Tag: DK Shivakumar

ಸಚಿವ ಡಿಕೆಶಿಗೆ ಬಂಧನ ಭೀತಿ
ಮೈಸೂರು

ಸಚಿವ ಡಿಕೆಶಿಗೆ ಬಂಧನ ಭೀತಿ

February 3, 2019

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತಿರುವ ಬೃಹತ್ ನೀರಾವರಿ ಸಚಿವ ಡಿ.ಕೆ. ಶಿವ ಕುಮಾರ್ ಅವರಿಗೆ ಕಂಟಕ ಎದುರಾಗಿದ್ದು, ಬಂಧನದ ಭೀತಿಯಲ್ಲಿದ್ದಾರೆ. ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶಿವಕುಮಾರ್ ಮತ್ತು ಈ ಪ್ರಕರಣದ ಇತರ ಆರೋಪಿಗಳಿಗೆ ಖುದ್ದು ದೆಹಲಿ ಕಚೇರಿ ಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಬೇನಾಮಿ ಆಸ್ತಿ ಪ್ರಕರಣ ಸಂಬಂಧ ಶಿವಕುಮಾರ್, ಆರೋಪಿಗಳಾದ ಸಚಿನ್ ನಾರಾಯಣ್, ಸುನೀಲ್ ಶರ್ಮ, ಆಂಜನೇಯ ಮತ್ತು ರಾಜೇಂದ್ರ ದೆಹಲಿಯಲ್ಲಿ ಇಡಿ ಮುಂದೆ ವಿಚಾರಣೆಗೆ…

ಬಿಜೆಪಿಯವರು ಮುಹೂರ್ತ ಫಿಕ್ಸ್ ಮಾಡಿದ್ದಾರೆ…
ಮೈಸೂರು

ಬಿಜೆಪಿಯವರು ಮುಹೂರ್ತ ಫಿಕ್ಸ್ ಮಾಡಿದ್ದಾರೆ…

January 14, 2019

ಬೆಂಗಳೂರು: ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿ ಮುಹೂರ್ತ ಫಿಕ್ಸ್ ಮಾಡಿದೆ. ಮೂವರು ಶಾಸಕರು ಮುಂಬೈಗೆ ತೆರಳಿದ್ದಾರೆ ಎಂಬುದನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವ ಕುಮಾರ್ ಖಚಿತಪಡಿ ಸಿದ್ದು, ನಾವೇನೂ ಸುಮ್ಮನೆ ಕೂರಲ್ಲ ಎಂದು ಗುಡುಗಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿಯವರು ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿದೆ. ಮೂವರು ಶಾಸಕರು ಮುಂಬೈಗೆ ಹೋಗಿದ್ದಾರೆ ಎಂಬುದೂ ಕೂಡ ಗೊತ್ತಿದೆ. ಅವರು ಯಾವ ಹೋಟೆಲ್‍ನಲ್ಲಿ ತಂಗಿದ್ದಾರೆ ಎಂಬ ಮಾಹಿತಿಯೂ ನಮಗಿದೆ ಎಂದು ಹೇಳಿದರು….

ಬೇನಾಮಿ ಆಸ್ತಿ: ಡಿಕೆಶಿ ಬಂಧನ ಸಾಧ್ಯತೆ
ಮೈಸೂರು

ಬೇನಾಮಿ ಆಸ್ತಿ: ಡಿಕೆಶಿ ಬಂಧನ ಸಾಧ್ಯತೆ

January 8, 2019

ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ 110 ಕೋಟಿ ರೂ.ಗೂ ಹೆಚ್ಚು ಬೇನಾಮಿ ಆಸ್ತಿ ಹೊಂದಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತನಿಖೆಯಿಂದ ಬೆಳಕಿಗೆ ಬಂದಿದ್ದು, ಸದ್ಯದಲ್ಲೇ ಅವರು ಬಂಧನವಾಗುವ ಸಾಧ್ಯತೆ ಇದೆ ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ದಾಳಿ ವೇಳೆ ಲಭ್ಯವಾದ ಆಸ್ತಿಗಿಂತಲೂ ಹೆಚ್ಚಿನ ಆಸ್ತಿ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು…

