ಮೈಸೂರು: ತಮಿಳುನಾಡಿನ ತೂತ್ತುಕುಡಿಯಲ್ಲಿ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕದ ವಿರುದ್ಧ ಹೋರಾಟ ನಡೆಸುತಿದ್ದವರ ಮೇಲೆ ಗೋಲಿಬಾರ್ ನಡೆಸಿ 12ಕ್ಕೂ ಹೆಚ್ಚು ಮಂದಿಯ ಸಾವಿಗೆ ಕಾರಣವಾದ ತಮಿಳುನಾಡು ಸರ್ಕಾರದ ಜನವಿರೋಧಿ ಕ್ರಮವನ್ನು ಖಂಡಿಸಿ ಮೈಸೂರಿನಲ್ಲಿ ಎಡಪಕ್ಷಗಳ ಜಂಟಿ ಸಮಿತಿ ಆಶ್ರಯದಲ್ಲಿ ಗುರುವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಸಿಪಿಐ, ಸಿಪಿಐ(ಎಂ), ಸಿಪಿಐ (ಎಂಎಲ್) ಮತ್ತು ಎಸ್ಯುಸಿಐ ಇನ್ನಿತರ ಪಕ್ಷಗಳು, ಸಂಘಟನೆಗಳು ಕಾರ್ಯಕರ್ತರು ಸ್ಟೆರ್ಲೈಟ್ ಕಂಪನಿ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಮಿಳುನಾಡು…