ನಾಗಮಂಗಲ: ಮೂರ್ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ದಕ್ಷಿಣ ಕರ್ನಾಟಕಕ್ಕಿಂತ ಸುಭಿಕ್ಷವಾಗಿವೆ ಎಂದು ಶಾಸಕ ಡಾ.ಕೆ.ಅನ್ನದಾನಿ ಅಭಿಪ್ರಾಯಪಟ್ಟರು. ಪಟ್ಟಣದ ಟಿ.ಬಿ.ಬಡಾವಣೆಯಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ. ಕೃಷ್ಣಪ್ಪ ಜಿಲ್ಲೆಯ ಶಾಸಕರುಗಳಿಗೆ ಏರ್ಪ ಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಆಲಮಟ್ಟಿ ಡ್ಯಾಂ ನಿರ್ಮಾಣದಿಂದಾಗಿ ಅಲ್ಲಿಯ ಹಲವು ಜಿಲ್ಲೆಗಳು ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗಿಂತ ಸಾಕಷ್ಟು ಅಭಿವೃದ್ಧಿ ಹೊಂದಿವೆ. ವಿರೇಂದ್ರ ಪಾಟೀಲ್ ರಿಂದ ಹಿಡಿದು ಹಲವರು ಉತ್ತರ ಕರ್ನಾಟಕದ ಮಂದಿ ಮುಖ್ಯಮಂತ್ರಿಗಳಾ…