ಸಿದ್ದಗಂಗಾ ಶ್ರೀಗಳ ಚಿಕಿತ್ಸಾ ವಿಚಾರದಲ್ಲಿ ಡಿಕೆಶಿ ಹೇಳಿಕೆಗೆ ಖಂಡನೆ
ಮೈಸೂರು

ಸಿದ್ದಗಂಗಾ ಶ್ರೀಗಳ ಚಿಕಿತ್ಸಾ ವಿಚಾರದಲ್ಲಿ ಡಿಕೆಶಿ ಹೇಳಿಕೆಗೆ ಖಂಡನೆ

December 11, 2018

ಬೆಳಗಾವಿ(ಸುವರ್ಣಸೌಧ):  ಸಿದ್ದಗಂಗಾ ಶ್ರೀಗಳು ಆರೋಗ್ಯ ವಾಗಿದ್ದಾರೆ. ಚಿಕಿತ್ಸೆಗೆ ತುಂಬಾ ಚೆನ್ನಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಯಾರೂ ಕೂಡ ಆಸ್ಪತ್ರೆಗೆ ಹೋಗುವ ಅವಶ್ಯಕತೆಯಿಲ್ಲ. ಅಲ್ಲಿನ ಅಲ್ಪಸಂಖ್ಯಾತರ ಆಡಳಿತ ಮಂಡಳಿ ಇದ್ದರೂ ಶ್ರೀಗಳನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವ ಕುಮಾರ್ ನೀಡಿದ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿ ರುವ ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ, ವೈದ್ಯರಿಗೆ ಯಾವುದೇ ಧರ್ಮವಿಲ್ಲ. ಅದರಲ್ಲೂ ಸಿದ್ದಗಂಗಾ ಶ್ರೀಗಳಂತಹ ಮಹಾ ಗುರುಗಳ ವಿಷಯದಲ್ಲಿ ಡಿ.ಕೆ.ಶಿವಕುಮಾರ್ ಅವರು ಸಂಕುಚಿತ ಮನೋಭಾವ…

ಡಿಕೆಶಿ ಮನೆಗೆ ಬಿಎಸ್‍ವೈ ಭೇಟಿ: ಕುತೂಹಲ ಮೂಡಿಸಿದ ನಾಯಕರ ಮಾತುಕತೆ
ಮೈಸೂರು

ಡಿಕೆಶಿ ಮನೆಗೆ ಬಿಎಸ್‍ವೈ ಭೇಟಿ: ಕುತೂಹಲ ಮೂಡಿಸಿದ ನಾಯಕರ ಮಾತುಕತೆ

November 29, 2018

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರತಿಪಕ್ಷ ನಾಯಕ ಬಿಎಸ್‍ವೈ ಜಲಸಂಪನ್ಮೂಲ ಸಚಿವರೊಂ ದಿಗೆ ನಡೆಸಿದ ಮಾತುಕತೆಯ ವಿವರ ಬಹಿರಂಗವಾಗಿಲ್ಲ. ಆದರೆ ಡಿಕೆಶಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಶಿವಮೊಗ್ಗ ನೀರಾವರಿ ಯೋಜನೆಗಳು ಬಗ್ಗೆ ಮತ್ತು ಸಿಗಂದೂರು ಸೇತುವೆ ನಿರ್ಮಾಣದ ಬಗ್ಗೆ ಶಿವಕುಮಾರ್ ಜೊತೆ ಚರ್ಚೆ ಮಾಡಿದ್ದೇನೆ ಎಂದರು. ಡಿ ಕೆ ಶಿವಕುಮಾರ್ ಅವರು…

