ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ನೇತ್ರಾವತಿ ನದಿಯಲ್ಲಿ ನೀರಿಲ್ಲ. ಮುಂದಿನ 15 ದಿನಗಳಲ್ಲಿ ಮಳೆ ಬರದಿದ್ದರೆ ಮಂಜುನಾಥ ಸ್ವಾಮಿಯ ಅಭಿಷೇಕಕ್ಕೂ ನೀರಿರುವುದಿಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕಳವಳ ವ್ಯಕ್ತಪಡಿಸಿದ್ದಾರೆ. ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟೆ ಹಾಗೂ ತೀರ್ಥದ ಗುಂಡಿಯಲ್ಲಿ ಅಲ್ಪ ಪ್ರಮಾಣದ ನೀರಿದೆ. ತೀರ್ಥದ ಗುಂಡಿಯಲ್ಲಿ ನಾಲ್ಕು ಅಡಿ ಕಡಿಮೆ ಆಗಿದೆ. ಪ್ರಸ್ತುತ ಸ್ವಾಮಿಯ ಅಭಿಷೇಕಕ್ಕೆ ನೀರಿನ ತೊಂದರೆ ಇಲ್ಲ. ಆದರೆ, ಮುಂದಿನ 15 ದಿನಗಳಲ್ಲಿ ಮಳೆ…
ನೀರಿನ ಕೊರತೆ: ಧರ್ಮಸ್ಥಳ ಯಾತ್ರೆ ಮುಂದೂಡಲು ಡಾ.ವೀರೇಂದ್ರ ಹೆಗ್ಗಡೆ ಮನವಿ
May 18, 2019ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ನೀರಿನ ಅಭಾವ ಜಿಲ್ಲೆಯ ಧಾರ್ಮಿಕ ಕ್ಷೇತ್ರ ಗಳಿಗೂ ಬಿಸಿ ಮುಟ್ಟಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿ ಗಳು ಕೆಲವು ದಿನಗಳ ಮಟ್ಟಿಗೆ ತಮ್ಮ ಯಾತ್ರೆಯನ್ನು ಮುಂದೂಡುವಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಮನವಿ ಮಾಡಿದ್ದಾರೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಭಕ್ತರಿಗೆ ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನೀರಿನ ಅಭಾವ ಉಂಟಾಗಿದೆ, ಇನ್ನೂ ದೇವ…
ಧರ್ಮಸ್ಥಳ ಪಟ್ಟಾಧಿಕಾರಿಯಾಗಿ 50 ವರ್ಷ ಪೂರೈಸಿದ ಹಿನ್ನೆಲೆ: ನಾಳೆ ಮೈಸೂರಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ನಾಗರಿಕ ಗೌರವ ಸಮರ್ಪಣೆ
November 1, 2018ಮೈಸೂರು: ಶ್ರೀಕ್ಷೇತ್ರ ಧರ್ಮಸ್ಥಳದ ಪಟ್ಟಾಧಿಕಾರಿಯಾಗಿ 50 ವರ್ಷಗಳನ್ನು ಪೂರೈಸಿರುವ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಸಮರ್ಪಣೆ ಹಾಗೂ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಒಕ್ಕೂಟ ಗಳ ಪದಗ್ರಹಣ ಸಮಾರಂಭವನ್ನು ನ.2ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಗೌರವಾರ್ಪಣೆ ಸಮಿತಿಯ ಗೌರವಾಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಮತ್ತು ಕಾರ್ಯಾಧ್ಯಕ್ಷ ಎಚ್.ವಿ. ರಾಜೀವ್ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತ ಐದು ದಶಕಗಳಿಂದ…