ಮೈಸೂರು: ಖಾಸಗಿ ಶಾಲೆಗಳಲ್ಲಿನ ಡೊನೇಷನ್ ಮತ್ತು ಹೆಚ್ಚು ಬೋಧನಾ ಶುಲ್ಕದ ಹಾವಳಿಯನ್ನು ತಪ್ಪಿಸಲು ಜಿಲ್ಲಾಡಳಿತ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆಯ ಜಿಲ್ಲಾ ಘಟಕದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಖಾಸಗಿ ಶಾಲೆಗಳು ಡೊನೇಷನ್ ರೂಪದಲ್ಲಿ ಲಕ್ಷಾಂತರ ರೂ.ಗಳನ್ನು ಪೆÇೀಷಕರಿಂದ ವಸೂಲಿ ಮಾಡುವ ಮೂಲಕ ಹಗಲು ದರೋಡೆ ಮಾಡುತ್ತಿವೆ. ಕಟ್ಟಿದ ಹಣಕ್ಕೆ ರಶೀದಿ ಸಹ ನೀಡದೇ ವಂಚಿಸಲಾಗುತ್ತಿದೆ. ಶಿಕ್ಷಣದ ಹೆಸರಿನಲ್ಲಿ…

