ಮಡಿಕೇರಿ: ಕೇಂದ್ರ ಮತ್ತು ರಾಜ್ಯ ಸರಕಾರದ ಸಾಲದ ಯೋಜನೆಗಳ ಅನುಷ್ಠಾನದಲ್ಲಿ ನಿರಾಸಕ್ತಿ ತೋರುತ್ತಿರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಸಂಸದ ಪ್ರತಾಪಸಿಂಹ ಹಾಗೂ ಶಾಸಕದ್ವಯರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚು ರಂಜನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ ದ್ದಾರೆ. ವಿವಿಧ ರಾಷ್ಟ್ರೀಕೃತ ಬ್ಯಾಂಕ್ಗಳ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿ ಸಿದ ಅವರು ಅಸಡ್ಡೆ ತೋರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳು ವಂತೆ ಸೂಚನೆ ನೀಡಿದ್ದಾರೆ. ನಗರದ ಕಾರ್ಪೋರೇಷನ್ (ಲೀಡ್) ಬ್ಯಾಂಕ್ ಸಭಾಂಗಣದಲ್ಲಿ ಅಧ್ಯಕ್ಷತೆಯಲ್ಲಿ ನಡೆದ ಬ್ಯಾಂಕ್ಗಳ ಸಾಲ ವಿತರಣೆ ಮತ್ತು…
ವೀರಾಜಪೇಟೆ ಕ್ಷೇತ್ರದ ಮತಯಂತ್ರಗಳು ‘ಹ್ಯಾಕ್’
June 27, 2018ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅರುಣ್ ಮಾಚಯ್ಯ ಆರೋಪ ಚುನಾವಣಾ ಆಯುಕ್ತರಿಗೆ ದೂರು, ಮರು ಎಣಿಕೆಗೆ ಒತ್ತಾಯ ಮಡಿಕೇರಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮತ ಯಂತ್ರಗಳು ‘ಹ್ಯಾಕ್’ ಆಗಿರುವ ಬಗ್ಗೆ ಸಂಶಯವಿದೆ ಎಂದು ಗಂಭೀರ ಆರೋಪ ಮಾಡಿರುವ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ಅರುಣ್ ಮಾಚಯ್ಯ, ಕ್ಷೇತ್ರದಲ್ಲಿ ಚಲಾವಣೆಯಾದ ಮತಗಳನ್ನು ವಿವಿಪ್ಯಾಟ್ ಸಹಿತ ಮರು ಎಣಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧವಾಗಿ ಮಂಗಳವಾರ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿ ಕಾರಿಗಳ ಮೂಲಕ ಅವರು…
ಮೂಲ ಸೌಕರ್ಯ ಒದಗಿಸಲು ಡಿಸಿ ಸೂಚನೆ
June 26, 2018ಮಡಿಕೇರಿ: ಸೋಮವಾರ ಪೇಟೆ ತಾಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುವ ಗಿರಿಜನ ಕಟುಂಬಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಆದಷ್ಟು ಬೇಗನೆ ಕಲ್ಪಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಸವನಹಳ್ಳಿ ಮತ್ತು ಬ್ಯಾಡ ಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸವಿರುವ ಗಿರಿಜನರ ಕುಟುಂಬಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಅವರು ಮಾತನಾಡಿದರು. ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನ ರ್ವಸತಿ ಕೇಂದ್ರಗಳಲ್ಲಿ…
