ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುವ ಗಿರಿ ಜನ ಕಟುಂಬಗಳಿಗೆ ಅಗತ್ಯ ಮೂಲ ಸೌಕರ್ಯವನ್ನು ಆದಷ್ಟು ಶೀಘ್ರ ಕಲ್ಪಿಸಬೇಕು ಎಂದು ಐಟಿಡಿಪಿ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸವಿರುವ ಗಿರಿಜನರ ಕಟುಂ ಬಗಳಿಗೆ ಒದಗಿಸಲಾಗುತ್ತಿರುವ ಮೂಲ ಸೌಕರ್ಯ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಬಸವನಹಳ್ಳಿಯ 136 ಮತ್ತು ಬ್ಯಾಡಗೊಟ್ಟದ 152 ಮನೆಗಳ…
ತುಲಾ ಸಂಕ್ರಮಣ; ಅಗತ್ಯ ಸಿದ್ಧತೆಗೆ ಸೂಚನೆ
October 2, 2018ಮಡಿಕೇರಿ: ಅ.17 ರಂದು ಜರುಗುವ ತುಲಾ ಸಂಕ್ರಮಣ ಜಾತ್ರೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳು ವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾವೇರಿ ತುಲಾ ಸಂಕ್ರಮಣ ಜಾತ್ರಾ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅ.17 ರಂದು ಸಂಜೆ 6.43 ಗಂಟೆಗೆ ತೀರ್ಥೋದ್ಭವ ಪುಣ್ಯಕಾಲ ಜರುಗುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಬಸ್ ಕಲ್ಪಿಸುವಂತೆ ಜಿಲ್ಲಾಧಿಕಾರಿ…
ಇಂದಿರಾನಗರ ಭೂ ಕುಸಿತ ಪ್ರದೇಶಕ್ಕೆ ಡಿಸಿ ಭೇಟಿ
September 28, 2018ಮಡಿಕೇರಿ: ಅತಿವೃಷ್ಟಿಯಿಂದ ಭೂಕುಸಿತದಿಂದಾಗಿ ಮನೆಗಳು ಹಾನಿ ಗೀಡಾದ ಮಡಿಕೇರಿಯ ಇಂದಿರಾನಗರಕ್ಕೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಭೇಟಿ ನೀಡಿ ಮನೆಮಠಗಳನ್ನು ಕಳೆದುಕೊಂಡ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದರು. ಮನೆಗಳನ್ನು ಕಳೆದುಕೊಂಡು ನಿರಾ ಶ್ರಿತರಾದವರಿಗೆ ಮತ್ತು ಮನೆಗಳು ಹಾನಿ ಗೀಡಾದವರಿಗೆ ಪರಿಹಾರದ ಹಣ ತಲು ಪಿರುವ ಬಗ್ಗೆ ಸಂತ್ರಸ್ಥರಿಂದ ಮಾಹಿತಿ ಯನ್ನು ಜಿಲ್ಲಾಧಿಕಾರಿಗಳು ಪಡೆದು ಕೊಂಡರು. ಇಂದಿರಾನಗರದಲ್ಲಿ ಹಾನಿ ಗೀಡಾಗಿರುವ ರಸ್ತೆಗಳ ದುರಸ್ಥಿ ಕಾರ್ಯಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿ ಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ ನೀಡಿದರು. ಮತ್ತು ಅಪಾಯ ಕಾರಿ ಸ್ಥಿತಿಯಲ್ಲಿರುವ…
ಮಳೆ ಅಬ್ಬರ: ಕೊಡಗು ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ
August 13, 2018ಮಡಿಕೇರಿ: ಕೊಡಗಿನಾದ್ಯಂತ ಇಂದು ಮಳೆಯ ಅಬ್ಬರ ಜೋರಾಗಿತ್ತು, ಅಲ್ಲದೇ ಮುಂದಿನ ಎರಡು ದಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕೊಡಗಿನಲ್ಲಿ ಹೈ ಅಲರ್ಟ್ ಘೋಷಿಸಿದೆ. ಜಿಲ್ಲೆಯಾದ್ಯಂತ ನಾಳೆ(ಆ.13) ಶಾಲಾ -ಕಾಲೇಜು ಹಾಗೂ ಅಂಗನವಾಡಿ ಕೇಂದ್ರ ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ಹಾರಂಗಿ ಜಲಾಶಯದ ಒಳಹರಿವು ಇಂದು 35 ಸಾವಿರ ಕ್ಯೂಸೆಕ್ ಆಗಿದ್ದು, ಜಲಾಶಯದಿಂದ ನದಿಗೆ 25 ಸಾವಿರ ಕ್ಯೂಸೆಕ್…
