ಮೈಸೂರು, ಏ.5(ಎಂಕೆ)- ರಾಜ್ಯದಲ್ಲಿ ಕೋವಿಡ್-19 2ನೇ ಅಲೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆ ಈಗಾಗಲೇ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಜಾತ್ರೆ, ಮೆರವಣಿಗೆ, ಧರಣಿ, ಹಬ್ಬಗಳ ಆಚರಣೆ ಮಾಡದಂತೆ ಆದೇಶ ಹೊರಡಿಸಿದೆ. ಈ ಕುರಿತು ಮೈಸೂರು ನಗರದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಹಲವು ಅತ್ಯಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಡಿಸಿಪಿ ಪ್ರಕಾಶ್ಗೌಡ ತಿಳಿಸಿದ್ದಾರೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ವತಿಯಿಂದ ನಿರಂತರ ವಾಗಿ ಕೊರೊನಾ ಜಾಗೃತಿ ಜಾಥಾ, ಉಚಿತ ಮಾಸ್ಕ್ ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜೊತೆಗೆ…
ಮೈಸೂರಲ್ಲಿ ಹೆಚ್ಚಿದ ಕೊರೊನಾ ಸೋಂಕು ಒಂದೇ ದಿನ 260 ಪ್ರಕರಣ ದೃಢ
April 5, 2021ಮೈಸೂರು, ಏ.4(ಎಸ್ಬಿಡಿ)- ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಭಾನುವಾರ 260 ಜನರಿಗೆ ಸೋಂಕು ದೃಢಪಟ್ಟಿದೆ. ಕಳೆದ ಐದಾರು ತಿಂಗಳಲ್ಲಿ ಇದು ದಾಖಲೆ ಪ್ರಮಾಣದ ಏರಿಕೆಯಾಗಿದೆ. 2020ರ ಮಾರ್ಚ್ ಅಂತ್ಯದಲ್ಲಿ ವಕ್ಕರಿಸಿದ ಕೊರೊನಾ, ದಿನಕಳೆ ದಂತೆ ಎಲ್ಲೆಡೆ ಆವರಿಸಿಬಿಟ್ಟಿತು. ನಂತರ ಸೆಪ್ಟೆಂಬರ್ ಮಾಹೆ ಯಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಿ, ಇತ್ತೀಚೆಗೆ ಎರಡಂಕಿಗೆ ಇಳಿದಿತ್ತು. ಆದರೆ ಕೊರೊನಾ ದಾಳಿಯಿಂದ ಚೇತರಿಸಿಕೊಳ್ಳುವ ಹೊತ್ತಿಗೆ ಇದೀಗ 2ನೇ ಅಲೆ ಅಬ್ಬರಿಸುತ್ತಿದೆ. ಅಂತೆಯೇ ಮೈಸೂರಿನಲ್ಲೂ ಸೋಂಕಿ ತರ ಸಂಖ್ಯೆ…
ಶಾಲಾ-ಕಾಲೇಜುಗಳಲ್ಲಿ ಹೆಚ್ಚಿನ ಸೋಂಕು ಹಿನ್ನೆಲೆ ತರಗತಿಯಿಂದ ಹೊರಬಂದ ನಂತರ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಿ
April 1, 2021ಮೈಸೂರು, ಮಾ.31(ಎಂಟಿವೈ)- ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಂಡು ಬರು ತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ತರಗತಿ ಮುಗಿದ ಬಳಿಕ ಕಡ್ಡಾಯ ವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ. ಅಮರನಾಥ್ ಸಲಹೆ ನೀಡಿದ್ದಾರೆ. ಮೈಸೂರಲ್ಲಿ ಬುಧವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಮೈಸೂರಿನ ಎರಡು ಶಾಲೆ, ಬನ್ನೂರು, ಕೆ.