ಮೈಸೂರು,ಏ.26(ಆರ್ಕೆಬಿ)- ಮೈಸೂರಿನಲ್ಲಿ ಕ್ವಾರಂಟೈನ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. 28 ದಿನಗಳ ಅವಧಿಯ ಕ್ವಾರಂಟೈನ್ ಪ್ರಕರಣಗಳಲ್ಲಿ ನಮ್ಮಲ್ಲಿ ಸದ್ಯ ಒಟ್ಟು 830 ಜನ ಇದ್ದಾರೆ. ಶನಿವಾರ ಬಂದಿರುವ ಮಹಿಳೆಯೊಬ್ಬರ ಪಾಸಿಟಿವ್ ಪ್ರಕರಣದಲ್ಲಿ ಮಹಿಳೆ ಸಂಪರ್ಕ ಕೂಡ ಕಡಿಮೆ ಇದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಇಂದಿಲ್ಲಿ ತಿಳಿಸಿದರು. ಮೈಸೂರಿನಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತ ನಾಡಿದ ಅವರು, ಜಿಲ್ಲೆಯಲ್ಲಿ 300ಕ್ಕೂ ಅಧಿಕ `ಎಸ್ಎ ಆರ್ಐ’ (Severe Acute Respiratory Illness) ಪ್ರಕರಣಗಳು ಪತ್ತೆಯಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸ ಲಾಗಿದೆ….
ಮೈಸೂರಲ್ಲಿ ಮತ್ತೆ ನಾಲ್ವರಿಗೆ ಸೋಂಕು
April 20, 2020ಮೈಸೂರು,ಏ.19(ಎಂಟಿವೈ)-ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮೈಸೂರು, ರಾಜಧಾನಿ ಬೆಂಗಳೂರನ್ನು ಮೀರಿ ಸುವತ್ತ ದಾಪುಗಾಲಿಟ್ಟಿದ್ದು, ಸಾರ್ವಜನಿಕರ ಆತಂಕ ಹೆಚ್ಚಿಸಿದೆ. ಮೈಸೂರು ಜಿಲ್ಲೆಯಲ್ಲಿ ನೊವೆಲ್ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಭಾನು ವಾರವೂ ಜಿಲ್ಲೆಯ ನಾಲ್ವರಲ್ಲಿ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಸೋಂಕಿತರ ಒಟ್ಟು ಸಂಖ್ಯೆ 84ಕ್ಕೆ ಏರಿಕೆಯಾಗಿದೆ. ನಂಜನಗೂಡಿನ ಜುಬಿಲಂಟ್ ಕಾರ್ಖಾನೆ ಹಾಗೂ ದೆಹಲಿಯ ತಬ್ಲಿಘಿ ಜಮಾತ್ ಮೂಲದಿಂದ ಮೈಸೂರಲ್ಲಿ ಕೊರೊನಾ ನಂಜು ಹರಡಿದೆ. ಭಾನುವಾರ ದೃಢಪಟ್ಟ 4 ಪ್ರಕರಣಗಳಲ್ಲಿ ಜುಬಿಲಂಟ್ ಕಾರ್ಖಾನೆ…
