ಮೈಸೂರು, ಏ.1(ಪಿಎಂ)- ಕೊರೊನಾ ವಿರುದ್ಧದ ಹೋರಾಟದಲ್ಲಿ ಮೈಸೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಪಾಲಿಕೆ ಅಧಿಕಾರಿ ಗಳಿಗೆ ಹೊಣೆಗಾರಿಕೆ ವಹಿಸಿ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಬುಧವಾರ ಆದೇಶ ಹೊರಡಿಸಿದ್ದಾರೆ. ನಿರಾಶ್ರಿತರ ಕೇಂದ್ರ ಹಾಗೂ ಸಾಂತ್ವನ ಕೇಂದ್ರ ಗಳ ನಿರ್ವಹಣೆಯನ್ನು ಹೆಚ್ಚುವರಿ ಆಯುಕ್ತ ಶಶಿಕುಮಾರ್, ಅವಶ್ಯಕ ಸಾಮಗ್ರಿಗಳ ಖರೀದಿ, ಪಾಸ್ಗಳ ವಿತರಣೆ ಮತ್ತು ಆಡಳಿತಾತ್ಮಕ ವಿಷಯಗಳ ನಿರ್ವಹಣೆಯನ್ನು ಒಳಚರಂಡಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರಂಜಿತ್ಕುಮಾರ್ ಅವರಿಗೆ ವಹಿಸಲಾಗಿದೆ. ಹೋಂ ಕ್ವಾರಂಟೈನ್…
ಮೈಸೂರಿನಲ್ಲಿ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ಪತ್ತೆ: ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ
March 31, 2020* ಕ್ವಾರಂಟೇನ್ ನಲ್ಲಿರುವವರಿ ಮನೆಯಿಂದ ಹೊರಗೆ ಬಂದರೆ ಕ್ರಿಮಿನಲ್ ಪ್ರಕರಣ ದಾಖಲು * ಸಚಿವ ವಿ.ಸೋಮಣ್ಣ ಎಚ್ಚರಿಕೆ ಮೈಸೂರು,ಮಾ.30( MTY ) – ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯ ಮತ್ತೆ ನಾಲ್ವರು ನೌಕರರಿಗೆ ಕೊರೊನಾ ಸೋಂಕು ಇರುವುದು ದೃಡಪಟ್ಟಿದೆ, ಸೋಂಕು ಹರಡುವುದನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಲಾಗಿದ್ದು ನಿಯಮ ಉಲ್ಲಂಘಿಸಿ ಕ್ವಾರಂಟೇನ್ ನಲ್ಲಿರುವವರು ಹೊರಗೆ ಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಎಚ್ಚರಿಸಿದ್ದಾರೆ. ಮೈಸೂರು ಜಿ.ಪಂ ಸಭಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ…
ನಂಜನಗೂಡನ್ನು ಕ್ಲಸ್ಟರ್ ಕೇಸ್ ಆಗಿ ಪರಿಗಣಿಸಲಾಗಿದೆ: ಡಿಸಿ
March 30, 2020ವದಂತಿ, ಭಯ ಹುಟ್ಟಿಸುವವರ ವಿರುದ್ದ ಕ್ರಮ ಜಿಲ್ಲೆಯಲ್ಲಿ 1702 ಮಂದಿ ಕ್ವಾರಂಟೇನ್ ನಲ್ಲಿದ್ದು, 766 ಮಂದಿ ಪೂರ್ಣಗೊಳಿಸಿದ್ದಾರೆ ಮೈಸೂರು,ಮಾ.29( MTY) – ಒಂದೇ ಸ್ಥಳದಲ್ಲಿ ಆರು ಮಂದಿಗೆ ನೊವೆಲ್ ಕೊರೊನಾ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಕೇಂದ್ರದ ಕಂಟೇನ್ಮೆಂಟ್ ಪ್ಲಾನ್ ನಿಯಮಾನುಸಾರ ನಂಜನಗೂಡನ್ನು ಕ್ಲಸ್ಟರ್ ಕೇಸ್ ಆಗಿ ಪರಿಗಣಿಸಿ, ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಭಾನುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿಯಲ್ಲಿ ಕೊರೊನಾ…