ಕೆಆರ್‌ಎಸ್‌ ಡಿಸ್ನಿಲ್ಯಾಂಡ್ ಯೋಜನೆ 2 ವರ್ಷದಲ್ಲಿ ಪೂರ್ಣಗೊಳಿಸುವ ಗುರಿ
ಮೈಸೂರು

ಕೆಆರ್‌ಎಸ್‌ ಡಿಸ್ನಿಲ್ಯಾಂಡ್ ಯೋಜನೆ 2 ವರ್ಷದಲ್ಲಿ ಪೂರ್ಣಗೊಳಿಸುವ ಗುರಿ

November 16, 2018

ಮೈಸೂರು: ವಿಶ್ವ ವಿಖ್ಯಾತ ಕೆಆರ್‌ಎಸ್‌ನ ಉದ್ಯಾನವನವನ್ನು ಅಮೇರಿಕಾದ ಡಿಸ್ನಿಲ್ಯಾಂಡ್‍ನಂತೆ ಅಭಿವೃದ್ಧಿ ಪಡಿಸುವ ಯೋಜನೆಯನ್ನು ಎರಡು ವರ್ಷಗಳಲ್ಲಿ ಪೂರ್ಣ ಗೊಳಿಸುವ ಗುರಿ ಹೊಂದಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಈ ಸಂಬಂಧ ಬುಧವಾರ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ತಾವು ಜಂಟಿಯಾಗಿ ಉನ್ನತ ಅಧಿಕಾರಿ ಗಳ ಸಭೆ ನಡೆಸಿದ್ದು, ಅಲ್ಲಿ ಈ ಮಹತ್ವದ ಈ ತೀರ್ಮಾ ನಕ್ಕೆ ಬರಲಾಗಿದೆ ಎಂದರು. ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕನ್ನಡಿಗರ ಭಾವನಾತ್ಮ ಕತೆಯ ಪ್ರತೀಕವಾಗಿರುವ ಕಾವೇರಿ ಮಾತೆಯ…

3 ಲೋಕಸಭೆ, 2 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ
ಮೈಸೂರು

3 ಲೋಕಸಭೆ, 2 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ

October 5, 2018

ಬೆಂಗಳೂರು:  ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಜೆಡಿಎಸ್ ಮೈತ್ರಿಯೊಂದಿಗೆ ಕಣಕ್ಕಿಳಿಯುವ ತೀರ್ಮಾನಕ್ಕೆ ಕಾಂಗ್ರೆಸ್ ಮಂತ್ರಿಗಳ ಸಭೆ ಸಮ್ಮತಿಸಿದೆ. ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ಅವರ ಗೃಹ ಕಚೇರಿಯಲ್ಲಿ ಪಕ್ಷದ ಸಚಿವರಿಗೆ ಏರ್ಪಡಿಸಿದ್ದ ಉಪಾಹಾರ ಕೂಟದಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನ ಕುರಿತು ನಡೆದ ಚರ್ಚೆ ಸಂದರ್ಭದಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಕೆಲವು ನಾಯಕರ ಹೇಳಿಕೆಗಳು ಏನೇ ಇರಲಿ, ನಾವು ಒಗ್ಗಟ್ಟಿನಿಂದ ಪಕ್ಷದ ಆಣತಿಯಂತೆ…

ಆಪರೇಷನ್ ಕಮಲ ಪ್ರತಿಯಾಗಿ ಆಪರೇಷನ್ ಕಾಂಗ್ರೆಸ್-ಜೆಡಿಎಸ್
ಮೈಸೂರು

ಆಪರೇಷನ್ ಕಮಲ ಪ್ರತಿಯಾಗಿ ಆಪರೇಷನ್ ಕಾಂಗ್ರೆಸ್-ಜೆಡಿಎಸ್

September 22, 2018

ಬೆಂಗಳೂರು:  ಆಪರೇ ಷನ್ ಕಮಲದ ಮೂಲಕ ಮೈತ್ರಿ ಸರ್ಕಾರ ಉರುಳಿಸಲು ಹೊರಟಿರುವ ಬಿಜೆಪಿಗೆ ಪಾಠ ಕಲಿಸಲು ಅಗತ್ಯ ಕಂಡು ಬಂದರೆ ಆಪರೇಷನ್ ಕಾಂಗ್ರೆಸ್-ಜೆಡಿಎಸ್ ಮೂಲಕ ಆ ಪಕ್ಷದ ಶಾಸಕರನ್ನು ಸೆಳೆಯಲು ಉಭಯ ಪಕ್ಷಗಳ ನಾಯಕರು ಇಂದಿಲ್ಲಿ ತೀರ್ಮಾನಿಸಿದ್ದಾರೆ. ದಿನದಿಂದ ದಿನಕ್ಕೆ ಸರ್ಕಾರ ಉರುಳಿಸಲು ಸಂಚು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಮತ್ತು ಕುಮಾರಸ್ವಾಮಿಯವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಸಲು ಕಾಂಗ್ರೆಸ್ ವರಿಷ್ಠರೇ ಮಧ್ಯಪ್ರವೇಶಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸಲಹೆ ಮೇರೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ…