ಪೆರುಂಬಾಡಿ-ಮಾಕುಟ್ಟ ರಸ್ತೆ ಕಾಮಗಾರಿ ತ್ವರಿತ ಆರಂಭಕ್ಕೆ ಹೆಚ್.ಡಿ.ರೇವಣ್ಣ ಸೂಚನೆ
June 21, 2018ಮಡಿಕೇರಿ: ಕೊಣನೂರು-ಮಾಕುಟ್ಟ ರಸ್ತೆ ದುರಸ್ಥಿಗೆ ಅಗತ್ಯವಿರುವ ಹಣ ಬಿಡುಗಡೆ ಮಾಡಲು ಲೋಕೋ ಪಯೋಗಿ ಇಲಾಖೆ ಸಿದ್ದವಿದ್ದು ಹಣಕ್ಕಾಗಿ ಕಾಯದೆ ತುರ್ತು ಕೆಲಸ ನಿರ್ವಹಿಸು ವಂತೆ ಜಿಲ್ಲಾಡಳಿತಕ್ಕೆ ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ.ರೇವಣ್ಣ ಸೂಚಿಸಿದ್ದಾರೆ. ಮಡಿಕೇರಿ ಜಿಲ್ಲಾಡಳಿತ ಭವನದಲ್ಲಿ ಮಳೆ ಹಾನಿಗೆ ಸಂಭಂಧಿಸಿದಂತೆ ಸಭೆ ನಡೆಸಿದ ಸಚಿವ ರೇವಣ್ಣ ಮಾಕುಟ್ಟ ವ್ಯಾಪ್ತಿ ಯಲ್ಲಿ ಮಳೆಯಿಂದ ಹಾನಿಗೀಡಾದ ರಸ್ತೆಯ ಮಾಹಿತಿ ಪಡೆದರು. ಒಂದು ಸೇತುವೆ ಮತ್ತು ನಾಲ್ಕು ಕಡೆ ರಸ್ತೆಗೆ ಭಾರಿ ಹಾನಿಯಾದ ಕುರಿತು ಅಧಿಕಾರಿಗಳು ಸಚಿವರ ಗಮನ ಸೆಳೆದರು….
ಕೊಡಗಿನ ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿ ಪ್ರಕಟ
June 13, 2018ಮಡಿಕೇರಿ: 2011ರ ಜನ ಗಣತಿ ಅನ್ವಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ 2018-19ನೇ ಸಾಲಿನಲ್ಲಿ ಚುನಾವಣೆ ನಡೆಸಲು ಸರ್ಕಾರವು ವಾರ್ಡ್ವಾರು ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿಯನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕಚೇರಿಗಳಲ್ಲಿ, ತಾಲೂಕು ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ್ತು ಕೊಡಗು ಜಿಲ್ಲೆಯ ವೆಬ್ಸೈಟ್ http://kodagu.nic.in/election ಟಿನಲ್ಲಿ ಜೂನ್ 21 ರವರೆಗೆ ಪರಿಶೀಲಿಸಿಕೊಳ್ಳಬಹು ದಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ….
ಮುಂಗಾರು ಆರಂಭ; ಪ್ರವಾಹ ಮುನ್ನೆಚ್ಚರಿಕೆಗೆ ಉಸ್ತುವಾರಿ ಕಾರ್ಯದರ್ಶಿ ಸೂಚನೆ
June 4, 2018ಮಡಿಕೇರಿ: ಮುಂಗಾರು ಮಳೆಯಿಂದ ಉಂಟಾಗಬಹುದಾದ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿ ರುವ ಸಿದ್ಧತೆಗಳ ಬಗ್ಗೆ ಜಿಲ್ಲಾ ಧಿಕಾರಿ ಹಾಗೂ ನಾನಾ ಇಲಾಖೆ ಅಧಿಕಾರಿ ಗಳಿಂದ ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ಜಿ.ಕಲ್ಪನಾ ಮಾಹಿತಿ ಪಡೆದರು. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ, ಜಿಲ್ಲೆಯಲ್ಲಿ ಈಗಾ ಗಲೇ ಮುಂಗಾರು ಮಳೆ ಆರಂಭವಾ ಗಿದ್ದು, ಪ್ರವಾಹ ಮುನ್ನೆಚ್ಚರಿಕೆ ಎದುರಿ ಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು….
ಚುನಾವಣೆಗೆ ಕೊಡಗು ಜಿಲ್ಲಾಡಳಿತ ಸಿದ್ಧತೆ
June 2, 2018ಮಡಿಕೇರಿ: ಇದೇ ಜೂನ್ 8 ರಂದು ನಡೆಯುವ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನವು ಜೂನ್ 8 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಜಿಲ್ಲೆಯ ಸೋಮವಾರಪೇಟೆ ಪಟ್ಟಣ ಪಂಚಾಯತ್(ಸೋಮವಾರಪೇಟೆ ತಾಲೂ ಕಿನ ಸೋಮವಾರಪೇಟೆ,…
ಹೆಚ್ಚು ಹಣ ವಸೂಲಿ ಆರೋಪ: ಮಾಂದಲ್ಪಟ್ಟಿ ಪ್ರವಾಸಿ ವಾಹನಗಳಿಗೆ ದರ ನಿಗದಿ
May 31, 2018ಮಡಿಕೇರಿ: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಒಂದಾದ ಮಾಂದಲ್ಪಟ್ಟಿಗೆ ತೆರಳುವ ಪ್ರವಾಸಿ ವಾಹನಗಳು ನಿಯಮ ಬಾಹಿರವಾಗಿ ರಹದಾರಿ, ಷರತ್ತನ್ನು ಉಲ್ಲಂ ಘಿಸಿ ಸಂಚರಿಸುತ್ತಿರುವ ಬಗ್ಗೆ ಸಾರ್ವಜನಿ ಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಮಾಂದಲ್ಪಟ್ಟಿಗೆ ತೆರಳುವ ಪ್ರವಾಸಿ ವಾಹನಗಳಿಗೆ ಸೂಕ್ತ ದರ ನಿಗದಿ ಪಡಿ ಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ತಿರ್ಮಾನಿಸಲಾಗಿದೆ. ಆ ನಿಟ್ಟಿನಲ್ಲಿ ಗರಿಷ್ಠ ಆಸನ ಸಾಮಥ್ರ್ಯ 8 ಮೀರದ, ರಹದಾರಿ ಹೊಂದಿರುವ ಜೀಪ್(ಹಳದಿ ಫಲಕ) ವಾಹನಗಳಿಗೆ ಮತ್ತು ವಾಪಸ್ಸು ಪ್ರಯಾಣ ದರ ಸಹ ಒಳ ಗೊಂಡಂತೆ…
ಮುಂಗಾರು ಮಳೆ ಪ್ರವಾಹ ಮುನ್ನೆಚ್ಚರಿಕೆ ಸಿದ್ಧತೆಗೆ ಸೂಚನೆ
May 28, 2018ಮಡಿಕೇರಿ: ಮುಂಗಾರು ಮಳೆ ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳು ವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ. ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಆ ನಿಟ್ಟಿನಲ್ಲಿ ಜೂನ್ ಮೊದಲ ವಾರದಲ್ಲಿ ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ. ಆದ್ದರಿಂದ…
ಜಿಲ್ಲೆಯಲ್ಲಿ 10 ಮಹಿಳೆಯರ ಮತಗಟ್ಟೆ ಸ್ಥಾಪನೆ
May 1, 2018ಮಡಿಕೇರಿ: ಈ ಬಾರಿಯ ವಿಧಾನಸಭಾ ಚುನಾವಣೆ ವೈಶಿಷ್ಟ್ಯಗಳಿಗೆ ಸಾಕ್ಷಿಯಾಗಲಿದ್ದು, ಮಹಿಳಾ ಮತ ದಾರರನ್ನು ಪ್ರೋತ್ಸಾಹಿಸುವ ಉದ್ದೇಶ ದಿಂದ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ಗಳಲ್ಲೂ ಹತ್ತು ಮತಗಟ್ಟೆಗಳನ್ನು ಮಹಿಳೆ ಯರಿಗಾಗಿ ತೆರೆಯಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾಧಿಕಾರಿ ಶ್ರೀವಿದ್ಯಾ, ಮಹಿಳಾ ಮತದಾರರು ಅಧಿಕ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ಪಿಂಕ್ ಪೊಲಿಂಗ್ ಸ್ಟೇಷನ್ ಹೆಸರಿನಲ್ಲಿ ಮತ ಗಟ್ಟೆ ಸ್ಥಾಪಿಸಲಾಗುತ್ತಿದ್ದು, ಈ ಮತಗಟ್ಟೆ ಯಲ್ಲಿ ಕರ್ತವ್ಯ ನಿರ್ವಹಿಸಲು ಮಹಿಳಾ ಸಿಬ್ಬಂದಿಗಳನ್ನೇ ನೇಮಿಸಲಾಗುತ್ತದೆ…