ಮೈಸೂರು,: ದಸರಾ ಮಹೋತ್ಸವದಲ್ಲಿ ಆಹಾರ ಪ್ರಿಯರ ಆಕರ್ಷಕ ತಾಣವಾಗುವ ಆಹಾರ ಮೇಳ ಬುಧವಾರ ಚಾಲನೆ ಪಡೆದುಕೊಂಡಿತು. ರಾಜ್ಯದ ನಾನಾ ಭಾಗ ಹಾಗೂ ವಿವಿಧ ರಾಜ್ಯಗಳ ವೈವಿಧ್ಯಮಯ ಆಹಾರಗಳ ಜೊತೆಗೆ ಈ ಬಾರಿ ವಿದೇಶಗಳ ಆಹಾರ ಶೈಲಿಯೂ ಘಮಘಮಿಸಲಿದೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಮೀಪದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಹೆಲಿಪ್ಯಾಡ್ನ ಮುಡಾ ಮೈದಾನದಲ್ಲಿ ಇಂದಿನಿಂದ ಆಹಾರ ಮೇಳ ಚಾಲನೆ ಪಡೆದುಕೊಂಡಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಅ.18ರವರೆಗೆ ಹಾಗೂ ಲಲಿತ ಮಹಲ್ ಹೆಲಿಪ್ಯಾಡ್ನ…
ಇಂದಿನಿಂದ ಮೈಸೂರು ದಸರಾ ಮಹೋತ್ಸವ
October 10, 2018ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ನಾಳೆ(ಬುಧವಾರ) ಆರಂಭಗೊಳ್ಳಲಿದೆ.ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿ ಅವರು ಚಾಮುಂಡಿ ಬೆಟ್ಟದಲ್ಲಿ ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಗೆ ಬುಧವಾರ ಬೆಳಿಗ್ಗೆ 7.05ರಿಂದ 7.35 ಗಂಟೆಯೊಳಗೆ ಸಲ್ಲುವ ಶುಭ ಲಗ್ನದಲ್ಲಿ ಅಗ್ರ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡುವರು. ದಸರಾ ಉದ್ಘಾಟಿ ಸಲೆಂದು ಸುಧಾಮೂರ್ತಿ ಅವರು ಇಂದು ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ್ದು, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಪುಷ್ಪಗುಚ್ಛ ನೀಡುವ ಮೂಲಕ ಅವರನ್ನು…
ಸುಧಾಮೂರ್ತಿ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಆತ್ಮೀಯ ಸ್ವಾಗತ
October 10, 2018ಮೈಸೂರು: ‘ಎನಿತು ಜನರಿಗೆ, ಎನಿತು ಜನ್ಮಗಳಿಗೆ, ನಾನು ಎನಿತು ಋಣಿಯೋ, ಹಾಗೆ ನೋಡಿದರೆ ಈ ಜನ್ಮವೆಂಬುದು ಒಂದು ಋಣದ ಗಣಿಯೋ….’ ಹೀಗೆ ಕನ್ನಡದ ಜನತೆಗೆ ನಾನು ಋಣಿಯಾಗಿದ್ದೇನೆ ಎಂದು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲಿರುವ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಸಂತಸ ವ್ಯಕ್ತಪಡಿಸಿದ್ದಾರೆ. ದಸರಾ ಉದ್ಘಾಟನೆಗಾಗಿ ಮಂಗಳವಾರ ಮೈಸೂರಿಗೆ ಆಗಮಿಸಿದ ಶ್ರೀಮತಿ ಸುಧಾಮೂರ್ತಿ ಅವರನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸುಧಾಮೂರ್ತಿ ಅವರು,…
ಅರಮನೆಯಲ್ಲಿ ಇಂದಿನಿಂದ ಖಾಸಗಿ ದರ್ಬಾರ್
