ಹಾಸನ: ಅಂಬೇಡ್ಕರ್ ಸಮುದಾಯ ಭವನದಲ್ಲಿ ಹೀನಾಯ ಸ್ಥಿತಿಯಲ್ಲಿ ಬದುಕುತ್ತಿರುವ ಕುಟುಂಬಗಳಿಗೆ ವಾರದಲ್ಲಿ ನ್ಯಾಯ ಸಿಗದಿದ್ದರೇ ಪಾದಯಾತ್ರೆ ಮೂಲಕ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ದಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ ಅವರಿಗೆ ಮನವಿ ಸಲ್ಲಿಸಲಾಯಿತು. ಸಕಲೇಶಪುರ ತಾಲೂಕು ಯಸಳೂರು ಹೋಬಳಿ ಹೊಸೂರು ಗ್ರಾಮದ ಸರ್ವೇ ನಂ. 22 ರಲ್ಲಿ ಕಳೆದ 10 ವರ್ಷದಿಂದ ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿ ಜಿಪಂ, ತಾಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಅನುದಾನದಲ್ಲಿ ಸಮುದಾಯ…