ಮಡಿಕೇರಿ-ಮಂಗಳೂರು ಹೆದ್ದಾರಿ ಬಂದ್
August 10, 2018ಮಡಿಕೇರಿ: ಭಾರೀ ಮಳೆ ಹಿನ್ನೆಲೆಯಲ್ಲಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಕುಸಿಯುವ ಹಂತ ತಲುಪಿದ್ದು, ಸುರಕ್ಷತೆಯ ದೃಷ್ಟಿಯಿಂದ ಈ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತ ಹಾಗೂ ತಾಳತ್ತಮನೆ ಜಂಕ್ಷನ್ ಬಳಿ ರಸ್ತೆಯನ್ನು ಬಂದ್ ಮಾಡಿದ್ದು, ಎಲ್ಲಾ ರೀತಿಯ ವಾಹನಗಳನ್ನು ತಾಳತ್ತಮನೆ-ಮೇಕೇರಿ ಬೈಪಾಸ್ ರಸ್ತೆಯ ಮೂಲಕ ಮಡಿಕೇರಿಗೆ ತೆರಳಲು ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಈ ರಸ್ತೆ ಸಂಪೂರ್ಣ ಕಿರಿದಾಗಿದ್ದು ಬಸ್ಗಳು, ಸರಕು ತುಂಬಿದ ಲಾರಿಗಳ ಸಂಚಾರಕ್ಕೆ ದುಸ್ತರವಾಗಿ ಪರಿಣಮಿಸಿದೆ. ಈ ರಸ್ತೆಯಲ್ಲಿ ಲಾರಿಗೆ…
ಮತದಾರರ ಪಟ್ಟಿ ಪರಿಶೀಲನೆ: ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ
July 25, 2018ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ 2019 ರ ಸಂಬಂಧ ಬೂತ್ ಮಟ್ಟದ ಅಧಿಕಾರಿ ಗಳು ಮನೆ ಮನೆಗೆ ಭೇಟಿ ನೀಡಿ ಮತ ದಾರರ ಪಟ್ಟಿ ಪರಿಶೀಲನೆ/ ಮತದಾರರ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಡಿಸಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ. ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019 ರ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಭಾರತ ಚುನಾವಣಾ ಆಯೋ ಗವು ಬೂತ್ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಸೂಚಿಸಿದ್ದು, ಆ.10ರವರೆಗೆ ಬೂತ್ ಮಟ್ಟದ ಅಧಿಕಾರಿ…
ಜಿಲ್ಲೆಯಲ್ಲಿ ನಿಲ್ಲದ ಮಳೆ
July 13, 2018ಅಲ್ಲಲ್ಲಿ ಬರೆ ಕುಸಿತ, ಮನೆಗಳಿಗೆ ಹಾನಿ ಇಂದು, ನಾಳೆ ಶಾಲಾ-ಕಾಲೇಜಿಗೆ ರಜಾ ಮಡಿಕೇರಿ: ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಸಿದ್ದಾಪುರ ಕರಡಿ ಗೋಡು ಬಳಿ ಕಾವೇರಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಕರಡಿಗೋಡು ಬೆಟ್ಟದ ಕಾಡು ಬಳಿ ಕೆಲವು ಮನೆಗಳಿಗೆ ನದಿ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆ ಯಲ್ಲಿ 5-6 ಕುಟುಂಬಗಳು, ತಾತ್ಕಲಿಕವಾಗಿ ಬೇರೆ ಕಡೆಗಳಿಗೆ ಸ್ಥಳಾಂತರವಾಗಿದ್ದು, ಕೆಲವು ಮನೆಗಳ ಗೋಡೆಗಳು ಮಳೆಯಿಂದ ಬಿರುಕು ಬಿಟ್ಟ ಬಗ್ಗೆ ವರದಿಯಾಗಿದೆ. ಮಳೆಯ ಹಿನ್ನೆಲೆಯಲ್ಲಿ ಜು.13…
ನಿಯಂತ್ರಣ ಕೊಠಡಿ ಆರಂಭ: ಮಾಹಿತಿಗೆ ಮನವಿ
