ಮೈಸೂರು: ಇಂದು ಸಾಮಾಜಿಕ ಜಾಲ ತಾಣಗಳ ಭರಾಟೆಯಲ್ಲಿ ಪುಸ್ತಕ ಸಂಸ್ಕೃತಿ ಕ್ಷಿಣಿಸುತ್ತಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿ ನಿವಾರಿಸಿ, ಪುಸ್ತಕ ಸಂಸ್ಕೃತಿ ವೃದ್ಧಿಗೆ ಒತ್ತು ನೀಡಬೇಕಿದೆ ಎಂದು ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಎಸ್.ತಾರಾನಾಥ್ ಹೇಳಿದರು. ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ಆವರಣದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಂವಹನ ಪ್ರಕಾಶನ ಹೊರತಂದಿರುವ ಡಿ.ನಾಗೇಂದ್ರಪ್ಪ ಅವರ `ತಿರುಳ್ಗನ್ನಡ ತಿರುಕ ಉತ್ತಂಗಿ ಚನ್ನಪ್ಪ’, `ಕರುನಾಡ ಸಿರಿ’, ಡಾ.ರಾಮೇಗೌಡ (ರಾಗೌ) ಅವರ `ಬಿಎಂಶ್ರೀ’…