ಮೈಸೂರಿನಾದ್ಯಂತ ಸಂಚಾರ ಬಂದ್
April 18, 2020ಮೈಸೂರು, ಏ. 17(ಆರ್ಕೆ)- ಕೋವಿಡ್-19 ಲಾಕ್ಡೌನ್ ನಿರ್ಬಂಧವನ್ನು ಮತ್ತಷ್ಟು ಬಿಗಿಗೊಳಿಸಿ ರುವುದರಿಂದ ಇಂದು ಮೈಸೂರಲ್ಲಿ ಹಾಟ್ಸ್ಪಾಟ್ ಗಳು ಸೇರಿದಂತೆ ಎಲ್ಲೆಡೆ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾ ಗಿರುವ ಮೈಸೂರಿನ ವಿಜಯನಗರ 1, 2ನೇ ಹಂತ, ನಜರ್ಬಾದ್, ಜನತಾನಗರ, ಕುವೆಂಪುನಗರ, ಜೆ.ಪಿ.ನಗರ, ಜಯಲಕ್ಷ್ಮಿಪುರಂ, ಶ್ರೀರಾಂಪುರ 2ನೇ ಹಂತ, ಸರ್ದಾರ್ ವಲ್ಲಭಭಾಯಿ ಪಟೇಲ್ನಗರ 2ನೇ ಹಂತಗಳಲ್ಲಿ ಎಲ್ಲಾ ಪ್ರಮುಖ ರಸ್ತೆ ಮತ್ತು ಸಣ್ಣಪುಟ್ಟ ರಸ್ತೆಗಳನ್ನೂ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿ ಪೊಲೀಸರು…
ಲಾಕ್ಡೌನ್ ಪರಿಣಾಮ: ಪರ್ಯಾಯ ದಾರಿ ಕಂಡುಕೊಂಡ ಮೂಲ ಕಸುಬುಗಾರಿಕೆ ಕಾರ್ಮಿಕರು
April 18, 2020– ರಾಜಕುಮಾರ್ ಭಾವಸಾರ್ ಮೈಸೂರು, ಏ.16(ಆರ್ಕೆಬಿ)- ಲಾಕ್ ಡೌನ್ ನಂತರ ಮೈಸೂರಿನ ಬೀದಿ, ಬೀದಿ ಗಳಲ್ಲಿ ತರಕಾರಿ, ಹಣ್ಣಿನ ವ್ಯಾಪಾರದ ಅಂಗಡಿಗಳು ಹೆಚ್ಚುತ್ತಿವೆ. ಕೆಲವು ಪ್ರಮುಖ ವೃತ್ತ, ರಸ್ತೆಗಳಲ್ಲಿ ಮಾತ್ರ ಅಲ್ಲೊಂದು, ಇಲ್ಲೊಂದು ತರಕಾರಿ, ಹಣ್ಣಿನ ಅಂಗಡಿ ಗಳು ಇದ್ದವು. ಆದರೆ ಕಳೆದ 15 ದಿನಗಳಿಂ ದೀಚೆಗೆ ನಗರದ ಬಹುತೇಕ ರಸ್ತೆಗಳಲ್ಲಿ ತರಕಾರಿ, ಹಣ್ಣಿನ ವ್ಯಾಪಾರ ಜೋರಾಗಿದೆ. ಜನರು ಸಹ ತರಕಾರಿ, ಹಣ್ಣು ಕೊಳ್ಳಲು ಬಹು ದೂರ ಹೋಗದೆ ಸನಿಹದಲ್ಲೇ ಇರುವ ಈ ತರಕಾರಿ ಅಂಗಡಿಗಳಲ್ಲಿಯೇ ಖರೀದಿಯಲ್ಲಿ…
ಹಾಪ್ಕಾಮ್ಸ್ನಲ್ಲಿ 7 ಟನ್ನಿಂದ 15 ಟನ್ಗೆ ಹೆಚ್ಚಿದ ಹಣ್ಣಿನ ಮಾರಾಟ
