳೂರು: ಆಪರೇಷನ್ ಕಮಲದ ಭೀತಿ ಹಾಗೂ ಕಾಂಗ್ರೆಸ್ ಶಾಸಕರ ಮಾರಾಮಾರಿ ಪ್ರಕರಣದ ಬೆನ್ನಲ್ಲೇ ದೋಸ್ತಿ ಸರ್ಕಾರದ ಕಾರ್ಯಸೂಚಿ ನಿಗದಿ ಗೊಳಿಸುವ ಮಹತ್ವದ ಸಮನ್ವಯ ಸಮಿತಿ ಸಭೆ ಗುರುವಾರ ನಡೆಯಲಿದೆ. ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನಾಳೆ ಸಂಜೆ ಸಭೆ ಕರೆದಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜನಪ್ರಿಯ ಬಜೆಟ್ ಮಂಡನೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಅಂತೆಯೇ ಲೋಕಸಭಾ ಚುನಾವಣಾ ಮೈತ್ರಿ, ಸ್ಥಾನ ಹೊಂದಾಣಿಕೆ ಮತ್ತಿತರ ರಾಜಕೀಯ ವಿಚಾರಗಳ ಸಮಾಲೋಚನೆಯೂ ನಡೆಯಲಿದೆ…

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ
ಮೈಸೂರು

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ

January 20, 2019

ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಶಾಸಕರು ಹರಿಯಾಣದ ಗುರುಗ್ರಾಮದಲ್ಲಿನ ರೆಸಾರ್ಟ್ ನಲ್ಲಿ, ಆಡಳಿತ ಪಕ್ಷದ ಭಾಗವಾಗಿರುವ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್‍ನಲ್ಲಿ, ಇವರನ್ನೆಲ್ಲ ನಂಬಿ ಮತ ಹಾಕಿದ ಜನ ಬೀದಿ ಯಲ್ಲಿ…! ಎಲ್ಲಿಗೆ ಬಂತು ಪ್ರಜಾಪ್ರಭುತ್ವ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ ಶಾಸಕರ ಕಚ್ಚಾಟದಿಂದ ರಾಜ್ಯದ ಜನರಿಗೆ ಪೀಕಲಾಟ ಶುರು ವಾಗಿದೆ. ಆದರೆ ಅಧಿಕಾರಿಗಳಿಗೆ ಮಾತ್ರ ಹಬ್ಬದ ವಾತಾವರಣ ಉಂಟಾಗಿದೆ. ಸರ್ಕಾರ ಉರುಳಿಸುವ-ಉಳಿಸಿಕೊಳ್ಳುವ ಪ್ರಯತ್ನ ಸರ್ಕಾರ ರಚನೆಯಾದ ಏಳು ತಿಂಗಳಿ ನಿಂದಲೂ ನಡೆಯುತ್ತಿದೆ. ಇನ್ನು…

ಬಲ ಪ್ರದರ್ಶನಕ್ಕೆ ಬಿಜೆಪಿ ನಿರ್ಧಾರ
ಮೈಸೂರು

ಬಲ ಪ್ರದರ್ಶನಕ್ಕೆ ಬಿಜೆಪಿ ನಿರ್ಧಾರ

January 20, 2019

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ಮಂಡನೆಗಾಗಿ ಕರೆಯಲಾಗುವ ವಿಧಾನಸಭಾ ಅಧಿವೇಶನ ಸಂದರ್ಭದಲ್ಲೇ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ನಿರ್ಧರಿಸಿದೆ. ಈ ಸಂಬಂಧ ಸಮಾಲೋಚನೆ ನಡೆಸಲು ರಾಜ್ಯ ಬಿಜೆಪಿ ನಾಯಕರು ಮತ್ತು ಪ್ರಮುಖ ಶಾಸಕರು ಸಭೆ ನಡೆಸಲಿದ್ದಾರೆ. ಮತ್ತೊಮ್ಮೆ ಆಪರೇಷನ್ ಕಮಲದ ಯತ್ನ ನಿರೀಕ್ಷಿತ ಫಲ ನೀಡದ ಹಿನ್ನೆಲೆಯಲ್ಲಿ ಕಾರ್ಯತಂತ್ರ ಬದಲಿಸಿರುವ ಬಿಜೆಪಿ ಕೊನೆಯ ಅಸ್ತ್ರವಾಗಿ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿದೆ. ಆಪರೇಷನ್ ಕಮಲದ ಮೂಲಕ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿದ್ದ ಕಾಂಗ್ರೆಸ್‍ನ ಅತೃಪ್ತ ಶಾಸಕರು ಕೊನೆ…

