ಮೈಸೂರು: ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರ ಬಹುಮತ ಸಾಬೀತು ಪಡಿಸಲು ಸಾಧ್ಯವಾಗದೇ ಪತನವಾಗಲು ಪ್ರಮುಖ ಕಾರಣರಾದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತರ ಮೇಲೆ ಕೇಂದ್ರ ಉದ್ದೇಶಪೂರ್ವಕವಾಗಿ ಸಿಬಿಐ ದಾಳಿ ನಡೆಸಿ, ದ್ವೇಷದ ರಾಜಕಾರಣ ಮಾಡುತ್ತಿದೆ. ಆ ಮೂಲಕ ಡಿ.ಕೆ.ಶಿವಕುಮಾರ್ ಅವರನ್ನು ಮಣ ಸುವ ಸಂಚು ನಡೆಸಲಾಗುತ್ತಿದೆ ಎಂದು ಆರೋಪಿಸಿ ಮೈಸೂರಿನ ರೈಲ್ವೆ ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಕಚೇರಿ ಬಳಿ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ…
ಕೋಟ್ಯಾಂತರ ರೂ. ಮೌಲ್ಯದ ಹಳೇ ನೋಟು ಬದಲಾವಣೆ ಪ್ರಕರಣ: ಡಿಕೆಶಿ ಬ್ರದರ್ಸ್ ಆಪ್ತರ ಮೇಲೆ ಸಿಬಿಐ ದಾಳಿ
June 1, 2018ಬೆಂಗಳೂರು: ನೋಟು ಅಮಾನ್ಯೀಕರಣ ಸಂದರ್ಭದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಹಳೇ ನೋಟು ಗಳನ್ನು ಬದಲಾವಣೆ ಮಾಡಿದ ಆರೋ ಪದ ಮೇಲೆ ಕಾಂಗ್ರೆಸ್ನ ಹಿರಿಯ ಮುಖಂಡ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಅವರ ಸಹೋದರ ಸಂಸದ ಡಿ.ಕೆ.ಸುರೇಶ್ಗೆ ಬಂಧನದ ಭೀತಿ ಎದುರಾಗಿದೆ. ನೋಟು ಅಮಾನ್ಯೀಕರಣಕ್ಕೆ ಸಂಬಂಧಿ ಸಿದಂತೆ ರಾಮನಗರದ ಕಾರ್ಪೋರೇಷನ್ ಬ್ಯಾಂಕ್, ರಾಷ್ಟ್ರೀಕೃತ ಮತ್ತೊಂದು ಬ್ಯಾಂಕ್ ಹಾಗೂ ಕನಕಪುರ, ರಾಮನಗರ ವ್ಯಾಪ್ತಿಯ ಕೆಲವು ಸಹಕಾರಿ ಬ್ಯಾಂಕುಗಳ ಸಿಬ್ಬಂದಿ ಹಾಗೂ ಅಮಾನ್ಯೀಕರಣಕ್ಕೆ ಸಹಕಾರ ನೀಡಿದವರ ಮೇಲೆ ಸಿಬಿಐ ತನಿಖೆ ಕೈಗೆತ್ತಿ ಕೊಂಡಿದೆ….
ಸಚಿವ ಸಂಪುಟ ವಿಸ್ತರಣೆ, ಖಾತೆ ಸಂಬಂಧ ಇಂದು ಅಂತಿಮ ನಿರ್ಧಾರ: ರೇವಣ್ಣ-ಡಿಕೆಶಿ ನಡುವೆ ವಾಕ್ಸಮರ
June 1, 2018ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ನಾಳೆ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಗಳಿವೆ. ಈ ಸಂಬಂಧ ಇಂದು ಐಷಾರಾಮಿ ಹೋಟೆಲೊಂದರಲ್ಲಿ ನಡೆದ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಸಹ ಪಾಲ್ಗೊಂಡಿದ್ದರು. ಸಭೆಯ ಮುಕ್ತಾಯದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ಫಲಪ್ರದ ವಾಗಿದೆ. ದೆಹಲಿ ಮುಖಂಡರ ಮಾತು ಕತೆಯ ನಂತರ ಅಂತಿಮಗೊಳ್ಳಲಿದೆ. ನಾಳೆ ನಾನು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ…
ಡಿ.ಕೆ.ಶಿವಕುಮಾರ್ ಅವರೇ ದ್ರೋಹ ಮಾಡಿದ ವ್ಯಕ್ತಿ ಸಿಎಂ ಆಗಲು ಸಹಕಾರ ನೀಡಿ ಅಪರಾಧ ಮಾಡಿದ್ದೀರಿ…
May 26, 2018ಖಳನಾಯಕ ನೀವೆ ಶಿವಕುಮಾರ್ ಅವರೇ… ಅಪ್ಪ-ಮಕ್ಕಳ ವಿರುದ್ಧವೇ ಇನ್ನು ಹೋರಾಟ ದುರ್ಯೋಧನ ಕುಮಾರಸ್ವಾಮಿ ಮನೆ ದೇವರು ವಿನಾಶಕಾರನ ಬಾಯಲ್ಲಿ ವಿಕಾಸದ ಮಾತು ಕೊಳ್ಳಿದೆವ್ವ ಭಗವದ್ಗೀತೆ ಹೇಳಿದಂತೆ ಇದು ದಿನಗೂಲಿ ಸರ್ಕಾರ ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರೇ ನೀವು ಯಾರೂ ಮಾಡದ ಅಪರಾಧ ಮಾಡಿದ್ದೀರಿ. ದ್ರೋಹ ಮಾಡಿದ ವ್ಯಕ್ತಿ ಸಿಎಂ ಆಗಲು ನೀವು ಸಹಕಾರ ಮಾಡಿದ್ದೀರಿ. ಸಹಕಾರ ನೀಡಿ ಎಂದು ಆ ಕಡೆ ನನ್ನ ಸ್ನೇಹಿತರನ್ನು ಮನವಿ ಮಾಡಿದ್ದು ನಿಜ. ಆದರೆ ಕುಮಾರಸ್ವಾಮಿಯವರ ಮುಳುಗುವ ದೋಣಿ ಯಲ್ಲಿ ನೀವು ಮುಳುಗುವುದಕ್ಕೆ ಅಭ್ಯಂತರವಿಲ್ಲ…