ನಂಜನಗೂಡಿಗೆ ಬರುವ ವಾಹನಗಳ ಜಪ್ತಿಗೆ ಸೂಚನೆ: ಎಸ್ ಪಿ ಎಚ್ಚರಿಕೆ
March 30, 2020220 ವಾಹನ ವಶ ಪಟ್ಟಣದ ಜನತೆ ಆತಂಕ ಬೇಡ* ಮೈಸೂರು,ಮಾ.29( MTY )- ನಂಜನಗೂಡು ಪಟ್ಟಣದಲ್ಲಿ ಐದು ಮಂದಿಗೆ ನೊವೆಲ್ ಕೊರೊನಾ ಸೋಂಕು ಇರುವುದು ದೃಡಪಟ್ಟಿರುವ ಹಿನ್ನೆಲೆಯಲ್ಲಿ ಅನಗತ್ಯ ಸಂಚಾರ ನಿಷೇಧಿಸಲಾಗಿದೆ. ಈಗಾಗಲೇ 220 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಸೋಮವಾರದಿಂದ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ ಪಿ ಸಿ.ಬಿ. ರಿಷ್ಯಂತ್ ಎಚ್ಚರಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮ ಕುರಿತಂತೆ ಭಾನುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿ 1372 ನೌಕರರು ಕೆಲಸ ಮಾಡುತ್ತಿದ್ದು,…
ಸರ್ವಪಕ್ಷ ನಾಯಕರ ಸಭೆಯಲ್ಲಿ ಸಿದ್ದರಾಮಯ್ಯ ಅವರು ಹೇಳಿದ್ದು
March 30, 2020ಬೆಂಗಳೂರು, ಮಾ.29-ನಮ್ಮ ತಪ್ಪಿನಿಂದ ಯಾವ ನ್ಯೂನತೆ ಆಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4.500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು. ಮೂರನೇ ಹಂತಕ್ಕೆ ನಾವು ಇನ್ನೂ ಹೋಗಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ. ಆತನಿಗೆ ವಿದೇಶದಿಂದ ಬಂದವರ ಸಂಪರ್ಕ ಇರಲಿಲ್ಲ. ಆದರೂ ಕರೋನ…
ಕೋವಿದ್ 19 ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು ಸಿಬ್ಬಂದಿಗೆ ಸೆಲ್ಫ್ ಪ್ರೊಟೆಕ್ಷನ್ ಇಲ್ಲ
March 30, 2020ಮೈಸೂರು ಮಾ. 29 (ಆರ್ ಕೆಬಿ)- ಕೋವಿದ್-19 ರೋಗಿಗಳ ಜೀವರಕ್ಷಣೆಗೆ ಹೋರಾಡುತ್ತಿರುವ ವೈದ್ಯರು, ನರ್ಸ್ ಗಳು, ಕ್ಲಾಸ್ 4 ಸಿಬ್ಬಂದಿಗೆ ಸೆಲ್ಫ್ ಪ್ರೊಟಕ್ಷನ್ ಇಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಮೈಸೂರಿನ ಕೆ.ಆರ್.