ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿದ್ದೇನೆ, ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರಲ್ಲಿ ಸಂತೋಷ ವಿದೆ, ಆದರೆ ನಾನು ಸಂತೋಷವಾಗಿಲ್ಲ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಸನ್ಮಾನ ಕಾರ್ಯ ಕ್ರಮದಲ್ಲಿ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ನಾನು ಮೆರೆಯಬೇಕೆಂದು ಸಿಎಂ ಆಗಿಲ್ಲ, ನಾನು ಹೋದಕಡೆ ಜನ ಸೇರ್ತಾರೆ, ಸಂತೋಷ ಪಡ್ತಾರೆ. ಆದರೆ ಜನರು ನನ್ನ ಪಕ್ಷಕ್ಕೆ ಬಹುಮತ ನೀಡುವುದಿಲ್ಲ ಎಂದು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ರಾಜ್ಯದ ಜನತೆ ನನಗೆ ಬಹುಮತ ಕೊಟ್ಟು ಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ, ನಾನು ಹೋದಕಡೆ ಜನ ಸೇರ…
ಪಾರ್ಲಿಮೆಂಟ್ ಎಲೆಕ್ಷನ್ ಆಗೋವರೆಗೂ ಇರ್ತಾರೆ…
June 27, 2018ಮೈತ್ರಿ ಸರ್ಕಾರದ ಆಯಸ್ಸಿನ ಬಗ್ಗೆ ಶಾಂತಿವನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕವಡೆ…! ಆಪ್ತರೊಂದಿಗಿನ ಸಿದ್ದರಾಮಯ್ಯರ ‘ಆಪ್ತ ಸಮಾಲೋಚನೆ’ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ದೋಸ್ತಿಗಳಲ್ಲಿ ಸಿಡಿಮಿಡಿ, ಡಿಸಿಎಂ ಡಾ. ಪರಮೇಶ್ವರ್ ಮಾಧ್ಯಮದ ಮುಂದೆ ಅಬ್ಬರ ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು, ತಾವು ಚಿಕಿತ್ಸೆ ಪಡೆಯುತ್ತಿರುವ ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾಲಯದಲ್ಲಿ ತಮ್ಮ ಆಪ್ತರ ಜೊತೆ ಔಪಚಾರಿಕವಾಗಿ ಮಾತನಾಡಿರುವ ಕೆಲವು ಸಂಭಾಷಣೆಯ ವೀಡಿಯೋ ವೈರಲ್ ಆಗಿದ್ದು,…
ಹಳೆಗನ್ನಡ ಸಾಹಿತ್ಯಕ್ಕೆ ರಾಜರು, ಕವಿಗಳ ಕೊಡುಗೆ ಅನನ್ಯ; ಹೆಚ್ಡಿಡಿ
June 25, 2018ಶ್ರವಣಬೆಳಗೊಳ: ಹಳೆಗನ್ನಡ ಸಾಹಿತ್ಯಕ್ಕೆ ಹಿಂದೆ ರಾಜಮಹಾರಾಜರು ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಪಂಪ, ರನ್ನ ಹಾಗೂ ಇತರ ಕವಿಗಳು ಶ್ರಮಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನುಡಿದರು. ಜೈನಕಾಶಿ ಶ್ರವಣಬೆಳಗೊಳದ ಚಾವುಂಡ ರಾಯ ಸಭಾಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ನಿಂದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾ ರಕ ಸ್ವಾಮೀಜಿ ಸಾನಿಧ್ಯ ಹಾಗೂ ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಶಾಲೆಗಳಲ್ಲಿ ಇದ್ದ ಹಳೆಗನ್ನಡದ…
ದೇವೇಗೌಡರಿಂದ ಮಾತ್ರ ಕಾವೇರಿ ಬಿಕ್ಕಟ್ಟಿಗೆ ಪರಿಹಾರ
June 25, 2018ಮೋದಿಯವರ ಮೇಲೆ ಪ್ರಭಾವ ಬಳಸಿ ರಾಜ್ಯದ ಜನತೆ ಹಿತ ಕಾಪಾಡಲಿ ಹೆಚ್ಡಿಕೆ ನಮ್ ಸಿಎಂ ಎನ್ನೋ ಜಮೀರ್ ಹೇಳಿಕೆಯಲ್ಲಿ ತಪ್ಪೇನಿದೆ: ಸಿಆರ್ಎಸ್ ಮಂಡ್ಯ: ಕರ್ನಾಟಕ ಮತ್ತು ತಮಿಳುನಾಡು ನಡುವೆ ಹಲವು ದಶಕ ಗಳಿಂದ ನೆನೆಗುದಿಗೆ ಬಿದ್ದಿರುವ ಕಾವೇರಿ ವಿವಾದವನ್ನು ಬಗೆಹರಿಸಲು ನೀರಾವರಿ ತಜ್ಞರೆನಿಸಿಕೊಂಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಂದ ಮಾತ್ರ ಸಾಧ್ಯ ಎಂದು ಮಾಜಿ ಶಾಸಕ ಎನ್.ಚಲುವರಾಯ ಸ್ವಾಮಿ ಹೇಳಿದರು. ನಗರಸಭೆ ಅಧ್ಯಕ್ಷ ದಿವಂಗತ ಹೊಸಹಳ್ಳಿ ಬೋರೇಗೌಡರ ಕುಟುಂಬಕ್ಕೆ ಸಾಂತ್ವನ ಹೇಳಲು ನಗರಕ್ಕಿಂದು ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು….