October 10, 2018ಮೈಸೂರು: ದಸರಾ ಮಹೋತ್ಸವದ ಪ್ರಮುಖ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿರುವ ಖಾಸಗಿ ದರ್ಬಾರ್ ನಾಳೆಯಿಂದ(ಅ.10) ಆರಂಭವಾಗಲಿದೆ. ಅರಮನೆಯ ದರ್ಬಾರ್ ಹಾಲ್ನಲ್ಲಿ ರಾಜಪರಂಪರೆಯೂ ಆದ ಖಾಸಗಿ ದರ್ಬಾರ್ನಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ರತ್ನ ಖಚಿತ ಸಿಂಹಾಸನವೇರಿ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನ ನೆರವೇರಿಸಲಿದ್ದಾರೆ. ಖಾಸಗಿ ದರ್ಬಾರ್ ಹಿನ್ನೆಲೆಯಲ್ಲಿ ಬುಧವಾರ ಮುಂಜಾನೆ 4.30ಕ್ಕೆ ಎಣ್ಣೆಶಾಸ್ತ್ರ ನಡೆಯಲಿದೆ. ನಂತರ ಅ.4ರಂದು ದರ್ಬಾರ್ ಹಾಲ್ನಲ್ಲಿ ಜೋಡಿಸಲ್ಪಟ್ಟಿರುವ ಚಿನ್ನದ ಸಿಂಹಾಸನಕ್ಕೆ ಬೆಳಿಗ್ಗೆ 5.30ರಿಂದ 6ಗಂಟೆಯೊಳಗೆ ಸಿಂಹವನ್ನು ಜೋಡಿಸಲಾಗುತ್ತದೆ. ಬೆ. 7.02ರಿಂದ 7.45ರೊಳಗೆ ಚಾಮುಂಡಿ…
ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜು
October 10, 2018ಮೈಸೂರು: ಅಕ್ಟೋಬರ್ 19ರಂದು ನಡೆಯಲಿರುವ ವಿಶ್ವವಿಖ್ಯಾತ ಜಂಬೂ ಸವಾರಿಗೆ (ವಿಜಯದಶಮಿ ಮೆರವಣಿಗೆ) ಸಾಂಸ್ಕೃತಿಕ ನಗರಿ ಸರ್ವ ರೀತಿಯಲ್ಲಿ ಸಜ್ಜುಗೊಂಡು ಬಿನ್ನಾಣಗಿತ್ತಿಯಂತೆ ಶೃಂಗಾರಗೊಂಡಿದೆ. ವೈಭವಪೂರಿತ ಹಾಗೂ ಐತಿಹಾಸಿಕ ಜಂಬೂ ಸವಾರಿಯಲ್ಲಿ ಈ ಬಾರಿ ತಂಜಾವೂರ್, ಅಸ್ಸಾಂ ಸೇರಿದಂತೆ ಹೊರ ರಾಜ್ಯಗಳ 5 ಕಲಾ ತಂಡಗಳ 75 ಮಂದಿ ಕಲಾವಿದರು ಜಂಬೂ ಸವಾರಿಯಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 2000ಕ್ಕೂ ಅಧಿಕ ಕಲಾವಿದರು ಭಾಗವಹಿಸಿ, ನಾಡಿನ ಸಂಸ್ಕೃತಿಯನ್ನು ಪ್ರದರ್ಶಿಸುವರು. ಸಿಸಿ ಕ್ಯಾಮರಾಗಳು: ಲಕ್ಷಾಂತರ…
ದೇಶ-ವಿದೇಶಿ ಪ್ರವಾಸಿಗರಿಗೆ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಸ್ವಾಗತ
October 10, 2018ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ದೇಶ ವಿದೇಶಗಳ ಪ್ರವಾಸಿಗರಿಗೆ ಮೈಸೂರಿನ ಜನನಿ ಟ್ರಸ್ಟ್ ವತಿಯಿಂದ ಮಂಗಳವಾರ ಮೈಸೂರು ಅರಮನೆ ಆವರಣದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ವಿದೇಶಿಯರಿಗೆ ಮೈಸೂರಿನ ಸಂಸ್ಕೃತಿಯನ್ನು ಬಿಂಬಿಸುವ ಸಲುವಾಗಿ ಮೈಸೂರು ಸಿಲ್ಕ್ ಸೀರೆ ಉಟ್ಟ ಜನನಿ ಟ್ರಸ್ಟ್ ಮಹಿಳಾ ಸದಸ್ಯರು ದೇಶ ವಿದೇಶಗಳ ಪ್ರವಾಸಿಗರಿಗೆ ಸಾಂಪ್ರದಾಯಿಕವಾಗಿ ಹಣೆಗೆ ತಿಲಕವಿಟ್ಟು, `ಸ್ವಾಗತವು ನಿಮಗೆ, ಸುಸ್ವಾಗತವೂ ನಿಮಗೆ.. ಹಾಡು ಹೇಳಿ ಆರತಿ ಎತ್ತಿ ಸ್ವಾಗತಿಸಿದರು. ಪನ್ನೀರ್ದಾನಿಯಿಂದ ಸುವಾಸಿತ ಪನ್ನೀರು ಸಿಂಪಡಿಸಿ, ಗುಲಾಬಿ ಹೂ ನೀಡಿ, ಮೈಸೂರು ಪೇಟ…
ಅ. 14 ರಂದು ಮೈಸೂರಲ್ಲಿ ಸಾಂಸ್ಕೃತಿಕ ಮೆರವಣಿಗೆ
October 10, 2018ಮೈಸೂರು:ನಾಡಿನ ಕಲಾವೈಭವ ಬಿಂಬಿಸಲು ಅಕ್ಟೋಬರ್ 14 ರಂದು ಮೈಸೂರಿನ ಜಂಬೂ ಸವಾರಿ ಮಾರ್ಗದಲ್ಲಿ ಸಾಂಸ್ಕೃತಿಕ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಮೈಸೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ದಸರಾ ಮೆರವಣಿಗೆ ಉಪಸಮಿತಿ ಕಾರ್ಯಾಧ್ಯಕ್ಷರೂ ಆದ ನಗರ ಪೊಲೀಸ್ ಕಮೀಷನರ್ ಡಾ. ಎ. ಸುಬ್ರಹ್ಮಣ್ಯೇಶ್ವರರಾವ್ ಈ ವಿಷಯ ತಿಳಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಸೂಚನೆಯಂತೆ ಇದೇ ಮೊದಲ ಬಾರಿ ವಿಜಯದಶಮಿ ಮೆರವಣಿಗೆಗೂ ಮುನ್ನ ಸಾಂಸ್ಕೃತಿಕ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅಕ್ಟೋಬರ್…