ಆಸ್ಪತ್ರೆ ಮತ್ತು ನೂತನ ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು 8 ಜನರಿಗೆ ಕೋವಿದ್ 19 ಚಿಕಿತ್ಸೆ ನೀಡಲಾಗುತ್ತಿದೆ. ಕೋವಿದ್ 19 ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು, ನರ್ಸ್ ಗಳು, ಕ್ಲಾಸ್ 4 ಸಿಬ್ಬಂದಿಗೆ ಬೇಸಿಕ್ ಮೆಡಿಕಲ್ ಫೆಸಿಲಿಟಿ ಕೊರತೆ ಇದೆ ಎನ್ನಲಾಗಿದೆ. ಇವರಿಗೆ ಚಿಕಿತ್ಸೆಗೆ ಅಗತ್ಯವಾದ ನಾಲ್ಕು ಪ್ರಮುಖ…
ನಂಜನಗೂಡಿಗೆ ಪ್ರಪ್ರಥಮವಾಗಿ ಕೊರೋನ ಎಂಬ ಮಹಾಮಾರಿ ವೈರಸ್ ತಂದು ಹಂಚಿದ ಕೀರ್ತಿ ಜುಬೀಲಂಟ್ ಕಾರ್ಖಾನೆಗೆ ಸಲ್ಲುತ್ತದೆ
March 29, 2020ಮೈಸೂರು,ಮಾ.29: ನಂಜನಗೂಡು ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಜುಬೀಲಂಟ್ ಔಷಧಿ ತಯಾರಿಕಾ ಕಾರ್ಖಾನೆ. ಈ ಕಾರ್ಖಾನೆಯಲ್ಲಿ ನೌಕರನಾಗಿದ್ದ ವ್ಯಕ್ತಿಯೊಬ್ಬನಿಗೆ ಕರೋನವೈರಸ್ ದೃಢಪಟ್ಟಿದ್ದು ಜಿಲ್ಲೆಯ ಮೂರನೇ ಸೋಂಕಿತ ವ್ಯಕ್ತಿ ಯಾಗಿದ್ದ. ಇದರಿಂದ ಬೆಚ್ಚಿಬಿದ್ದ ಜಿಲ್ಲಾ ಮತ್ತು ತಾಲೂಕು ಆಡಳಿತ ಕಾರ್ಖಾನೆಗೆ ತೆರಳಿ ಆತನ ಜೊತೆ ಸಂಪರ್ಕದಲ್ಲಿದ್ದ ವರನ್ನು ಸೇರಿದಂತೆ ಅಲ್ಲಿನ ಸಾವಿರಾರು ಕಾರ್ಮಿಕರಿಗೆ ಕ್ವಾರಂಟೈನ್ ಸೀಲ್ ಹಾಕಿ ಎಲ್ಲರನ್ನೂ ಹೋಂ ಕ್ವಾರಂಟೈನ್ನಲ್ಲಿರುವಂತೆ ಕಟ್ಟುನಿಟ್ಟಿನ ಆದೇಶ ಮಾಡಿ ಕಾರ್ಖಾನೆಗೂ ಸಹ ಬೀಗ ಜಡಿಯಲಾಗಿತ್ತು ವಿಪರ್ಯಾಸವೆಂದರೆ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೊದಲಿನ ಸೋಂಕಿತ ವ್ಯಕ್ತಿಯ…
ಕೆ.ಆರ್.ಆಸ್ಪತ್ರೆ ಹಾಗೂ ಕ್ವಾರಂಟೇನ್ ಮನೆಗಳ ಸುತ್ತ ಪೆರಾಕ್ಸೈಡ್ , ಸಿಲ್ವರ್ ನೈಟ್ರೇಟ್ ದ್ರಾವಣ ಸಿಂಪಡಣೆ
March 29, 2020ಸೋಂಕಿತರು ಓಡಾಡಿರುವ ಸ್ಥಳಗಳಲ್ಲಿ ವೈರಾಣು ನಾಶಕ್ಕೆ ಕ್ರಮ ಹೋಮ್ ಕ್ವಾರಂಟೇನ್ ಇರುವ ಮನೆಗಳು, ಸರ್ಕಾರಿ ಕಚೇರಿ ಸಮುಚ್ಚಯಕ್ಕೂ ಸಿಂಪಡಣೆ ಮೈಸೂರು,ಮಾ.29(MTY)- ನೊವೆಲ್ ಕೊರೊನಾ ವೈರಸ್ ಮೈಸೂರಿನಲ್ಲಿ ಮೂರನೇ ಹಂತಕ್ಕೆ ವ್ಯಾಪಿಸಿದ ಹಿನ್ನೆಲೆಯಲ್ಲಿ ನಗರ ಪಾಲಿಕೆ ಕೆ.ಆರ್.ಆಸ್ಪತ್ರೆ, ಸರ್ಕಾರಿ ಕಚೇರಿ ಹಾಗೂ ವಿವಿಧ ಬಡಾವಣೆಗಳಲಿರುವ ಹೋಮ್ ಕ್ವಾರಂಟೇನ್ ಮನೆಗಳಿಗೆ ವೈರಾಣು ನಾಶ ಮಾಡುವ ಜಲಜನಕದ ಪೆರಾಕ್ಸೈಡ್ ಹಾಗೂ ಸಿಲ್ವರ್ ನೈಟ್ರೇಟ್ ದ್ರಾವಣ ಸಿಂಪಡಿಸು ಕಾರ್ಯಾಚರಣೆ ಆರಂಭಿಸಿದೆ. ಕಳೆದ ಎರಡು ದಿನದಿಂದ ಮೈಸೂರು ನಗರ ಪಾಲಿಕೆಯ ಎಲ್ಲಾ 65 ವಾರ್ಡ್…