April 18, 2020ಮೈಸೂರು, ಏ.17(ಆರ್ಕೆಬಿ)- ಲಾಕ್ಡೌನ್ ಪರಿಣಾಮ ಮೈಸೂರಿನಲ್ಲಿ ತರಕಾರಿ ಮತ್ತು ಹಣ್ಣಿನ ಮಾರಾಟದಲ್ಲಿ ತೀವ್ರ ಹೆಚ್ಚಳ ಕಂಡು ಬಂದಿದೆ. ಹಾಪ್ಕಾಮ್ಸ್ನಲ್ಲಿ ಪ್ರತಿದಿನ 7 ಟನ್ನಷ್ಟು ಮಾರಾಟವಾಗುತ್ತಿದ್ದ ಹಣ್ಣು ಇದೀಗ 15 ಟನ್ಗೆ ಹೆಚ್ಚಳವಾಗಿದೆ. ಹಾಗೆಯೇ ತರಕಾರಿ ಮಾರಾಟದಲ್ಲೂ ಎರ ಡರಷ್ಟು ಹೆಚ್ಚಳವಾಗಿದೆ. ಸೇಬು, ಕಿತ್ತಳೆ, ದ್ರಾಕ್ಷಿ, ದಾಳಿಂಬೆ, ಕರಬೂಜ ಇನ್ನಿತರ ಹಣ್ಣುಗಳು ಹೆಚ್ಚಾಗಿ ಖರ್ಚಾಗುತ್ತಿವೆ. ಹಾಪ್ಕಾಮ್ಸ್ ವತಿಯಿಂದ ಮನೆ ಮನೆಗೆ ಹಣ್ಣು ತರಕಾರಿ ಮಾರಾಟವೂ ಇದಕ್ಕೆ ಪೂರಕವಾಗಿದೆ. ತೋಟಗಾರಿಕೆ ಉಪ ನಿರ್ದೇಶಕರ ರುದ್ರೇಶ್ ಪ್ರಕಾರ ಲಾಕ್ಡೌನ್ನಿಂದ ಜನರು ಮನೆಯಲ್ಲೇ…
ಯೋಗಕ್ಷೇಮ ವಿಚಾರಿಸಿದ ಉಸ್ತುವಾರಿ ಅಧಿಕಾರಿ ಹರ್ಷಗುಪ್ತ
April 18, 2020ಮೈಸೂರು, ಏ.17- ಕೋವಿಡ್-19 ಪೀಡಿತರು ಹೆಚ್ಚಿನ ಸಂಖ್ಯೆಯಲ್ಲಿರುವ ನಂಜನಗೂಡಿಗೆ ಶುಕ್ರವಾರ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ಭೇಟಿ ನೀಡಿ, ಸ್ಥಳೀಯರ ಯೋಗಕ್ಷೇಮ ವಿಚಾರಿಸಿದರು. ಔಷಧ ಕಾರ್ಖಾನೆಯ ನೌಕರರು ಹೋಂ ಕ್ವಾರಂಟೈನ್ನಲ್ಲಿದ್ದು, ಕೆಲವರ ಮನೆ ಬಳಿಗೆ ತೆರಳಿ, ಹೊರಗೆ ನಿಂತು ಕುಟುಂಬದವರ ಕುಶಲೋಪರಿ ವಿಚಾರಿಸಿಕೊಂಡರು. `ನಿಮ್ಮ ಮನೆಯ ಯಜಮಾನರ ಆರೋಗ್ಯ ಈಗ ಹೇಗಿದೆ? ಹೋಂ ಕ್ವಾರಂಟೈನ್ ಅವಧಿ ಮುಗಿದಿದೆಯಾ? ನಿಮ್ಮ ಮನೆಗೆ ಅಗತ್ಯ ವಸ್ತುಗಳು ಬರುತ್ತಿವೆಯಾ? ತರಕಾರಿಗೆ ಏನು ಮಾಡಿಕೊಂಡಿದ್ದೀರಿ…’ ಎಂಬುದು ಸೇರಿದಂತೆ ಹಲವು ಪ್ರಶ್ನೆಗಳನ್ನು ಕೇಳಿ, ಆಯಾ…
ಕೊರೊನಾ ವೈರಸ್: 24 ಗಂಟೆಗಳಲ್ಲಿ 23 ಸಾವು, 1007 ಹೊಸ ಪಾಸಿಟಿವ್ ಪ್ರಕರಣಗಳು ದೇಶದಲ್ಲಿ ಸೋಂಕಿತರ ಸಂಖ್ಯೆ 13,387ಕ್ಕೆ ಏರಿಕೆ
April 18, 2020ನವದೆಹಲಿ, ಏ.17- ಭಾರತದಲ್ಲಿ ಕೊರೊನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 23 ಮಂದಿ ಸೋಂಕಿತರು ಸಾವನ್ನ ಪ್ಪಿದ್ದು ಆ ಮೂಲಕ ದೇಶದಲ್ಲಿ ಕೊರೊನಾ ವೈರಸ್ಗೆ ಬಲಿಯಾದವರ ಸಂಖ್ಯೆ 437ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೊರೊನಾ ಕುರಿತ ಮಾಹಿತಿ ನೀಡಿದರು. ‘ಲಾಕ್ಡೌನ್ ಘೋಷಣೆ ಬಳಿಕ ಭಾರತದಲ್ಲಿ ಕೊರೊನಾ ಪ್ರಸರಣ ಪ್ರಮಾಣ ಗಣನೀಯವಾಗಿ ತಗ್ಗಿದೆ. ಲಾಕ್ಡೌನ್ಗೂ ಮುನ್ನ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳಲು…
ಮಳವಳ್ಳಿ: 7ಕಿ.ಮೀ. ವ್ಯಾಪ್ತಿ ‘ಬಫರ್ ಝೋನ್’
April 7, 202028 ದಿನಗಳ ಕಾಲ ತೀವ್ರ ನಿಗಾ, ಅನುಮತಿಯಿಲ್ಲದೆ ಯಾರೂ ಓಡಾಟ ಮಾಡುವಂತಿಲ್ಲ: ಜಿಲ್ಲಾಧಿಕಾರಿ ವೆಂಕಟೇಶ್ ಮಂಡ್ಯ, ಏ.6(ನಾಗಯ್ಯ)- ಕೊರೊನಾ ಸೋಂಕು ಇರುವ ದೆಹಲಿ ಮೂಲದ ಮೌಲ್ವಿಗಳು ಸಂಚರಿಸಿರುವ ಹಿನ್ನೆಲೆಯಲ್ಲಿ ಮಳವಳ್ಳಿಯಲ್ಲಿ ತೀವ್ರ ಕಟ್ಟೆಚ್ಚರವಹಿಸ ಲಾಗಿದ್ದು, ಸೋಮವಾರದಿಂದ 3ಕಿ.ಮೀ. ವ್ಯಾಪ್ತಿಯನ್ನು ಕಂಟೋನ್ಮೆಂಟ್ ಜೋನ್ ಹಾಗೂ ಪಟ್ಟಣದ 7ಕಿ.ಮೀ. ವ್ಯಾಪ್ತಿಯನ್ನು ಬಫರ್ ಜೋನ್ ಎಂದು ಜಿಲ್ಲಾಧಿ ಕಾರಿ ಡಾ.ಎಂ.ವಿ.ವೆಂಕಟೇಶ್ ಘೋಷಿಸಿದರು. ಪಟ್ಟಣಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ನಿಜಾಮುದ್ದೀನ್ ಪ್ರದೇಶದಲ್ಲಿರುವ ತಬ್ಲೀಘಿ…
ಮೈಸೂರಲ್ಲಿ ಕ್ವಾರಂಟೈನ್ನಲ್ಲಿದ್ದವರ ಬಿಡಾಡಿ ಸಂಚಾರ!
