ಮಂಡ್ಯ: ಜೆಡಿಎಸ್ ಅಭಿನಂದನಾ ವೇದಿಕೆಯಲ್ಲಿ ಸಿಎಂ ಕಣ್ಣೀರಿಟ್ಟು, ವಿಷ ಕಂಠನಾಗಿದ್ದೇನೆ ಎಂದಿರುವ ಎಚ್ಡಿಕೆಯ ಹೇಳಿಕೆಗೂ ಕಾಂಗ್ರೆಸ್ಗೂ ಸಂಬಂಧವಿಲ್ಲ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಠಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಅವರ ಪಕ್ಷದ ವೇದಿಕೆಯಲ್ಲಿ ತಮ್ಮ ಅಭಿ ಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಏನೇ ಪಕ್ಷದ ವೇದಿಕೆಯಲ್ಲಿ ಹೇಳಿದ್ದ ಮಾತುಗಳು ಕಾಂಗ್ರೆಸ್ಗೆ ಅನ್ವಯಿಸಲ್ಲ. ನಾವು ಜೆಡಿಎಸ್ಗೆ ನಮ್ಮ ಪೂರ್ಣ ಸಹಕಾರ ನೀಡುತ್ತಿದ್ದೇವೆ. ಸಿಎಂ ಯಾವ ಕಾರಣಕ್ಕೆ ಕಣ್ಣೀರಿಟ್ಟಿದಾರೋ ಗೊತ್ತಿಲ್ಲ. ಈ ಬಗ್ಗೆ ಸಿಎಂ ಅವರನ್ನೇ ಕೇಳಬೇಕು ಎಂದು…
ನಾನಲ್ಲ, ನನ್ನ ಹೆಣವೂ ಬಿಜೆಪಿ ಬಳಿ ಸುಳಿಯಲ್ಲ: ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ
July 14, 2018ಮೈಸೂರು: ಗೆದ್ದಾಗ ಒಂದು ಪಕ್ಷ, ಸೋತಾಗ ಮತ್ತೊಂದು ಪಕ್ಷಕ್ಕೆ ಹಾರಲು ರಾಜಕೀಯವೇನು ಮರಕೋತಿ ಆಟವಲ್ಲ. ಈ ಹಿಂದಿನಿಂದಲೂ ತನ್ನದೇ ಆದ ರಾಜಕೀಯ ಸಿದ್ಧಾಂತದಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಕೋಮುವಾದಿ ಪಕ್ಷದ ಸಮೀಪಕ್ಕೂ ನಾನಲ್ಲ, ನನ್ನ ಹೆಣವು ಸುಳಿಯುವುದಿಲ್ಲ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಅವರು ತಿಳಿಸುವ ಮೂಲಕ ಬಿಜೆಪಿ ಸೇರಲಿದ್ದಾರೆ ಎಂದು ಹರಡಿರುವ ವದಂತಿಯನ್ನು ತಳ್ಳಿ ಹಾಕಿದರು. ಮೈಸೂರಿನ ಶ್ರೀರಾಂಪುರದಲ್ಲಿರುವ ಧನ್ವಂತರಿ ಆಸ್ಪತ್ರೆಯ ಬಳಿ ಗುರುವಾರ ಬೆಳಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ…
ಜೆಡಿಎಸ್ ಉಳಿದರೆ ನಮಗೆ ಉಳಿಗಾಲವಿಲ್ಲ
July 10, 2018ಪಕ್ಷದ ಮುಖಂಡರಿಗೆ ಪರಾಜಿತ ಕಾಂಗ್ರೆಸ್ ಮುಖಂಡರ ಅಳಲು ಬೆಂಗಳೂರು: 37 ಸ್ಥಾನ ಬಂದವರಿಗೆ ಮುಖ್ಯಮಂತ್ರಿ ಹುದ್ದೆ ಕೊಟ್ಟ ನಾಯಕರು 80 ಸ್ಥಾನ ಪಡೆದರೂ ಹಣಕಾಸು ಖಾತೆ ಪಡೆಯಲೂ ಸಾಧ್ಯವಾಗಲಿಲ್ಲ ಎಂಥಾ ಸ್ಥಿತಿ ಬಂದಿದೆ ನೋಡಿ ಎಂದು ಕಾಂಗ್ರೆಸ್ ಶಾಸಕರು, ಪಕ್ಷದ ಹಿರಿಯ ನಾಯಕರ ಮುಂದೆ ಬೇಸರ ವ್ಯಕ್ತಪಡಿಸಿದರು. ಶಾಸಕರ ಭವನದಲ್ಲಿ ಆಯೋಜಿಸಿದ್ದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಸಭೆಯಲ್ಲಿ ಭಾಗಿಯಾದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆ ವಿಷಾದ ವ್ಯಕ್ತಪಡಿಸಿದರು. ಮೈತ್ರಿ ಪಕ್ಷದ ವಿರುದ್ಧ ಆಕ್ರೋಶ: ಸಭೆಯಲ್ಲಿ…
ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮೈಸೂರಿನಿಂದ ಸಾವಿರಾರು ಕಾರ್ಯಕರ್ತರು