ನಾಳೆ ಮೈಸೂರು ದಸರಾಕ್ಕೆ ಚಾಲನೆ
October 9, 2018ಮೈಸೂರು: ಅಕ್ಟೋಬರ್ 10ರಿಂದ 2018ರ ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವ ಆರಂಭವಾಗಲಿದೆ. ಬುಧವಾರ ಬೆಳಿಗ್ಗೆ 7.05ರಿಂದ 7.35 ಗಂಟೆಯೊಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಚಾಮುಂಡಿಬೆಟ್ಟದಲ್ಲಿ ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿ ಅವರು ನಾಡ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರು ಅಧ್ಯಕ್ಷತೆ ವಹಿಸಲಿರುವ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಉಪಸ್ಥಿತರಿರುವರು. ಸಚಿವರಾದ…
ಕುಪ್ಪಣ್ಣ ಪಾರ್ಕ್ನಲ್ಲಿ ಅ.10ರಿಂದ ದಸರಾ ಫಲಪುಷ್ಪ ಪ್ರದರ್ಶನ
October 9, 2018ಮೈಸೂರು: ನಾಡ ಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ನಜರ್ಬಾದ್ನ ಕುಪ್ಪಣ್ಣ ಪಾರ್ಕ್ನಲ್ಲಿ ಅ.10ರಿಂದ 21ರವರೆಗೆ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ ತರಾವರಿ ಅಲಂಕಾರಿಕ ಹೂವಿನ ಗಿಡಗಳ ಮಧ್ಯ ದಲ್ಲಿ ಹೂವಿನಿಂದಲೇ ತಯಾರಿಸುವ ದೆಹಲಿಯ ಲೋಟಸ್ ಟೆಂಪಲ್, ಅಶೋಕ ಸ್ತಂಭ, ಪೆಂಗ್ವಿನ್,ಫಿರಂಗಿ, ಅಮರ್ ಜವಾನ್ ಸ್ತಂಭ ಸೇರಿದಂತೆ ವಿವಿಧ 13 ಆಕೃತಿಗಳು ಪ್ರವಾಸಿಗರ ಮನ ಸೆಳೆಯಲು ಸಜ್ಜಾಗಿವೆ ಎಂದು ಮೈಸೂರು ಜಿಪಂ ಸಿಇಓ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಅಧ್ಯಕ್ಷರಾದ ಕೆ.ಜ್ಯೋತಿ ತಿಳಿಸಿದರು. ನಜರ್ಬಾದಿನ ಕುಪ್ಪಣ್ಣ ಪಾರ್ಕ್ನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯ್ತಿ…
ಮೈಸೂರಲ್ಲಿ ಕಣ್ಮನ ಸೆಳೆಯುತ್ತಿದೆ ಬೆಳಕಿನ ವೈಭವ
October 9, 2018ಮೈಸೂರು: ದಸರಾ ವಿದ್ಯುತ್ ದೀಪಾ ಲಂಕಾರ ಅದುವೇ ಬೆಳಕಿನ ಚಿತ್ತಾರ… ಕವಿದ ಕತ್ತಲ ಹಿನ್ನೆಲೆಯಲ್ಲಿ ನಾನಾ ಬಗೆಯಲ್ಲಿ ಬೆಳಕು ಸೂಸುವ ಬಗೆಬಗೆಯ ವಿನ್ಯಾಸದ ಮನಮೋಹಕ ಬೆಳಕಿನ ವೈಭವ ನೋಡುಗರ ಕಣ್ಣುಗಳಲ್ಲಿ ಹಬ್ಬದ ಸಡಗರ ತರಲಿದೆ. ದಸರಾ ವೇಳೆ ಮೈಸೂರು ಅರಮನೆ ಮಾತ್ರವಲ್ಲದೆ, ಇಡೀ ನಗರವೇ ಕತ್ತಲಾಗುತ್ತಿದ್ದಂತೆ ವಿದ್ಯುತ್ ದೀಪಗಳ ಅಲಂಕಾರದಲ್ಲಿ ಬೆಳಕಿನ ವೈಯ್ಯಾರವನ್ನೇ ಕಣ್ಣಿಗೆ ಕಟ್ಟಲಿದೆ. ಈಗಾಗಲೇ ದಸರಾ ಮಹೋತ್ಸವಕ್ಕೆ ನಗರ ಸಜ್ಜಾಗಿದ್ದು, ವಿದ್ಯುತ್ ದೀಪಗಳ ಬಗೆಬಗೆಯ ಬಣ್ಣದ ಬೆಳಕು ಕತ್ತಲಾ ಗುತ್ತಿದ್ದಂತೆ ಮನತಣಿಸಲು ಶುರುವಾಗಿದೆ. ದಸರಾ…