April 6, 2020ಮೈಸೂರು, ಏ.5(ಎಂಟಿವೈ)- ಮೈಸೂರಿನಲ್ಲಿ ಸದ್ಯ ಹೋಂ ಕ್ವಾರಂಟೈನ್ನಲ್ಲಿರುವ ಜುಬಿಲಂಟ್ ಕಾರ್ಖಾನೆಯ ನೌಕ ರರೂ ಸೇರಿದಂತೆ ಹಲವರು ಮನೆಯಿಂದ ಹೊರಬಂದು ಓಡಾಡುತ್ತಿದ್ದು, ಸುತ್ತಲ ನಿವಾಸಿಗಳನ್ನು ತೀವ್ರ ಆತಂಕಕ್ಕೀಡು ಮಾಡಿದೆ. ಮೈಸೂರಿನ ಅಗ್ರಹಾರ, ವಿಜಯನಗರ, ಗೋಕುಲಂ ಸೇರಿದಂತೆ ವಿವಿಧೆಡೆ ಇರುವ ಮನೆಗಳಲ್ಲಿ ಕ್ವಾರಂಟೈನ್ ನಲ್ಲಿರುವ ಕೊರೊನಾ ಸೋಂಕು ತಗುಲಿರಬಹುದಾದ ಶಂಕೆ ಇರುವವರು ಮನೆಯಿಂದ ಹೊರಬರುತ್ತಿದ್ದಾರೆ ಎಂದು ಸ್ಥಳೀಯರು ಜಿಲ್ಲಾಡಳಿತಕ್ಕೆ ದೂರು ನೀಡಿದರು. ದೂರು ಬಂದ ಸ್ಥಳಗಳಿಗೆ ಭಾನುವಾರ ಮುಂಜಾನೆಯೇ ತಕ್ಷಣ ಧಾವಿಸಿದ ಜಿಲ್ಲಾಡಳಿತದ ತಂಡ, ಸ್ವಗೃಹಗಳಲ್ಲಿ ಕ್ವಾರಂಟೈನ್ ಆಗಿದ್ದವರನ್ನು ಅಲ್ಲಿಂದ…
ಕರ್ನಾಟಕದಲ್ಲಿ ಜುಬಿಲಂಟ್ ಲೈಫ್ ಸೈನ್ಸಸ್ನಿಂದ ಆರೋಗ್ಯ, ಸುರಕ್ಷತಾ ಸಾಮಗ್ರಿಗಳ ವಿತರಣೆ
April 5, 2020ಮೈಸೂರು,ಏ.4-ಕೋವಿಡ್-19 ಬಿಕ್ಕಟ್ಟು ಪರಿಹಾರಕ್ಕೆ ಕರ್ನಾ ಟಕ ಸರ್ಕಾರ ಕೈಗೊಂಡಿರುವ ಆರೋಗ್ಯ ಮತ್ತು ಸುರಕ್ಷತಾ ಸೇವೆಗಳಿಗೆ ಸಂಪೂರ್ಣ ಬೆಂಬಲ ನೀಡು ವುದಾಗಿ ಸಮಗ್ರ ಜಾಗತಿಕ ಫಾರ್ಮಾಸ್ಯೂಟಿಕಲ್ ಮತ್ತು ಜೀವ ವಿಜ್ಞಾನಗಳ ಕಂಪನಿಯಾಗಿರುವ ಜುಬಿಲಂಟ್ ಲೈಫ್ ಸೈನ್ಸಸ್ ಲಿಮಿಟೆಡ್ ಪ್ರಕಟಿಸಿದೆ. ನಮ್ಮ ಸಮುದಾಯ, ನೌಕರರ ಆರೋಗ್ಯ ಮತ್ತು ಸುರಕ್ಷತೆಗೆ ಜುಬಿಲಂಟ್ ಲೈಫ್ ಸೈನ್ಸಸ್ ಹೆಚ್ಚಿನ ಆದ್ಯತೆ ನೀಡುತ್ತಿದೆ. ಎಲ್ಲರೂ ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳುತ್ತಿದ್ದಾರೆಯೇ ಎಂಬುದನ್ನು ನಿರಂತರವಾಗಿ ಖಾತರಿಪಡಿಸಿಕೊಳ್ಳುತ್ತಿದೆ. ಇದಲ್ಲದೇ, ಸರ್ಕಾರ ನೀಡಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸು ತ್ತಿದ್ದಾರೆಯೇ ಎಂಬುದನ್ನು…