ತಿ.ನರಸೀಪುರ: ಮೂಗೂರು ಜಿ.ಪಂ ಮಾಜಿ ಸದಸ್ಯೆ ಎಂ. ಸುಧಾಮಹದೇವಯ್ಯ ಅವರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹ ದೇವಪ್ಪ ಅವರ ನಿವಾಸಕ್ಕೆ ಕೆಲವು ಕಾಂಗ್ರೆಸ್ ಮುಖಂಡರೊಂದಿಗೆ ಭೇಟಿ ನೀಡಿ ಸಚಿವರ ಸಮ್ಮುಖದಲ್ಲಿ ಪಕ್ಷಕ್ಕೆ ಮರು ಸೇರ್ಪಡೆಯಾದರು. ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮಾತನಾಡಿ, ರಾಜಕೀಯ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಕಾಂಗ್ರೆಸ್ ಉತ್ತಮವಾದ ಪಕ್ಷವಾಗಿದ್ದು, ಸಾಮಾಜಿಕ ಬದ್ಧತೆ ಯೊಂದಿಗೆ ನಿಷ್ಠೆಯಿಂದ ದುಡಿಯುವವರಿಗೆ ಎಲ್ಲಾ ವರ್ಗದವರಿಗೂ ಅಧಿಕಾರ ಸಿಗಲಿದೆ. ಕಾಂಗ್ರೆಸ್ ಪಕ್ಷದಿಂದ ಪ್ರಥಮ ಬಾರಿಗೆ ಜಿ.ಪಂ ಸದಸ್ಯೆಯಾಗಿದ್ದ…