ಸರ್ಕಾರಿ ಆಸ್ಪತ್ರೆಗಳಲ್ಲೇ ಕೊರೊನಾ ಚಿಕಿತ್ಸಾ ಕೇಂದ್ರ ಓಪನ್ ತಂದ ಸಂಕಟ; ಕೊರೊನಾ ಅಂಟುವ ಭೀತಿಯಿಂದ ಸರ್ಕಾರಿ ಅಸ್ಪತ್ರೆಗೆ ಹೋಗೊಕು ಹಿಂದೇಟು ಹಾಕುತ್ತಿರುವ ಜನ
March 29, 2020ಸರ್ಕಾರಿ ಆಸ್ಪತ್ರೆಯಿಂದ ದೂರ ಪ್ರತ್ಯೇಕವ್ಯವಸ್ತೆ ಮಾಡಲು ಆಗ್ರಹ ಕೊರೊನಾ ಭೀತಿಯಿಂದ ಕ್ಲಿನಿಕ್ ಗಳ ಭಾಗಿಲನ್ನೇ ತೆರೆಯದ ಖಾಸಗಿ ವೈದ್ಯರು ಮಂಡ್ಯ,ಮಾ.29 ; ಕರುಳಬಳ್ಳಿಯ ಸಂಬಂಧಕ್ಕೂ ಕೊಳ್ಳಿಯಿಟ್ಟು ತನ್ನ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್ ಇದೀಗ ರೋಗಿಗಳ ಪಾಲಿನ ದೇವಸ್ಥಾನಗಳೆನಿಸಿ ಕೊಂಡಿರುವ ಆಸ್ಪತ್ರೆಗಳಿಗೂ ಕಂಠಕ ತಂದಿಟ್ಟಿದೆ. ಕೊರೊನಾ ಶಂಕಿತರಿಗೆ ಚಿಕಿತ್ಸಾ ಕೇಂದ್ರ ತೆರೆದಿರುವುದೇ ಸರ್ಕಾರಿ ಆಸ್ಪತ್ರೆಗಳಿಗೀಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೌದು,ಅಕ್ಷರಶಃ ಸತ್ಯ, ಇದೀಗ ಆಸ್ಪತ್ರೆಗಳಿಗೂ “ಕೊರೊನಾ’’ ದೊಡ್ಡ ತಲೆನೋವು ತಂದಿಟ್ಟಿದೆ, ಕೊರೊನಾ ಸೋಂಕಿತರಿಗೂ ಚಿಕಿತ್ಸೆಗಾಗಿ ಆಸ್ಪತ್ರೆಯೊಳಗೇ “…
ದಯಮಾಡಿ ಯಾರೂ ಮನೆಯಿಂದ ಹೊರಗೆ ಬರಬೇಡಿ
March 29, 2020ಮೈಸೂರು, ಮಾ.29(ಎಸ್ ಬಿಡಿ)- ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಜನ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಅನಗತ್ಯವಾಗಿ ಓಡಾಡದಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಮನವಿ ಮಾಡಿಕೊಳ್ಳುತ್ತಿದ್ದರೂ ಗಂಭೀರವಾಗಿ ಪರಿಗಣಿಸದಿರುವುದು, ಆತಂಕ ಹೆಚ್ಚಿಸಿದೆ. ಮೈಸೂರಿನ ದೇವರಾಜ ಸಂಚಾರ ಠಾಣೆ ಪೊಲೀಸರು ಕೆ.ಆರ್.ವೃತ್ತದಲ್ಲಿ ದ್ವಿಚಕ್ರ ವಾಹನಗಳಲ್ಲಿ ಓಡಾಡುವವರ ತಡೆದು, ಅವರಿಗೆ ಕೈಮುಗಿದು ಮನವಿ ಮಾಡಿಕೊಳ್ಳುತ್ತಿದ್ದರು. ದಯಮಾಡಿ ಯಾರೂ ಮನೆಯಿಂದ ಹೊರಗೆ ಬರಬೇಡಿ ಎಂದು ತಿಳಿ ಹೇಳುತ್ತಿದ್ದರು. ಮತ್ತೊಂದೆಡೆ ಪೊಲೀಸ್ ಸಿಬ್ಬಂದಿಯೊಬ್ಬರು ವಾಹನ ಸವಾರರಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿರುವ ಪ್ರಸಂಗವೂ ನಡೆದಿದೆ. ಮಕ್ಕಳನ್ನು…