ರಮೇಶ್ ಜಾರಕಿಹೊಳಿ, ಮಹೇಶ್ ಕಮಟಹಳ್ಳಿ ಮೇಲೆ ಕ್ರಮಕ್ಕೆ ನಿರ್ಧಾರ
ಮೈಸೂರು

ರಮೇಶ್ ಜಾರಕಿಹೊಳಿ, ಮಹೇಶ್ ಕಮಟಹಳ್ಳಿ ಮೇಲೆ ಕ್ರಮಕ್ಕೆ ನಿರ್ಧಾರ

January 19, 2019

ಬೆಂಗಳೂರು: ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕಮಟಹಳ್ಳಿ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಗೆ ರಮೇಶ್ ಜಾರಕಿಹೊಳಿ, ಮಹೇಶ್ ಕಮಟಹಳ್ಳಿ, ಬಿ.ನಾಗೇಂದ್ರ ಮತ್ತು ಡಾ. ಉಮೇಶ್ ಜಾಧವ್ ಗೈರು ಹಾಜರಾಗಿದ್ದರು. ಇವರಲ್ಲಿ ಆರೋಗ್ಯ ಸಮಸ್ಯೆಯಿಂದ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಡಾ….

ಆಪರೇಷನ್ ಹದಕಮಲಕ್ಕೆ ಪ್ರತಿಯಾಗಿ ಆಪರೇಷನ್ ಹದ
ಮೈಸೂರು

ಆಪರೇಷನ್ ಹದಕಮಲಕ್ಕೆ ಪ್ರತಿಯಾಗಿ ಆಪರೇಷನ್ ಹದ

January 19, 2019

ಬೆಂಗಳೂರು: ಸರ್ಕಾರದ ಸ್ಥಿರತೆ ಬಗೆಗಿನ ಮಾಧ್ಯಮ ವರದಿಗಳನ್ನೇ ಬಂಡವಾಳ ಮಾಡಿ ಕೊಂಡು ಕೆಲಸ ಮಾಡದೇ ನಿದ್ರೆಗೆ ಜಾರಿರುವ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ, ಕಾಂಗ್ರೆಸ್-ಜೆಡಿಎಸ್ ಸರ್ಕಾರ ಭದ್ರಗೊಳಿಸಲು ಉಭಯ ಪಕ್ಷದ ನಾಯಕರು ಭಾರೀ ತಂತ್ರ ರೂಪಿಸಿದ್ದಾರೆ. ಆಪರೇಷನ್ ಕಮಲ ಹತ್ತಿಕ್ಕಲು ನಗರ ದಲ್ಲೇ ಬಿಡಾರ ಹೂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಾಲ್, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷದ ಮುಖಂಡರ ಜೊತೆ ಸಮಾಲೋಚನೆ ನಂತರ ಬಿಜೆಪಿ ಶಾಸಕರನ್ನು ಸೆಳೆಯಲು ಮುಂದಾಗಿದ್ದಾರೆ….

ಬಿಜೆಪಿಯ ಆಪರೇಷನ್ ಕಮಲ ವಿಫಲ ದೋಸ್ತಿ ಸರ್ಕಾರ ಅಬಾಧಿತ
ಮೈಸೂರು

ಬಿಜೆಪಿಯ ಆಪರೇಷನ್ ಕಮಲ ವಿಫಲ ದೋಸ್ತಿ ಸರ್ಕಾರ ಅಬಾಧಿತ

January 17, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಡೆಸಿದ ಯತ್ನ ವಿಫಲಗೊಂಡಿದ್ದು, ಪಕ್ಷದ ಶಾಸಕರು ಹರಿಯಾಣದ ಗುರುಗ್ರಾಮದಿಂದ ನಗರಕ್ಕೆ ಹಿಂತಿರುಗುತ್ತಿದ್ದಾರೆ. ಮತ್ತೊಂದೆಡೆ ತಮ್ಮ ಸದಸ್ಯತ್ವ ತೊರೆದು ಬಿಜೆಪಿ ಬೆಂಬಲಿಸಲು ಮುಂಬೈ ಸೇರಿದಂತೆ ರಾಷ್ಟ್ರದ ವಿವಿಧೆಡೆ ಪ್ರತ್ಯೇಕವಾಗಿ ವಾಸ್ತವ್ಯ ಹೂಡಿದ್ದ ಐವರು ಕಾಂಗ್ರೆಸ್ ಸದಸ್ಯರು ರಾಜಧಾನಿಗೆ ಬರಿಗೈಲಿ ವಾಪಸಾಗುತ್ತಿದ್ದಾರೆ. ಯಾವ ಶಾಸಕರನ್ನು ನೆಚ್ಚಿಕೊಂಡು ದೋಸ್ತಿ ಸರ್ಕಾರ ಕೆಡವಲು ಬಿಜೆಪಿ ಸಂಚು ರೂಪಿಸಿತ್ತೋ ಅದೇ ಶಾಸಕರು ತಮ್ಮ ತಮ್ಮ ಪಕ್ಷಗಳತ್ತ…

ಸಂಕ್ರಾಂತಿ ನಂತರ  ಮೈತ್ರಿ ಸರ್ಕಾರ ಪತನ?
ಮೈಸೂರು

ಸಂಕ್ರಾಂತಿ ನಂತರ ಮೈತ್ರಿ ಸರ್ಕಾರ ಪತನ?

January 14, 2019

ಬೆಂಗಳೂರು: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ರಣತಂತ್ರ ರೂಪಿಸಿದ್ದು, `ಆಪರೇಷನ್ ಕಮಲ’ಕ್ಕೆ ಚಾಲನೆ ದೊರೆತಿದೆ. ಈಗಾಗಲೇ 6 ಕಾಂಗ್ರೆಸ್ ಶಾಸಕರು ದೆಹಲಿ ತಲುಪಿದ್ದು, ಇನ್ನೂ ಐವರು ಕಾಂಗ್ರೆಸ್ ಶಾಸಕರು ನಾಳೆ (ಜ.14) ದೆಹಲಿಗೆ ವಿಮಾನ ಹತ್ತಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಸಭಾ ಚುನಾವಣೆಯೊಳಗಾಗಿ ರಾಜ್ಯದ ಮೈತ್ರಿ ಸರ್ಕಾರವನ್ನು ಉರುಳಿಸಲೇ ಬೇಕೆಂದು ಪಣ ತೊಟ್ಟಿರುವ ಬಿಜೆಪಿ ವರಿಷ್ಠರು, ಅದಕ್ಕಾಗಿ ದೆಹಲಿಯಿಂದಲೇ ಕಾರ್ಯಾ ಚರಣೆ ಆರಂಭಿಸಿದ್ದಾರೆ. ದೆಹಲಿ ವರಿಷ್ಠರೇ ನೇರವಾಗಿ ಸರ್ಕಾರ ಉರುಳಿಸುವ ಕಾರ್ಯಾಚರಣೆಗೆ ಕೈಹಾಕಿದ್ದಾರೆ. ಕಾಂಗ್ರೆಸ್‍ನ…

ಸರ್ಕಾರ ಉರುಳಿಸಲು ನಾನು ಬಿಡಲ್ಲ
ಮೈಸೂರು

ಸರ್ಕಾರ ಉರುಳಿಸಲು ನಾನು ಬಿಡಲ್ಲ

January 14, 2019

ಹಾಸನ: ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾರ ಉರುಳಿಸಲು ನಾನು ಬಿಡುವುದಿಲ್ಲ. ಈ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಜಾಗ್ರತೆ ವಹಿಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು. ಹಾಸನದ ಚನ್ನಪಟ್ಟಣದಲ್ಲಿರುವ ಗೋಮತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಸಂಬಂಧ ನಾನು ಈಗಾಗಲೇ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದೇನೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಅಪಾಯ ಬಾರದಂತೆ ನೋಡಿಕೊಳ್ಳುತ್ತೇವೆ ಎಂದರು. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿಯವರೇ ಮುಖ್ಯಮಂತ್ರಿ…

ಬಿಜೆಪಿಯವರು ಮುಹೂರ್ತ ಫಿಕ್ಸ್ ಮಾಡಿದ್ದಾರೆ…
ಮೈಸೂರು

ಬಿಜೆಪಿಯವರು ಮುಹೂರ್ತ ಫಿಕ್ಸ್ ಮಾಡಿದ್ದಾರೆ…

January 14, 2019

ಬೆಂಗಳೂರು: ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿ ಮುಹೂರ್ತ ಫಿಕ್ಸ್ ಮಾಡಿದೆ. ಮೂವರು ಶಾಸಕರು ಮುಂಬೈಗೆ ತೆರಳಿದ್ದಾರೆ ಎಂಬುದನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವ ಕುಮಾರ್ ಖಚಿತಪಡಿ ಸಿದ್ದು, ನಾವೇನೂ ಸುಮ್ಮನೆ ಕೂರಲ್ಲ ಎಂದು ಗುಡುಗಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿಯವರು ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿದೆ. ಮೂವರು ಶಾಸಕರು ಮುಂಬೈಗೆ ಹೋಗಿದ್ದಾರೆ ಎಂಬುದೂ ಕೂಡ ಗೊತ್ತಿದೆ. ಅವರು ಯಾವ ಹೋಟೆಲ್‍ನಲ್ಲಿ ತಂಗಿದ್ದಾರೆ ಎಂಬ ಮಾಹಿತಿಯೂ ನಮಗಿದೆ ಎಂದು ಹೇಳಿದರು….

1 4 5 6 7 8 13
Translate »