July 10, 2018ಮೈಸೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜು.11ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಮೈಸೂರು ಜಿಲ್ಲೆಯಿಂದ 3 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ತಿಳಿಸಿದ್ದಾರೆ. ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದಕ್ಕಾಗಿ ಪಕ್ಷದ ಹೈಕಮಾಂಡ್ ಕೆಪಿಸಿಸಿಯ…
ಉಪಚುನಾವಣೆ: ಮಂಡ್ಯ ನಗರಸಭೆ `ಕೈ’ ತೆಕ್ಕೆಗೆ
July 10, 2018ನೂತನ ಅಧ್ಯಕ್ಷೆಯಾಗಿ ಷಹಜಹಾನ್ ಆಯ್ಕೆ, ಕಾಂಗ್ರೆಸ್ಗೆ ಜಯ: ಜೆಡಿಎಸ್ಗೆ ಭಾರೀ ಮುಖಭಂಗ ಮಂಡ್ಯ: ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಉಪ ಚುನಾವಣೆ ಯಲ್ಲಿ ನೂತನ ಅಧ್ಯಕ್ಷರಾಗಿ 26ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಷಹಜಹಾನ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಹೊಸಹಳ್ಳಿ ಬೋರೇಗೌಡರ ನಿಧನದಿಂದ ತೆರವಾಗಿದ್ದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಉಪಚುನಾವಣೆ ನಿಗದಿಯಾಗಿತ್ತು. ನಗರಸಭೆಯ ಧರಣಪ್ಪ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ನಗರದ 26ನೇ ವಾರ್ಡ್ನ ಸದಸ್ಯೆ, ಮೂಡಾ ಅಧ್ಯಕ್ಷ ಮುನಾವರ್ ಖಾನ್ ಪತ್ನಿ ಷಹಜಹಾನ್ ಪ್ರತಿಸ್ಪರ್ಧಿ 1ನೇ ವಾರ್ಡ್ನ…
ಕಾಂಗ್ರೆಸ್ನಲ್ಲಿ ಮಹಿಳೆಯರಿಗೆ ಗೌರವವಿಲ್ಲ
July 9, 2018ಬೆಂಗಳೂರು: ಕಾಂಗ್ರೆಸ್ನಲ್ಲಿ ಮಹಿಳೆಯರಿಗೆ ಗೌರವವಿಲ್ಲ. ಸ್ಥಾನಮಾನ ಕೇಳಿದರೆ ಗ್ರಾಮರಸ್ ಆಗಿ ಇಲ್ಲ ಎನ್ನುತ್ತಾರೆ ಎಂದು ಮಹಿಳಾ ಕಾರ್ಯಕರ್ತೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದಾಗ ಮಾಜಿ ಸಚಿವೆ ಮೋಟಮ್ಮ ತಬ್ಬಿಬ್ಬಾದ ಘಟನೆ ಧಾರವಾಡದಲ್ಲಿ ಇಂದು ನಡೆಯಿತು. ಧಾರವಾಡದ ವಿದ್ಯಾವರ್ಧಕ ಸಂಘ ಭವನದಲ್ಲಿ ಕಾಂಗ್ರೆಸ್ನಿಂದ `ಚುನಾವಣೆ: ಒಳ-ಹೊರಗೆ’ ಕಾರ್ಯಕ್ರಮ ಮಾಜಿ ಸಚಿವೆ ಮೋಟಮ್ಮ ನೇತೃತ್ವದಲ್ಲಿ ನಡೆಯುತ್ತಿತ್ತು. ಈ ವೇಳೆ ಅನಿತಾ ಗುಂಜಾರಾ ಎಂಬ ಕಾರ್ಯಕರ್ತೆ ಕಾಂಗ್ರೆಸ್ ಮುಖಂಡರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಮೋಟಮ್ಮನವರು ತಬ್ಬಿಬ್ಬಾದರು. ಅನಿತಾ ಅವರು ಮಾತನಾಡುತ್ತಾ, ಕಾಂಗ್ರೆಸ್ನಲ್ಲಿ ಮಹಿಳೆಯರಿಗೆ…
ವೀರಾಜಪೇಟೆ ಕ್ಷೇತ್ರದ ಮತಯಂತ್ರಗಳು ‘ಹ್ಯಾಕ್’
June 27, 2018ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅರುಣ್ ಮಾಚಯ್ಯ ಆರೋಪ ಚುನಾವಣಾ ಆಯುಕ್ತರಿಗೆ ದೂರು, ಮರು ಎಣಿಕೆಗೆ ಒತ್ತಾಯ ಮಡಿಕೇರಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮತ ಯಂತ್ರಗಳು ‘ಹ್ಯಾಕ್’ ಆಗಿರುವ ಬಗ್ಗೆ ಸಂಶಯವಿದೆ ಎಂದು ಗಂಭೀರ ಆರೋಪ ಮಾಡಿರುವ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ಅರುಣ್ ಮಾಚಯ್ಯ, ಕ್ಷೇತ್ರದಲ್ಲಿ ಚಲಾವಣೆಯಾದ ಮತಗಳನ್ನು ವಿವಿಪ್ಯಾಟ್ ಸಹಿತ ಮರು ಎಣಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧವಾಗಿ ಮಂಗಳವಾರ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿ ಕಾರಿಗಳ ಮೂಲಕ ಅವರು…