ಕೊಡಗಿನ ಸಮಸ್ಯೆಗಳನ್ನು ಹೆಚ್ಡಿಡಿ ಬಳಿ ಕೊಂಡ್ಯೋಯ್ದ ಸಂಕೇತ್
June 24, 2018ಗೋಣಿಕೊಪ್ಪಲು: ಜಿಲ್ಲೆಯ ಕೆಲವು ಸಮಸ್ಯೆಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯೊಂದಿಗೆ ಚರ್ಚಿಸಿ ಕೂಡಲೇ ಬಗೆ ಹರಿಸಿಕೊಡುವಂತೆ ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರವರನ್ನು ಕೊಡಗು ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿ ಯಂಡ ಸಂಕೇತ್ ಪೂವಯ್ಯ ಇತ್ತಿಚೇಗೆ ಬೆಂಗಳೂರಿನಲ್ಲಿ ಅಧಿಕೃತವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಹಿಂದುಳಿದ ವರ್ಗದ ವಸತಿ ನಿಲಯ ಗಳಲ್ಲಿ ಬಾಣಸಿಗರಾಗಿ ಹಲವು ವರ್ಷ ಗಳಿಂದ ದುಡಿಯುತ್ತಿದ್ದ ಸಿಬ್ಬಂದಿಯನ್ನು ಇದೀಗ ಏಕಾಎಕಿ ಕೆಲಸದಿಂದ ವಜಾ ಗೊಳಿಸಿ ಈ ಸ್ಥಾನಕ್ಕೆ ಬೇರೆ ಸಿಬ್ಬಂದಿ ಯನ್ನು ಆನ್ಲೈನ್ ಮೂಲಕ ಆಯ್ಕೆ…
ಸುಭದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಸಹಕಾರ ಕೋರಿದ ಗೌಡರು
June 2, 2018ಬೆಂಗಳೂರು: ಕರ್ನಾಟಕದಲ್ಲಿ ಸುಭದ್ರ ಸರ್ಕಾರ ನಡೆಸಲು ನಿಮ್ಮ ಸಹಕಾರ ಮುಂದು ವರಿಯಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರಿಗೆ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಉಭಯ ಪಕ್ಷಗಳ ಮುಖಂಡರೊಂದಿಗೆ ಸಮಾ ಲೋಚನೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರನ್ನು ಸಂಪರ್ಕಿಸಿ, ಮೈತ್ರಿ ಸರ್ಕಾರ ಉತ್ತಮವಾಗಿ ಕೆಲಸ ಆರಂಭಿಸಿದೆ. ಕರ್ನಾಟಕದ ಅಭಿವೃದ್ಧಿ ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯೇತರ ಪಕ್ಷಗಳ ಒಗ್ಗೂಡಿ ಕೆಗೆ ನಿಮ್ಮ ಸಹಕಾರ ಮತ್ತು ಬೆಂಬಲ ಅತ್ಯಗತ್ಯ. ಪ್ರಾದೇಶಿಕ…
ಮಾಜಿ ಪ್ರಧಾನಿ ಭೇಟಿಯಾದ ಸಂಕೇತ್ ಪೂವಯ್ಯ: ಆನೆ-ಮಾನವ ಸಂಘರ್ಷದ ಬಗ್ಗೆ ಸುದೀರ್ಘ ಚರ್ಚೆ
May 30, 2018ಗೋಣಿ ಕೊಪ್ಪಲು: ಜಾತ್ಯಾತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರನ್ನು ಕೊಡಗು ಜಿಲ್ಲಾ ಜೆಡಿಎಸ್ನ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಭೇಟಿ ಮಾಡಿದರು. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಮೊದಲ ಬಾರಿಗೆ ಬೆಂಗ ಳೂರಿನ ಪದ್ಮನಾಭ ನಗರದ ದೇವೇ ಗೌಡರ ನಿವಾಸಕ್ಕೆ ತೆರಳಿದ ಸಂಕೇತ್ ಪೂವಯ್ಯ ದೇವೇಗೌಡರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು. ಈ ಸಂದರ್ಭ ಜಿಲ್ಲೆಯಲ್ಲಿ ಜೆಡಿಎಸ್ನ ರಾಜಕೀಯ ಚಟು ವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಕೊಡಗಿನಲ್ಲಿ ಮಿತಿಮೀರಿದ ಆನೆ-ಮಾನವ ಸಂಘರ್ಷ ಕಾಡಾನೆಗಳ…