ಆರ್.ನಗರಗಳ ಶಾಲೆಯ ವಿದ್ಯಾರ್ಥಿ ಗಳಿಗೆ ಸೋಂಕು ದೃಢಪಟ್ಟಿದೆ. ಬನ್ನೂರಲ್ಲಿ 23, ಕೆ.ಆರ್.ನಗರದಲ್ಲಿ 13, ಮೈಸೂರು ನಗರದಲ್ಲಿ 4-5 ವಿದ್ಯಾರ್ಥಿಗಳಲ್ಲಿ ಸೋಂಕು…
ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕೊರೊನಾ ಮಾರ್ಗಸೂಚಿ ಪಾಲನೆಗೆ ಜನಜಾಗೃತಿ
March 31, 2021ಮೈಸೂರು,ಮಾ.30(ಎಸ್ಪಿಎನ್)-ಕೋವಿಡ್-19 ಸೋಂಕಿನ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕೆ.ಆರ್.ವಿಭಾಗದ ಎಸಿಪಿ ಎಂ.ಎಸ್.ಪೂರ್ಣಚಂದ್ರ ತೇಜಸ್ವಿ ನೇತೃತ್ವದಲ್ಲಿ(ಕುವೆಂಪುನಗರ ವ್ಯಾಪ್ತಿ) ಹಾಗೂ ಎನ್.ಆರ್.ವಿಭಾಗದ ಎಸಿಪಿ ಎಂ.ಶಿವಶಂಕರ್ ನೇತೃತ್ವದಲ್ಲಿ(ಹೆಬ್ಬಾಳ ವ್ಯಾಪ್ತಿ) ಪ್ರತ್ಯೇಕವಾಗಿ ಕೋವಿಡ್-19 ಮಾರ್ಗಸೂಚಿ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಮೈಸೂರು ಕುವೆಂಪುನಗರ ಕಾಂಪೆÉ್ಲಕ್ಸ್ ಬಳಿ ರೋಟರಿ ಶ್ರೀಗಂಧ ಮೈಸೂರು, ಶ್ರೀರಾಂಪುರ ವಿಪ್ರ ಬಳಗ, ಸುಯೋಗ ಆಸ್ಪತ್ರೆ ಹಾಗೂ ಕುವೆಂಪುನಗರ ಪೊಲೀಸರ ಸಹಯೋಗದಲ್ಲಿ ಏರ್ಪಡಿಸಿದ್ದ ಕೋವಿಡ್-19 ಮಾರ್ಗಸೂಚಿ ಜಾಗೃತಿ ಕಾರ್ಯಕ್ರಮದಲ್ಲಿ ಎಸಿಪಿ ಪೂರ್ಣಚಂದ್ರ ತೇಜಸ್ವಿ ಭಾಗವಹಿಸಿ ಮಾತನಾಡಿದರು. ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ…
ಕೊರೊನಾ 2ನೇ ಅಲೆಯನ್ನು ಲೆಕ್ಕಿಸದ ಮಹಾಜನ!
March 31, 2021ಮೈಸೂರು,ಮಾ.30(ಪಿಎಂ)-ಕೋವಿಡ್-19 2ನೇ ಅಲೆ ಆತಂಕದ ನಡುವೆಯೂ ಜನದಟ್ಟಣೆ ನಿಯಂ ತ್ರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿಗೆ ನಿರ್ಬಂಧ ಇದ್ದಂತೆ ಕಾಣುತ್ತಿಲ್ಲ. ಅದೆಕೋ ಬಹುತೇಕರು ಕೋವಿಡ್ಗೆ ಡೋಂಟ್ ಕೇರ್ ಎನ್ನುತ್ತಿದ್ದಾರೆ! ಮೈಸೂರಿನ ಪೂರ್ವ ಉಪ ನೋಂದಣಾ ಧಿಕಾರಿ ಕಚೇರಿಯಲ್ಲಿ ಮಂಗಳವಾರ ನೆರೆದಿದ್ದ ಜನದಟ್ಟಣೆ ಕಂಡು ಪ್ರಜ್ಞಾವಂತ ನಾಗರಿಕರು ಕೊರೊನಾ ಎರಡನೇ ಅಲೆಯ ಆತಂಕದ ಸ್ಥಿತಿಯಲ್ಲಿ ಈ ಪರಿ ಜನ ಸೇರುವುದು ಸೂಕ್ತವೇ? ಎಂದು ಬೇಸರ ವ್ಯಕ್ತಪಡಿಸಿದರು. ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳಲ್ಲಿ ಅತ್ಯಂತ ಮುಖ್ಯವಾದ ಕ್ರಮ ದೈಹಿಕ…
ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮವಿಲ್ಲ; ಎಲ್ಲರೂ ಪಡೆಯಿರಿ
March 24, 2021ಪೀಪಲ್ಸ್ ಅಸೋಸಿಯೇಷನ್ ಫಾರ್ ಜೆರಿಯಾಟ್ರಿಕ್ ಎಂಪವರ್ಮೆಂಟ್ ಸಲಹೆ ಮೈಸೂರು,ಮಾ.23(ಆರ್ಕೆಬಿ)- ಕೊರೊನಾ ಸೋಂಕು ಇರಲಿ, ಇಲ್ಲದಿರಲಿ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಾರ ಕೋವಿ ಶೀಲ್ಡ್ ಲಸಿಕೆಯನ್ನು ಎಲ್ಲರೂ ಪಡೆಯ ಬಹುದು. ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ ಎಂದು ಮೈಸೂರಿನ ಪೀಪಲ್ಸ್ ಅಸೋಸಿಯೇಷನ್ ಫಾರ್ ಜೆರಿಯಾಟ್ರಿಕ್ ಎಂಪವರ್ಮೆಂಟ್ (ಪೇಜ್) ಮೈಸೂರು ಶಾಖೆ ಸಲಹೆ ನೀಡಿದೆ. ಮೈಸೂರು ಪತ್ರಕರ್ತರ ಭವನದಲ್ಲಿ ಮಂಗಳ ವಾರ ಕೋವಿಡ್ ಲಸಿಕೆಯ ಬಗ್ಗೆ ಇರುವ ಅಪನಂಬಿಕೆ ಮತ್ತು ನಿಜ ಚಿತ್ರಣ’ ಕುರಿತ `ಸಂವಾದ’ ಕಾರ್ಯಕ್ರಮದಲ್ಲಿ ಪೇಜ್…
ಕೋವಿಡ್ ಲಸಿಕೆ ಹಾಕಿಸಲು ವೃದ್ಧಾಶ್ರಮ ಆಶ್ರಿತರಿಗೆ ಸರ್ಕಾರಿ ವಾಹನಗಳ ವ್ಯವಸ್ಥೆ
March 19, 2021ಮೈಸೂರು, ಮಾ.18(ಆರ್ಕೆ)-ವೃದ್ಧಾಶ್ರಮಗಳಲ್ಲಿ ವಾಸಿಸುತ್ತಿರುವ ಹಿರಿಯರನ್ನು ಕರೆತಂದು ಕೋವಿಡ್ ಲಸಿಕೆ ಹಾಕಿಸಿ, ಅವರನ್ನು ಮತ್ತೆ ಅವರ ಸ್ಥಾನಕ್ಕೆ ಬಿಡಲು ಸರ್ಕಾರಿ ಇಲಾಖೆಗಳ ವಾಹನಗಳನ್ನು ಬಳಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅಧೀನಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದೇ ರೀತಿ ರೋಟರಿ, ಲಯನ್ಸ್ನಂತಹ ಸಂಸ್ಥೆಗಳ ಸದಸ್ಯರ ಕುಟುಂಬದ ಹಿರಿಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಶಿಬಿರ ಏರ್ಪಡಿಸಿ ಕೊರೊನಾ ಲಸಿಕೆ ನೀಡುವಂತೆಯೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಕೋವಿಡ್ ಲಸಿಕೆ ಪ್ರಮಾಣವನ್ನು ಹೆಚ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ ಬೆನ್ನಲ್ಲೇ…
ಸೋಮವಾರ ಮೈಸೂರಲ್ಲಿ 46 ಮಂದಿಗೆ ಸೋಂಕು
March 16, 2021ಮೈಸೂರು,ಮಾ.15(ಎಸ್ಪಿಎನ್)- ಮೈಸೂರು ಜಿಲ್ಲೆಯಲ್ಲಿ ಸೋಮವಾರ 46 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 44 ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 54,491 ಮಂದಿಗೆ ಸೋಂಕು ತಗುಲಿದಂತಾಗಿದೆ. 