ತಲಚೇರಿ-ಮೈಸೂರು ರೈಲು ಮಾರ್ಗ ಯೋಜನೆ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತೆಗೆದು ಹಾಕುವಂತೆ
June 24, 2018ಕೊಡಗು ಮೂಲಕ ವಿನಾಶಕಾರಿ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮೇಲೆ ವೇಣುಗೋಪಾಲ್ ಒತ್ತಡ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿಗೆ ಪತ್ರ ಬರೆದ ಕರ್ನಲ್ (ನಿವೃತ್ತ) ಸಿ.ಪಿ.ಮುತ್ತಣ್ಣ ಮಡಿಕೇರಿ/ಮೈಸೂರು: ಕೊಡಗು ಮೂಲಕ ವಿವಾದಿತ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಆ ಸ್ಥಾನದಿಂದ ತೆಗೆದು ಹಾಕ ಬೇಕೆಂದು ಕೊಡಗು ವನ್ಯಜೀವಿ…
ಲೋಕಸಭಾ ಉಪಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ ಜೆಡಿಎಸ್ನಿಂದ ಲಕ್ಷ್ಮಿಅಶ್ವಿನ್ಗೌಡ ಸ್ಪರ್ಧೆ, ಕಾಂಗ್ರೆಸ್ನಿಂದ ಟಿಕೆಟ್ ಯಾರಿಗೆ..?
June 18, 2018ಮಂಡ್ಯ: ಸಚಿವ ಸಿ.ಎಸ್. ಪುಟ್ಟರಾಜು ರಾಜೀನಾಮೆಯಿಂದ ತೆರ ವಾಗಿರುವ ಮಂಡ್ಯ ಲೋಕಸಭಾ ಸ್ಥಾನಕ್ಕೆ ಉಪಚುನಾವಣೆಗೆ ಸದ್ದಿಲ್ಲದೆ ತಯಾರಿ ನಡೆಯುತ್ತಿದೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ಯಾಗಿ ಲಕ್ಷ್ಮಿ ಅಶ್ವಿನ್ಗೌಡ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಯಾರು ಎಂಬ ಚರ್ಚೆ ಈಗ ಎಲ್ಲೆಡೆ ಶುರುವಾಗಿದೆ. ಇತ್ತೀಚೆಗಷ್ಟೇ ತಮ್ಮ ಐಆರ್ಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಲಕ್ಷ್ಮಿ ಅಶ್ವಿನ್ಗೌಡ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿ ಕೊಂಡಿದ್ದಾರೆ. ಲೋಕಸಭೆ ಉಪಚುನಾ ವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ನನಗೇ ಎಂಬ ವಿಶ್ವಾಸ…
ಸಮ್ಮಿಶ್ರ ಸರ್ಕಾರದಲ್ಲಿ ಕುರುಬ ಸಮಾಜಕ್ಕೆ ಅನ್ಯಾಯ: ಖಂಡನೆ
June 18, 2018ಕೆ.ಆರ್.ಪೇಟೆ: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ದಲ್ಲಿ ಕುರುಬ ಸಮಾಜಕ್ಕೆ ಸಚಿವ ಸ್ಥಾನ ನೀಡದ ಕ್ರಮವನ್ನು ತಾಲೂಕು ಕಾಳಿದಾಸ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಆರ್.ರಂಗಸ್ವಾಮಿ ಖಂಡಿಸಿದರು. ಪಟ್ಟಣದ ಸಾಹುಕಾರ್ ಚನ್ನೇಗೌಡ ಕಾಂಪ್ಲೆಕ್ಸ್ನ ಸಂಘದ ಕಚೇರಿಯಲ್ಲಿ ನಡೆದ ಮುಂಖಡರು ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ವೀರಶೈವ-ಲಿಂಗಾ ಯಿತರನ್ನು ಹೊರತು ಪಡಿಸಿದರೆ, ಕುರುಬ ಸಮಾಜ ಜನಸಂಖ್ಯೆಯಲ್ಲಿ 2ನೇ ಸ್ಥಾನ ದಲ್ಲಿದೆ. ಆದರೂ ಕಾಂಗ್ರೆಸ್ ವರಿಷ್ಠರು ಕುರುಬ ಸಮಾಜಕ್ಕೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಿದ್ದಾರೆ. ಇದು ಸಮಾಜದ ಅಭಿವೃದ್ಧಿ…