37 ಶಾಸಕರ ಇಟ್ಟುಕೊಂಡು ಸಾಲ ಮನ್ನಾ ಸಾಧ್ಯವೇ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರ ಬೇಸರದ ನುಡಿ
May 29, 2018ಬೆಂಗಳೂರು: ನಾವು 37 ಶಾಸಕರನ್ನು ಇಟ್ಟುಕೊಂಡು ಸಾಲ ಮನ್ನಾ ಮಾಡುವುದಾದರೂ ಹೇಗೆ? ಎಂದು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಬೇಸರದ ಮಾತುಗಳನ್ನು ಆಡಿದ್ದಾರೆ. ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆಂದು ಕುಮಾರಸ್ವಾಮಿ ಹೇಳಿಕೆ ನೀಡಿದ ವಿಚಾರವಾಗಿ ಮಾತನಾಡಿದ ದೇವೇಗೌಡರು ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ನಿವೇಶದ ಶಿಶು, ಹೆಚ್ಡಿಕೆ ಹೇಳುತ್ತಿರುವುದು ನಿಜ. ನನಗೂ ಈ ವಿಚಾರವಾಗಿ ನೋವಿದೆ. ರಾಜ್ಯದ ಆರೂವರೆ ಕೋಟಿ ಜನ ಹೆಚ್ಡಿಕೆಗೆ ಬೆಂಬಲ ನೀಡಿಲ್ಲ. ಕೇವಲ 37 ಶಾಸಕರನ್ನು ಇಟ್ಟುಕೊಂಡು ಹೇಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ…
ಗೌಡರ ಒಂದೇಟಿಗೆ ಮೂರು ಹಕ್ಕಿಗಳು!
May 25, 2018ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳ ಹೊಡೆ ಯುವುದನ್ನು ಕೇಳಿದ್ದೇವೆ. ಆದರೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳ ರೆಕ್ಕೆ ಕತ್ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿರೀಕ್ಷೆಯಂತೆ ಅತಂತ್ರ ವಿಧಾನಸಭೆ ಸೃಷ್ಟಿ ಯಾದರೆ, ಎರಡು ರಾಷ್ಟ್ರೀಯ ಪಕ್ಷಗಳ ಪೈಕಿ ಯಾವುದರ ಜೊತೆ ಹೊಂದಾಣ ಕೆ ಮಾಡಿ ಕೊಂಡರೂ ಅದು ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಗಿರಬೇಕು. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಥವಾ ಯಡಿಯೂರಪ್ಪ…
ಬಂಡಾಯ ಅಭ್ಯರ್ಥಿಗಳ ಮನವೊಲಿಕೆ: ಹೆಚ್ಡಿಡಿ
April 26, 2018ಬೆಂಗಳೂರು: ಪಕ್ಷದಲ್ಲಿ ಅವಕಾಶ ದೊರೆಯದೇ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿ ದಿರುವವರನ್ನು ಮನವೊಲಿಸಿ ಹಿಂದಕ್ಕೆ ಸರಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಗೊಂದಲ ಮುಗಿದಿದೆ. ಕೆಲವು ಕ್ಷೇತ್ರಗಳಲ್ಲಿ ರುವ ಭಿನ್ನಮತೀಯರ ಮನವೊಲಿಸುವ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು. ಆಸ್ಟ್ರೇಲಿಯಾದ ಉಪ ಕೌನ್ಸಲೇಟ್ ಜನರಲ್ ಜಾನ್ ಬೋನರ್ ಅವರ ಭೇಟಿಯ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಬೋನರ್ ಜೊತೆ ಸ್ವಾಭಾವಿಕ ವಾಗಿ ರಾಜ್ಯ ಚುನಾವಣೆ ಬಗ್ಗೆ ಮಾತುಕತೆ ನಡೆಸಿದ್ದೇವೆ. ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ…