ಮೈಸೂರು,ಏ.17(ವೈಡಿಎಸ್)-`ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ದೃಷ್ಟಿಯಿಂದ ಲಾಕ್ಡೌನ್ ಒಳ್ಳೆಯದೆ. ಆದರೆ, ಕೊರೊನಾ ಹೆಚ್ಚಾ ಗುತ್ತಿದ್ದರೂ ರಾಜಕಾರಣಿಗಳು ಮೈಮರೆತಿದ್ದಾರೆ. ಗುಂಪು ಕಟ್ಟಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಇವರಿಗಿಲ್ಲದ ನಿರ್ಬಂಧ ಸಾರ್ವಜನಿಕರಿಗೇಕೆ? ಮೊದಲು ರಾಜಕಾರಣಿಗಳು ಕೊರೊನಾ ಮಾರ್ಗಸೂಚಿ ಸರಿ ಯಾಗಿ ಅನುಸರಿಸಿದರೆ ಕೊರೊನಾ ಹೆಚ್ಚಾಗುತ್ತಿರಲಿಲ್ಲ. ಲಾಕ್ಡೌನ್ ಮಾಡಬೇಕಾದ ಪ್ರಮೇಯವೇ ಇರು ತ್ತಿರಲಿಲ್ಲ. ಮೊದಲು ರಾಜಕಾರಣಿಗಳು ಕೋವಿಡ್-19 ಮಾರ್ಗಸೂಚಿ ಅನುಸರಿಸಲಿ’… ಇವು ಮೈಸೂರಿನ ವಿವಿಧ ಅಂಗಡಿ ಮಾಲೀಕರು, ಸಾರ್ವಜನಿಕರ ಆಕ್ರೋಶದ ನುಡಿಗಳು. ಈಗಾಗಲೇ ಲಾಕ್ಡೌನ್ನಿಂದ ಸಂಕಷ್ಟ ಎದುರಾಗಿ ಭವಿಷ್ಯದ…
ಡೋಲಾಯಮಾನ ಸ್ಥಿತಿಯಲ್ಲಿ ಹೋಟೆಲ್ ಮಾಲೀಕರು
May 24, 2020ಮೈಸೂರು, ಮೇ 23 (ಆರ್ಕೆ)- ಸರ್ಕಾರ ಒಂದು ಖಚಿತ ನಿಲುವು ತಾಳದೇ ದಿನ ದೂಡುತ್ತಿರುವುದರಿಂದ ಮೈಸೂರಿನ ಹೋಟೆಲ್ ಮಾಲೀಕರ ಸ್ಥಿತಿ ಡೋಲಾಯ ಮಾನವಾಗಿದೆ. ಕೋವಿಡ್ ಲಾಕ್ಡೌನ್ ನಿರ್ಬಂಧ ದಿಂದಾಗಿ ಕಳೆದ ಎರಡು ತಿಂಗಳಿಂದ ಬಂದ್ ಆಗಿರುವ ಹೋಟೆಲ್ಗಳ ಮಾಲೀಕರು, ಲಾಕ್ಡೌನ್ ಸಡಿಲಗೊಂಡು ಇನ್ನಿತರ ಎಲ್ಲಾ ವಾಣಿಜ್ಯ ವಹಿವಾಟಿಗೆ ಅವಕಾಶ ನೀಡಿ ದ್ದರೂ ಹೋಟೆಲ್ಗಳನ್ನು ಕೇವಲ ಪಾರ್ಸೆಲ್ ಸೇವೆಗೆ ಸೀಮಿತಗೊಳಿಸಿರುವುದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಮಂಗಳವಾರ ಬೆಂಗಳೂರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಭೇಟಿ ಮಾಡಿ, ಮನವಿ ಸಲ್ಲಿಸಿದ…
ರಂಜಾನ್: ನೂರಾರು ಮುಸ್ಲಿಂ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿದ ಶಾಸಕ ನಾಗೇಂದ್ರ
May 24, 2020ಮೈಸೂರು: ರಂಜಾನ್ ಹಬ್ಬದಂಗವಾಗಿ ಮುಸ್ಲಿಂ ಸಮುದಾಯದ 600ಕ್ಕೂ ಹೆಚ್ಚು ಕುಟುಂಬಗಳಿಗೆ ಅಶೋಕ ರಸ್ತೆಯಲ್ಲಿನ ಸರ್ಕಾರಿ ನಿಜಾಮಿಯ ಬಾಡಿಗಾರ್ಡ್ ಪ್ರೌಢಶಾಲೆ ಆವರಣದಲ್ಲಿ ಶಾಸಕ ಎಲ್.