July 9, 2018ಮಡಿಕೇರಿ: ಅತಿವೃಷ್ಟಿ ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಹಾಗೂ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಮತ್ತು ತಾಲ್ಲೂಕು ಕಚೇರಿಗಳು ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್) ತೆರೆಯಲಾಗಿದೆ. ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ ವಿವರ ಇಂತಿದೆ. ಜಿಲ್ಲಾಧಿಕಾರಿ ಕಚೇರಿ-08272-221077, ಜಿಲ್ಲಾ ಅಗ್ನಿಶಾಮಕ ಕಚೇರಿ-101, 08272-229299, ಮಡಿಕೇರಿ ತಾಲ್ಲೂಕು ಕಚೇರಿ-08272-228396, ನಗರಸಭೆ-08272-220111, ಸೋಮವಾರಪೇಟೆ ತಾಲ್ಲೂಕು ಕಚೇರಿ-08276-282045, ವಿರಾಜಪೇಟೆ ತಾಲ್ಲೂಕು ಕಚೇರಿ- 08274-256328 ಈ ದೂರವಾಣಿ ಸಂಖ್ಯೆಗಳಿಗೆ ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಸಮಸ್ಯೆಗಳಿದ್ದಲ್ಲಿ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ…
ಪೆರುಂಬಾಡಿ-ಮಾಕುಟ ರಸ್ತೆ: ಲಘು ವಾಹನ ಸಂಚಾರಕ್ಕೆ ಅವಕಾಶ
July 7, 2018ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜೂನ್ ಎರಡನೇ ವಾರ ಸುರಿದ ಧಾರಾಕಾರ ಮಳೆಯಿಂದಾಗಿ ವಿರಾಜಪೇಟೆ ತಾಲೂಕಿನ ಕೊಣನೂರು-ಮಾಕುಟ ರಾಜ್ಯ ಹೆದ್ದಾರಿಯ ಲ್ಲಿರುವ ಪೆರುಂಬಾಡಿಯಿಂದ ಮಾಕುಟ್ಟವರೆಗಿನ ರಸ್ತೆ ಹಾಗೂ ಸೇತುವೆಗಳು ಮಣ್ಣು ಕುಸಿದು, ಮರಗಳು ಬಿದ್ದು ತುಂಬಾ ಹದಗೆಟ್ಟಿರುತ್ತದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಲಘು ಹಾಗೂ ಭಾರೀ ವಾಹನಗಳು ಸಂಚರಿಸುವುದರಿಂದ ಸಾರ್ವಜನಿಕ ಜೀವಕ್ಕೆ ತೊಂದರೆ ಉಂಟಾ ಗುವ ಸಾಧ್ಯತೆ ಇರುವುದರಿಂದ ರಸ್ತೆ ದುರಸ್ತಿ ಮಾಡುವ ಕಾರ್ಯ ಪೂರ್ಣಗೊಳ್ಳುವವರೆಗೆ ಈ ರಸ್ತೆ ಮಾರ್ಗ ಎಲ್ಲಾ ರೀತಿಯ ವಾಹನ ಗಳ ಸಂಚಾರವನ್ನು ತಾತ್ಕಾಲಿಕವಾಗಿ…
ರಸ್ತೆ ಗುಣಮಟ್ಟ ದೃಢೀಕರಣದ ನಂತರ ಕೊಡಗು-ಕೇರಳ ಹೆದ್ದಾರಿ ಲಘುವಾಹನ ಸಂಚಾರಕ್ಕೆ ಅನುಮತಿ ಡಿಸಿ
July 4, 2018ವಿರಾಜಪೇಟೆ: ಕೊಡಗು-ಕೇರಳ ರಾಜ್ಯ ಹೆದ್ದಾರಿ ಮಾಕುಟ್ಟ ಮಾರ್ಗ ವಾಹನ ಸಂಚಾರ ಬಂದ್ ಆಗಿರುವ ರಸ್ತೆಗೆ ಇಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಭೇಟಿ ನೀಡಿ ರಸ್ತೆಯ ಕಾಮಗಾರಿ ವೀಕ್ಷಿಸಿ ದರು. ಬಳಿಕ ಮಾತನಾಡಿದ ಅವರು ಲೋಕೋಪಯೋಗಿ ಇಲಾಖೆ, ಮಡಿಕೇರಿಯ ಪ್ರಾದೇಶಿಕ ಸಾರಿಗೆ ಕಚೇರಿ ಯಿಂದ ರಸ್ತೆ ಗುಣಮಟ್ಟದ ಧೃಢೀಕರಣದ ಆಧಾರದ ಮೇಲೆ ಇನ್ನು ಎರಡು ದಿನಗಳ ನಂತರ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದರು. ಮಾಕುಟ್ಟ ರಸ್ತೆಯಲ್ಲಿ ಈಗಾಗಲೇ ಲಘು ವಾಹನ ಸಂಚಾರಕ್ಕೆ ಕಾಮಗಾರಿ ಪೂರ್ಣವಾಗಿದ್ದು ರಸ್ತೆಗೆ…