ಡಿಕೆಶಿ ಮಣಿಸಲು ಬಿಜೆಪಿಯಿಂದ ಅಧಿಕಾರ ದುರ್ಬಳಕೆ
ಮೈಸೂರು

ಡಿಕೆಶಿ ಮಣಿಸಲು ಬಿಜೆಪಿಯಿಂದ ಅಧಿಕಾರ ದುರ್ಬಳಕೆ

September 21, 2018

ಮೈಸೂರು: ಡಿ.ಕೆ.ಶಿವಕುಮಾರ್ ರಂತಹ ನಿಷ್ಠಾವಂತ ಕಾಂಗ್ರೆಸ್ ನಾಯಕರನ್ನು ಸಂಕಷ್ಟಕ್ಕೆ ಸಿಲುಕಿಸಿ ಕಾಂಗ್ರೆಸ್ ಪಕ್ಷದ ಬೆನ್ನುಮೂಳೆ ಮುರಿಯ ಬಹುದು ಎಂದು ಬಿಜೆಪಿ ಎಣಿಸಿದ್ದು, ಇದು ಕೇವಲ ಅವರ ಭ್ರಮೆಯಷ್ಟೇ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಧ್ಯಮ ವಿಭಾಗದ ಅಧ್ಯಕ್ಷ ಪ್ರೊ.ಕೆ.ಇ.ರಾಧಾಕೃಷ್ಣ ಬಿಜೆಪಿ ವಿರುದ್ಧ ಹರಿಹಾಯ್ದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರು ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾ ವಂತ ನಾಯಕ. ಕೇಂದ್ರ ಬಿಜೆಪಿ ನಾಯಕರು ಅಧಿ ಕಾರ ದುರ್ಬಳಕೆ ಮಾಡಿಕೊಂಡು ಡಿ.ಕೆ.ಶಿವಕುಮಾರ್…

ನಾನು ಕೊಲೆ ಮಾಡಿಲ್ಲ, ರೇಪ್ ಮಾಡಿಲ್ಲ, ಯಾವ ಅಪರಾಧ ಮಾಡಿಲ್ಲ
ಮೈಸೂರು

ನಾನು ಕೊಲೆ ಮಾಡಿಲ್ಲ, ರೇಪ್ ಮಾಡಿಲ್ಲ, ಯಾವ ಅಪರಾಧ ಮಾಡಿಲ್ಲ

September 20, 2018

ಬೆಂಗಳೂರು: ನಾನು ಕೊಲೆ ಮಾಡಿಲ್ಲ, ರೇಪ್ ಮಾಡಿಲ್ಲ, ಬೇರೆ ಯಾವುದೇ ಅಪ ರಾಧ ಮಾಡಿಲ್ಲ. ಕೇಸ್‍ಗಳಿಗೆ ಹೆದರಿ ಓಡಿ ಹೋಗುವ ಹೇಡಿಯೂ ನಾನಲ್ಲ ಎಂದು ಜಲಸಂಪ ನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅಬ್ಬರಿಸಿದರು. ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಬುಧವಾರ ಬೆಳಿಗ್ಗೆ ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ಧ ಹವಾಲಾ ವ್ಯವಹಾರ ಆರೋಪ ಮಾಡಿ ದ್ದರು. ಇದರಿಂದ ಕೆರಳಿದ ಡಿ.ಕೆ.ಶಿವಕುಮಾರ್, ವಿಷ…

1 2 3 4 5 6
Translate »