ನವದೆಹಲಿ: 2019ರ ಸಾರ್ವತ್ರಿಕ ಚುನಾ ವಣೆಗೆ ಪಕ್ಷದ ಪ್ರಣಾಳಿಕೆಯನ್ನು ಕಾಂಗ್ರೆಸ್ ನವದೆಹಲಿ ಯಲ್ಲಿ ಮಂಗಳವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಸಾಲ ಮರುಪಾವತಿ ಮಾಡದ ರೈತರ ವಿರುದ್ಧ ಕೇಸು ದಾಖಲಿಸುವುದಿಲ್ಲ. ರೈತರಿಗೆ ಪ್ರತ್ಯೇಕ ಕಿಸಾನ್ ಬಜೆಟ್ ಮಂಡಿಸಲಾಗುವುದು ಎಂದು ಹೇಳಿದರು. ಇದುವರೆಗೆ ರೈಲ್ವೆಗೆ ಹೇಗೆ ಪ್ರತ್ಯೇಕ ಬಜೆಟ್ ಇರು ತ್ತಿತ್ತೋ ಅದೇ ರೀತಿ ರೈತರಿಗೆ ಪ್ರತ್ಯೇಕ ಬಜೆಟ್ ಮಂಡನೆ ಮಾಡಲಿದ್ದೇವೆ.ಇದು ನಮ್ಮ…