53,228 ಸೋಂಕಿತರು ಗುಣಮುಖರಾಗಿ ದ್ದಾರೆ. ಇಂದು ವ್ಯಕ್ತಿಯೋರ್ವ ಸಾವನ್ನ ಪ್ಪಿದ್ದಾರೆ. ಇದುವರೆಗೆ 1,037 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಜಿಲ್ಲೆಯ ಲ್ಲಿನ್ನೂ 226 ಮಂದಿ ಚಿಕಿತ್ಸೆ ಪಡೆಯು ತ್ತಿದ್ದು, ಅವರಲ್ಲಿ 67 ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ -ನಿಗಾ ಕೇಂದ್ರಗಳಲ್ಲಿ 37, ಖಾಸಗಿ ಆಸ್ಪತ್ರೆ…
ಕೋವಿಡ್ ಸೋಂಕು ಹೆಚ್ಚಳ ಅಧಿಕಾರಿಗಳು, ಆರೋಗ್ಯ ತಜ್ಞರೊಂದಿಗೆ ಇಂದು ಸಿಎಂ ಸಭೆ
March 15, 2021ಬೆಂಗಳೂರು,ಮಾ.14-ಇತ್ತೀಚೆಗೆ ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣ ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಅಧಿಕಾರಿಗಳು ಮತ್ತು ಆರೋಗ್ಯ ತಜ್ಞರ ಸಭೆ ಕರೆದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಸಂಜೆ 5 ಗಂಟೆಗೆ ರಾಜ್ಯ ವಿಧಾನಸಭೆ ಮತ್ತು ಕಾರ್ಯದರ್ಶಿಗಳ ಸ್ಥಾನವಾಗಿರುವ ವಿಧಾನಸೌಧದಲ್ಲಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕ ಟಣೆಯಲ್ಲಿ ತಿಳಿಸಿದೆ. ಜನವರಿ 22ರ ನಂತರ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನ 900ಕ್ಕಿಂತ ಹೆಚ್ಚಿನ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಿನ್ನೆ ರಾಜ್ಯದಲ್ಲಿ ಒಟ್ಟೂ…
ಕೊರೊನಾ: ಮೈಸೂರು ಜಿಲ್ಲೆ 31 ಪ್ರಕರಣ ದೃಢ, 17 ಮಂದಿ ಗುಣಮುಖ
March 15, 2021ಮೈಸೂರು, ಮಾ.14(ವೈಡಿಎಸ್)- ರಾಜ್ಯದ ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಭಾನುವಾರ ಒಂದೂ ಪ್ರಕರಣಗಳು ವರದಿಯಾಗಿಲ್ಲ. ಮೈಸೂರು ಜಿಲ್ಲೆಯಲ್ಲಿ ಭಾನುವಾರ 31 ಮಂದಿಗೆ ಸೋಂಕು ತಗುಲಿದ್ದು, 17 ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 54,445 ಮಂದಿಗೆ ಸೋಂಕು ತಗುಲಿದಂತಾಗಿದೆ. 53,184 ಸೋಂಕಿತರು ಗುಣಮುಖರಾಗಿ ದ್ದಾರೆ. ಇಂದು ಸಾವಿನ ಬಗ್ಗೆ ವರದಿಯಾಗಿಲ್ಲ. ಇದುವರೆಗೆ 1,036 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿನ್ನೂ 225 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 69 ಮಂದಿ ಮನೆಯಲ್ಲೇ ಶುಶ್ರೂಷೆ ಪಡೆಯುತ್ತಿದ್ದಾರೆ….