ನಾಗೇಂದ್ರ ದಿನಸಿ ಕಿಟ್ ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು, ರಂಜಾನ್ ಪ್ರಯುಕ್ತ ಹಾಗೂ ಲಾಕ್ಡೌನ್ನಿಂದ ಕಷ್ಟಕ್ಕೆ ಸಿಲುಕಿರುವ ಮುಸ್ಲಿಂ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಗುತ್ತಿದೆ. ಇನ್ನೆರಡು ದಿನದಲ್ಲಿ ರಂಜಾನ್ ಹಬ್ಬವಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯಲ್ಲಿಯೇ ಹಬ್ಬ ಆಚರಿಸಿ ಎಂದರಲ್ಲದೆ, ಹಬ್ಬದ ಶುಭಾಶಯ ಕೋರಿದರು. ಮೇಯರ್ ತಸ್ನಿಂ ಮಾತನಾಡಿ, ವಾರ್ಡ್ 25 ಮತ್ತು 26ರಲ್ಲಿ…
ಹೋಟೆಲ್ ಮಾಲೀಕರ ಸಂಘದಿಂದ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ
May 24, 2020ಮೈಸೂರು: ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಅಶೋಕಪುರಂನ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಿಸಲಾಯಿತು. ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಸಂಘದ ಸಭಾಂಗಣದಲ್ಲಿ ಅಕ್ಕಿ, ಸಕ್ಕರೆ, ಬೇಳೆ, ಎಣ್ಣೆ, ರವೆ, ಸಾಂಬಾರ್ಪೌಡರ್, ಉದ್ದಿನಬೇಳೆ, ಗೋಧಿಹಿಟ್ಟು, ಉಪ್ಪುಗಳನ್ನೊಳಗೊಂಡ ದಿನಸಿ ಕಿಟ್ ಅನ್ನು 20 ಮಂದಿ ಆಟೋ ಚಾಲಕರಿಗೆ ಪಾಲಿಕೆ ಆರೋಗ್ಯಾಧಿಕಾರಿ ಡಾ.ಜಯಂತ್ ವಿತರಿಸಿದರು. ಇದೇವೇಳೆ ಲಾಕ್ಡೌನ್ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಕಡುಬಡವರಿಗೆ ಪಾಲಿಕೆ ವತಿಯಿಂದ ದಿನಸಿ ಕಿಟ್ ವಿತರಿಸುತ್ತಿದ್ದು, 4 ಸಾವಿರ ಪ್ಯಾಕೆಟ್ ಅಡುಗೆ ಎಣ್ಣೆ ಖರೀದಿಸಲು…
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ
May 24, 2020ಮೈಸೂರು: ಮೈಸೂರಿನ ಅವಧೂತ ದತ್ತಪೀಠ ಗಣಪತಿ ಸಚ್ಚಿದಾ ನಂದ ಆಶ್ರಮ ಹಾಗೂ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಸಹಯೋಗ ದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬದವರಿಗೆ ದಿನಸಿ ಕಿಟ್ ವಿತರಿಸಲಾಯಿತು. ಇಟ್ಟಿಗೆಗೂಡಿನಲ್ಲಿರುವ ಬ್ರಾಹ್ಮಣ ಸಂಘದ ಕಚೇರಿಯಲ್ಲಿ ಕಿಟ್ ವಿತರಿಸಿ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಕೊರೊನಾದಿಂದ ಎಲ್ಲರೂ ಸಂಕಷ್ಟಕ್ಕೀಡಾಗಿದ್ದಾರೆ. ಲಾಕ್ಡೌನ್ನಿಂದಾಗಿ 2 ತಿಂಗಳಿಂದ ದೇವಾಲಯಗಳು ಮುಚ್ಚಿವೆ. ಸಮಾರಂಭಗಳು ನಡೆಯುತ್ತಿಲ್ಲ. ಪರಿಣಾಮ ಅರ್ಚಕರು ಹಾಗೂ ಪುರೋಹಿತರ ಕುಟುಂಬ ತೀವ್ರ ಸಂಕಷ್ಟದಲ್ಲಿವೆ. ಈಗಾಗಲೇ ಮೈಸೂರು ಬ್ರಾಹ್ಮಣ ಸಂಘವು,…