ಚಾಮರಾಜನಗರ: ತಾಲೂಕಿನ ಕುದೇರು ಗ್ರಾಮಕ್ಕೆ ಸಂಸದ ಆರ್.ಧ್ರುವನಾರಾಯಣ ಭೇಟಿ ನೀಡಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಹಾಲಿನ ಡೈರಿ ಕಾಮಗಾರಿಯನ್ನು ವೀಕ್ಷಿಸಿದರು. 3 ಲಕ್ಷ ಲೀಟರ್ ಯೋಜನಾ ಸಾಮಥ್ರ್ಯದ ಹಾಲು ಸಂಸ್ಕರಣಾ ಘಟಕ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಬಹುತೇಕ ಪೂರ್ಣಗೊಂಡಿರುವ ವಿವಿಧ ಘಟಕಗಳನ್ನು ಪರಿಶೀಲಿಸಿದರು. 2 ಲಕ್ಷ ಲೀಟರ್ ಸಾಮಥ್ರ್ಯದ ಯುಎಚ್ಟಿ ಹಾಲಿನ ಘಟಕ, 30 ಸಾವಿರ ಲೀಟರ್ ಸಾಮಥ್ರ್ಯದ ಮೊಸರು ತಯಾರಿಕಾ ಸ್ಥಾವರ, 4 ಸಾವಿರ ಕೆಜಿ ಬೆಣ್ಣೆ, 3 ಸಾವಿರ ಲೀಟರ್ ತುಪ್ಪ…