ದೇವೇಗೌಡರು ಪ್ರಧಾನಿ, ಕುಮಾರಸ್ವಾಮಿ ಸಿಎಂ ಆಗಿದ್ದಾರೆ ಒಕ್ಕಲಿಗಗೌಡ ನನಗೂ ಒಂದು ಅವಕಾಶ ಬೇಕು ಇಂಧನ ಸಚಿವ ಡಿ.ಕೆ.ಶಿವಕುಮಾರ್
May 8, 2018ಸೋಮವಾರಪೇಟೆ: ಒಕ್ಕಲಿಗ ಕೋಟಾದಲ್ಲಿ ದೇವೇಗೌಡರು ಪ್ರಧಾನಮಂತ್ರಿಯಾಗಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಇನ್ನೂ ಅವರು ಕೇಳುವುದರಲ್ಲಿ ಅರ್ಥವಿಲ್ಲ. ನಾನು ಕೂಡ ಒಕ್ಕಲಿಗನಾಗಿದ್ದು, ಮುಂದಿನ ದಿನಗಳಲ್ಲಿ ನನಗೂ ಕೂಡ ಅವಕಾಶ ಸಿಗಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಬಾರಿ ಜೆಡಿಎಸ್ 20 ಸ್ಥಾನವನ್ನೂ ಪಡೆಯುವುದಿಲ್ಲ. ಈ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಈಗಾಗಲೇ ಜೆಡಿಎಸ್ನವರಿಗೆ ಅರಿವಾಗಿರುವುದರಿಂದ ನಮ್ಮ ಪ್ರಣಾಳಿಕೆಗೆ ಬೆಂಬಲ ನೀಡುವ ಪಕ್ಷಗಳಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿಕೆ…
ಸೋ.ಪೇಟೆಯಲ್ಲಿ ಇಂದು ಡಿಕೆಶಿ ಪ್ರಚಾರ
May 7, 2018ಮಡಿಕೇರಿ: ಸಚಿವ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೇ 7 ರಂದು ಬೆಳಗ್ಗೆ 11 ಗಂಟೆಗೆ ಸೋಮ ವಾರಪೇಟೆಯ ಜೆಸಿ ವೇದಿಕೆಯಲ್ಲಿ ನಡೆಯುವ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ.ಚಂದ್ರಕಲಾ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯ ದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ. ಕೆಪಿಸಿಸಿ ಹಿರಿಯ ಮುಖಂಡರು ಹಾಗೂ ಡಿಸಿಸಿ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರುವರು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಹನೂರಿನಲ್ಲಿ ಇಂಧನ ಸಚಿವ ಡಿಕೆಶಿ ರೋಡ್ ಶೋ
May 1, 2018ಹನೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ವಿದ್ಯಾ ಸಿರಿ, ಆರೋಗ್ಯ ಭಾಗ್ಯ, ಅನ್ನಭಾಗ್ಯ ಮುಂತಾದ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅಪಾರ ಜನ ಮನ್ನಣೆ ಗಳಿಸಿದೆ ಎಂದು ಇಂಧನ ಸಚಿವ ಡಿ. ಕೆ. ಶಿವಕುಮಾರ್ ತಿಳಿಸಿದರು. ಹನೂರು ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ರೋಡ್ ಶೋನಲ್ಲಿ ಶಾಸಕ ನರೇಂದ್ರ ಅವರ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು. ಹನೂರು ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಇಲ್ಲಿನ ಶಾಸ ಕರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕ್ಷೇತ್ರದ…
ಹೆಚ್ಡಿಕೆ ಕನಸು ನನಸಾಗಲ್ಲ, ಬಿಜೆಪಿ ಅಧಿಕಾರಕ್ಕೆ ಬರಲ್ಲ ಇಂಧನ ಸಚಿವ ಡಿ.ಕೆ. ಶಿವಕುಮಾರ್
April 30, 2018ಹಾಸನ: ಈ ಬಾರಿಯ ವಿಧಾನಸಭಾ ಚುನಾವಣೆ ಯಲ್ಲಿ 132 ಸ್ಥಾನದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗುವ ಕನಸು ನನಸಾಗು ವುದಿಲ್ಲ, ಬಿಜೆಪಿಯಂತೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದರು. ನಗರದ ಅರಳೇಪೇಟೆ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 132 ಸ್ಥಾನ ಗೆಲ್ಲುವುದು ಖಚಿತವಾಗಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗುವ ಕನಸು ಕಾಣುವುದು ತಪ್ಪುವುದಿಲ್ಲ. ಹಾಗೇ…