ಮೈಸೂರು, ಆ.21(ಎಂಟಿವೈ, ಹನಗೋಡು ಮಹೇಶ್)- ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಗಜಪಡೆ. ಅಂಬಾರಿ ಆನೆ ಅರ್ಜುನ ನೇತೃತ್ವದ ಆರು ಆನೆಗಳುಳ್ಳ ಮೊದಲ ತಂಡ ನಾಳೆ(ಆ.22) ಬೆಳಿಗ್ಗೆ 11ಕ್ಕೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗೇಟ್ನಿಂದ ಮೈಸೂರಿಗೆ ಆಗಮಿಸಲಿವೆ. ನಾಗರಹೊಳೆ ಅಭಯಾರಣ್ಯದ ಕಾಡಂಚಿನ ಹಾಡಿ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗೇಟ್ ಬಳಿ ನಾಳೆ ಬೆಳಿಗ್ಗೆ 11ಕ್ಕೆ ದಸರಾ ಗಜಪಡೆಗೆ ಮೈಸೂರು ಜಿಲ್ಲೆ ನೆರೆ ಪರಿಹಾರ ಉಸ್ತುವಾರಿಯಾಗಿ ನಿಯೋಜನೆಗೊಂಡಿರುವ ಸಚಿವ ಆರ್.ಅಶೋಕ್ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ…